AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡ ಚಿನ್ಮಯೀ ಆಸ್ಪತ್ರೆ ಮಾಲೀಕ | ಊಟ ಇಲ್ಲ ಅಂದಿದ್ದಕ್ಕೆ ಹೋಟೆಲ್​ಗೆ ಬೆಂಕಿಯಿಟ್ಟಿ ಕಿಡಿಗೇಡಿಗಳು

ಚಿನ್ಮಯಿ ಆಸ್ಪತ್ರೆ ಮಾಲೀಕ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಉಡುಪಿ ಜಿಲ್ಲೆ ಕುಂದಾಪುರ ಪಟ್ಟಣದಲ್ಲಿ ನಡೆದಿದೆ.

ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡ ಚಿನ್ಮಯೀ ಆಸ್ಪತ್ರೆ ಮಾಲೀಕ  | ಊಟ ಇಲ್ಲ ಅಂದಿದ್ದಕ್ಕೆ ಹೋಟೆಲ್​ಗೆ ಬೆಂಕಿಯಿಟ್ಟಿ ಕಿಡಿಗೇಡಿಗಳು
ಪ್ರಾತಿನಿಧಿಕ ಚಿತ್ರ
TV9 Web
| Edited By: ವಿವೇಕ ಬಿರಾದಾರ|

Updated on:May 26, 2022 | 1:03 PM

Share

ಉಡುಪಿ: ಚಿನ್ಮಯೀ ಆಸ್ಪತ್ರೆ (Chinmayee Hospital) ಮಾಲೀಕ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಉಡುಪಿ (Udupi) ಜಿಲ್ಲೆ ಕುಂದಾಪುರ (Kundapur) ಪಟ್ಟಣದಲ್ಲಿ ನಡೆದಿದೆ. ಕುಂದಾಪುರ ಪಟ್ಟಣದಲ್ಲಿರುವ ಚಿನ್ಮಯಿ ಆಸ್ಪತ್ರೆ ಮಾಲಿಕ ಕಟ್ಟೆ ಭೋಜಣ್ಣ (80) ರಿವಾಲ್ವರ್​ನಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೊಳಹಳ್ಳಿ ಗಣೇಶ್ ಶೆಟ್ಟಿ ಮನೆ ಎದುರು  ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಚಿನ್ಮಯಿ ಆಸ್ಪತ್ರೆ ಉಡುಪಿ, ಉತ್ತರ ಕನ್ನಡ ಜಿಲ್ಲೆಯಲ್ಲಿ ಹೆಸರುವಾಸಿಯಾಗಿತ್ತು. ಭೂಮಿ, ಹಣಕಾಸಿನ ವ್ಯವಹಾರ ಹಿನ್ನೆಲೆಯಲ್ಲಿ ಆತ್ಮಹತ್ಯೆ ಮಾಡಿಕೊಂಟಿರುವ ಶಂಕೆ ವ್ಯಕ್ತವಾಗಿದೆ. ಸ್ಥಳಕ್ಕೆ ಕುಂದಾಪುರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ.

ಆಸ್ತಿ ವಿಚಾರಕ್ಕೆ ದಾಯಾದಿಗಳ ಮಧ್ಯೆ ಕಲಹ ಓರ್ವ ಬಲಿ

ಮೈಸೂರು: ಆಸ್ತಿ ವಿಚಾರಕ್ಕೆ ದಾಯಾದಿಗಳ ಮಧ್ಯೆ ಕಲಹ ಉಂಟಾಗಿ ಓರ್ವ ಸಾವನ್ನಪ್ಪಿರುವ ಘಟನೆ ಸೂರು ತಾಲ್ಲೂಕು ಜಯಪುರ ಹೋಬಳಿಯ ಕರಡಿ ಮರಯ್ಯನ ಹುಂಡಿಯಲ್ಲಿ ನಡೆದಿದೆ. ಚಾಕುವಿನಿಂದ ಇರಿದು ನಂಜುಂಡ (54)ನನ್ನು ಬರ್ಬರವಾಗಿ ಕೊಲೆ ಮಾಡಿದ್ದಾರೆ.  ಆಸ್ತಿ ವಿಚಾರಕ್ಕೆ ದಾಯಾದಿಗಳ ಮಧ್ಯೆ ಗಲಾಟೆ ನಡೆದಿದೆ. ಗಲಾಟೆ ವಿಕೋಪಕ್ಕೆ ತಿರುಗಿದೆ ಆಗ  ದಾಯಾದಿಗಳು ನಂಜುಂಡನಿಗೆ ಚಾಕುವಿನಿಂದ ಇರಿದು ಹತ್ಯೆ ಮಾಡಿದ್ದಾರೆ. ತೀವ್ರವಾಗಿ ಗಾಯಗೊಂಡಿದ್ದ ನಂಜುಂಡನನ್ನು ಕೂಡಲೆ ಮೈಸೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೆ ನಂಜುಂಡ ಸಾವನ್ನಪ್ಪಿದ್ದಾನೆ. ದಯಾದಿಗಳಾದ ಮಾಲೇಗೌಡರ ಮಕ್ಕಳಾದ ಶಿವಣ್ಣ, ಕೃಷ್ಣ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಮೈಸೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ
Image
ಮಂಗಳೂರಿನಲ್ಲಿ ಮತ್ತೆ ಶುರುವಾಯ್ತು ಹಿಜಾಬ್ ಗಲಾಟೆ! ಕೇಸರಿ ಶಾಲು ಧರಿಸಲು ಅವಕಾಶ ನೀಡುವಂತೆ ಆಗ್ರಹಿಸಿ ಕಾಲೇಜು ಕ್ಯಾಂಪಸ್​ನಲ್ಲಿ ಪ್ರತಿಭಟನೆ
Image
Thyroid Imbalance: ನವಜಾತ ಶಿಶುಗಳನ್ನು ಕಾಡುತ್ತಿದೆ ಥೈರಾಯ್ಡ್​ ಅಸಮತೋಲನ ಸಮಸ್ಯೆ
Image
Pak Politics: ಚುನಾವಣೆ ಘೋಷಿಸಲು ಪಾಕಿಸ್ತಾನದ ಹೊಸ ಸರ್ಕಾರಕ್ಕೆ 6 ದಿನಗಳ ಗಡುವು ಕೊಟ್ಟ ಇಮ್ರಾನ್ ಖಾನ್
Image
ಹೆಸ್ಕಾಂನ ಇಬ್ಬರು ಅಧಿಕಾರಿಗಳ ವಿರುದ್ಧ ಭ್ರಷ್ಟಾಚಾರ ಆರೋಪ: ಅಧಿಕಾರಿಗಳಿಬ್ಬರ ವಿರುದ್ಧ ಗುತ್ತಿಗೆದಾರರ ತೀವ್ರ ಆಕ್ರೋಶ

ಇದನ್ನು ಓದಿ: ಮಥುರಾ ಕೋರ್ಟ್​ನಿಂದ ಇಂದು ಕೃಷ್ಣ ಜನ್ಮಭೂಮಿ ಪ್ರಕರಣದ ವಿಚಾರಣೆ

ಮದುವೆ ನಿರಾಕರಿಸಿದ್ದಕ್ಕೆ ಸೋದರಮಾವನ ಮಕ್ಕಳಿಂದ ಯುವತಿಯ ಯುವತಿಯನ್ನು ಅಪಹರಿಸಲು  ಯತ್ನ

ಬೆಂಗಳೂರು: ಮದುವೆ ನಿರಾಕರಿಸಿದ್ದಕ್ಕೆ ಸೋದರಮಾವನ ಮಕ್ಕಳೇ ಯುವತಿಯನ್ನು ಅಪಹರಿಸಲು ಯತ್ನಿಸಿದ್ದಾರೆ. ಯುವತಿ ಇನ್ನು ವಿದ್ಯಾಭ್ಯಾಸ ಮಾಡುತ್ತಿದ್ದು, ಮಾವನ ಮಗನ ಜೊತೆ ಮದುವೆ ಮಾಡಿಕೊಳ್ಳಲು ನಿರಾಕರಿಸಿದ್ದಾಳೆ.  ಹೀಗಾಗಿ ಮಾವನ ಮಕ್ಕಳಾದ ಕೊತ್ತನೂರಿನ ಚಂದ್ರಶೇಖರ್, ಮಂಜುನಾಥ್ ಹಾಗೂ ಭೈರೇಂದ್ರ ಯುವತಿಯನ್ನು ಅಪಹರಿಸಲು ಯತ್ನಿಸಿದ್ದಾರೆ. ದುರುಳರು ಯುವತಿಯ ಮನೆಗೆ ಹೋಗಿ ಅವಾಜ್ ಹಾಕಿ ಯುವತಿಯನ್ನು ಅಪಹರಿಸಲು ಯತ್ನಿಸಿದ್ದಾರೆ.  ಆಗ ಅಕ್ಕಪಕ್ಕದವರು ಯುವತಿಯ ಮನೆಯವರ ಸಹಾಯಕ್ಕೆ ಬರುತ್ತಿದ್ದಂತೆ ಯುವತಿಯನ್ನು ಮನೆಯಲ್ಲೇ ಬಿಟ್ಟು ಹೋಗಿದ್ದಾರೆ. ಹೋಗುವಾಗ ಯಾವುದೇ ಕಾರಣಕ್ಕೂ ನಿನ್ನ ಮಗಳನ್ನ ಬಿಡುವುದಿಲ್ಲ, ಎತ್ತಿಹಾಕ್ಕೊಂಡ್ ಹೋಗಿ ಮದುವೆ ಆಗತೀನಿ ಅಂತ ಚಂದ್ರಶೇಖರ್ ಎಂಬಾತನಿಂದ ಅತ್ತೆ ಮಗಳು ಹಾಗೂ ಮಾವನಿಗೆ ಬೆದರಿಕೆ ಹಾಕಿದ್ದಾನೆ.  ಯುವತಿ ಹಾಗೂ ಕುಟುಂಬಸ್ಥರು ಕೊತ್ತನೂರು ಠಾಣೆಗೆ ದೂರು ನೀಡಿದ್ದಾರೆ.

ಊಟ ಇಲ್ಲ ಅಂದಿದ್ದಕ್ಕೆ ಹೋಟೆಲ್​ಗೆ ಬೆಂಕಿಯಿಟ್ಟಿ ಕಿಡಿಗೇಡಿಗಳು

ಕೊಪ್ಪಳ: ಊಟ ಇಲ್ಲ ಅಂದಿದ್ದಕ್ಕೆ ಕಿಡಿಗೇಡಿಗಳು ಹೋಟೆಲ್​ಗೆ ಬೆಂಕಿಯಿಟ್ಟಿರುವ ಘಟನೆ ಕೊಪ್ಪಳ ಜಿಲ್ಲೆ ಗಂಗಾವತಿ ತಾಲೂಕಿನ ಆನೆಗೊಂದಿ ಬಳಿ ನಡೆದಿದೆ. ಗುಡಿಸಲು ಮಾದರಿಯಲ್ಲಿದ್ದ ಹೋಟೆಲ್​ನ 11 ಕೋಣೆಗಳಿಗೆ ಬೆಂಕಿ ಹಚ್ಚಿ ಕಿಡಿಗೇಡಿಗಳು ಪರಾರಿಯಾಗಿದ್ದಾರೆ. ಸ್ಥಳೀಯರ  ಸಹಾಯದಿಂದ ಸಿಬ್ಬಂದಿ ಹೋಟೆಲ್​ನಿಂದ ಹೊರಬಂದಿದ್ದಾರೆ.  ಅದೃಷ್ಟವಶಾತ್ ಅವಘಡದಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಕಿಡಗೇಡಿಗಳು ನಿನ್ನೆ ರಾತ್ರಿ 11 ಗಂಟೆ ಬಳಿಕ ಊಟಕ್ಕೆಂದು ಬಂದಿದ್ದರು.  ಈ ವೇಳೆ ಹೋಟೆಲ್​ ಸಿಬ್ಬಂದಿ ಊಟ ಇಲ್ಲ ಅಂದಿದ್ದಕ್ಕೆ ದುಷ್ಕೃತ್ಯ ಎಸಗಿದ್ದಾರೆ. ಗಂಗಾವತಿ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನು ಓದಿ: 8 Years of Modi Government ಜನರಿಂದ ಅಭಿಪ್ರಾಯ ಪಡೆಯಲು ಕೇಂದ್ರ ಸರಕಾರ ತೆರದಿರುವ ಕೆಲವು ವೆಬ್​ಸೈಟ್​ಗಳು ಇಲ್ಲಿವೆ

ಪ್ರಮುಖ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 12:56 pm, Thu, 26 May 22

Follow Us
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ