AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕ್ಲಬ್​​ ಹೌಸ್​ನಲ್ಲಿ ಪಾಕ್​ ಪರ ಘೋಷಣೆ ಕೂಗಿದ ಪ್ರಕರಣ: ಆರೋಪಿಗಳ ತೀವ್ರ ವಿಚಾರಣೆ, ಮೂವರಿಗಾಗಿ ಮುಂದುವರಿದ ಶೋಧ

ಕ್ಲಬ್​​ ಹೌಸ್​ನಲ್ಲಿ ಪಾಕ್​ ಪರ ಘೋಷಣೆ ಕೂಗಿ ಪೋಸ್ಟ್ ಮಾಡಿದ ಪ್ರಕರಣ ಸಂಬಂಧ ಬೆಂಗಳೂರು ನಗರದ ಸಂಪಿಗೆಹಳ್ಳಿ ಠಾಣಾ ಪೊಲೀಸರು ಇಬ್ಬರು ಆರೋಪಿಗಳನ್ನು ತೀವ್ರ ವಿಚಾರಣೆ ನಡೆಸಿದ್ದಾರೆ. ಪ್ರಕರಣ ಸಂಬಂಧ ಪೊಲೀಸರು ಉಳಿದ ಮೂವರಿಗಾಗಿ ಶೋಧ ಕಾರ್ಯ ನಡೆಸುತ್ತಿದ್ದಾರೆ.

ಕ್ಲಬ್​​ ಹೌಸ್​ನಲ್ಲಿ ಪಾಕ್​ ಪರ ಘೋಷಣೆ ಕೂಗಿದ ಪ್ರಕರಣ: ಆರೋಪಿಗಳ ತೀವ್ರ ವಿಚಾರಣೆ, ಮೂವರಿಗಾಗಿ ಮುಂದುವರಿದ ಶೋಧ
ಕ್ಲಬ್​ಹೌಸ್ ಬಳಕೆದಾರರ ಖಾತೆಯಲ್ಲಿ ಪಾಕ್ ಧ್ವಜ
TV9 Web
| Edited By: |

Updated on: Aug 23, 2022 | 10:51 AM

Share

ಬೆಂಗಳೂರು: ಸೋಷಿಯಲ್ ಮೀಡಿಯಾ ಆ್ಯಪ್ ಕ್ಲಬ್​​ ಹೌಸ್​ನಲ್ಲಿ ಪಾಕ್​ ಪರ ಘೋಷಣೆ ಕೂಗಿ ಪೋಸ್ಟ್ ಮಾಡಿದ ಪ್ರಕರಣ ಸಂಬಂಧ ಬೆಂಗಳೂರು ನಗರದ ಸಂಪಿಗೆಹಳ್ಳಿ ಠಾಣಾ ಪೊಲೀಸರು ಇಬ್ಬರು ಆರೋಪಿಗಳನ್ನು ತೀವ್ರ ವಿಚಾರಣೆ ನಡೆಸಿದ್ದು, ಉಳಿದ ಮೂವರಿಗಾಗಿ ಪೊಲೀಸರು ಶೋಧ ಕಾರ್ಯ ಮುಂದುವರಿಸಿದ್ದಾರೆ. ಸುರಭ್ ಮತ್ತು ರಾಹುಲ್​​ ಎಂಬ ಆರೋಪಿಗಳನ್ನು ವಶಕ್ಕೆ ಪಡೆದ ಪೊಲೀಸರು, ತೀವ್ರ ವಿಚಾರಣೆ ನಡೆಸಿ ಬಿಟ್ಟು ಕಳುಹಿಸಿದ್ದಾರೆ. ವಿಚಾರಣೆ ವೇಳೆ ಆರೋಪಿಗಳು ಪೊಲೀಸರ ಮುಂದೆ ತಪ್ಪೊಪ್ಪಿಕೊಂಡಿದ್ದಾರೆ.

ಕ್ಲಬ್ ಹೌಸ್​​ನಲ್ಲಿ ಚರ್ಚೆ ನಡೆಸುತ್ತಿದ್ದ ವೇಳೆ ಕೆಲವರು ಪಾಕ್ ಪರ ಘೋಷಣೆ ಕೂಗಿದ್ದರು. ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಪೊಲೀಸರು ಐಪಿಸಿ ಸೆಕ್ಷನ್ 153ಎ ಅಡಿ (ಧರ್ಮ,ಬಣ್ಣ, ಹುಟ್ಟಿದ ಸ್ಥಳ, ನಿವಾಸ, ಭಾಷೆ ಮತ್ತಿತರ ಆಧಾರದ ಮೇಲೆ ಬೇರೆ ಬೇರೆ ಧರ್ಮಗಳ ನಡುವೆ ದ್ವೇಷಕ್ಕೆ ಪ್ರಚೋದನೆ) ಸ್ವಯಂ ದೂರು ದಾಖಲಿಸಿಕೊಂಡು ಇಬ್ಬರಿಗೆ ನೋಟಿಸ್ ಜಾರಿ ಮಾಡಿ ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದ್ದರು. ಅದರಂತೆ ಠಾಣೆಗೆ ಆಗಮಿಸಿದ ಬಳ್ಳಾರಿ ಮೂಲದ ಸುರಭ್ ಮತ್ತು ಬೆಂಗಳೂರಿನ ಸಹಕಾರನಗರದ ರಾಹುಲ್​ನನ್ನು ತೀವ್ರ ವಿಚಾರಣೆಗೆ ಒಳಪಡಿಸಿದ್ದಾರೆ.

ವಿಚಾರಣೆ ವೇಳೆ ಆರೋಪಿಗಳು ಪೊಲೀಸರ ಮುಂದೆ ತಪ್ಪು ಒಪ್ಪಿಕೊಂಡಿದ್ದು, ವಿಚಾರಣೆ ಬಳಿಕ ಬಿಟ್ಟು ಕಳುಹಿಸಿದ್ದಾರೆ. ಸುರಭ್ ಮಾನ್ಯತಾ ಟೆಕ್ ಪಾರ್ಕ್​ನ ಕಂಪನಿಯಲ್ಲಿ ಟೆಕ್ಕಿಯಾಗಿ ಕೆಲಸ ಮಾಡುತ್ತಿದ್ದಾನೆ. ಪ್ರಕರಣದಲ್ಲಿ ಭಾಗಿಯಾದ ಉಳಿದ ಮೂವರಿಗಾಗಿ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

ತಾಕತ್ತಿನ ಪ್ರಶ್ನೆಗೆ ಪಾಕ್ ಪರ ಘೋಷಣೆ ಕೂಗಿದ ಆರೋಪಿಗಳು

ಚರ್ಚೆ ವೇಳೆ ಗ್ರೂಪ್​ನಲ್ಲಿ ತಾಕತ್ತಿನ ಪ್ರಶ್ನೆಯನ್ನು ಎತ್ತಲಾಗಿದೆ. ಗ್ರೂಪ್​ನಲ್ಲಿ ಹುಚ್ಚಾಟ ಮರೆದ ಕೆಲವರು ನಿಮಗೆ ತಾಕತ್ ಇದ್ರೆ ಪಾಕ್ ಪರ ಘೋಷಣೆ ಕೂಗಿ ಎಂದು ಸವಾಲು ಹಾಕಿದ್ದಾರೆ. ನಮ್ಮ ತಾಕತ್ ಬಗ್ಗೆ ಪ್ರಶ್ನೆ ಮಾಡ್ತೀರಾ ಅಂಥ ಅಂದುಕೊಂಡು ಸವಾಲನ್ನು ಸ್ವೀಕರಿಸಿದ ಆರೋಪಿಗಳು ಪಾಕ್ ಪರ ಘೋಷಣೆ ಕೂಗಿದ್ದಾರೆ. ತಮಾಷೆ ಮಾಡಲು ಹೋಗಿ ಈ ರೀತಿ ಆಗಿದೆ ಎಂದು ಪೊಲೀಸರು ಮುಂದೆ ಆರೋಪಿಗಳು ಹೇಳಿಕೆ ನೀಡಿದ್ದಾರೆ.

ಮತ್ತಷ್ಟು ಅಪರಾಧ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಆಟೋ ಚಾಲಕನಿಗೆ ಬಿಜೆಪಿ ಶಾಸಕನಿಂದ ಕಪಾಳಮೋಕ್ಷ; ವೈರಲ್ ವಿಡಿಯೋಗೆ ಆಕ್ರೋಶ
ಆಟೋ ಚಾಲಕನಿಗೆ ಬಿಜೆಪಿ ಶಾಸಕನಿಂದ ಕಪಾಳಮೋಕ್ಷ; ವೈರಲ್ ವಿಡಿಯೋಗೆ ಆಕ್ರೋಶ
ಅಯೋಧ್ಯೆಗೆ ಹೊರಟ ಸಚ್ಚಿದಾನಂದ ಸ್ವಾಮೀಜಿಗೆ ರೈಲಿನಲ್ಲಿ ವಿಶೇಷ ಸೌಲಭ್ಯ
ಅಯೋಧ್ಯೆಗೆ ಹೊರಟ ಸಚ್ಚಿದಾನಂದ ಸ್ವಾಮೀಜಿಗೆ ರೈಲಿನಲ್ಲಿ ವಿಶೇಷ ಸೌಲಭ್ಯ
ಸೇತುವೆಯಿಂದ ಕೆಳಗೆ ಬಿದ್ದರೂ ಯುವಕನ ಜೀವ ಉಳಿಸಿತು ಲೈಟ್ ಕಂಬ!
ಸೇತುವೆಯಿಂದ ಕೆಳಗೆ ಬಿದ್ದರೂ ಯುವಕನ ಜೀವ ಉಳಿಸಿತು ಲೈಟ್ ಕಂಬ!
ಗಿಲ್ಲಿ ಮೇಲೆ ರಕ್ಷಿತಾ ಶೆಟ್ಟಿಗೆ ಲವ್ ಇದ್ಯಾ? ಅಸಲಿ ವಿಷಯ ತೆರೆದಿಟ್ಟ ರಜತ್
ಗಿಲ್ಲಿ ಮೇಲೆ ರಕ್ಷಿತಾ ಶೆಟ್ಟಿಗೆ ಲವ್ ಇದ್ಯಾ? ಅಸಲಿ ವಿಷಯ ತೆರೆದಿಟ್ಟ ರಜತ್
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ