AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Delhi murder Case:ಆಕೆ ನನ್ನನ್ನು ನಿರ್ಲಕ್ಷಿಸುತ್ತಿದ್ದಳು; ಸಿಟ್ಟಿನಿಂದ ಕೊಂದೆ, ಇದಕ್ಕೆ ವಿಷಾದಿಸುತ್ತಿಲ್ಲ: ದೆಹಲಿ ಹತ್ಯೆ ಪ್ರಕರಣದ ಆರೋಪಿ

ಯಾರೋ ಪೊಲೀಸರಿಗೆ ಕರೆ ಮಾಡುವ ಮೊದಲು ಹುಡುಗಿಯ ದೇಹವು ಸುಮಾರು 25 ನಿಮಿಷಗಳ ಕಾಲ ಬೀದಿಯಲ್ಲಿ ಬಿದ್ದಿತ್ತು. ಆಕೆಯ ದೇಹದಲ್ಲಿ 34 ಗಾಯಗಳಿದ್ದು, ತಲೆಬುರುಡೆ ಛಿದ್ರವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Delhi murder Case:ಆಕೆ ನನ್ನನ್ನು ನಿರ್ಲಕ್ಷಿಸುತ್ತಿದ್ದಳು; ಸಿಟ್ಟಿನಿಂದ ಕೊಂದೆ, ಇದಕ್ಕೆ ವಿಷಾದಿಸುತ್ತಿಲ್ಲ: ದೆಹಲಿ ಹತ್ಯೆ ಪ್ರಕರಣದ ಆರೋಪಿ
ಆರೋಪಿ ಸಾಹಿಲ್
ರಶ್ಮಿ ಕಲ್ಲಕಟ್ಟ
|

Updated on: May 30, 2023 | 12:57 PM

Share

ದೆಹಲಿ: ಭಾನುವಾರ ದೆಹಲಿಯ (Delhi Murder Case) ರಸ್ತೆಯೊಂದರಲ್ಲಿ ಬಾಲಕಿಯೊಬ್ಬಳನ್ನು ಹತ್ಯೆಗೈದ ಪ್ರಕರಣದಲ್ಲಿ ಬಂಧಿತನಾದ 20 ವರ್ಷದ ಯುವಕ ಸಾಹಿಲ್ (Sahil),  ಸಿಟ್ಟಿನ ಭರದಲ್ಲಿ ಕೃತ್ಯ ಎಸಗಿರುವುದಾಗಿ ತಪ್ಪೊಪ್ಪಿಕೊಂಡಿದ್ದಾನೆ. ಅದೇ ವೇಳೆ ಕೃತ್ಯವೆಸಗಿರುವ ಬಗ್ಗೆ ತನಗೆ ಯಾವುದೇ ವಿಷಾದವಿಲ್ಲ ಎಂದು ಹೇಳಿದ್ದಾನೆ. ಜನರು ನೋಡುತ್ತಿದ್ದಂತೆಯೇ ರಸ್ತೆಯಲ್ಲಿ 16 ವರ್ಷದ ಬಾಲಕಿಗೆ 22 ಬಾರಿ ಇರಿದು,ಕಾಲಿನಿಂದ ತುಳಿದು, ಕಲ್ಲು ಎತ್ತಿ ಹಾಕಿ ಅತಿ ಕ್ರೂರವಾಗಿ ಕೊಲೆ ಮಾಡಿದ್ದ ಸಾಹಿಲ್. ಎಸಿ ರಿಪೇರಿ ಮಾಡುವ ಸಾಹಿಲ್‌ನನ್ನು ನಿನ್ನೆ (ಸೋಮವಾರ) ಉತ್ತರ ಪ್ರದೇಶದ ಬುಲಂದ್‌ಶಹರ್‌ನಲ್ಲಿ (Bulandshahr) ಬಂಧಿಸಲಾಗಿತ್ತು. ಆತನನ್ನು ಪೊಲೀಸ್ ಕಸ್ಟಡಿಗೆ ಕಳುಹಿಸಲಾಗಿದೆ. ರಾತ್ರಿ ವಿಚಾರಣೆಯ ವೇಳೆ ತನಗೆ ಯಾವುದೇ ವಿಷಾದವಿಲ್ಲ ಎಂದು ಹೇಳಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಆಕೆ ತನ್ನೊಂದಿಗೆ ಬ್ರೇಕ್ ಅಪ್ ಮಾಡಲು ಬಯಸಿದ್ದಳು. ಆಕೆ ಮತ್ತೆ ಮಾಜಿ ಗೆಳೆಯನೊಂದಿಗೆ ಸಂಪರ್ಕ ಹೊಂದಿದ್ದಳು ಸಾಹಿಲ್ ಹೇಳಿದ್ದಾನೆ. ಆಕೆಯ ಮಾಜಿ ಗೆಳೆಯ ಗೂಂಡಾ, ನಾನು ಆತನಿಗೆ ಭಯಪಡುತ್ತಿದ್ದೆ. ನಾವಿಬ್ಬರೂ ಮೂರು ವರ್ಷದಿಂದ ಪ್ರೀತಿಸುತ್ತಿದ್ದೆವು. ಆದರೆ ಇತ್ತೀಚೆಗೆ ಅವಳು ಸಂಬಂಧವನ್ನು ಕೊನೆಗೊಳಿಸಿದ್ದಳು. ಕೆಲವು ಸಮಯದಿಂದ ಆಕೆ ನನ್ನನ್ನು ನಿರ್ಲಕ್ಷಿಸುತ್ತಿದ್ದಳು. ಇದರಿಂದ ನಾನು ಕೋಪಗೊಂಡಿದ್ದೆ ಎಂದು ಆತ ಹೇಳಿದ್ದಾನೆ. ಬಾಲಕಿಯ ಮೇಲೆ ಹಲ್ಲೆ ನಡೆಸಿದಾಗ ಆತ ಕುಡಿದಿದ್ದ ಎನ್ನಲಾಗಿದೆ.

ಭಾನುವಾರ ಸಂಜೆ ಸಂತ್ರಸ್ತೆ ಸ್ನೇಹಿತೆಯ ಮಗನ ಹುಟ್ಟುಹಬ್ಬದ ಪಾರ್ಟಿಗೆ ಹೋಗುತ್ತಿದ್ದಾಗ ಸಾಹಿಲ್ ಅವಳನ್ನು ಗೋಡೆಗೆ ಒತ್ತಿ ಹಲವಾರು ಬಾರಿ ಚಾಕುನಿಂದ ಇರಿದಿದ್ದ. ಇರಿತಕ್ಕೊಳಗಾಗಿ ಆಕೆ ಕುಸಿದು ಬಿದ್ದಾಗ ಕಾಲಿನಿಂದ ತುಳಿದ. ಅಲ್ಲಿದ್ದ ದೊಡ್ಡ ಕಲ್ಲನ್ನು ಎತ್ತಿ ನಾಲ್ಕೈದು ಬಾರಿ ಆಕೆಯ ಮೇಲೆ ಹಾಕಿದ. ಈ ಎಲ್ಲ ದೃಶ್ಯಗಳು ಸಿಸಿಟಿವಿಯಲ್ಲಿ ಸೆರೆಯಾಗಿದೆ. ರಸ್ತೆಯಲ್ಲಿ ಹಾದು ಹೋಗುತ್ತಿದ್ದ ಜನರು ಮೂಕಪ್ರೇಕ್ಷಕರಾಗಿ ನಿಂತಿದ್ದರು.

ಇದನ್ನೂ ಓದಿDelhi Murder: ಅಪ್ರಾಪ್ತ ಬಾಲಕಿಯನ್ನು 20 ಬಾರಿ ಚಾಕುವಿನಿಂದ ಚುಚ್ಚಿ ಕೊಂದಿದ್ದ ವ್ಯಕ್ತಿ ಪೊಲೀಸರಿಗೆ ಸಿಕ್ಕಿಬಿದ್ದಿದ್ಹೇಗೆ?

ಯಾರೋ ಪೊಲೀಸರಿಗೆ ಕರೆ ಮಾಡುವ ಮೊದಲು ಹುಡುಗಿಯ ದೇಹವು ಸುಮಾರು 25 ನಿಮಿಷಗಳ ಕಾಲ ಬೀದಿಯಲ್ಲಿ ಬಿದ್ದಿತ್ತು. ಆಕೆಯ ದೇಹದಲ್ಲಿ 34 ಗಾಯಗಳಿದ್ದು, ತಲೆಬುರುಡೆ ಛಿದ್ರವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಸಾಹಿಲ್ ಚಾಕು ಮತ್ತು ತನ್ನ ಫೋನ್  ಎಸೆದು ಬುಲಂದ್‌ಶಹರ್‌ಗೆ ಬಸ್ಸಿನಲ್ಲಿ ಹೋಗಿದ್ದ. ಅಲ್ಲಿ ಅವನು ತನ್ನ ಚಿಕ್ಕಮ್ಮನ ಮನೆಯಲ್ಲಿ ಅಡಗಿಕೊಂಡಿದ್ದ. ತನ್ನಿಂದದೂರ ಹೋಗದೇ ಇದ್ದರೆ ಪೊಲೀಸರಿಗೆ ಹೋಗುವುದಾಗಿ ಹುಡುಗಿ ಬೆದರಿಕೆ ಹಾಕಿದ್ದಳು. ಅವನನ್ನು ಹೆದರಿಸಲು ಆಟಿಕೆ ಪಿಸ್ತೂಲ್ ಅನ್ನು ಸಹ ಬಳಸಿದ್ದಳು. ಹತ್ಯೆಯ ಹಿಂದಿನ ದಿನ ಇಬ್ಬರೂ ಜಗಳವಾಡಿದ್ದರು. ಸಾಹಿಲ್ ತನ್ನ ಹೆಸರನ್ನು ಹುಡುಗಿಯ ಸ್ನೇಹಕ್ಕಾಗಿ ಬದಲಾಯಿಸಿದ್ದನೇ ಎಂದು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಮತ್ತಷ್ಟು ಕ್ರೈಂ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!