ಸಿಎಎ ವಿರೋಧಿ ಅಲೆ: ಬೆಂಗಳೂರಿನಲ್ಲಿ ಯುವಕನ ಮೇಲೆ ಅಟ್ಯಾಕ್, 6 SDPI ಕಾರ್ಯಕರ್ತರ ಅರೆಸ್ಟ್

ಬೆಂಗಳೂರು: ದೇಶಾದ್ಯಂತ ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಪ್ರತಿಭಟನೆಗಳು ನಡೆಯುತ್ತಿವೆ. ಬೆಂಗಳೂರಿನಲ್ಲಿಯೂ  ಡಿ. 22ರಂದು ಸಿಎಎ ಪರ ಜನಜಾಗೃತಿ ಕಾರ್ಯಕ್ರಮ ಮುಗಿಸಿ ತೆರಳುವಾಗ ಜೆಸಿ ನಗರದ ರಸ್ತೆಯಲ್ಲಿ ಯುವಕನ ಮೇಲೆ ಅಟ್ಯಾಕ್ ನಡೆದಿತ್ತು. ಇದೀಗ ಪ್ರಕರಣ ಸಂಬಂಧ ಸಾಧಿಕ್, ಅಕ್ಬರ್ ಸೇರಿದಂತೆ ಆರು ಜನ ಆರೋಪಿಗಳನ್ನ ಕಲಾಸಿಪಾಳ್ಯ ಪೊಲೀಸರು ಬಂಧಿಸಿದ್ದಾರೆ. ಕಮಿಷನರ್ ಭಾಸ್ಕರ್ ರಾವ್ ಏನ್ ಹೇಳಿದ್ರು?: ಡಿ. 22ರಂದು ಟೌನ್​ಹಾಲ್ ಬಳಿ ಇಂಡಿಯಾ ಫಾರ್ ಸಿಎಎ ವತಿಯಿಂದ ಜನಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮ ಮುಗಿಸಿ ಸಂಜೆ […]

ಸಿಎಎ ವಿರೋಧಿ ಅಲೆ: ಬೆಂಗಳೂರಿನಲ್ಲಿ ಯುವಕನ ಮೇಲೆ ಅಟ್ಯಾಕ್, 6 SDPI ಕಾರ್ಯಕರ್ತರ ಅರೆಸ್ಟ್
ಸಾಧು ಶ್ರೀನಾಥ್​

Updated on: Jan 17, 2020 | 11:44 AM

ಬೆಂಗಳೂರು: ದೇಶಾದ್ಯಂತ ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಪ್ರತಿಭಟನೆಗಳು ನಡೆಯುತ್ತಿವೆ. ಬೆಂಗಳೂರಿನಲ್ಲಿಯೂ  ಡಿ. 22ರಂದು ಸಿಎಎ ಪರ ಜನಜಾಗೃತಿ ಕಾರ್ಯಕ್ರಮ ಮುಗಿಸಿ ತೆರಳುವಾಗ ಜೆಸಿ ನಗರದ ರಸ್ತೆಯಲ್ಲಿ ಯುವಕನ ಮೇಲೆ ಅಟ್ಯಾಕ್ ನಡೆದಿತ್ತು. ಇದೀಗ ಪ್ರಕರಣ ಸಂಬಂಧ ಸಾಧಿಕ್, ಅಕ್ಬರ್ ಸೇರಿದಂತೆ ಆರು ಜನ ಆರೋಪಿಗಳನ್ನ ಕಲಾಸಿಪಾಳ್ಯ ಪೊಲೀಸರು ಬಂಧಿಸಿದ್ದಾರೆ.

ಕಮಿಷನರ್ ಭಾಸ್ಕರ್ ರಾವ್ ಏನ್ ಹೇಳಿದ್ರು?:
ಡಿ. 22ರಂದು ಟೌನ್​ಹಾಲ್ ಬಳಿ ಇಂಡಿಯಾ ಫಾರ್ ಸಿಎಎ ವತಿಯಿಂದ ಜನಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮ ಮುಗಿಸಿ ಸಂಜೆ 6 ಗಂಟೆ ವೇಳೆಗೆ ಮನೆಗೆ ಹೊರಟಿದ್ದ ವರುಣ್ ಎಂಬ ಯುವಕನ ಮೇಲೆ ಆರೋಪಿಗಳು ಅಟ್ಯಾಕ್ ಮಾಡಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. 2 ಬೈಕ್​ನಲ್ಲಿ ಬಂದಿದ್ದ SDPI ಕಾರ್ಯಕರ್ತರು ಹಿಂಬದಿಯಿಂದ ಬಂದು ರಾಡ್ ಹಾಗು ಲಾಂಗ್​ಗಳಿಂದ ಹಲ್ಲೆ ಮಾಡಿ, ಎಸ್ಕೇಪ್ ಆಗಿದ್ದರು.

ಪ್ರಕರಣ ಸಂಬಂಧ ಸಿಸಿಟಿವಿ ಆಧಾರದ ಮೇರೆಗೆ 6 ಜನ SDPI ಕಾರ್ಯಕರ್ತರನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳ ವಿಚಾರಣೆ ವೇಳೆ ಪೊಲೀಸರೇ ಶಾಕ್ ಆಗಿದ್ದಾರೆ. ವರುಣ್ ಮೇಲೆ ಹಲ್ಲೆಗೆ ವೈಯಕ್ತಿಕ ಕಾರಣವೇ ಇರಲಿಲ್ಲ. ಸಿಎಎನಲ್ಲಿ ಭಾಗಿಯಾದ ಹಿನ್ನೆಲೆಯಲ್ಲಿ ವರುಣ್ ಹತ್ಯೆಗೆ ಆರೋಪಿಗಳು ಮುಂದಾಗಿದ್ದರು ಎನ್ನಲಾಗಿದೆ.

ಸಿಎಎ ಪರ ಱಲಿ ಬಳಿಕ ವರುಣ್ ಕೊಲೆಗೆ ಯತ್ನಿಸಲಾಗಿತ್ತು. ತುರ್ತು ಚಿಕಿತ್ಸೆಯ ಬಳಿಕ ಆತ ಬದುಕುಳಿದಿದ್ದಾನೆ. ಟೌನ್‌ಹಾಲ್‌ ಬಳಿ ಸಿಎಎ ಪರವಾಗಿ ಱಲಿ ನಡೆಸಿದ್ದರು. ಈ ಕಾರ್ಯಕ್ರಮದ ಬಗ್ಗೆ ಎಸ್‌ಡಿಪಿಐ ಸದಸ್ಯರಿಗೆ ಮಾಹಿತಿ ನೀಡಿದ್ದರು. ಈ ಸಂಬಂಧ SDPIನ 6 ಸದಸ್ಯರು 2 ಸಭೆ ಮಾಡಿದ್ದರು. ಸಿಎಎ ಪರ ಱಲಿಯಲ್ಲಿ ಗಲಾಟೆಗೆ ಪ್ಲ್ಯಾನ್ ಮಾಡಿದ್ದರು. ಆದ್ರೆ ಸಮಾವೇಶಕ್ಕೆ ಪೊಲೀಸರ ಹೆಚ್ಚು ಭದ್ರತೆ ನೀಡಿದ್ದರಿಂದ ಅವರ ಕೈಲಿ ಆಗಲಿಲ್ಲ ಎಂದು ಬೆಂಗಳೂರು ಪೊಲೀಸ್ ಆಯುಕ್ತ ಭಾಸ್ಕರ್‌ ರಾವ್ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

Published On - 11:41 am, Fri, 17 January 20

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us