AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಪರಾಧ ಸುದ್ದಿಗಳು: ಚಿತ್ರದುರ್ಗದಲ್ಲಿ ಗುಂಡು ಹಾರಿಸಿ ಬಟ್ಟೆ ವ್ಯಾಪಾರಿಯ ಹತ್ಯೆ; ದರೋಡೆಗೆ ಹೊಂಚುಹಾಕಿ ಕುಳಿತಿದ್ದ ಆರೋಪದಡಿ ಕೋಲಾರದಲ್ಲಿ ಇಬ್ಬರ ಬಂಧನ

ಅಪರಾಧ ಜಗತ್ತಿನ ಇಂದಿನ ಇಣುಕುನೋಟವನ್ನು ನೀವಿಲ್ಲಿ ಓದಬಹುದು.

ಅಪರಾಧ ಸುದ್ದಿಗಳು: ಚಿತ್ರದುರ್ಗದಲ್ಲಿ ಗುಂಡು ಹಾರಿಸಿ ಬಟ್ಟೆ ವ್ಯಾಪಾರಿಯ ಹತ್ಯೆ; ದರೋಡೆಗೆ ಹೊಂಚುಹಾಕಿ ಕುಳಿತಿದ್ದ ಆರೋಪದಡಿ ಕೋಲಾರದಲ್ಲಿ ಇಬ್ಬರ ಬಂಧನ
ಮೃತಪಟ್ಟ ದುರ್ದೈವಿ
TV9 Web
| Edited By: |

Updated on: Aug 17, 2021 | 11:21 PM

Share

ಚಿತ್ರದುರ್ಗ: ಜಿಲ್ಲೆಯ ಹೊಳಲ್ಕೆರೆ ಪಟ್ಟಣದಲ್ಲಿ‌ ಗುಂಡು ಹಾರಿಸಿ ವ್ಯಾಪಾರಿಯೋರ್ವನ ಹತ್ಯೆ ಮಾಡಲಾಗಿದೆ. ಖಾಸಗಿ ಟೆಕ್ಸ್ ಟೈಲ್ಸ್ ಮಾಲೀಕ ಮೂಲಸಿಂಗ್(50) ಎಂಬಾತನೇ ಹತ್ಯೆಗೀಡಾದ ದುರ್ದೈವಿ. ಬಟ್ಟೆ ಅಂಗಡಿ ಬಳಿ ವ್ಯಾಪಾರಿಯ ಹತ್ಯೆಗೈದು ದುಷ್ಕರ್ಮಿಗಳು ಪರಾರಿಯಾಗಿದ್ದಾರೆ. ಹೊಳಲ್ಕೆರೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದ್ದು, ಘಟನಾ ಸ್ಥಳಕ್ಕೆ ಎಸ್ಪಿ ಜಿ.ರಾಧಿಕಾ, ಡಿವೈಎಸ್ಪಿ ಪಾಂಡುರಂಗ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ದರೋಡೆಗೆ ಹೊಂಚು  ಆರೋಪ; ಇಬ್ಬರ ಬಂಧನ ದರೋಡೆಗೆ ಹೊಂಚುಹಾಕುತ್ತಿದ್ದ ಇಬ್ಬರು ದರೋಡೆಕೋರರನ್ನು ಕೋಲಾರ ಪೊಲೀಸರು ಬಂಧಿಸಿದ್ದಾರೆ.  ಕೋಲಾರ ಜಿಲ್ಲೆ ಮುಳಬಾಗಲು ತಾಲೂಕಿನ ಮಲ್ಲೆಕುಪ್ಪ ಗ್ರಾಮದ ಬಳಿ ಮಾರಕಾಸ್ತ್ರಗಳು ಹಾಗೂ ಖಾರದ ಪುಡಿ ಹಿಡಿದು ದರೋಡೆ ನಡೆಸಲು ಹೊಂಚುಹಾಕಿ ಕೂತಿದ್ದರು ಎನ್ನಲಾದ ತಂಡವನ್ನು  ಪೊಲೀಸರು ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ. ರವಿಕುಮಾರ್ ಮತ್ತು ಸುಬ್ರಮಣಿ ಎಂಬುವವರೇ ಬಂಧನಕ್ಕೊಳಪಟ್ಟವರು. ಮಿಕ್ಕ ಐದು ಮಂದಿ ಆರೋಪಿಗಳು‌ ಪರಾರಿಯಾಗಿದ್ದಾರೆ.

ಒಂಟಿಯಾಗಿ ಬರುವವರ ಮೇಲೆ ದಾಳಿ ಮಾಡಿ ಹಣ ಮತ್ತು ಚಿನ್ನಾಭರಣ ದೋಚಲು ದರೋಡೆಕೋರರ ತಂಡ ಯೋಜನೆ ರೂಪಿಸಿತ್ತು ಎಂದು ಪೊಲೀಸರು ತಿಳಿಸಿದ್ದಾರೆ. ನಂಗಲಿ ಪೊಲೀಸ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

20  ಕೆಜಿ ಅಂಬರ್​ಗ್ರೀಸ್ ವಶ ಬೆಂಗಳೂರು: ಖಚಿತ ಮಾಹಿತಿ ಆಧರಿಸಿ ನಗರದ ಎರಡು ಕಡೆ ದಾಳಿ ಮಾಡಿರುವ ಪೊಲೀಸರು 20 ಕೋಟಿ ಮೌಲ್ಯದ ಅಂಬರ್‌ಗ್ರಿಸ್​ನ್ನು ಜಪ್ತಿ ಮಾಡಿ ನಾಲ್ವರನ್ನು ಬಂಧಿಸಿದ್ದಾರೆ. ಎನ್ ಆರ್ ರಸ್ತೆಯ ಖಾಸಗಿ ವಸತಿ ಗೃಹದ ಕೊಠಡಿಯೊಂದರಲ್ಲಿ ಸಂಗ್ರಹಿಸಲಾಗಿದ್ದ 2.5 ಕೆ.ಜಿ ಅಂಬರ್‌ಗ್ರಿಸ್​ನ್ನು ಎಸ್‌.ಜೆ.ಪಾರ್ಕ್‌ ಠಾಣೆಯ ಪೊಲೀಸರು ವಶಪಡಿಸಿಕೊಂಡಿದ್ದಾರೆ.

ಜತೆಗೆ ಹೊಸಕೋಟೆಯಲ್ಲೂ ಅಂಬರ್‌ಗ್ರಿಸ್ ಸಂಗ್ರಹ ಬಗ್ಗೆ ಮಾಹಿತಿ ಪಡೆದ ಪೊಲೀಸರು 17.5 ಕೆಜಿ ಅಂಬರ್‌ಗ್ರಿಸ್​ನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಈಮೂಲಕ ಇಂದು ಒಂದೇ ದಿನ ಬೆಂಗಳೂರು ನಗರದಲ್ಲಿ ಪೊಲೀಸರು ಒಟ್ಟು 20 ಕೆಜಿ ಅಂಬರ್‌ಗ್ರಿಸ್​ನ್ನು ವಶಕ್ಕೆ ಪಡೆದಿದ್ದಾರೆ.

ಕೋಲಾರದಲ್ಲಿ ಉಸಿರುಗಟ್ಟಿ ಬಾಲಕಿ ಸಾವು ಕೋಲಾರ: ಸೀರೆಯಲ್ಲಿ‌ ಉಯ್ಯಾಲೆ ಮಾಡಿಕೊಂಡು ಆಡುತ್ತಿದ್ದ ವೇಳೆ ಕುತ್ತಿಗೆ ಬಿಗಿದು ಕೋಲಾರ ಜಿಲ್ಲೆ‌ ಮುಳಬಾಗಲು ತಾಲೂಕಿನ ಪೆದ್ದೂರು ಗ್ರಾಮದಲ್ಲಿ ಉಸಿರುಗಟ್ಟಿ ಬಾಲಕಿಯೋರ್ವಳು ಸಾವನ್ನಪ್ಪಿದ್ದಾಳೆ. ಮತ್ತೋರ್ವ ಬಾಲಕಿಯ ಸ್ಥಿತಿ ಗಂಭೀರವಾಗಿದೆ. ನಂಗಲಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಇದನ್ನೂ ಓದಿ:

ಮರಳಿ ತಾಯ್ನಾಡಿಗೆ ಬರಬೇಡ, ಭಾರತದಲ್ಲೇ ಉಳಿದುಬಿಡು ಎನ್ನುತ್ತಿದ್ದಾರೆ ಪೋಷಕರು; ಮೈಸೂರಿನಲ್ಲಿರುವ ಅಪ್ಘನ್ ವಿದ್ಯಾರ್ಥಿಗಳ ಅಳಲು

ಅಫ್ಘಾನಿಸ್ತಾನದಿಂದ ಯಾವುದೇ ದೇಶಕ್ಕೆ ಬೆದರಿಕೆಯಿಲ್ಲ: ಮೊದಲ ಸುದ್ದಿಗೋಷ್ಠಿಯಲ್ಲಿ ತಾಲಿಬಾನ್​ ಅಭಯ

(Chitradurga dress merchant killed by gunshot)

Follow Us
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ