AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಡಿ.ಜೆ.ಹಳ್ಳಿ, ಕೆ.ಜಿ.ಹಳ್ಳಿ ಗಲಭೆ ಪ್ರಕರಣ.. ವಿಪ್ರೋದಲ್ಲಿ ಕೆಲಸ ಮಾಡುವವರನ್ನು ಬಂಧಿಸಲಾಗಿದೆ: ಸಿ.ಎಂ.ಇಬ್ರಾಹಿಂ

ಡಿಜೆ ಹಳ್ಳಿ, ಕೆಜಿ ಹಳ್ಳಿ ಗಲಭೆ ಪ್ರಕರಣದಲ್ಲಿ 72 ಪ್ರಕರಣಗಳು ದಾಖಲಾಗಿದೆ. 426 ಜನರನ್ನ ಈವರೆಗೆ ದಸ್ತಗಿರಿ ಮಾಡಲಾಗಿದೆ. ಡಿಜೆ ಹಳ್ಳಿ ಪೊಲೀಸ್ ಠಾಣೆಯ ಎರಡು ಪ್ರಕರಣಗಳನ್ನ ಎನ್.ಐ.ಎ ತಂಡಕ್ಕೆ ವರ್ಗಾವಣೆ ಮಾಡಲಾಗಿದೆ.

ಡಿ.ಜೆ.ಹಳ್ಳಿ, ಕೆ.ಜಿ.ಹಳ್ಳಿ ಗಲಭೆ ಪ್ರಕರಣ.. ವಿಪ್ರೋದಲ್ಲಿ ಕೆಲಸ ಮಾಡುವವರನ್ನು ಬಂಧಿಸಲಾಗಿದೆ: ಸಿ.ಎಂ.ಇಬ್ರಾಹಿಂ
ಸಿ.ಎಂ.ಇಬ್ರಾಹಿಂ ಮತ್ತು ಬಸವರಾಜ ಬೊಮ್ಮಾಯಿ
ಪೃಥ್ವಿಶಂಕರ
|

Updated on:Feb 04, 2021 | 4:56 PM

Share

ಬೆಂಗಳೂರು: ಡಿಜೆ ಹಳ್ಳಿ ಮತ್ತು ಕೆಜಿ ಹಳ್ಳಿ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಧಾನ ಪರಿಷತ್​ನಲ್ಲಿ ಸಿ.ಎಂ.ಇಬ್ರಾಹಿಂ ಮಾಡಿದ ಆರೋಪಗಳಿಗೆ ಗೃಹಸಚಿವ ಬಸವರಾಜ ಬೊಮ್ಮಾಯಿ ಉತ್ತರ ನೀಡಿದ್ದಾರೆ.

ಡಿಜೆ ಹಳ್ಳಿ, ಕೆಜಿ ಹಳ್ಳಿ ಗಲಭೆ ಪ್ರಕರಣದಲ್ಲಿ 72 ಪ್ರಕರಣಗಳು ದಾಖಲಾಗಿದೆ. 426 ಜನರನ್ನ ಈವರೆಗೆ ದಸ್ತಗಿರಿ ಮಾಡಲಾಗಿದೆ. ಡಿಜೆ ಹಳ್ಳಿ ಪೊಲೀಸ್ ಠಾಣೆಯ ಎರಡು ಪ್ರಕರಣಗಳನ್ನ ಎನ್.ಐ.ಎ ತನಿಖೆಗೆ ವರ್ಗಾವಣೆ ಮಾಡಲಾಗಿದೆ. ಡಿಜೆ ಹಳ್ಳಿ ಪೊಲೀಸ್ ಠಾಣೆ ಪ್ರಕರಣ ಸಿಸಿಬಿಗೆ ವಹಿಸಲಾಗಿದೆ.

ಪ್ರಕರಣ ಸಂಬಂಧ 63 ಜನರನ್ನ ಅರೆಸ್ಟ್ ಮಾಡಲಾಗಿದೆ. ಗಲಭೆ ಸಂಬಂಧಿಸಿದಂತೆ ಮೊಕದ್ದಮೆ ಸಂಬಂಧ 72 ಪ್ರಕರಣದಲ್ಲಿ ದೋಷಾರೋಪಣೆ ಪಟ್ಟಿ ಸಲ್ಲಿಸಲು ಕ್ರಮವಹಿಸಲಾಗಿದೆ. ಈಗಾಗಲೇ ನಷ್ಟ ಅಂದಾಜು ಮಾಡಲು ಕ್ಲೈಮ್ ಕಮೀಷನ್ ನೇಮಕ ಮಾಡಲಾಗಿದೆ ಎಂದು ಸಿ.ಎಂ. ಇಬ್ರಾಹಿಂ ಪ್ರಶ್ನೆಗೆ ಸಚಿವ ಬೊಮ್ಮಾಯಿ ಉತ್ತರ ನೀಡಿದರು.

ಅಮಾಯಕರನ್ನ ಬಂಧನ ಮಾಡಲಾಗಿದೆ. ವಿಪ್ರೋದಲ್ಲಿ ಕೆಲಸ ಮಾಡೋರನ್ನು ಅರೆಸ್ಟ್ ಮಾಡಿದ್ದಾರೆ. ಅಮಾಯಕರನ್ನ ಬಿಡುಗಡೆ ಮಾಡಿ ಎಂಬ ಸಿ.ಎಂ. ಇಬ್ರಾಹಿಂ ಆಗ್ರಹಕ್ಕೆ ಉತ್ತರಿಸಿದ ಬೊಮ್ಮಾಯಿ, ಪ್ರಾಥಮಿಕ ತನಿಖೆಯಲ್ಲಿ ಅನೇಕ ಜನರನ್ನ ಬಂಧಿಸಲಾಗಿತ್ತು. ಇದ್ರಲ್ಲಿ 84-90 ಜನರನ್ನ ಬಿಡಲಾಗಿದೆ. ಅಮಾಯಕರು ಯಾರನ್ನೂ ಬಂಧನ ಮಾಡಿಲ್ಲ. ಪೊಲೀಸರ ತನಿಖೆಯಲ್ಲಿ ಹಸ್ತಕ್ಷೇಪ ಮಾಡೊಲ್ಲ ಎಂದು ಸ್ಪಷ್ಟ ಮಾತುಗಳಲ್ಲಿ ಹೇಳಿದರು.

ಡಿ.ಜೆ.ಹಳ್ಳಿ, ಕೆ.ಜಿ.ಹಳ್ಳಿ ಗಲಭೆ ಪ್ರಕರಣ: ಮಾಜಿ ಕಾರ್ಪೊರೇಟರ್ ಜಾಕೀರ್ ಅರೆಸ್ಟ್

Published On - 4:52 pm, Thu, 4 February 21

Follow Us
ಎಂಎನ್‌ಸಿ ಕಂಪನಿಗಳ ಹೆಸರಿನಲ್ಲಿ ಫೇಕ್ ಮೆಡಿಸಿನ್ ರಿ-ಪ್ಯಾಕಿಂಗ್
ಎಂಎನ್‌ಸಿ ಕಂಪನಿಗಳ ಹೆಸರಿನಲ್ಲಿ ಫೇಕ್ ಮೆಡಿಸಿನ್ ರಿ-ಪ್ಯಾಕಿಂಗ್
‘ಪವಿತ್ರಾಗೌಡ ಮೆಂಟಲಿ ಡಿಸ್ಟರ್ಬ್ ಆಗಿದ್ದಾರೆ’ ಎಂದ ನಾಗಲಕ್ಷ್ಮೀ ಚೌಧರಿ
‘ಪವಿತ್ರಾಗೌಡ ಮೆಂಟಲಿ ಡಿಸ್ಟರ್ಬ್ ಆಗಿದ್ದಾರೆ’ ಎಂದ ನಾಗಲಕ್ಷ್ಮೀ ಚೌಧರಿ
ದರ್ಶನ್ ಭೇಟಿ ಬಳಿಕ ಮನಸ್ತಾಪದ ಬಗ್ಗೆ ಪ್ರತಿಕ್ರಿಯೆ ನೀಡಿದ ಧನ್ವೀರ್ ಗೌಡ
ದರ್ಶನ್ ಭೇಟಿ ಬಳಿಕ ಮನಸ್ತಾಪದ ಬಗ್ಗೆ ಪ್ರತಿಕ್ರಿಯೆ ನೀಡಿದ ಧನ್ವೀರ್ ಗೌಡ
ದರ್ಶನ್ ನೋಡಲು ಒಟ್ಟಿಗೆ ಜೈಲಿಗೆ ಬಂದ ಮೀನಾ, ಧನ್ವೀರ್ ಗೌಡ, ವಿಜಯಲಕ್ಷ್ಮಿ
ದರ್ಶನ್ ನೋಡಲು ಒಟ್ಟಿಗೆ ಜೈಲಿಗೆ ಬಂದ ಮೀನಾ, ಧನ್ವೀರ್ ಗೌಡ, ವಿಜಯಲಕ್ಷ್ಮಿ
ಯಾವುದೇ ಕೈದಿಗೆ ಜೈಲಲ್ಲಿ ವಿಐಪಿ ಸೌಲಭ್ಯ ಕೊಡಲ್ಲ: ಗೃಹ ಸಚಿವ
ಯಾವುದೇ ಕೈದಿಗೆ ಜೈಲಲ್ಲಿ ವಿಐಪಿ ಸೌಲಭ್ಯ ಕೊಡಲ್ಲ: ಗೃಹ ಸಚಿವ
ತುಮಕೂರು KSRTC ಬಸ್ ನಿಲ್ದಾಣದಲ್ಲಿ ರೊಚ್ಚಿಗೆದ್ದ ವಿದ್ಯಾರ್ಥಿಗಳು
ತುಮಕೂರು KSRTC ಬಸ್ ನಿಲ್ದಾಣದಲ್ಲಿ ರೊಚ್ಚಿಗೆದ್ದ ವಿದ್ಯಾರ್ಥಿಗಳು
‘ಓಣಂ’ ಸಡಗರ: ಕೇರಳಂ ಸಂಸ್ಕೃತಿ ಅನಾವರಣಗೊಳಿಸಿದ ವಿದ್ಯಾರ್ಥಿಗಳು
‘ಓಣಂ’ ಸಡಗರ: ಕೇರಳಂ ಸಂಸ್ಕೃತಿ ಅನಾವರಣಗೊಳಿಸಿದ ವಿದ್ಯಾರ್ಥಿಗಳು
ಹನೂರು ಪ್ರಕರಣ: ಅಜ್ಞಾತ ಸ್ಥಳದಿಂದ ವಿಡಿಯೋ ರಿಲೀಸ್​ ಮಾಡಿದ ಮಹಿಮದಾಸ್
ಹನೂರು ಪ್ರಕರಣ: ಅಜ್ಞಾತ ಸ್ಥಳದಿಂದ ವಿಡಿಯೋ ರಿಲೀಸ್​ ಮಾಡಿದ ಮಹಿಮದಾಸ್
ಕಾರ್ಕಳದ ದುರ್ಗಾ ಫಾಲ್ಸ್‌ನಲ್ಲಿ ಸ್ಥಳೀಯರ ಸಾಹಸಮಯ ಕಾರ್ಯಾಚರಣೆ
ಕಾರ್ಕಳದ ದುರ್ಗಾ ಫಾಲ್ಸ್‌ನಲ್ಲಿ ಸ್ಥಳೀಯರ ಸಾಹಸಮಯ ಕಾರ್ಯಾಚರಣೆ
ಸ್ಕ್ಯಾನ್ ಮಾಡಿ, ದೂರು ನೀಡಿ; ಕಳಪೆ ಆಹಾರ, ನಕಲಿ ಔಷಧಿಗೆ ಬ್ರೇಕ್!
ಸ್ಕ್ಯಾನ್ ಮಾಡಿ, ದೂರು ನೀಡಿ; ಕಳಪೆ ಆಹಾರ, ನಕಲಿ ಔಷಧಿಗೆ ಬ್ರೇಕ್!