AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Delhi murder Case:ಆಕೆ ನನ್ನನ್ನು ನಿರ್ಲಕ್ಷಿಸುತ್ತಿದ್ದಳು; ಸಿಟ್ಟಿನಿಂದ ಕೊಂದೆ, ಇದಕ್ಕೆ ವಿಷಾದಿಸುತ್ತಿಲ್ಲ: ದೆಹಲಿ ಹತ್ಯೆ ಪ್ರಕರಣದ ಆರೋಪಿ

ಯಾರೋ ಪೊಲೀಸರಿಗೆ ಕರೆ ಮಾಡುವ ಮೊದಲು ಹುಡುಗಿಯ ದೇಹವು ಸುಮಾರು 25 ನಿಮಿಷಗಳ ಕಾಲ ಬೀದಿಯಲ್ಲಿ ಬಿದ್ದಿತ್ತು. ಆಕೆಯ ದೇಹದಲ್ಲಿ 34 ಗಾಯಗಳಿದ್ದು, ತಲೆಬುರುಡೆ ಛಿದ್ರವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Delhi murder Case:ಆಕೆ ನನ್ನನ್ನು ನಿರ್ಲಕ್ಷಿಸುತ್ತಿದ್ದಳು; ಸಿಟ್ಟಿನಿಂದ ಕೊಂದೆ, ಇದಕ್ಕೆ ವಿಷಾದಿಸುತ್ತಿಲ್ಲ: ದೆಹಲಿ ಹತ್ಯೆ ಪ್ರಕರಣದ ಆರೋಪಿ
ಆರೋಪಿ ಸಾಹಿಲ್
ರಶ್ಮಿ ಕಲ್ಲಕಟ್ಟ
|

Updated on: May 30, 2023 | 12:57 PM

Share

ದೆಹಲಿ: ಭಾನುವಾರ ದೆಹಲಿಯ (Delhi Murder Case) ರಸ್ತೆಯೊಂದರಲ್ಲಿ ಬಾಲಕಿಯೊಬ್ಬಳನ್ನು ಹತ್ಯೆಗೈದ ಪ್ರಕರಣದಲ್ಲಿ ಬಂಧಿತನಾದ 20 ವರ್ಷದ ಯುವಕ ಸಾಹಿಲ್ (Sahil),  ಸಿಟ್ಟಿನ ಭರದಲ್ಲಿ ಕೃತ್ಯ ಎಸಗಿರುವುದಾಗಿ ತಪ್ಪೊಪ್ಪಿಕೊಂಡಿದ್ದಾನೆ. ಅದೇ ವೇಳೆ ಕೃತ್ಯವೆಸಗಿರುವ ಬಗ್ಗೆ ತನಗೆ ಯಾವುದೇ ವಿಷಾದವಿಲ್ಲ ಎಂದು ಹೇಳಿದ್ದಾನೆ. ಜನರು ನೋಡುತ್ತಿದ್ದಂತೆಯೇ ರಸ್ತೆಯಲ್ಲಿ 16 ವರ್ಷದ ಬಾಲಕಿಗೆ 22 ಬಾರಿ ಇರಿದು,ಕಾಲಿನಿಂದ ತುಳಿದು, ಕಲ್ಲು ಎತ್ತಿ ಹಾಕಿ ಅತಿ ಕ್ರೂರವಾಗಿ ಕೊಲೆ ಮಾಡಿದ್ದ ಸಾಹಿಲ್. ಎಸಿ ರಿಪೇರಿ ಮಾಡುವ ಸಾಹಿಲ್‌ನನ್ನು ನಿನ್ನೆ (ಸೋಮವಾರ) ಉತ್ತರ ಪ್ರದೇಶದ ಬುಲಂದ್‌ಶಹರ್‌ನಲ್ಲಿ (Bulandshahr) ಬಂಧಿಸಲಾಗಿತ್ತು. ಆತನನ್ನು ಪೊಲೀಸ್ ಕಸ್ಟಡಿಗೆ ಕಳುಹಿಸಲಾಗಿದೆ. ರಾತ್ರಿ ವಿಚಾರಣೆಯ ವೇಳೆ ತನಗೆ ಯಾವುದೇ ವಿಷಾದವಿಲ್ಲ ಎಂದು ಹೇಳಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಆಕೆ ತನ್ನೊಂದಿಗೆ ಬ್ರೇಕ್ ಅಪ್ ಮಾಡಲು ಬಯಸಿದ್ದಳು. ಆಕೆ ಮತ್ತೆ ಮಾಜಿ ಗೆಳೆಯನೊಂದಿಗೆ ಸಂಪರ್ಕ ಹೊಂದಿದ್ದಳು ಸಾಹಿಲ್ ಹೇಳಿದ್ದಾನೆ. ಆಕೆಯ ಮಾಜಿ ಗೆಳೆಯ ಗೂಂಡಾ, ನಾನು ಆತನಿಗೆ ಭಯಪಡುತ್ತಿದ್ದೆ. ನಾವಿಬ್ಬರೂ ಮೂರು ವರ್ಷದಿಂದ ಪ್ರೀತಿಸುತ್ತಿದ್ದೆವು. ಆದರೆ ಇತ್ತೀಚೆಗೆ ಅವಳು ಸಂಬಂಧವನ್ನು ಕೊನೆಗೊಳಿಸಿದ್ದಳು. ಕೆಲವು ಸಮಯದಿಂದ ಆಕೆ ನನ್ನನ್ನು ನಿರ್ಲಕ್ಷಿಸುತ್ತಿದ್ದಳು. ಇದರಿಂದ ನಾನು ಕೋಪಗೊಂಡಿದ್ದೆ ಎಂದು ಆತ ಹೇಳಿದ್ದಾನೆ. ಬಾಲಕಿಯ ಮೇಲೆ ಹಲ್ಲೆ ನಡೆಸಿದಾಗ ಆತ ಕುಡಿದಿದ್ದ ಎನ್ನಲಾಗಿದೆ.

ಭಾನುವಾರ ಸಂಜೆ ಸಂತ್ರಸ್ತೆ ಸ್ನೇಹಿತೆಯ ಮಗನ ಹುಟ್ಟುಹಬ್ಬದ ಪಾರ್ಟಿಗೆ ಹೋಗುತ್ತಿದ್ದಾಗ ಸಾಹಿಲ್ ಅವಳನ್ನು ಗೋಡೆಗೆ ಒತ್ತಿ ಹಲವಾರು ಬಾರಿ ಚಾಕುನಿಂದ ಇರಿದಿದ್ದ. ಇರಿತಕ್ಕೊಳಗಾಗಿ ಆಕೆ ಕುಸಿದು ಬಿದ್ದಾಗ ಕಾಲಿನಿಂದ ತುಳಿದ. ಅಲ್ಲಿದ್ದ ದೊಡ್ಡ ಕಲ್ಲನ್ನು ಎತ್ತಿ ನಾಲ್ಕೈದು ಬಾರಿ ಆಕೆಯ ಮೇಲೆ ಹಾಕಿದ. ಈ ಎಲ್ಲ ದೃಶ್ಯಗಳು ಸಿಸಿಟಿವಿಯಲ್ಲಿ ಸೆರೆಯಾಗಿದೆ. ರಸ್ತೆಯಲ್ಲಿ ಹಾದು ಹೋಗುತ್ತಿದ್ದ ಜನರು ಮೂಕಪ್ರೇಕ್ಷಕರಾಗಿ ನಿಂತಿದ್ದರು.

ಇದನ್ನೂ ಓದಿDelhi Murder: ಅಪ್ರಾಪ್ತ ಬಾಲಕಿಯನ್ನು 20 ಬಾರಿ ಚಾಕುವಿನಿಂದ ಚುಚ್ಚಿ ಕೊಂದಿದ್ದ ವ್ಯಕ್ತಿ ಪೊಲೀಸರಿಗೆ ಸಿಕ್ಕಿಬಿದ್ದಿದ್ಹೇಗೆ?

ಯಾರೋ ಪೊಲೀಸರಿಗೆ ಕರೆ ಮಾಡುವ ಮೊದಲು ಹುಡುಗಿಯ ದೇಹವು ಸುಮಾರು 25 ನಿಮಿಷಗಳ ಕಾಲ ಬೀದಿಯಲ್ಲಿ ಬಿದ್ದಿತ್ತು. ಆಕೆಯ ದೇಹದಲ್ಲಿ 34 ಗಾಯಗಳಿದ್ದು, ತಲೆಬುರುಡೆ ಛಿದ್ರವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಸಾಹಿಲ್ ಚಾಕು ಮತ್ತು ತನ್ನ ಫೋನ್  ಎಸೆದು ಬುಲಂದ್‌ಶಹರ್‌ಗೆ ಬಸ್ಸಿನಲ್ಲಿ ಹೋಗಿದ್ದ. ಅಲ್ಲಿ ಅವನು ತನ್ನ ಚಿಕ್ಕಮ್ಮನ ಮನೆಯಲ್ಲಿ ಅಡಗಿಕೊಂಡಿದ್ದ. ತನ್ನಿಂದದೂರ ಹೋಗದೇ ಇದ್ದರೆ ಪೊಲೀಸರಿಗೆ ಹೋಗುವುದಾಗಿ ಹುಡುಗಿ ಬೆದರಿಕೆ ಹಾಕಿದ್ದಳು. ಅವನನ್ನು ಹೆದರಿಸಲು ಆಟಿಕೆ ಪಿಸ್ತೂಲ್ ಅನ್ನು ಸಹ ಬಳಸಿದ್ದಳು. ಹತ್ಯೆಯ ಹಿಂದಿನ ದಿನ ಇಬ್ಬರೂ ಜಗಳವಾಡಿದ್ದರು. ಸಾಹಿಲ್ ತನ್ನ ಹೆಸರನ್ನು ಹುಡುಗಿಯ ಸ್ನೇಹಕ್ಕಾಗಿ ಬದಲಾಯಿಸಿದ್ದನೇ ಎಂದು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಮತ್ತಷ್ಟು ಕ್ರೈಂ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್