AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜಕೀಯ ದ್ವೇಷ: ಹಾಡಹಗಲೇ ಮಾರಕಾಸ್ತ್ರಗಳಿಂದ ಹಲ್ಲೆ

ಬೆಂಗಳೂರು: ಕಾಂಗ್ರೆಸ್ ಕಾರ್ಯಕರ್ತ ರಿಯಾಜ್ ಮೇಲೆ ಹಾಡಹಗಲೇ ನಡೆದ ಹಲ್ಲೆ ಪ್ರಕರಣ ಟ್ವಿಸ್ಟ್​ ಪಡೆದುಕೊಂಡಿದೆ. ರಾಜಕೀಯ ತಿರುವು ಪಡೆದುಕೊಂಡ ಹಲ್ಲೆ ನಡೆಸಲಾಗಿದೆ ಎಂದು ಪೊಲೀಸರ ತನಿಖೆ ವೇಳೆ ಸ್ಫೋಟಕ ಸತ್ಯ ಬಯಲಾಗಿದೆ. ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರು: ಕಳೆದ ಡಿ.9ರಂದು ಸಿದ್ಧಾಪುರದಲ್ಲಿ ಸೈಯದ್ ರಿಯಾಜ್ ಎಂಬಾತ ಬೈಕ್​ನಲ್ಲಿ ತೆರಳುತ್ತಿದ್ದ. ಈ ವೇಳೆ ಲಾಂಗು ಮಚ್ಚುಗಳ ಸಮೇತ ಕಾದಿದ್ದ ಗ್ಯಾಂಗ್​ ಹೆಲ್ಮೆಟ್​ ಧರಿಸಿ ಹಲ್ಲೆ ನಡೆಸಿತ್ತು. ಹಲ್ಲೆಗೂ ಮುನ್ನ ಉಪಚುನಾವಣೆಯ ಫಲಿತಾಂಶ ಹಿನ್ನೆಲೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗೆ ಅಭಿನಂದನೆ ಹೇಳಿ […]

ರಾಜಕೀಯ ದ್ವೇಷ: ಹಾಡಹಗಲೇ ಮಾರಕಾಸ್ತ್ರಗಳಿಂದ ಹಲ್ಲೆ
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on: Jan 04, 2020 | 9:29 AM

Share

ಬೆಂಗಳೂರು: ಕಾಂಗ್ರೆಸ್ ಕಾರ್ಯಕರ್ತ ರಿಯಾಜ್ ಮೇಲೆ ಹಾಡಹಗಲೇ ನಡೆದ ಹಲ್ಲೆ ಪ್ರಕರಣ ಟ್ವಿಸ್ಟ್​ ಪಡೆದುಕೊಂಡಿದೆ. ರಾಜಕೀಯ ತಿರುವು ಪಡೆದುಕೊಂಡ ಹಲ್ಲೆ ನಡೆಸಲಾಗಿದೆ ಎಂದು ಪೊಲೀಸರ ತನಿಖೆ ವೇಳೆ ಸ್ಫೋಟಕ ಸತ್ಯ ಬಯಲಾಗಿದೆ.

ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರು: ಕಳೆದ ಡಿ.9ರಂದು ಸಿದ್ಧಾಪುರದಲ್ಲಿ ಸೈಯದ್ ರಿಯಾಜ್ ಎಂಬಾತ ಬೈಕ್​ನಲ್ಲಿ ತೆರಳುತ್ತಿದ್ದ. ಈ ವೇಳೆ ಲಾಂಗು ಮಚ್ಚುಗಳ ಸಮೇತ ಕಾದಿದ್ದ ಗ್ಯಾಂಗ್​ ಹೆಲ್ಮೆಟ್​ ಧರಿಸಿ ಹಲ್ಲೆ ನಡೆಸಿತ್ತು. ಹಲ್ಲೆಗೂ ಮುನ್ನ ಉಪಚುನಾವಣೆಯ ಫಲಿತಾಂಶ ಹಿನ್ನೆಲೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗೆ ಅಭಿನಂದನೆ ಹೇಳಿ ರಿಯಾಜ್ ಬಂದಿದ್ದ. ಘಟನೆಯಲ್ಲಿ ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಸೈಯದ್ ಬಚಾವ್ ಆಗಿದ್ದಾರೆ.

ಈ ಹಿಂದೆ ಎಸ್​ಡಿಪಿಐ ಪಕ್ಷದಲ್ಲಿ ರಿಯಾಜ್ ಗುರುತಿಸಿಕೊಂಡಿದ್ದ. ಕಳೆದ ಮೂರು ವರ್ಷಗಳ ಹಿಂದೆ ಪಕ್ಷ ತೊರೆದು ಕಾಂಗ್ರೆಸ್ ಸೇರಿದ್ದ. ಬಳಿಕ ಈ ಬಾರಿಯ ಉಪಚುನಾವಣೆಯಲ್ಲಿ ರಿಜ್ವಾನ್ ಜೊತೆ ಗುರುತಿಸಿಕೊಂಡಿದ್ದ. ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ರಿಜ್ವಾನ್ ಪರ ಪ್ರಚಾರ ಮಾಡಿದ್ದ. ಚುನಾವಣೆ ಫಲಿತಾಂಶದಲ್ಲಿ ಶಿವಾಜಿನಗರ ಕಾಂಗ್ರೆಸ್ ಅಭ್ಯರ್ಥಿ ರಿಜ್ವಾನ್ ಜಯಗಳಿಸಿದ್ದ.

ಈ ವೇಳೆ ರಿಯಾಜ್ ಮೇಲೆ ಹಳೆ ರಾಜಕೀಯ ದ್ವೇಷ ಇಟ್ಟುಕೊಂಡು ಹಲ್ಲೆ ನಡೆಸಿದ್ದಾರೆ. ಬೈಕ್​ಗಳಲ್ಲಿ ಮಾಸ್ಕ್​ ಧರಿಸಿ ಬಂದ 5ಕ್ಕೂ ಅಧಿಕ ಮಂದಿಯ ಗ್ಯಾಂಗ್ ಹಲ್ಲೆ ನಡೆಸಿದೆ. ಆಸೀಫ್ ಹಾಗು ಇರ್ಫಾನ್ ಎಂಬುವರನ್ನು ವಶಕ್ಕೆ ಪಡೆದು ಸಿದ್ದಾಪುರ ಪೊಲೀಸರು ಹೆಚ್ಚಿನ ವಿಚಾರಣೆ ನಡೆಸುತ್ತಿದ್ದಾರೆ.

Follow Us
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ