AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜಕೀಯ ದ್ವೇಷ: ಹಾಡಹಗಲೇ ಮಾರಕಾಸ್ತ್ರಗಳಿಂದ ಹಲ್ಲೆ

ಬೆಂಗಳೂರು: ಕಾಂಗ್ರೆಸ್ ಕಾರ್ಯಕರ್ತ ರಿಯಾಜ್ ಮೇಲೆ ಹಾಡಹಗಲೇ ನಡೆದ ಹಲ್ಲೆ ಪ್ರಕರಣ ಟ್ವಿಸ್ಟ್​ ಪಡೆದುಕೊಂಡಿದೆ. ರಾಜಕೀಯ ತಿರುವು ಪಡೆದುಕೊಂಡ ಹಲ್ಲೆ ನಡೆಸಲಾಗಿದೆ ಎಂದು ಪೊಲೀಸರ ತನಿಖೆ ವೇಳೆ ಸ್ಫೋಟಕ ಸತ್ಯ ಬಯಲಾಗಿದೆ. ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರು: ಕಳೆದ ಡಿ.9ರಂದು ಸಿದ್ಧಾಪುರದಲ್ಲಿ ಸೈಯದ್ ರಿಯಾಜ್ ಎಂಬಾತ ಬೈಕ್​ನಲ್ಲಿ ತೆರಳುತ್ತಿದ್ದ. ಈ ವೇಳೆ ಲಾಂಗು ಮಚ್ಚುಗಳ ಸಮೇತ ಕಾದಿದ್ದ ಗ್ಯಾಂಗ್​ ಹೆಲ್ಮೆಟ್​ ಧರಿಸಿ ಹಲ್ಲೆ ನಡೆಸಿತ್ತು. ಹಲ್ಲೆಗೂ ಮುನ್ನ ಉಪಚುನಾವಣೆಯ ಫಲಿತಾಂಶ ಹಿನ್ನೆಲೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗೆ ಅಭಿನಂದನೆ ಹೇಳಿ […]

ರಾಜಕೀಯ ದ್ವೇಷ: ಹಾಡಹಗಲೇ ಮಾರಕಾಸ್ತ್ರಗಳಿಂದ ಹಲ್ಲೆ
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on: Jan 04, 2020 | 9:29 AM

Share

ಬೆಂಗಳೂರು: ಕಾಂಗ್ರೆಸ್ ಕಾರ್ಯಕರ್ತ ರಿಯಾಜ್ ಮೇಲೆ ಹಾಡಹಗಲೇ ನಡೆದ ಹಲ್ಲೆ ಪ್ರಕರಣ ಟ್ವಿಸ್ಟ್​ ಪಡೆದುಕೊಂಡಿದೆ. ರಾಜಕೀಯ ತಿರುವು ಪಡೆದುಕೊಂಡ ಹಲ್ಲೆ ನಡೆಸಲಾಗಿದೆ ಎಂದು ಪೊಲೀಸರ ತನಿಖೆ ವೇಳೆ ಸ್ಫೋಟಕ ಸತ್ಯ ಬಯಲಾಗಿದೆ.

ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರು: ಕಳೆದ ಡಿ.9ರಂದು ಸಿದ್ಧಾಪುರದಲ್ಲಿ ಸೈಯದ್ ರಿಯಾಜ್ ಎಂಬಾತ ಬೈಕ್​ನಲ್ಲಿ ತೆರಳುತ್ತಿದ್ದ. ಈ ವೇಳೆ ಲಾಂಗು ಮಚ್ಚುಗಳ ಸಮೇತ ಕಾದಿದ್ದ ಗ್ಯಾಂಗ್​ ಹೆಲ್ಮೆಟ್​ ಧರಿಸಿ ಹಲ್ಲೆ ನಡೆಸಿತ್ತು. ಹಲ್ಲೆಗೂ ಮುನ್ನ ಉಪಚುನಾವಣೆಯ ಫಲಿತಾಂಶ ಹಿನ್ನೆಲೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗೆ ಅಭಿನಂದನೆ ಹೇಳಿ ರಿಯಾಜ್ ಬಂದಿದ್ದ. ಘಟನೆಯಲ್ಲಿ ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಸೈಯದ್ ಬಚಾವ್ ಆಗಿದ್ದಾರೆ.

ಈ ಹಿಂದೆ ಎಸ್​ಡಿಪಿಐ ಪಕ್ಷದಲ್ಲಿ ರಿಯಾಜ್ ಗುರುತಿಸಿಕೊಂಡಿದ್ದ. ಕಳೆದ ಮೂರು ವರ್ಷಗಳ ಹಿಂದೆ ಪಕ್ಷ ತೊರೆದು ಕಾಂಗ್ರೆಸ್ ಸೇರಿದ್ದ. ಬಳಿಕ ಈ ಬಾರಿಯ ಉಪಚುನಾವಣೆಯಲ್ಲಿ ರಿಜ್ವಾನ್ ಜೊತೆ ಗುರುತಿಸಿಕೊಂಡಿದ್ದ. ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ರಿಜ್ವಾನ್ ಪರ ಪ್ರಚಾರ ಮಾಡಿದ್ದ. ಚುನಾವಣೆ ಫಲಿತಾಂಶದಲ್ಲಿ ಶಿವಾಜಿನಗರ ಕಾಂಗ್ರೆಸ್ ಅಭ್ಯರ್ಥಿ ರಿಜ್ವಾನ್ ಜಯಗಳಿಸಿದ್ದ.

ಈ ವೇಳೆ ರಿಯಾಜ್ ಮೇಲೆ ಹಳೆ ರಾಜಕೀಯ ದ್ವೇಷ ಇಟ್ಟುಕೊಂಡು ಹಲ್ಲೆ ನಡೆಸಿದ್ದಾರೆ. ಬೈಕ್​ಗಳಲ್ಲಿ ಮಾಸ್ಕ್​ ಧರಿಸಿ ಬಂದ 5ಕ್ಕೂ ಅಧಿಕ ಮಂದಿಯ ಗ್ಯಾಂಗ್ ಹಲ್ಲೆ ನಡೆಸಿದೆ. ಆಸೀಫ್ ಹಾಗು ಇರ್ಫಾನ್ ಎಂಬುವರನ್ನು ವಶಕ್ಕೆ ಪಡೆದು ಸಿದ್ದಾಪುರ ಪೊಲೀಸರು ಹೆಚ್ಚಿನ ವಿಚಾರಣೆ ನಡೆಸುತ್ತಿದ್ದಾರೆ.

Follow Us
sadhu srinath
sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು