AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜಕೀಯ ದ್ವೇಷ: ಹಾಡಹಗಲೇ ಮಾರಕಾಸ್ತ್ರಗಳಿಂದ ಹಲ್ಲೆ

ಬೆಂಗಳೂರು: ಕಾಂಗ್ರೆಸ್ ಕಾರ್ಯಕರ್ತ ರಿಯಾಜ್ ಮೇಲೆ ಹಾಡಹಗಲೇ ನಡೆದ ಹಲ್ಲೆ ಪ್ರಕರಣ ಟ್ವಿಸ್ಟ್​ ಪಡೆದುಕೊಂಡಿದೆ. ರಾಜಕೀಯ ತಿರುವು ಪಡೆದುಕೊಂಡ ಹಲ್ಲೆ ನಡೆಸಲಾಗಿದೆ ಎಂದು ಪೊಲೀಸರ ತನಿಖೆ ವೇಳೆ ಸ್ಫೋಟಕ ಸತ್ಯ ಬಯಲಾಗಿದೆ. ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರು: ಕಳೆದ ಡಿ.9ರಂದು ಸಿದ್ಧಾಪುರದಲ್ಲಿ ಸೈಯದ್ ರಿಯಾಜ್ ಎಂಬಾತ ಬೈಕ್​ನಲ್ಲಿ ತೆರಳುತ್ತಿದ್ದ. ಈ ವೇಳೆ ಲಾಂಗು ಮಚ್ಚುಗಳ ಸಮೇತ ಕಾದಿದ್ದ ಗ್ಯಾಂಗ್​ ಹೆಲ್ಮೆಟ್​ ಧರಿಸಿ ಹಲ್ಲೆ ನಡೆಸಿತ್ತು. ಹಲ್ಲೆಗೂ ಮುನ್ನ ಉಪಚುನಾವಣೆಯ ಫಲಿತಾಂಶ ಹಿನ್ನೆಲೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗೆ ಅಭಿನಂದನೆ ಹೇಳಿ […]

ರಾಜಕೀಯ ದ್ವೇಷ: ಹಾಡಹಗಲೇ ಮಾರಕಾಸ್ತ್ರಗಳಿಂದ ಹಲ್ಲೆ
ಸಾಧು ಶ್ರೀನಾಥ್​
|

Updated on: Jan 04, 2020 | 9:29 AM

Share

ಬೆಂಗಳೂರು: ಕಾಂಗ್ರೆಸ್ ಕಾರ್ಯಕರ್ತ ರಿಯಾಜ್ ಮೇಲೆ ಹಾಡಹಗಲೇ ನಡೆದ ಹಲ್ಲೆ ಪ್ರಕರಣ ಟ್ವಿಸ್ಟ್​ ಪಡೆದುಕೊಂಡಿದೆ. ರಾಜಕೀಯ ತಿರುವು ಪಡೆದುಕೊಂಡ ಹಲ್ಲೆ ನಡೆಸಲಾಗಿದೆ ಎಂದು ಪೊಲೀಸರ ತನಿಖೆ ವೇಳೆ ಸ್ಫೋಟಕ ಸತ್ಯ ಬಯಲಾಗಿದೆ.

ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರು: ಕಳೆದ ಡಿ.9ರಂದು ಸಿದ್ಧಾಪುರದಲ್ಲಿ ಸೈಯದ್ ರಿಯಾಜ್ ಎಂಬಾತ ಬೈಕ್​ನಲ್ಲಿ ತೆರಳುತ್ತಿದ್ದ. ಈ ವೇಳೆ ಲಾಂಗು ಮಚ್ಚುಗಳ ಸಮೇತ ಕಾದಿದ್ದ ಗ್ಯಾಂಗ್​ ಹೆಲ್ಮೆಟ್​ ಧರಿಸಿ ಹಲ್ಲೆ ನಡೆಸಿತ್ತು. ಹಲ್ಲೆಗೂ ಮುನ್ನ ಉಪಚುನಾವಣೆಯ ಫಲಿತಾಂಶ ಹಿನ್ನೆಲೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗೆ ಅಭಿನಂದನೆ ಹೇಳಿ ರಿಯಾಜ್ ಬಂದಿದ್ದ. ಘಟನೆಯಲ್ಲಿ ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಸೈಯದ್ ಬಚಾವ್ ಆಗಿದ್ದಾರೆ.

ಈ ಹಿಂದೆ ಎಸ್​ಡಿಪಿಐ ಪಕ್ಷದಲ್ಲಿ ರಿಯಾಜ್ ಗುರುತಿಸಿಕೊಂಡಿದ್ದ. ಕಳೆದ ಮೂರು ವರ್ಷಗಳ ಹಿಂದೆ ಪಕ್ಷ ತೊರೆದು ಕಾಂಗ್ರೆಸ್ ಸೇರಿದ್ದ. ಬಳಿಕ ಈ ಬಾರಿಯ ಉಪಚುನಾವಣೆಯಲ್ಲಿ ರಿಜ್ವಾನ್ ಜೊತೆ ಗುರುತಿಸಿಕೊಂಡಿದ್ದ. ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ರಿಜ್ವಾನ್ ಪರ ಪ್ರಚಾರ ಮಾಡಿದ್ದ. ಚುನಾವಣೆ ಫಲಿತಾಂಶದಲ್ಲಿ ಶಿವಾಜಿನಗರ ಕಾಂಗ್ರೆಸ್ ಅಭ್ಯರ್ಥಿ ರಿಜ್ವಾನ್ ಜಯಗಳಿಸಿದ್ದ.

ಈ ವೇಳೆ ರಿಯಾಜ್ ಮೇಲೆ ಹಳೆ ರಾಜಕೀಯ ದ್ವೇಷ ಇಟ್ಟುಕೊಂಡು ಹಲ್ಲೆ ನಡೆಸಿದ್ದಾರೆ. ಬೈಕ್​ಗಳಲ್ಲಿ ಮಾಸ್ಕ್​ ಧರಿಸಿ ಬಂದ 5ಕ್ಕೂ ಅಧಿಕ ಮಂದಿಯ ಗ್ಯಾಂಗ್ ಹಲ್ಲೆ ನಡೆಸಿದೆ. ಆಸೀಫ್ ಹಾಗು ಇರ್ಫಾನ್ ಎಂಬುವರನ್ನು ವಶಕ್ಕೆ ಪಡೆದು ಸಿದ್ದಾಪುರ ಪೊಲೀಸರು ಹೆಚ್ಚಿನ ವಿಚಾರಣೆ ನಡೆಸುತ್ತಿದ್ದಾರೆ.

ರಾಯ್ ಆತ್ಮಹತ್ಯೆ ತನಿಖೆ ಬಗ್ಗೆ ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು?
ರಾಯ್ ಆತ್ಮಹತ್ಯೆ ತನಿಖೆ ಬಗ್ಗೆ ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು?
ವೆಸ್ಟ್ ಇಂಡೀಸ್ ಸ್ಕೋರ್ 114 ರನ್: 118 ರನ್ ಬಾರಿಸಿ ಸೋತ ಸೌತ್ ಆಫ್ರಿಕಾ
ವೆಸ್ಟ್ ಇಂಡೀಸ್ ಸ್ಕೋರ್ 114 ರನ್: 118 ರನ್ ಬಾರಿಸಿ ಸೋತ ಸೌತ್ ಆಫ್ರಿಕಾ
ಮಹಿಳಾ ಸಬಲೀಕರಣ ಮತ್ತು ಉದ್ಯೋಗ ಸೃಷ್ಟಿಗೆ ವಿಶೇಷ ಒತ್ತು
ಮಹಿಳಾ ಸಬಲೀಕರಣ ಮತ್ತು ಉದ್ಯೋಗ ಸೃಷ್ಟಿಗೆ ವಿಶೇಷ ಒತ್ತು
ಚಲನಚಿತ್ರ ವಾಣಿಜ್ಯ ಮಂಡಳಿ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಜಯಮಾಲಾ
ಚಲನಚಿತ್ರ ವಾಣಿಜ್ಯ ಮಂಡಳಿ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಜಯಮಾಲಾ
ಕೇಂದ್ರ ಬಜೆಟ್‌ ಮಂಡನೆ ನೇರಪ್ರಸಾರವನ್ನು ಇಲ್ಲಿ ವೀಕ್ಷಿಸಿ
ಕೇಂದ್ರ ಬಜೆಟ್‌ ಮಂಡನೆ ನೇರಪ್ರಸಾರವನ್ನು ಇಲ್ಲಿ ವೀಕ್ಷಿಸಿ
ಒಂದೇ ಪಂದ್ಯದಲ್ಲಿ ಬರೋಬ್ಬರಿ 11 ವಿಕೆಟ್ ಕಬಳಿಸಿದ ಶಹಬಾಝ್ ಅಹ್ಮದ್
ಒಂದೇ ಪಂದ್ಯದಲ್ಲಿ ಬರೋಬ್ಬರಿ 11 ವಿಕೆಟ್ ಕಬಳಿಸಿದ ಶಹಬಾಝ್ ಅಹ್ಮದ್
ಮಾಘ ಹುಣ್ಣಿಮೆ: ಕಾವೇರಿ ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನಕ್ಕೆ ಭಕ್ತಸಾಗರ
ಮಾಘ ಹುಣ್ಣಿಮೆ: ಕಾವೇರಿ ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನಕ್ಕೆ ಭಕ್ತಸಾಗರ
ನಿರ್ಮಲಾ ಸೀತಾರಾಮನ್​​​​​ಗೆ ಚಾರ್ಕೋಲ್ ಸ್ಕೆಚ್ ಮೂಲಕ ಸ್ವಾಗತ
ನಿರ್ಮಲಾ ಸೀತಾರಾಮನ್​​​​​ಗೆ ಚಾರ್ಕೋಲ್ ಸ್ಕೆಚ್ ಮೂಲಕ ಸ್ವಾಗತ
5 ವಿಕೆಟ್​ ಕಬಳಿಸಿ ಅತ್ಯಂತ ಹೀನಾಯ ದಾಖಲೆ ಬರೆದ ಅರ್ಷದೀಪ್ ಸಿಂಗ್
5 ವಿಕೆಟ್​ ಕಬಳಿಸಿ ಅತ್ಯಂತ ಹೀನಾಯ ದಾಖಲೆ ಬರೆದ ಅರ್ಷದೀಪ್ ಸಿಂಗ್
‘ಕಲ್ಟ್’ ಸಿನಿಮಾ ನೋಡಿ ಕಣ್ಣೀರು ಹಾಕಿದ ಸಿಎಂ ಸಿದ್ದರಾಮಯ್ಯ
‘ಕಲ್ಟ್’ ಸಿನಿಮಾ ನೋಡಿ ಕಣ್ಣೀರು ಹಾಕಿದ ಸಿಎಂ ಸಿದ್ದರಾಮಯ್ಯ