ಮಾದಕವಸ್ತು ದಂಧೆಕೋರರ ವಿರುದ್ಧ ಮತ್ತೆ ಬೆಂಗಳೂರು ಪೊಲೀಸರ ಕಾರ್ಯಾಚರಣೆ

ಬೆಂಗಳೂರು: ಕೊರೊನಾ ಸಂಕಷ್ಟದ ನಡುವೆಯೂ ನಗರದಲ್ಲಿ ಮಾದಕ ವಸ್ತುಗಳ ಮಾರಾಟ ದಂಧೆ ಎಗ್ಗಿಲ್ಲದೆ ನಡೆಯುತ್ತಿದೆ. ಈ ದಂಧೆಗೆ ಕಡಿವಾಣ ಹಾಕಲು ಪಣತೊಟ್ಟಿರುವ ಪೊಲೀಸರು ಇಂದು ಸಹ ಡ್ರಗ್ ಪೆಡ್ಲರ್ಸ್​ಗಳ ವಿರುದ್ಧ ತಮ್ಮ ಕಾರ್ಯಾಚರಣೆ ಮುಂದುವರಿಸಿ ನಗರದ ನಾನಾ ಭಾಗಗಳಲ್ಲಿ ಅವರನ್ನು ಬಂಧಿಸಿದ್ದಾರೆ. ಬೆಂಗಳೂರು ಪೂರ್ವ ವಿಭಾಗದಲ್ಲಿ 14 ಜನರನ್ನು ಬಂಧಿಸಲಾಗಿದ್ದು, ದಕ್ಷಿಣ ವಿಭಾಗದಲ್ಲಿ 19 ಆರೋಪಿಗಳನ್ನ ತಮ್ಮ ವಶಕ್ಕೆ ಪಡೆದಿದ್ದಾರೆ. ಬಾಣಸವಾಡಿಯಲ್ಲಿ 2 ಜನ ಪೊಲೀಸರ ಬಲೆಗೆ ಬಿದ್ದಿದ್ದರೆ, ಇನ್ನ ಡಿಜೆ ಹಳ್ಳಿಯಲ್ಲಿ 2, ಜೆ.ಬಿ ನಗರದಲ್ಲಿ […]

ಮಾದಕವಸ್ತು ದಂಧೆಕೋರರ ವಿರುದ್ಧ ಮತ್ತೆ ಬೆಂಗಳೂರು ಪೊಲೀಸರ ಕಾರ್ಯಾಚರಣೆ
ಸಾಧು ಶ್ರೀನಾಥ್​ Edited By:

Updated on: Jul 28, 2020 | 12:59 AM

ಬೆಂಗಳೂರು: ಕೊರೊನಾ ಸಂಕಷ್ಟದ ನಡುವೆಯೂ ನಗರದಲ್ಲಿ ಮಾದಕ ವಸ್ತುಗಳ ಮಾರಾಟ ದಂಧೆ ಎಗ್ಗಿಲ್ಲದೆ ನಡೆಯುತ್ತಿದೆ. ಈ ದಂಧೆಗೆ ಕಡಿವಾಣ ಹಾಕಲು ಪಣತೊಟ್ಟಿರುವ ಪೊಲೀಸರು ಇಂದು ಸಹ ಡ್ರಗ್ ಪೆಡ್ಲರ್ಸ್​ಗಳ ವಿರುದ್ಧ ತಮ್ಮ ಕಾರ್ಯಾಚರಣೆ ಮುಂದುವರಿಸಿ ನಗರದ ನಾನಾ ಭಾಗಗಳಲ್ಲಿ ಅವರನ್ನು ಬಂಧಿಸಿದ್ದಾರೆ.

ಬೆಂಗಳೂರು ಪೂರ್ವ ವಿಭಾಗದಲ್ಲಿ 14 ಜನರನ್ನು ಬಂಧಿಸಲಾಗಿದ್ದು, ದಕ್ಷಿಣ ವಿಭಾಗದಲ್ಲಿ 19 ಆರೋಪಿಗಳನ್ನ ತಮ್ಮ ವಶಕ್ಕೆ ಪಡೆದಿದ್ದಾರೆ. ಬಾಣಸವಾಡಿಯಲ್ಲಿ 2 ಜನ ಪೊಲೀಸರ ಬಲೆಗೆ ಬಿದ್ದಿದ್ದರೆ, ಇನ್ನ ಡಿಜೆ ಹಳ್ಳಿಯಲ್ಲಿ 2, ಜೆ.ಬಿ ನಗರದಲ್ಲಿ 5, ಪುಲಿಕೇಶಿ ನಗರದಲ್ಲಿ 2, ಹೆಣ್ಣೂರಿನಲ್ಲಿ 3, ತಲಘಟ್ಟಪುರದಲ್ಲಿ 3 ಆರೋಪಿಗಳನ್ನ ಅರೆಸ್ಟ್​ ಮಾಡಲಾಗಿದೆ.

ಜೊತೆಗೆ, ಜಯನಗರದಲ್ಲಿ 5, ಕೋಣನಕುಂಟೆಯಲ್ಲಿ 2, ಹನುಮಂತ ನಗರದಲ್ಲಿ 1, ಸುಬ್ರಹ್ಮಣ್ಯಪುರದಲ್ಲಿ 3, ಕೆ.ಎಸ್ ಲೇಔಟ್ ನಲ್ಲಿ 2, ಪುಟ್ಟೇನಹಳ್ಳಿಯಲ್ಲಿ 2 ಡ್ರಗ್ ಪೆಡ್ಲರ್ಸ್ ಗಳನ್ನು ಬಂಧಿಸಿದ್ದು, ಎನ್.ಡಿ.ಪಿ.ಎಸ್ ಕಾಯ್ದೆಯಡಿ ಪ್ರಕರಣ ದಾಖಲು ಮಾಡಿಕೊಳ್ಳಲಾಗಿದೆ.

Published On - 6:27 pm, Mon, 27 July 20

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us