AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Delhi murder Case:ಆಕೆ ನನ್ನನ್ನು ನಿರ್ಲಕ್ಷಿಸುತ್ತಿದ್ದಳು; ಸಿಟ್ಟಿನಿಂದ ಕೊಂದೆ, ಇದಕ್ಕೆ ವಿಷಾದಿಸುತ್ತಿಲ್ಲ: ದೆಹಲಿ ಹತ್ಯೆ ಪ್ರಕರಣದ ಆರೋಪಿ

ಯಾರೋ ಪೊಲೀಸರಿಗೆ ಕರೆ ಮಾಡುವ ಮೊದಲು ಹುಡುಗಿಯ ದೇಹವು ಸುಮಾರು 25 ನಿಮಿಷಗಳ ಕಾಲ ಬೀದಿಯಲ್ಲಿ ಬಿದ್ದಿತ್ತು. ಆಕೆಯ ದೇಹದಲ್ಲಿ 34 ಗಾಯಗಳಿದ್ದು, ತಲೆಬುರುಡೆ ಛಿದ್ರವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Delhi murder Case:ಆಕೆ ನನ್ನನ್ನು ನಿರ್ಲಕ್ಷಿಸುತ್ತಿದ್ದಳು; ಸಿಟ್ಟಿನಿಂದ ಕೊಂದೆ, ಇದಕ್ಕೆ ವಿಷಾದಿಸುತ್ತಿಲ್ಲ: ದೆಹಲಿ ಹತ್ಯೆ ಪ್ರಕರಣದ ಆರೋಪಿ
ಆರೋಪಿ ಸಾಹಿಲ್
ರಶ್ಮಿ ಕಲ್ಲಕಟ್ಟ
ರಶ್ಮಿ ಕಲ್ಲಕಟ್ಟ|

Updated on: May 30, 2023 | 12:57 PM

Share

ದೆಹಲಿ: ಭಾನುವಾರ ದೆಹಲಿಯ (Delhi Murder Case) ರಸ್ತೆಯೊಂದರಲ್ಲಿ ಬಾಲಕಿಯೊಬ್ಬಳನ್ನು ಹತ್ಯೆಗೈದ ಪ್ರಕರಣದಲ್ಲಿ ಬಂಧಿತನಾದ 20 ವರ್ಷದ ಯುವಕ ಸಾಹಿಲ್ (Sahil),  ಸಿಟ್ಟಿನ ಭರದಲ್ಲಿ ಕೃತ್ಯ ಎಸಗಿರುವುದಾಗಿ ತಪ್ಪೊಪ್ಪಿಕೊಂಡಿದ್ದಾನೆ. ಅದೇ ವೇಳೆ ಕೃತ್ಯವೆಸಗಿರುವ ಬಗ್ಗೆ ತನಗೆ ಯಾವುದೇ ವಿಷಾದವಿಲ್ಲ ಎಂದು ಹೇಳಿದ್ದಾನೆ. ಜನರು ನೋಡುತ್ತಿದ್ದಂತೆಯೇ ರಸ್ತೆಯಲ್ಲಿ 16 ವರ್ಷದ ಬಾಲಕಿಗೆ 22 ಬಾರಿ ಇರಿದು,ಕಾಲಿನಿಂದ ತುಳಿದು, ಕಲ್ಲು ಎತ್ತಿ ಹಾಕಿ ಅತಿ ಕ್ರೂರವಾಗಿ ಕೊಲೆ ಮಾಡಿದ್ದ ಸಾಹಿಲ್. ಎಸಿ ರಿಪೇರಿ ಮಾಡುವ ಸಾಹಿಲ್‌ನನ್ನು ನಿನ್ನೆ (ಸೋಮವಾರ) ಉತ್ತರ ಪ್ರದೇಶದ ಬುಲಂದ್‌ಶಹರ್‌ನಲ್ಲಿ (Bulandshahr) ಬಂಧಿಸಲಾಗಿತ್ತು. ಆತನನ್ನು ಪೊಲೀಸ್ ಕಸ್ಟಡಿಗೆ ಕಳುಹಿಸಲಾಗಿದೆ. ರಾತ್ರಿ ವಿಚಾರಣೆಯ ವೇಳೆ ತನಗೆ ಯಾವುದೇ ವಿಷಾದವಿಲ್ಲ ಎಂದು ಹೇಳಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಆಕೆ ತನ್ನೊಂದಿಗೆ ಬ್ರೇಕ್ ಅಪ್ ಮಾಡಲು ಬಯಸಿದ್ದಳು. ಆಕೆ ಮತ್ತೆ ಮಾಜಿ ಗೆಳೆಯನೊಂದಿಗೆ ಸಂಪರ್ಕ ಹೊಂದಿದ್ದಳು ಸಾಹಿಲ್ ಹೇಳಿದ್ದಾನೆ. ಆಕೆಯ ಮಾಜಿ ಗೆಳೆಯ ಗೂಂಡಾ, ನಾನು ಆತನಿಗೆ ಭಯಪಡುತ್ತಿದ್ದೆ. ನಾವಿಬ್ಬರೂ ಮೂರು ವರ್ಷದಿಂದ ಪ್ರೀತಿಸುತ್ತಿದ್ದೆವು. ಆದರೆ ಇತ್ತೀಚೆಗೆ ಅವಳು ಸಂಬಂಧವನ್ನು ಕೊನೆಗೊಳಿಸಿದ್ದಳು. ಕೆಲವು ಸಮಯದಿಂದ ಆಕೆ ನನ್ನನ್ನು ನಿರ್ಲಕ್ಷಿಸುತ್ತಿದ್ದಳು. ಇದರಿಂದ ನಾನು ಕೋಪಗೊಂಡಿದ್ದೆ ಎಂದು ಆತ ಹೇಳಿದ್ದಾನೆ. ಬಾಲಕಿಯ ಮೇಲೆ ಹಲ್ಲೆ ನಡೆಸಿದಾಗ ಆತ ಕುಡಿದಿದ್ದ ಎನ್ನಲಾಗಿದೆ.

ಭಾನುವಾರ ಸಂಜೆ ಸಂತ್ರಸ್ತೆ ಸ್ನೇಹಿತೆಯ ಮಗನ ಹುಟ್ಟುಹಬ್ಬದ ಪಾರ್ಟಿಗೆ ಹೋಗುತ್ತಿದ್ದಾಗ ಸಾಹಿಲ್ ಅವಳನ್ನು ಗೋಡೆಗೆ ಒತ್ತಿ ಹಲವಾರು ಬಾರಿ ಚಾಕುನಿಂದ ಇರಿದಿದ್ದ. ಇರಿತಕ್ಕೊಳಗಾಗಿ ಆಕೆ ಕುಸಿದು ಬಿದ್ದಾಗ ಕಾಲಿನಿಂದ ತುಳಿದ. ಅಲ್ಲಿದ್ದ ದೊಡ್ಡ ಕಲ್ಲನ್ನು ಎತ್ತಿ ನಾಲ್ಕೈದು ಬಾರಿ ಆಕೆಯ ಮೇಲೆ ಹಾಕಿದ. ಈ ಎಲ್ಲ ದೃಶ್ಯಗಳು ಸಿಸಿಟಿವಿಯಲ್ಲಿ ಸೆರೆಯಾಗಿದೆ. ರಸ್ತೆಯಲ್ಲಿ ಹಾದು ಹೋಗುತ್ತಿದ್ದ ಜನರು ಮೂಕಪ್ರೇಕ್ಷಕರಾಗಿ ನಿಂತಿದ್ದರು.

ಇದನ್ನೂ ಓದಿDelhi Murder: ಅಪ್ರಾಪ್ತ ಬಾಲಕಿಯನ್ನು 20 ಬಾರಿ ಚಾಕುವಿನಿಂದ ಚುಚ್ಚಿ ಕೊಂದಿದ್ದ ವ್ಯಕ್ತಿ ಪೊಲೀಸರಿಗೆ ಸಿಕ್ಕಿಬಿದ್ದಿದ್ಹೇಗೆ?

ಯಾರೋ ಪೊಲೀಸರಿಗೆ ಕರೆ ಮಾಡುವ ಮೊದಲು ಹುಡುಗಿಯ ದೇಹವು ಸುಮಾರು 25 ನಿಮಿಷಗಳ ಕಾಲ ಬೀದಿಯಲ್ಲಿ ಬಿದ್ದಿತ್ತು. ಆಕೆಯ ದೇಹದಲ್ಲಿ 34 ಗಾಯಗಳಿದ್ದು, ತಲೆಬುರುಡೆ ಛಿದ್ರವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಸಾಹಿಲ್ ಚಾಕು ಮತ್ತು ತನ್ನ ಫೋನ್  ಎಸೆದು ಬುಲಂದ್‌ಶಹರ್‌ಗೆ ಬಸ್ಸಿನಲ್ಲಿ ಹೋಗಿದ್ದ. ಅಲ್ಲಿ ಅವನು ತನ್ನ ಚಿಕ್ಕಮ್ಮನ ಮನೆಯಲ್ಲಿ ಅಡಗಿಕೊಂಡಿದ್ದ. ತನ್ನಿಂದದೂರ ಹೋಗದೇ ಇದ್ದರೆ ಪೊಲೀಸರಿಗೆ ಹೋಗುವುದಾಗಿ ಹುಡುಗಿ ಬೆದರಿಕೆ ಹಾಕಿದ್ದಳು. ಅವನನ್ನು ಹೆದರಿಸಲು ಆಟಿಕೆ ಪಿಸ್ತೂಲ್ ಅನ್ನು ಸಹ ಬಳಸಿದ್ದಳು. ಹತ್ಯೆಯ ಹಿಂದಿನ ದಿನ ಇಬ್ಬರೂ ಜಗಳವಾಡಿದ್ದರು. ಸಾಹಿಲ್ ತನ್ನ ಹೆಸರನ್ನು ಹುಡುಗಿಯ ಸ್ನೇಹಕ್ಕಾಗಿ ಬದಲಾಯಿಸಿದ್ದನೇ ಎಂದು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಮತ್ತಷ್ಟು ಕ್ರೈಂ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ರಶ್ಮಿ ಕಲ್ಲಕಟ್ಟ
ರಶ್ಮಿ ಕಲ್ಲಕಟ್ಟ

ಊರು ಕಾಸರಗೋಡು. ಓದಿದ್ದು ಇಂಜಿನಿಯರಿಂಗ್, ಪಬ್ಲಿಕ್ ಅಡ್ಮಿನಿಸ್ಟ್ರೇಷನ್ ಮತ್ತು ಇಂಗ್ಲಿಷ್ ಸ್ನಾತಕೋತ್ತರ ಪದವಿ. ಕನ್ನಡಪ್ರಭ, ಪ್ರಜಾವಾಣಿ ಡಿಜಿಟಲ್ ಮತ್ತು ಪ್ರಿಂಟ್ ವಿಭಾಗದಲ್ಲಿ ಕೆಲಸದ ಅನುಭವ. ಬ್ಲಾಗರ್, ಸಾಹಿತ್ಯ ಪ್ರೇಮಿ. ಇಲ್ಲಿವರೆಗೆ 2 ಪುಸ್ತಕಗಳು ಪ್ರಕಟವಾಗಿವೆ. ಕಲೆ,ಸಾಹಿತ್ಯ,ತಂತ್ರಜ್ಞಾನ,ಸಂದರ್ಶನ, ಫ್ಯಾಕ್ಟ್ ಚೆಕಿಂಗ್ ಆಸಕ್ತಿಕರ ವಿಷಯಗಳು. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷ ಅನುಭವ

ಕೊಲೆ ಆರೋಪಿಗಳಿಂದ ಜೈಲಿನಲ್ಲಿ ಪುಂಡಾಟ: ವಾರ್ಡನ್ ಮೇಲೆ ಹಲ್ಲೆ!
ಕೊಲೆ ಆರೋಪಿಗಳಿಂದ ಜೈಲಿನಲ್ಲಿ ಪುಂಡಾಟ: ವಾರ್ಡನ್ ಮೇಲೆ ಹಲ್ಲೆ!
‘ಯತ್ನಾಳ್ ಯಾವುದೋ ಒಂದು ಕೋತಿಯ ಬ್ರೀಡ್’: ಪ್ರದೀಪ್ ಈಶ್ವರ್ ವಾಗ್ದಾಳಿ
‘ಯತ್ನಾಳ್ ಯಾವುದೋ ಒಂದು ಕೋತಿಯ ಬ್ರೀಡ್’: ಪ್ರದೀಪ್ ಈಶ್ವರ್ ವಾಗ್ದಾಳಿ
ಕೆಆರ್​ಎಸ್​ನಲ್ಲಿ ಕುಸಿದ ನೀರಿನ ಮಟ್ಟ; ಸಂಪೂರ್ಣ ಗೋಚರಿಸುತ್ತಿರುವ ದೇಗುಲ!
ಕೆಆರ್​ಎಸ್​ನಲ್ಲಿ ಕುಸಿದ ನೀರಿನ ಮಟ್ಟ; ಸಂಪೂರ್ಣ ಗೋಚರಿಸುತ್ತಿರುವ ದೇಗುಲ!
ಕಾಪು ಹೊಸ ಮಾರಿಗುಡಿ ದೇವಸ್ಥಾನಕ್ಕೆ ನಿರ್ಮಲಾ ಸೀತಾರಾಮನ್ ಭೇಟಿ
ಕಾಪು ಹೊಸ ಮಾರಿಗುಡಿ ದೇವಸ್ಥಾನಕ್ಕೆ ನಿರ್ಮಲಾ ಸೀತಾರಾಮನ್ ಭೇಟಿ
ಉಡುಪಿ ಶ್ರೀ ಕೃಷ್ಣ ಮಠಕ್ಕೆ ಭೇಟಿ ನೀಡಿದ ನಿರ್ಮಲಾ ಸೀತಾರಾಮನ್
ಉಡುಪಿ ಶ್ರೀ ಕೃಷ್ಣ ಮಠಕ್ಕೆ ಭೇಟಿ ನೀಡಿದ ನಿರ್ಮಲಾ ಸೀತಾರಾಮನ್
24 ಫೋರ್, 2 ಭರ್ಜರಿ ಸಿಕ್ಸ್​: ಸಿಡಿಲಬ್ಬರದ ಸೆಂಚುರಿ ಸಿಡಿಸಿದ ಕಾಕ್ಸ್​
24 ಫೋರ್, 2 ಭರ್ಜರಿ ಸಿಕ್ಸ್​: ಸಿಡಿಲಬ್ಬರದ ಸೆಂಚುರಿ ಸಿಡಿಸಿದ ಕಾಕ್ಸ್​
ರಾಮ್ ಚರಣ್ ಬಾಡಿಗಾರ್ಡ್ ಕೆವಿನ್ ಭರ್ಜರಿ ಕಸರತ್ತು; ವಿಡಿಯೋ ವೈರಲ್
ರಾಮ್ ಚರಣ್ ಬಾಡಿಗಾರ್ಡ್ ಕೆವಿನ್ ಭರ್ಜರಿ ಕಸರತ್ತು; ವಿಡಿಯೋ ವೈರಲ್
ಬಿಡದಿ ಟೌನ್‌ಶಿಪ್ ಯೋಜನೆ: ಜೂನ್ 20ಕ್ಕೆ ರೈತರ ಬೃಹತ್ ಪ್ರತಿಭಟನೆ
ಬಿಡದಿ ಟೌನ್‌ಶಿಪ್ ಯೋಜನೆ: ಜೂನ್ 20ಕ್ಕೆ ರೈತರ ಬೃಹತ್ ಪ್ರತಿಭಟನೆ
ಬೆಂಗಳೂರು: ಮುಂಗಾರು ಮಳೆಯ ಅಬ್ಬರಕ್ಕೆ ಕೆರೆಯಂತಾದ ರಸ್ತೆಗಳು
ಬೆಂಗಳೂರು: ಮುಂಗಾರು ಮಳೆಯ ಅಬ್ಬರಕ್ಕೆ ಕೆರೆಯಂತಾದ ರಸ್ತೆಗಳು
ಸಂಜೆ ವೇಳೆ ಮುಖ್ಯ ಬಾಗಿಲಲ್ಲಿ ಕುಳಿತುಕೊಳ್ಳುವುದು ಅಶುಭವೇ?
ಸಂಜೆ ವೇಳೆ ಮುಖ್ಯ ಬಾಗಿಲಲ್ಲಿ ಕುಳಿತುಕೊಳ್ಳುವುದು ಅಶುಭವೇ?