ಚೀಟಿ ವ್ಯವಹಾರ: ವಿಕೆಟ್​ಗಳಿಂದ ಬಡಿದಾಡಿಕೊಂಡ ಯೂತ್ ಕಾಂಗ್ರೆಸ್ ನಾಯಕರು

ಬೆಂಗಳೂರು: ಹಣ ವಿಚಾರವಾಗಿ ಕಾಂಗ್ರೆಸ್ ಪಕ್ಷದ ರಾಜ್ಯ ಯೂತ್ ಕಾರ್ಯದರ್ಶಿ ಹಾಗೂ ಬಾಗಲಗುಂಟೆ ವಾರ್ಡ್ ಅಧ್ಯಕ್ಷರು ಕ್ರಿಕೆಟ್ ವಿಕೆಟ್​ಗಳಿಂದ ಹೊಡೆದಾಡಿಕೊಂಡಿದ್ದಾರೆ. ರಾಜಗೋಪಾಲ್ ನಗರ ಪೊಲೀಸ್ ಠಾಣೆ ವ್ಯಾಪ್ತಿಯ ಹೆಗ್ಗನಹಳ್ಳಿಯಲ್ಲಿರುವ ಅಕ್ಷಯ ಶ್ರೀ ಫೈನಾನ್ಸ್​ನಲ್ಲಿ ಘಟನೆ ನಡೆದಿದೆ. ಬಾಗಲಗುಂಟೆ ವಾರ್ಡ್ ಅಧ್ಯಕ್ಷ ಜಗದೀಶ್ ಮೇಲೆ ರಾಜ್ಯ ಯೂತ್ ಕಾರ್ಯದರ್ಶಿ ಉಮೇಶ್ ಭೈರೇಗೌಡ ಹಲ್ಲೆ ನಡೆಸಿದ್ದಾರೆ. ಹಲ್ಲೆಗೊಳಗಾದ ಜಗದೀಶ್​ಗೆ ಸಪ್ತಗಿರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಉಮೇಶ್ ಭೈರೇಗೌಡ ಅಕ್ಷಯ ಶ್ರೀ ಫೈನಾನ್ಸ್ ನಡೆಸುತ್ತಿದ್ದರು. ಈ ಫೈನಾನ್ಸ್ ಕಂಪನಿಯಲ್ಲಿ ವಾರ್ಡ್ ಅಧ್ಯಕ್ಷ […]

ಚೀಟಿ ವ್ಯವಹಾರ: ವಿಕೆಟ್​ಗಳಿಂದ ಬಡಿದಾಡಿಕೊಂಡ  ಯೂತ್ ಕಾಂಗ್ರೆಸ್ ನಾಯಕರು
ಸಾಧು ಶ್ರೀನಾಥ್​

Updated on: Nov 26, 2019 | 4:40 PM

ಬೆಂಗಳೂರು: ಹಣ ವಿಚಾರವಾಗಿ ಕಾಂಗ್ರೆಸ್ ಪಕ್ಷದ ರಾಜ್ಯ ಯೂತ್ ಕಾರ್ಯದರ್ಶಿ ಹಾಗೂ ಬಾಗಲಗುಂಟೆ ವಾರ್ಡ್ ಅಧ್ಯಕ್ಷರು ಕ್ರಿಕೆಟ್ ವಿಕೆಟ್​ಗಳಿಂದ ಹೊಡೆದಾಡಿಕೊಂಡಿದ್ದಾರೆ. ರಾಜಗೋಪಾಲ್ ನಗರ ಪೊಲೀಸ್ ಠಾಣೆ ವ್ಯಾಪ್ತಿಯ ಹೆಗ್ಗನಹಳ್ಳಿಯಲ್ಲಿರುವ ಅಕ್ಷಯ ಶ್ರೀ ಫೈನಾನ್ಸ್​ನಲ್ಲಿ ಘಟನೆ ನಡೆದಿದೆ.

ಬಾಗಲಗುಂಟೆ ವಾರ್ಡ್ ಅಧ್ಯಕ್ಷ ಜಗದೀಶ್ ಮೇಲೆ ರಾಜ್ಯ ಯೂತ್ ಕಾರ್ಯದರ್ಶಿ ಉಮೇಶ್ ಭೈರೇಗೌಡ ಹಲ್ಲೆ ನಡೆಸಿದ್ದಾರೆ. ಹಲ್ಲೆಗೊಳಗಾದ ಜಗದೀಶ್​ಗೆ ಸಪ್ತಗಿರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಉಮೇಶ್ ಭೈರೇಗೌಡ ಅಕ್ಷಯ ಶ್ರೀ ಫೈನಾನ್ಸ್ ನಡೆಸುತ್ತಿದ್ದರು. ಈ ಫೈನಾನ್ಸ್ ಕಂಪನಿಯಲ್ಲಿ ವಾರ್ಡ್ ಅಧ್ಯಕ್ಷ ಜಗದೀಶ್ ಚೀಟಿ ರೂಪದಲ್ಲಿ ಪ್ರತಿ ತಿಂಗಳು 30ಸಾವಿರದಂತೆ ಹಣ ಹೂಡಿಕೆ ಮಾಡಿದ್ದಾರೆ. 3ವರ್ಷಗಳಿಂದ 30ಸಾವಿರ ಪಾವತಿಸಿ ಚೀಟಿ ಮುಗಿದ ಬಳಿಕ 9ಲಕ್ಷ ಹಣ ಕೊಡುವಂತೆ ಫೈನಾನ್ಸ್ ಕಚೇರಿ ಬಳಿ ತೆರಳಿದ್ದಾರೆ. ಚೀಟಿ ಕೊನೆಗೊಂಡು ಒಂದು ವರ್ಷ ಕಳೆದರೂ ಹಣ ಕೊಡದಿದ್ದಕ್ಕೆ ಮಾತಿನ ಸಮರ ಶುರುವಾಗಿದೆ. ಈ ವೇಳೆ ಮಾತು ತಾರಕಕ್ಕೇರಿ ವಿಕೆಟ್​ಗಳಿಂದ ಬಡಿದಾಟವಾಗಿದೆ.

Published On - 3:56 pm, Tue, 26 November 19

ಸಾಧು ಶ್ರೀನಾಥ್​

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us