AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟಾಯ್ಲೆಟ್​ಗೆ ಹೋಗ್ಬೇಕು ಬಸ್​ ನಿಲ್ಲಿಸಿ ಎಂದಿದ್ದಕ್ಕೆ ಬಸ್​ನಿಂದ ತಳ್ಳಿದ ಕಂಡಕ್ಟರ್, ಕಾರ್ಮಿಕ ಸಾವು

ಟಾಯ್ಲೆಟ್​ಗೆ ಹೋಗ್ಬೇಕು ಬಸ್​ ನಿಲ್ಲಿಸಿ ಎಂದಿದ್ದಕ್ಕೆ ಕೋಪಗೊಂಡ ಕಂಡಕ್ಟರ್​ ಕಾರ್ಮಿಕರೊಬ್ಬರನ್ನು ಬಸ್​ನಿಂದ ಹೊರಗೆ ತಳ್ಳಿದ್ದು, ಅವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಉತ್ತರ ಪ್ರದೇಶದ ಬರೇಲಿಯಲ್ಲಿ ನಡೆದಿದೆ. ಕಾರ್ಮಿಕ ಚಕ್ರದಡಿ ಸಿಲುಕಿ ಸಾವನ್ನಪ್ಪಿದ್ದಾರೆ, ಆ ಬಸ್ ಡಬಲ್​ ಡೆಕ್ಕರ್ ಆಗಿತ್ತು, ಜೈಪುರಕ್ಕೆ ಹೋಗುತ್ತಿತ್ತು. ಅದೇ ವೇಳೆ ಅಲ್ಲೇ ಚಲಿಸುತ್ತಿದ್ದ ಕೆಲವು ವಾಹನ ಚಾಲಕರು ತಕ್ಷಣವೇ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಟಾಯ್ಲೆಟ್​ಗೆ ಹೋಗ್ಬೇಕು ಬಸ್​ ನಿಲ್ಲಿಸಿ ಎಂದಿದ್ದಕ್ಕೆ ಬಸ್​ನಿಂದ ತಳ್ಳಿದ ಕಂಡಕ್ಟರ್, ಕಾರ್ಮಿಕ ಸಾವು
ಬಸ್Image Credit source: TV9 Bharatvarsh
Follow us
ನಯನಾ ರಾಜೀವ್
|

Updated on: Dec 01, 2023 | 1:06 PM

ಟಾಯ್ಲೆಟ್​ಗೆ ಹೋಗ್ಬೇಕು ಬಸ್​ ನಿಲ್ಲಿಸಿ ಎಂದಿದ್ದಕ್ಕೆ ಕೋಪಗೊಂಡ ಕಂಡಕ್ಟರ್​ ಕಾರ್ಮಿಕರೊಬ್ಬರನ್ನು ಬಸ್​ನಿಂದ ಹೊರಗೆ ತಳ್ಳಿದ್ದು, ಅವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಉತ್ತರ ಪ್ರದೇಶದ ಬರೇಲಿಯಲ್ಲಿ ನಡೆದಿದೆ. ಕಾರ್ಮಿಕ ಚಕ್ರದಡಿ ಸಿಲುಕಿ ಸಾವನ್ನಪ್ಪಿದ್ದಾರೆ, ಆ ಬಸ್ ಡಬಲ್​ ಡೆಕ್ಕರ್ ಆಗಿತ್ತು, ಜೈಪುರಕ್ಕೆ ಹೋಗುತ್ತಿತ್ತು. ಅದೇ ವೇಳೆ ಅಲ್ಲೇ ಚಲಿಸುತ್ತಿದ್ದ ಕೆಲವು ವಾಹನ ಚಾಲಕರು ತಕ್ಷಣವೇ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಪೊಲೀಸರು ತಕ್ಷಣವೇ ಬಸ್​ ಅನ್ನು ವಶಕ್ಕೆ ಪಡೆದಿದ್ದಾರೆ. ಕಾರ್ಮಿಕರ ಶವವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ. ಬಸ್ ಚಾಲಕ ಮತ್ತು ಕಂಡಕ್ಟರ್ ತಲೆಮರೆಸಿಕೊಂಡಿದ್ದಾರೆ. ಪಿಲಿಭಿತ್‌ನ ಜೆಹಾನಾಬಾದ್ ಪೊಲೀಸ್ ಠಾಣೆ ವ್ಯಾಪ್ತಿಯ ರಾಮನಗರ ಗ್ರಾಮದ ನಿವಾಸಿ ವಿಜಯಪಾಲ್ ದೀಪಾವಳಿಯಂದು ಮನೆಗೆ ಬಂದಿದ್ದರು. ರಾಜಸ್ಥಾನದ ಜೈಪುರಕ್ಕೆ ಕೂಲಿ ಕೆಲಸಕ್ಕೆಂದು ಮನೆಯಿಂದ ಹೋಗುತ್ತಿದ್ದರು.ವಿಜಯಪಾಲ್ ಡಬಲ್ ಡೆಕ್ಕರ್ ಖಾಸಗಿ ಬಸ್‌ನಲ್ಲಿ ಕುಟುಂಬ ಸಮೇತ ಜೈಪುರಕ್ಕೆ ತೆರಳಿದ್ದರು ಎಂದು ಹೇಳಲಾಗುತ್ತಿದೆ.

ತಡರಾತ್ರಿ ಬಸ್ ಬರೇಲಿಗೆ ಬಂದಿದ್ದು, ಮಾರ್ಗಮಧ್ಯೆ ವಿಜಯಪಾಲ್ ಅವರಿಗೆ ಮೂತ್ರ ವಿಸರ್ಜನೆ ಮಾಡಬೇಕೆನಿಸಿತು, ಆಗ ಬಸ್ ನಿಲ್ಲಿಸುವಂತೆ ಕಂಡಕ್ಟರ್‌ಗೆ ಕೇಳಿದಾಗ ಅವರು ನಿರಾಕರಿಸಿದ್ದಾರೆ. ಪದೇ ಪದೇ ಕೇಳಿದಾಗ ಬಸ್ ಬರೇಲಿ ಪಿಲಿಭಿತ್​ನ ತಲುಪಿದ ತಕ್ಷಣ ಕಂಡಕ್ಟರ್ ಕಾರ್ಮಿಕನನ್ನು ಬಸ್​ ಇಂದ ತಳ್ಳಿದ್ದಾರೆ. ವಿಜಯಪಾಲ್ ಬಸ್​ನ ಹಿಂಬದಿ ಚಕ್ರಕ್ಕೆ ಸಿಲುಕಿ ಸಾವನ್ನಪ್ಪಿದ್ದಾರೆ.

ಮತ್ತಷ್ಟು ಓದಿ: ಕೇರಳದಲ್ಲಿ ಇಸ್ರೇಲಿ ಮಹಿಳೆ ಮನೆಯಲ್ಲಿಯೇ ಶವವಾಗಿ ಪತ್ತೆ, ಕೊಲೆ ಶಂಕೆ

ರಕ್ತದಲ್ಲಿ ಮಡುವಿನಲ್ಲಿ ನೆಲದ ಮೇಲೆ ಬಿದ್ದಿದ್ದ ವಿಜಯ್ ಪಾಲ್ ಅವರನ್ನು ನೋಡಿದ ಪತ್ನಿಗೆ ಪ್ರಜ್ಞೆ ತಪ್ಪಿತು. ತಕ್ಷಣ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಕೂಲಿ ಕಾರ್ಮಿಕನ ಕುಟುಂಬದವರ ದೂರಿನ ಮೇರೆಗೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ.

ಕಾರ್ಮಿಕನ ಸಾವಿನ ನಂತರ ಸುದೀರ್ಘ ಟ್ರಾಫಿಕ್ ಜಾಮ್ ಉಂಟಾಗಿತ್ತು, ಕೋಪಗೊಂಡ ಜನರು ಬಸ್​ ಮೇಲೆ ಕಲ್ಲು ತೂರಾಟ ನಡೆಸಿದ್ದರು. ಬಸ್ ಚಾಲಕ ಹಾಗೂ ಕಂಡಕ್ಟರ್ ನನ್ನು ಬಂಧಿಸುವಂತೆ ಕುಟುಂಬಸ್ಥರು ಪಟ್ಟು ಹಿಡಿದಿದ್ದರು.ಪೊಲೀಸರು ಹೇಗೋ ಜನರನ್ನು ಒಪ್ಪಿಸಿ ಸಮಾಧಾನಪಡಿಸಿದರು.

ಕ್ರೈಂ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ರಸ್ತೆಯಲ್ಲಿ ನಿಲ್ಲಿಸಿದ್ದ ಸ್ಕೂಟಿಯನ್ನೇ ತಳ್ಳಿಕೊಂಡು ಹೋದ ಗೂಳಿ!
ರಸ್ತೆಯಲ್ಲಿ ನಿಲ್ಲಿಸಿದ್ದ ಸ್ಕೂಟಿಯನ್ನೇ ತಳ್ಳಿಕೊಂಡು ಹೋದ ಗೂಳಿ!
ಕ್ಯಾನ್ಸರ್​ಗೀಡಾಗಿದ್ದ ಚಿರಂತ್ ಬಲಗೈ ಮೂಳೆ ಆಪರೇಷನ್ ಮೂಲಕ ತೆಗೆಯಲಾಗಿದೆ!
ಕ್ಯಾನ್ಸರ್​ಗೀಡಾಗಿದ್ದ ಚಿರಂತ್ ಬಲಗೈ ಮೂಳೆ ಆಪರೇಷನ್ ಮೂಲಕ ತೆಗೆಯಲಾಗಿದೆ!
‘ಕಲಾಮಾಧ್ಯಮ’ ಯಶಸ್ಸು ಕಂಡಿದ್ದು ರಾತ್ರೋರಾತ್ರಿ ಅಲ್ಲ; ಪರಮ್ ಕಷ್ಟದ ಹಾದಿ
‘ಕಲಾಮಾಧ್ಯಮ’ ಯಶಸ್ಸು ಕಂಡಿದ್ದು ರಾತ್ರೋರಾತ್ರಿ ಅಲ್ಲ; ಪರಮ್ ಕಷ್ಟದ ಹಾದಿ
ಗಂಗಾ ಎಕ್ಸ್‌ಪ್ರೆಸ್‌ವೇಯಲ್ಲಿ ವಾಯುಪಡೆಯಿಂದ ಯುದ್ಧವಿಮಾನಗಳ ತಾಲೀಮು
ಗಂಗಾ ಎಕ್ಸ್‌ಪ್ರೆಸ್‌ವೇಯಲ್ಲಿ ವಾಯುಪಡೆಯಿಂದ ಯುದ್ಧವಿಮಾನಗಳ ತಾಲೀಮು
ಶಿವಾನಂದ ಪಾಟೀಲ್ ರಾಜೀನಾಮೆ ಅಂಗೀಕರಿಸಲು ಬರಲ್ಲ: ಯುಟಿ ಖಾದರ್
ಶಿವಾನಂದ ಪಾಟೀಲ್ ರಾಜೀನಾಮೆ ಅಂಗೀಕರಿಸಲು ಬರಲ್ಲ: ಯುಟಿ ಖಾದರ್
ಪತ್ರದಲ್ಲಿ ಷರತ್ತುಗಳಿರಲ್ಲ, 2 ಸಾಲಿನ ಸಾರಾಂಶ ಮಾತ್ರ ಇರುತ್ತದೆ: ಯತ್ನಾಳ್
ಪತ್ರದಲ್ಲಿ ಷರತ್ತುಗಳಿರಲ್ಲ, 2 ಸಾಲಿನ ಸಾರಾಂಶ ಮಾತ್ರ ಇರುತ್ತದೆ: ಯತ್ನಾಳ್
ಆಂಧ್ರ ಡಿಸಿಎಂ ಪವನ್ ಕಲ್ಯಾಣ್​​ಗೆ ಚಾಕೋಲೇಟ್ ಕೊಟ್ಟ ಪ್ರಧಾನಿ ಮೋದಿ
ಆಂಧ್ರ ಡಿಸಿಎಂ ಪವನ್ ಕಲ್ಯಾಣ್​​ಗೆ ಚಾಕೋಲೇಟ್ ಕೊಟ್ಟ ಪ್ರಧಾನಿ ಮೋದಿ
ಸುಹಾಸ್ ಕುಟುಂಬಕ್ಕೆ ₹25 ಲಕ್ಷ ಪರಿಹಾರ ನೀಡಲು ನಿರ್ಧರಿಸಿದ್ದೇವೆ:ವಿಜಯೇಂದ್ರ
ಸುಹಾಸ್ ಕುಟುಂಬಕ್ಕೆ ₹25 ಲಕ್ಷ ಪರಿಹಾರ ನೀಡಲು ನಿರ್ಧರಿಸಿದ್ದೇವೆ:ವಿಜಯೇಂದ್ರ
ರಾಜೀನಾಮೆ ಪತ್ರವನ್ನು ಸ್ವೀಕರಿಸಿದ್ದೇನೆ, ಅಂಗೀಕರಿಸಿಲ್ಲ: ಸ್ಪೀಕರ್ ಖಾದರ್
ರಾಜೀನಾಮೆ ಪತ್ರವನ್ನು ಸ್ವೀಕರಿಸಿದ್ದೇನೆ, ಅಂಗೀಕರಿಸಿಲ್ಲ: ಸ್ಪೀಕರ್ ಖಾದರ್
ಯೋಗಿ ಆದಿತ್ಯನಾಥರಂತೆ ಡೇರಿಂಗ್ ರಾಜಕೀಯ ನಾಯಕನಾಗುತ್ತೇನೆಂದ SSLC ಟಾಪರ್
ಯೋಗಿ ಆದಿತ್ಯನಾಥರಂತೆ ಡೇರಿಂಗ್ ರಾಜಕೀಯ ನಾಯಕನಾಗುತ್ತೇನೆಂದ SSLC ಟಾಪರ್