AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಳ್ಳಕೆರೆ ಠಾಣೆ ಸಿಪಿಐ ವಿರುದ್ಧ ರೇಪ್ ಕೇಸ್ ದಾಖಲು

ಈಗಾಗಲೇ ಎರಡು ಮದುವೆಗಳನ್ನ ಆಗಿರುವ ಚಳ್ಳಕೆರೆ ಠಾಣೆ ಸಿಪಿಐ, ಯುವತಿಯೋರ್ವಳ ಮೇಲೆ ಅತ್ಯಾಚಾರ ಎಸಗಿದ್ದಲ್ಲದೆ ಬಲತ್ಕಾರವೂ ಮಾಡಿದ್ದಾನೆ. ಈ ಬಗ್ಗೆ ಮಹಿಳಾ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಚಳ್ಳಕೆರೆ ಠಾಣೆ ಸಿಪಿಐ ವಿರುದ್ಧ ರೇಪ್ ಕೇಸ್ ದಾಖಲು
ಸಿಪಿಐ ಉಮೇಶ್
TV9 Web
| Edited By: Rakesh Nayak Manchi|

Updated on: Oct 24, 2022 | 8:24 AM

Share

ಚಿತ್ರದುರ್ಗ: ಇಬ್ಬರನ್ನು ಮದುವೆಯಾದರೂ ಯುವತಿಯೋರ್ವಳ ಮೇಲೆ ಅತ್ಯಾಚಾರ ಎಸಗಿದ ಜಿಲ್ಲೆಯ ಚಳ್ಳಕೆರೆ ಪೊಲೀಸ್ ಠಾಣೆಯ ಸಿಪಿಐ ವಿರುದ್ಧ ನಗರದ ಮಹಿಳಾ ಪೊಲೀಸ್ ಠಾಣೆಯಲ್ಲಿ ಅತ್ಯಾಚಾರ ಪ್ರಕರಣ ದಾಖಲಾಗಿದೆ. ಸೋದರ ಮಾವನ ಮಗ ಜಿ.ಬಿ. ಉಮೇಶ್ ವಿರುದ್ಧ ಯುವತಿ ದೂರು ನೀಡಿದ್ದು, 5 ವರ್ಷಗಳ ಹಿಂದೆ ದಾವಣಗೆರೆಯಲ್ಲಿ ಇನ್ಸ್​ಪೆಕ್ಟರ್ ಆಗಿದ್ದ ಉಮೇಶ್ ನಿರಂತರವಾಗಿ ಅತ್ಯಾಚಾರ, ಬಲತ್ಕಾರ ಮಾಡಿದ್ದು, ಪರಿಣಾಮವಾಗಿ ಐದು ಬಾರಿ ಗರ್ಭಪಾತ ಮಾಡಲಾಗಿದೆ ಎಂದು ಆರೋಪಿಸಲಾಗಿದೆ.

ಐದು ವರ್ಷಗಳ ಹಿಂದೆ ದಾವಣಗೆರೆಯಲ್ಲಿ ನಿವೇಶನದ ಸಮಸ್ಯೆ ಹಿನ್ನೆಲೆ‌ ಯುವತಿಯ ಕುಟುಂಬಸ್ಥರು ಉಮೇಶ್ ಬಳಿ ಸಹಾಯ ಕೇಳಿದ್ದರು. ಅದರಂತೆ ಚಿತ್ರದುರ್ಗದಿಂದ ದಾವಣಗೆರೆಗೆ ಯುವತಿಯನ್ನು ಕರೆಸಿಕೊಂಡ ಸೋದರ ಮಾವನೂ ಆಗಿರುವ ಇನ್​ಸ್ಪೆಕ್ಟರ್ ಉಮೇಶ್, ಆಕೆಯ ಮೇಲೆ ಅತ್ಯಾಚಾರ ಎಸಗಿದ್ದನು. ಬಳಿಕ ಕರೆದಾಗ ಹೋಗದಿದ್ದಕ್ಕೆ ಶಿವಮೊಗ್ಗಕ್ಕೆ ಬಂದು ಬಲತ್ಕಾರ ಮಾಡಿದ್ದನು. ಶಿವಮೊಗ್ಗದಲ್ಲಿ ಯುವತಿ ಬಿಇಡಿ ಓದುತ್ತಿದ್ದಾಗ ಅತ್ಯಾಚಾರ ಎಸಗಿರುವ ಆರೋಪ ಮಾಡಲಾಗಿದೆ.

ಉಮೇಶನ ಈ ದುಷ್ಕೃತ್ಯದಿಂದ ಯುವತಿ ಐದು ಸಲ ಗರ್ಭಾವತಿಯಾಗಿದ್ದು, ಐದು ಬಾರಿಯೂ ಗರ್ಭಪಾತ ಮಾಡಿಸಲಾಗಿದೆ. ಈಗಾಗಲೇ ಉಮೇಶನಿಗೆ ಇಬ್ಬರು ಹೆಂಡತಿಯರಿದ್ದಾರೆ. 3ನೇ ಪತ್ನಿ ಹಾಗೇ ಇರು ಎಂದು ಯುವತಿಯನ್ನು ಒತ್ತಾಯಿಸುತ್ತಿದ್ದನು. ಅಲ್ಲದೆ ದಾವಣಗೆರೆಯ ನಿವೇಶನ ನಿಮಗೆ ಸಿಗದಂತೆ ಮಾಡುತ್ತೇನೆ, ನಿಮ್ಮ ತಂದೆ ತಾಯಿಯ ಬದುಕು ಬೀದಿಗೆ ತರುತ್ತೇನೆಂದು ಜೀವ ಬೆದರಿಕೆ ಹಾಕಿರುವುದಾಗಿ ದೂರು ನೀಡಲಾಗಿದೆ. ಅದರ ಅನ್ವಯ ಪೊಲೀಸರು ಕಲಂ 376 ಕ್ಲಾಸ್ (2)(k)(n), 323, 504, 506 ಐಪಿಸಿ ಅಡಿ ಪ್ರಕರಣ ದಾಖಲಿಸಿದ್ದಾರೆ. ತನ್ನ ವಿರುದ್ಧ ದೂರು ದಾಖಲಾಗುತ್ತಿದ್ದಂತೆ ಜಿ.ಬಿ.ಉಮೇಶ್ ನಾಪತ್ತೆಯಾಗಿದ್ದಾನೆ.

ಹಣ ಅಲ್ಲ ಮಾರಾಯ್ರೆ ಕ್ವಾಲಿಟಿ ಡ್ರೈ ಫ್ರೂಟ್ಸ್ ಕದಿಯುವ ಕಳ್ಳನೀತ

ಬೆಂಗಳೂರು: ಡ್ರೈ ಫ್ರೂಟ್ಸ್ ಅಂಗಡಿಗಳಿಗೆ ನುಗ್ಗುತ್ತಿದ್ದ ಖದೀಮನೊಬ್ಬ ಹಣ ಮುಟ್ಟದೆ ಕೇವಲ ಡ್ರೈ ಫ್ರೂಟ್ಸ್ ಅನ್ನು ಕದ್ದು ಪರಾರಿಯಾಗುತ್ತಿದ್ದ. ರೋಲಿಂಗ್ ಶಟರ್ ಏಳೆದು ಅಂಗಡಿ ಒಳಗೆ ಬಂದು ಮೊಬೈಲ್ ಪ್ಲಾಶ್ ಆನ್ ಮಾಡಿಕೊಂಡು ಕ್ವಾಲಿಟಿ ಇರುವ ಡ್ರೈ ಫ್ರೂಟ್ಸ್ ಕಳ್ಳತನ ಮಾಡಿದ್ದಾನೆ. ಈ ಘಟನೆ ಶಿವಾಜಿನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ಮತ್ತಷ್ಟು ಅಪರಾಧ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್