AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪತ್ನಿಯನ್ನ ಹತ್ಯೆಗೈದು ಠಾಣೆಗೆ ಬಂದು ಶರಣಾದ ಪತಿ! ಅನುಮಾನ ಎಂಬ ಪಿಶಾಚಿಗೆ ಬಲಿಯಾದ್ಲಾ ಹೆಂಡತಿ?

ಅವರಿಬ್ಬರು ಪತಿ-ಪತ್ನಿಯಾಗಿ ಬರೋಬ್ಬರಿ 25 ವರ್ಷಗಳ ದಾಂಪತ್ಯ ಜೀವನ ಮುಗಿಸಿದ್ದರು. ಆದ್ರೆ, ಇವತ್ತು ಬೆಳಿಗ್ಗೆ ಏಳುವಷ್ಟರಲ್ಲಿ ಅದೆನಾಯ್ತೋ ಗೊತ್ತಿಲ್ಲ. ಪತ್ನಿ ಮಾತ್ರ ಮಲಗಿದ್ದಲೇ ಭೀಕರ ಹತ್ಯೆಯಾಗಿದ್ದಳು. ಇತ್ತ ಪತ್ನಿಯನ್ನ ಕೊಂದವ ಸೀದಾ ಪೊಲೀಸ್ ಠಾಣೆಗೆ ಹೋಗಿ ಶರಣಾಗಿದ್ದ. ಹಾಗಾದರೆ ಕೊಲೆಗೆ ಕಾರಣ ಏನು ಅಂತೀರಾ? ಇಲ್ಲಿದೆ.

ಪತ್ನಿಯನ್ನ ಹತ್ಯೆಗೈದು ಠಾಣೆಗೆ ಬಂದು ಶರಣಾದ ಪತಿ! ಅನುಮಾನ ಎಂಬ ಪಿಶಾಚಿಗೆ ಬಲಿಯಾದ್ಲಾ ಹೆಂಡತಿ?
ಸಾಂದರ್ಭಿಕ ಚಿತ್ರ
ದತ್ತಾತ್ರೇಯ ಪಾಟೀಲ, ಕಲಬುರಗಿ
| Edited By: |

Updated on: Dec 22, 2023 | 4:38 PM

Share

ಕಲಬುರಗಿ, ಡಿ.22: ಜಿಲ್ಲೆಯ ಚಿಂಚೋಳಿ(Chincholi) ತಾಲೂಕಿನ ಅಲ್ಲಾಪುರ ಎಂಬ ಗ್ರಾಮದಲ್ಲಿ ಆರೋಪಿ ಮಾರುತಿ ಈಳಿಗೇರ್ ಎಂಬ ವ್ಯಕ್ತಿ. ತನ್ನ ಜೊತೆ ಹಲವು ವರ್ಷದಿಂದ ಸಂಸಾರ ಮಾಡಿದ್ದ ಪತ್ನಿಯನ್ನು ಕೊಚ್ಚಿ ಕೊಂದಿ(Murder)ದ್ದಾನೆ. ಬಳಿಕ ಸೀದಾ ರಟಕಲ್ ಪೊಲೀಸ್ ಠಾಣೆಗೆ ಹೋಗಿ ಸರೆಂಡರ್ ಆಗಿದ್ದಾನೆ.‌ ಇನ್ನು ಈ ಆಸಾಮಿ, ಈ ಇಳಿ ವಯಸ್ಸಿನಲ್ಲೂ ಪತ್ನಿಯ ಮೇಲೆ‌ ಅನುಮಾನ ಪಡುತ್ತಿದ್ದನಂತೆ. ಆ ಕಾರಣಕ್ಕಾಗಿಯೇ ಪ್ರತಿನಿತ್ಯ ಕುಡಿದು ಬಂದು ಜಗಳ ಮಾಡುತ್ತಿದ್ದ ಮಾರುತಿ, ನಿನ್ನೆ(ಡಿ.21) ರಾತ್ರಿಯೂ ಕುಡಿದು ಬಂದು ಜಗಳ ಮಾಡಿದ್ದಾನೆ. ಗಲಾಟೆ ವಿಕೋಪಕ್ಕೆ ತಿರುಗಿ ಬೆಳಿಗ್ಗೆ ಆಗುವುದರೊಳಗೆ ಪತ್ಮಿ ಹೆಣವಾಗಿ ಬಿಟ್ಟಿದ್ದಾಳೆ.

ಇನ್ನು ಮಾರುತಿ ಈಳಿಗೇರ್ ಹಾಗೂ ಕೊಲೆಯಾಗಿರುವ ಕಾಶಮ್ಮಗೆ ಮೂರು ಜನ ಮಕ್ಕಳಿದ್ದು, ಮಗಳು ಮದುವೆ ಮಾಡಿಕೊಂಡು ಗಂಡನ ಮನೆಯಲ್ಲಿದ್ದರೇ, ಇತ್ತ ಇಬ್ಬರು ಪುತ್ರರು ಇವನ ಉಪಟಳ ತಾಳದೇ ಮನೆ ಬಿಟ್ಟು ಬೇರೆ ಕಡೆ ಜೀವನ ನಡೆಸುತ್ತಿದ್ದರು. ಮೊದಲಿನಿಂದಲೂ ಜಗಳ ಮಾಡುತ್ತಿದ್ದ ಹಿನ್ನಲೆ ಇಬ್ಬರು ಇಬ್ಬರು ಮಕ್ಕಳು ಮನೆ ಬಿಟ್ಟು ಹೋಗಿದ್ದರು.‌ ನಾಲ್ಕು ಎಕರೆ ಜಮೀನು ಬಿಟ್ಟು ಕೂಲಿ ನಾಲಿ ಮಾಡಿಕೊಂಡು ಮಕ್ಕಳು ಜೀವನ ಮಾಡುತ್ತಿದ್ದರು. ಆದ್ರೆ, ಇಂದು ಬೆಳಿಗ್ಗೆ ಏಳುತ್ತಿದ್ದಂತೆ ಅಲ್ಲಾಪುರ ಗ್ರಾಮದಿಂದ ಪೋನ್ ಕರೆ ಬಂದಿದೆ. ಮನೆಯಲ್ಲಿ ತಾಯಿ ಹೆಣವಾಗಿದ್ದಾಳೆ ಎಂಬ ಮಾತು ಕೇಳುತ್ತಿದಂತೆ. ಮಕ್ಕಳು, ಸಂಬಂಧಿಕರು ಗ್ರಾಮಕ್ಕೆ ಬಂದಿದ್ದಾರೆ.‌

ಇದನ್ನೂ ಓದಿ:ಮಂಡ್ಯ: ಮೊಬೈಲ್ ರಿಚಾರ್ಜ್ ವಿಚಾರಕ್ಕೆ ಗಲಾಟೆ; ರಾಡ್​​ನಿಂದ ಹೊಡೆದು ಪತ್ನಿಯ ಕೊಲೆ; ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ

ಸದ್ಯ ಪ್ರಕರಣ ದಾಖಲಿಸಿಕೊಂಡಿರುವ ರಟಕಲ್ ಪೊಲೀಸರು, ತನೀಖೆ ನಡೆಸುತ್ತಿದ್ದಾರೆ‌. ಪತ್ನಿ ಕೊಂದಿರುವ ಮಾರುತಿ ಕಂಬಿ ಎಣಿಸುವಂತಾಗಿದ್ದರೆ, ಇತ್ತ ಇಳಿ ವಯಸ್ಸಿನ ಕೊಲೆ ನೋಡಿ ಗ್ರಾಮವೇ ಆತಂಕ ಪಟ್ಟಿದೆ. ಅದು ಏನೇ ಇರಲಿ ಕ್ಷುಲಕ್ಕ ಕಾರಣಕ್ಕಾಗಿ ಇಷ್ಟು ದಿನ ಕಷ್ಟ ಸುಖದಲ್ಲಿ ಸಂಗಾತಿಯಾಗಿದ್ದ ಪತ್ನಿಯನ್ನೇ ಕೊಲೆ ಮಾಡಿದ್ದು ನಿಜಕ್ಕೂ ದುರಂತವೇ ಸರಿ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ರಾಜಶೇಖರ್​​ ಕುಟುಂಬಕ್ಕೆ 25 ಲಕ್ಷ ರೂ ಪರಿಹಾರ: ಸಚಿವ ಜಮೀರ್ ವಿರುದ್ಧ ದೂರು
ರಾಜಶೇಖರ್​​ ಕುಟುಂಬಕ್ಕೆ 25 ಲಕ್ಷ ರೂ ಪರಿಹಾರ: ಸಚಿವ ಜಮೀರ್ ವಿರುದ್ಧ ದೂರು
ಸ್ಪಂದನಾ ಫ್ಯಾಮಿಲಿಗೆ ಗಿಲ್ಲಿ ಇಷ್ಟ ಆಗಿದ್ದೇ ಈ ಕಾರಣಕ್ಕೆ; ವಿವರಿಸಿದ ನಟಿ
ಸ್ಪಂದನಾ ಫ್ಯಾಮಿಲಿಗೆ ಗಿಲ್ಲಿ ಇಷ್ಟ ಆಗಿದ್ದೇ ಈ ಕಾರಣಕ್ಕೆ; ವಿವರಿಸಿದ ನಟಿ
ಪ್ರಸಿದ್ಧ ಆಭರಣ ಮಳಿಗೆಯಲ್ಲಿ 14 ಲಕ್ಷದ ಜ್ಯುವೆಲರಿ ಕದ್ದ ಮಹಿಳೆಯರು
ಪ್ರಸಿದ್ಧ ಆಭರಣ ಮಳಿಗೆಯಲ್ಲಿ 14 ಲಕ್ಷದ ಜ್ಯುವೆಲರಿ ಕದ್ದ ಮಹಿಳೆಯರು
ಗುಡ್ ಲಕ್; ಸಿದ್ದರಾಮಯ್ಯಗೆ ಡಿಸಿಎಂ ಡಿಕೆ ಶಿವಕುಮಾರ್ ಅಭಿನಂದನೆ
ಗುಡ್ ಲಕ್; ಸಿದ್ದರಾಮಯ್ಯಗೆ ಡಿಸಿಎಂ ಡಿಕೆ ಶಿವಕುಮಾರ್ ಅಭಿನಂದನೆ
ಅರ್ಧಶತಕ ಬಾರಿಸಿಯೂ ತಂಡವನ್ನು ಗೆಲ್ಲಿಸದ ವಾರ್ನರ್
ಅರ್ಧಶತಕ ಬಾರಿಸಿಯೂ ತಂಡವನ್ನು ಗೆಲ್ಲಿಸದ ವಾರ್ನರ್
ಸಾಕ್ಷಿ ನಾಶ ಹಿನ್ನೆಲೆ ರಾಜಶೇಖರ್​ ಶವ ಸುಟ್ಟು ಹಾಕಿದ್ದಾರೆ ಎಂದ ಶ್ರೀರಾಮುಲು
ಸಾಕ್ಷಿ ನಾಶ ಹಿನ್ನೆಲೆ ರಾಜಶೇಖರ್​ ಶವ ಸುಟ್ಟು ಹಾಕಿದ್ದಾರೆ ಎಂದ ಶ್ರೀರಾಮುಲು
ಕೊಡಗು ಜಿಲ್ಲೆಯ ನಂಬರ್ ಒನ್ ಟ್ಯಾಕ್ಸ್ ಪೇಯರ್ ರಶ್ಮಿಕಾ ಮಂದಣ್ಣ
ಕೊಡಗು ಜಿಲ್ಲೆಯ ನಂಬರ್ ಒನ್ ಟ್ಯಾಕ್ಸ್ ಪೇಯರ್ ರಶ್ಮಿಕಾ ಮಂದಣ್ಣ
ರಕ್ಷಿತಾ ಬೆಂಬಲಕ್ಕೆ ಬಂದ ಗಿಲ್ಲಿ, ರಾಶಿಕಾ ಜೊತೆ ಜಗಳ: ವಿಡಿಯೋ
ರಕ್ಷಿತಾ ಬೆಂಬಲಕ್ಕೆ ಬಂದ ಗಿಲ್ಲಿ, ರಾಶಿಕಾ ಜೊತೆ ಜಗಳ: ವಿಡಿಯೋ
ಸಿದ್ದರಾಮಯ್ಯ ಇಲ್ಲ ಅಂದ್ರೆ ಕಾಂಗ್ರೆಸ್ ಪಕ್ಷ ಇಲ್ಲ: ರಾಜಣ್ಣ ಖಡಕ್​​ ಮಾತು
ಸಿದ್ದರಾಮಯ್ಯ ಇಲ್ಲ ಅಂದ್ರೆ ಕಾಂಗ್ರೆಸ್ ಪಕ್ಷ ಇಲ್ಲ: ರಾಜಣ್ಣ ಖಡಕ್​​ ಮಾತು
ರಾಜಶೇಖರ್​ ತಾಯಿಗೆ ಡಿಕೆ ಶಿವಕುಮಾರ್​ ಸಾಂತ್ವನ: ಸರ್ಕಾರದಿಂದ ನೆರವು ಭರವಸೆ
ರಾಜಶೇಖರ್​ ತಾಯಿಗೆ ಡಿಕೆ ಶಿವಕುಮಾರ್​ ಸಾಂತ್ವನ: ಸರ್ಕಾರದಿಂದ ನೆರವು ಭರವಸೆ