ಟಾಯ್ಲೆಟ್​ಗೆ ಹೋಗ್ಬೇಕು ಬಸ್​ ನಿಲ್ಲಿಸಿ ಎಂದಿದ್ದಕ್ಕೆ ಬಸ್​ನಿಂದ ತಳ್ಳಿದ ಕಂಡಕ್ಟರ್, ಕಾರ್ಮಿಕ ಸಾವು

ಟಾಯ್ಲೆಟ್​ಗೆ ಹೋಗ್ಬೇಕು ಬಸ್​ ನಿಲ್ಲಿಸಿ ಎಂದಿದ್ದಕ್ಕೆ ಕೋಪಗೊಂಡ ಕಂಡಕ್ಟರ್​ ಕಾರ್ಮಿಕರೊಬ್ಬರನ್ನು ಬಸ್​ನಿಂದ ಹೊರಗೆ ತಳ್ಳಿದ್ದು, ಅವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಉತ್ತರ ಪ್ರದೇಶದ ಬರೇಲಿಯಲ್ಲಿ ನಡೆದಿದೆ. ಕಾರ್ಮಿಕ ಚಕ್ರದಡಿ ಸಿಲುಕಿ ಸಾವನ್ನಪ್ಪಿದ್ದಾರೆ, ಆ ಬಸ್ ಡಬಲ್​ ಡೆಕ್ಕರ್ ಆಗಿತ್ತು, ಜೈಪುರಕ್ಕೆ ಹೋಗುತ್ತಿತ್ತು. ಅದೇ ವೇಳೆ ಅಲ್ಲೇ ಚಲಿಸುತ್ತಿದ್ದ ಕೆಲವು ವಾಹನ ಚಾಲಕರು ತಕ್ಷಣವೇ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಟಾಯ್ಲೆಟ್​ಗೆ ಹೋಗ್ಬೇಕು ಬಸ್​ ನಿಲ್ಲಿಸಿ ಎಂದಿದ್ದಕ್ಕೆ ಬಸ್​ನಿಂದ ತಳ್ಳಿದ ಕಂಡಕ್ಟರ್, ಕಾರ್ಮಿಕ ಸಾವು
ಬಸ್
Image Credit source: TV9 Bharatvarsh

Updated on: Dec 01, 2023 | 1:06 PM

ಟಾಯ್ಲೆಟ್​ಗೆ ಹೋಗ್ಬೇಕು ಬಸ್​ ನಿಲ್ಲಿಸಿ ಎಂದಿದ್ದಕ್ಕೆ ಕೋಪಗೊಂಡ ಕಂಡಕ್ಟರ್​ ಕಾರ್ಮಿಕರೊಬ್ಬರನ್ನು ಬಸ್​ನಿಂದ ಹೊರಗೆ ತಳ್ಳಿದ್ದು, ಅವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಉತ್ತರ ಪ್ರದೇಶದ ಬರೇಲಿಯಲ್ಲಿ ನಡೆದಿದೆ. ಕಾರ್ಮಿಕ ಚಕ್ರದಡಿ ಸಿಲುಕಿ ಸಾವನ್ನಪ್ಪಿದ್ದಾರೆ, ಆ ಬಸ್ ಡಬಲ್​ ಡೆಕ್ಕರ್ ಆಗಿತ್ತು, ಜೈಪುರಕ್ಕೆ ಹೋಗುತ್ತಿತ್ತು. ಅದೇ ವೇಳೆ ಅಲ್ಲೇ ಚಲಿಸುತ್ತಿದ್ದ ಕೆಲವು ವಾಹನ ಚಾಲಕರು ತಕ್ಷಣವೇ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಪೊಲೀಸರು ತಕ್ಷಣವೇ ಬಸ್​ ಅನ್ನು ವಶಕ್ಕೆ ಪಡೆದಿದ್ದಾರೆ. ಕಾರ್ಮಿಕರ ಶವವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ. ಬಸ್ ಚಾಲಕ ಮತ್ತು ಕಂಡಕ್ಟರ್ ತಲೆಮರೆಸಿಕೊಂಡಿದ್ದಾರೆ. ಪಿಲಿಭಿತ್‌ನ ಜೆಹಾನಾಬಾದ್ ಪೊಲೀಸ್ ಠಾಣೆ ವ್ಯಾಪ್ತಿಯ ರಾಮನಗರ ಗ್ರಾಮದ ನಿವಾಸಿ ವಿಜಯಪಾಲ್ ದೀಪಾವಳಿಯಂದು ಮನೆಗೆ ಬಂದಿದ್ದರು. ರಾಜಸ್ಥಾನದ ಜೈಪುರಕ್ಕೆ ಕೂಲಿ ಕೆಲಸಕ್ಕೆಂದು ಮನೆಯಿಂದ ಹೋಗುತ್ತಿದ್ದರು.ವಿಜಯಪಾಲ್ ಡಬಲ್ ಡೆಕ್ಕರ್ ಖಾಸಗಿ ಬಸ್‌ನಲ್ಲಿ ಕುಟುಂಬ ಸಮೇತ ಜೈಪುರಕ್ಕೆ ತೆರಳಿದ್ದರು ಎಂದು ಹೇಳಲಾಗುತ್ತಿದೆ.

ತಡರಾತ್ರಿ ಬಸ್ ಬರೇಲಿಗೆ ಬಂದಿದ್ದು, ಮಾರ್ಗಮಧ್ಯೆ ವಿಜಯಪಾಲ್ ಅವರಿಗೆ ಮೂತ್ರ ವಿಸರ್ಜನೆ ಮಾಡಬೇಕೆನಿಸಿತು, ಆಗ ಬಸ್ ನಿಲ್ಲಿಸುವಂತೆ ಕಂಡಕ್ಟರ್‌ಗೆ ಕೇಳಿದಾಗ ಅವರು ನಿರಾಕರಿಸಿದ್ದಾರೆ. ಪದೇ ಪದೇ ಕೇಳಿದಾಗ ಬಸ್ ಬರೇಲಿ ಪಿಲಿಭಿತ್​ನ ತಲುಪಿದ ತಕ್ಷಣ ಕಂಡಕ್ಟರ್ ಕಾರ್ಮಿಕನನ್ನು ಬಸ್​ ಇಂದ ತಳ್ಳಿದ್ದಾರೆ. ವಿಜಯಪಾಲ್ ಬಸ್​ನ ಹಿಂಬದಿ ಚಕ್ರಕ್ಕೆ ಸಿಲುಕಿ ಸಾವನ್ನಪ್ಪಿದ್ದಾರೆ.

ಮತ್ತಷ್ಟು ಓದಿ: ಕೇರಳದಲ್ಲಿ ಇಸ್ರೇಲಿ ಮಹಿಳೆ ಮನೆಯಲ್ಲಿಯೇ ಶವವಾಗಿ ಪತ್ತೆ, ಕೊಲೆ ಶಂಕೆ

ರಕ್ತದಲ್ಲಿ ಮಡುವಿನಲ್ಲಿ ನೆಲದ ಮೇಲೆ ಬಿದ್ದಿದ್ದ ವಿಜಯ್ ಪಾಲ್ ಅವರನ್ನು ನೋಡಿದ ಪತ್ನಿಗೆ ಪ್ರಜ್ಞೆ ತಪ್ಪಿತು. ತಕ್ಷಣ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಕೂಲಿ ಕಾರ್ಮಿಕನ ಕುಟುಂಬದವರ ದೂರಿನ ಮೇರೆಗೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ.

ಕಾರ್ಮಿಕನ ಸಾವಿನ ನಂತರ ಸುದೀರ್ಘ ಟ್ರಾಫಿಕ್ ಜಾಮ್ ಉಂಟಾಗಿತ್ತು, ಕೋಪಗೊಂಡ ಜನರು ಬಸ್​ ಮೇಲೆ ಕಲ್ಲು ತೂರಾಟ ನಡೆಸಿದ್ದರು.
ಬಸ್ ಚಾಲಕ ಹಾಗೂ ಕಂಡಕ್ಟರ್ ನನ್ನು ಬಂಧಿಸುವಂತೆ ಕುಟುಂಬಸ್ಥರು ಪಟ್ಟು ಹಿಡಿದಿದ್ದರು.ಪೊಲೀಸರು ಹೇಗೋ ಜನರನ್ನು ಒಪ್ಪಿಸಿ ಸಮಾಧಾನಪಡಿಸಿದರು.

ಕ್ರೈಂ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
Follow Us