AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಿತ್ರದುರ್ಗ: ಚಳ್ಳಕೆರೆ ಮಾಜಿ ತಹಸೀಲ್ದಾರ್ ​ವಿರುದ್ಧ ವಂಚನೆ ಆರೋಪ, ದೂರು ದಾಖಲು

ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನ ಮಾಜಿ ತಹಸೀಲ್ದಾರ್ ಎನ್.ರಘುಮೂರ್ತಿ ​ವಿರುದ್ಧ ವಂಚನೆ ಎಸಗಿರುವ ಆರೋಪದಡಿ ಪ್ರಕರಣ ದಾಖಲಾಗಿದೆ.

ಚಿತ್ರದುರ್ಗ: ಚಳ್ಳಕೆರೆ ಮಾಜಿ ತಹಸೀಲ್ದಾರ್ ​ವಿರುದ್ಧ ವಂಚನೆ ಆರೋಪ, ದೂರು ದಾಖಲು
ಮಾಜಿ ತಹಸೀಲ್ದಾರ್​ ಎನ್​ ರಘುಮೂರ್ತಿ
ವಿವೇಕ ಬಿರಾದಾರ
ವಿವೇಕ ಬಿರಾದಾರ|

Updated on:Apr 21, 2023 | 11:09 AM

Share

ಚಿತ್ರದುರ್ಗ: ಜಿಲ್ಲೆಯ ಚಳ್ಳಕೆರೆ (Chellakere) ತಾಲೂಕಿನ ಮಾಜಿ ತಹಸೀಲ್ದಾರ್ ಎನ್.ರಘುಮೂರ್ತಿ ​ವಿರುದ್ಧ ವಂಚನೆ ಎಸಗಿರುವ ಆರೋಪದಡಿ ಪ್ರಕರಣ ದಾಖಲಾಗಿದೆ. ಎನ್.ರಘುಮೂರ್ತಿ ಸೇರಿ ಆರು ಜನರ ವಿರುದ್ಧ ಪ್ರಕರಣ ದಾಖಲಾಗಿದೆ. ಮಾಜಿ ತಹಸೀಲ್ದಾರ್ ಎನ್ ರಘುಮೂರ್ತಿ, ಕಾಲುವೆಹಳ್ಳಿ ಕಂದಾಯ ವೃತ್ತದ ಗ್ರಾಮ ಆಡಳಿತಾಧಿಕಾರಿ ಸಿರಾಜ್, ಸಿದ್ಧಗಂಗಾ ಕಂಪ್ಯೂಟರ್ ಆಪರೇಟರ್ ರಾಘವೇಂದ್ರ, ಮೇಘನಾ, ಜಾಜೂರು ಕಂದಾಯ ವೃತ್ತದ ಗ್ರಾಮ ಆಡಳಿತಾಧಿಕಾರಿ ಮುಮ್ತಾಜ್ ಉನ್ನಿಸಾ, ಸಂಜೀವಮೂರ್ತಿ ವಿರುದ್ಧ ಪ್ರಕರಣ ದಾಖಲಾಗಿದೆ.

ಎನ್.ರಘುಮೂರ್ತಿ ಅವರು ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ತಹಸೀಲ್ದಾರ್ ಆಗಿದ್ದರು. ಈ ವೇಳೆ ನಕಲಿ ದಾಖಲೆ ಸೃಷ್ಟಿಸಿ ರೈತರ ಬೆಳೆ ಪರಿಹಾರದ 20,49,420 ರೂ. ಹಣವನ್ನು ಬೇರೆ ವ್ಯಕ್ತಿಗಳ ಅಕೌಂಟಿಗೆ ಜಮಾ ಮಾಡಿದ್ದಾರೆಂದು ಚಳ್ಳಕೆರೆ ತಾಲೂಕು ಕಚೇರಿ ಶಿರಸ್ತೆದಾರ್ ಸದಾಶಿವಪ್ಪ ಅವರು ಚಳ್ಳಕೆರೆ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಈ ಸಂಬಂಧ ಎನ್.ರಘುಮೂರ್ತಿ ವಿರುದ್ಧ ಎಫ್​ಐಆರ್​ ದಾಖಲಾಗಿದೆ. ಪ್ರಕರಣ ದಾಖಲಾದ ಹಿನ್ನೆಲೆ ಎನ್​. ರಘುಮೂರ್ತಿ ಗುಡ್ ಬೈ ಆಫ್ ಚಳ್ಳಕೆರೆ ಎಂದು ಫೇಸ್ ಬುಕ್ ಪೋಸ್ಟ್ ಹಾಕಿಕೊಂಡಿದ್ದರು.

ಇದನ್ನೂ ಓದಿ: ಗಾಲ್ಫ್ ಬಾಲ್ ಬಿದ್ದು ಕಾರಿನ ಗಾಜು ಜಖಂ, ಚಾಲಕನಿಗೆ ಗಾಯ: ಗಾಲ್ಫ್‌ ಕ್ಲಬ್‌ ವಿರುದ್ಧ ಎಫ್‌ಐಆರ್ ದಾಖಲು

ಎನ್.ರಘುಮೂರ್ತಿ ಇತ್ತೀಚೆಗೆ ತಹಸೀಲ್ದಾರ್ ಹುದ್ದೆಗೆ ರಾಜೀನಾಮೆ ಸಲ್ಲಿಸಿದ್ದಾರೆ. ಚಳ್ಳಕೆರೆಯಿಂದ ಬಿಜೆಪಿ ಅಬ್ಯರ್ಥಿಯಾಗಿ ಸ್ಪರ್ಧೆಗೆ ಸಿದ್ಧತೆ ನಡೆಸಿದ್ದರು.

ಪರಿಚಿತ ವಾಹನ ಡಿಕ್ಕಿಯಾಗಿ ಇಬ್ಬರು ರೈತರ ಸಾವು

ಬೆಳಗಾವಿ: ಪರಿಚಿತ ವಾಹನ ಡಿಕ್ಕಿಯಾಗಿ ಇಬ್ಬರು ರೈತರು ಸಾವನ್ನಪ್ಪಿದ್ದು, ಇಬ್ಬರು ಗಾಯಗೊಂಡಿರುವ ಘಟನೆ ಜಿಲ್ಲೆಯ ಖಾನಾಪುರ ತಾಲೂಕಿನ ಗೋಧೋಳಿ ಗ್ರಾಮದ ಬಳಿ ನಡೆದಿದೆ. ಮಹಾಬಲೇಶ್ವರ ಶಿಂಧೆ(65), ಪುಂಡಲೀಕ ರೇಡೇಕರ(75) ಕೃಷ್ಣ ರೇಡೇಕರ(74) ಮೃತ ರೈತರು. ಕಾಗಿನಕರ (47) ಗಾಯಾಳು. ಗಾಯಾಳನ್ನು ಬೆಳಗಾವಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ತಡರಾತ್ರಿ ನಾಲ್ವರು ಹೊಲದಲ್ಲಿ ಬೆಳೆದಿದ್ದ ಕಬ್ಬಿಗೆ ನೀರು ಹಾಯಿಸಲೆಂದು ರೈತರು ಧಾರವಾಡ – ರಾಮನಗರ ರಾಜ್ಯ ಹೆದ್ದಾರಿ ಮುಖಾಂತರ ಹೊಲಕ್ಕೆ ಹೊರಟಿದ್ದರು.  ಈ ವೇಳೆ ಹಿಂಬದಿಯಿಂದ ಅಪರಿಚಿತ ವಾಹನ ಡಿಕ್ಕಿ ಹೊಡೆದಿದೆ. ಪರಿಣಾಮ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಕೃಷ್ಣ ರೇಡೇಕರ ಅವರಿಗೆ ಗಂಭೀರ ಗಾಯಗಳಾಗಿದ್ದು, ಮಂಜುನಾಥ ಕಾಗಿನಕರ ಎಂಬುವರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ನಂದಗಡ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಮತ್ತಷ್ಟು ಅಪರಾಧ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 10:45 am, Fri, 21 April 23

Follow Us
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!
ಮಕ್ಕಳ ಗೆಟಪ್​​​ನಲ್ಲಿ ಬಂದು ಗಮನ ಸೆಳೆದ ಆ್ಯಂಕರ್ ಅನುಶ್ರೀ
ಮಕ್ಕಳ ಗೆಟಪ್​​​ನಲ್ಲಿ ಬಂದು ಗಮನ ಸೆಳೆದ ಆ್ಯಂಕರ್ ಅನುಶ್ರೀ