AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Lover ಜೊತೆ ಸೇರಿ ಗಂಡನ ಕೊಲೆಗೈದ ಖತರ್ನಾಕ್​ ಹೆಂಡ್ತಿ ಕೊನೆಗೂ ಅಂದರ್​

ಬೆಂಗಳೂರು: ಪ್ರಿಯಕರನ ಜೊತೆ ಸೇರಿ ಗಂಡನನ್ನು ಕೊಲೆಗೈದ ಪತ್ನಿಯನ್ನ ಬಂಧಿಸುವಲ್ಲಿ ಮಾದನಾಯಕನಹಳ್ಳಿ ಪೊಲೀಸರು ಯಶಸ್ವಿಯಾಗಿದ್ದಾರೆ. ಹೆಗ್ಗನಹಳ್ಳಿಯಲ್ಲಿ ವಾಸವಿದ್ದ ದಂಪತಿ ರವಿಕುಮಾರ್​ ಮತ್ತು ಗಾಯತ್ರಿ ಕೆಲವು ವರ್ಷಗಳ ಹಿಂದೆ ಮದುವೆಯಾಗಿದ್ದರು. ಈ ನಡುವೆ ಗಾಯತ್ರಿ ಸತೀಶ್ ಎಂಬುವವನ ಜೊತೆಗೆ ಅನೈತಿಕ ಸಂಬಂಧ ಬೆಳೆಸಿದ್ದಾಳೆ ಎಂದು ತಿಳಿದುಬಂದಿದೆ. ತಮ್ಮ ಸಂಬಂಧಕ್ಕೆ ಗಂಡ ಅಡ್ಡಿ ಆಗ್ತಿದ್ದಾನೆ ಅನ್ನೋ ಕಾರಣಕ್ಕೆ ರವಿಕುಮಾರ್​ನನ್ನ ಕೊಲೆ ಮಾಡಲು ಗಾಯತ್ರಿ ಮತ್ತು ಸತೀಶ್​ ಸ್ಕೆಚ್​ ಹಾಕಿದ್ದಾಳೆ. ಅಂತೆಯೇ, ಜುಲೈ 17ರಂದು ರಾತ್ರಿ ದಾಸನಪುರ APMC ಮಾರ್ಕೆಟ್‌ ಬಳಿ […]

Lover ಜೊತೆ ಸೇರಿ ಗಂಡನ ಕೊಲೆಗೈದ ಖತರ್ನಾಕ್​ ಹೆಂಡ್ತಿ ಕೊನೆಗೂ ಅಂದರ್​
KUSHAL V
| Edited By: |

Updated on:Jul 31, 2020 | 12:13 AM

Share

ಬೆಂಗಳೂರು: ಪ್ರಿಯಕರನ ಜೊತೆ ಸೇರಿ ಗಂಡನನ್ನು ಕೊಲೆಗೈದ ಪತ್ನಿಯನ್ನ ಬಂಧಿಸುವಲ್ಲಿ ಮಾದನಾಯಕನಹಳ್ಳಿ ಪೊಲೀಸರು ಯಶಸ್ವಿಯಾಗಿದ್ದಾರೆ.

ಹೆಗ್ಗನಹಳ್ಳಿಯಲ್ಲಿ ವಾಸವಿದ್ದ ದಂಪತಿ ರವಿಕುಮಾರ್​ ಮತ್ತು ಗಾಯತ್ರಿ ಕೆಲವು ವರ್ಷಗಳ ಹಿಂದೆ ಮದುವೆಯಾಗಿದ್ದರು. ಈ ನಡುವೆ ಗಾಯತ್ರಿ ಸತೀಶ್ ಎಂಬುವವನ ಜೊತೆಗೆ ಅನೈತಿಕ ಸಂಬಂಧ ಬೆಳೆಸಿದ್ದಾಳೆ ಎಂದು ತಿಳಿದುಬಂದಿದೆ. ತಮ್ಮ ಸಂಬಂಧಕ್ಕೆ ಗಂಡ ಅಡ್ಡಿ ಆಗ್ತಿದ್ದಾನೆ ಅನ್ನೋ ಕಾರಣಕ್ಕೆ ರವಿಕುಮಾರ್​ನನ್ನ ಕೊಲೆ ಮಾಡಲು ಗಾಯತ್ರಿ ಮತ್ತು ಸತೀಶ್​ ಸ್ಕೆಚ್​ ಹಾಕಿದ್ದಾಳೆ.

ಅಂತೆಯೇ, ಜುಲೈ 17ರಂದು ರಾತ್ರಿ ದಾಸನಪುರ APMC ಮಾರ್ಕೆಟ್‌ ಬಳಿ ಆಟೋದಲ್ಲಿ ಹೋಗ್ತಿದ್ದ ಗಂಡ ರವಿಕುಮಾರ್​ನನ್ನ ದುಷ್ಕರ್ಮಿಗಳ ಗ್ಯಾಂಗ್ ದರೋಡೆ ಮಾಡುವ ಸೋಗಿನಲ್ಲಿ ಅಡ್ಡಗಟ್ಟಿದ್ದರು.

3 ಬೈಕ್​ಗಳಲ್ಲಿ ಬಂದ 5 ಜನರು ಪತಿ ರವಿಕುಮಾರ್ ಮತ್ತು ಆಟೋ ಚಾಲಕ ಬಸವರಾಜು ಮೊಬೈಲ್ ಕಿತ್ಕೊಂಡಿದ್ರು. ಬಳಿಕ ರವಿಕುಮಾರ್​ಗೆ ಚಾಕು ಇರಿದು ಪರಾರಿಯಾಗಿದ್ದರು.

ತೀವ್ರ ರಕ್ತಸ್ರಾವವಾಗಿದ್ದ ರವಿಕುಮಾರ್​ನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಎರಡು ದಿನದ ಬಳಿಕ ರವಿಕುಮಾರ್ ಕೊನೆಯುಸಿರೆಳೆದಿದ್ದ. ಇನ್ನ ಈ ಬಗ್ಗೆ ಮಾದನಾಯಕನಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ತನಿಖೆ ಕೈಗೆತ್ತಿಕೊಂಡ ಪೊಲೀಸರು ಇದೀಗ ಗಾಯತ್ರಿ, ಸತೀಶ್​ ಸೇರಿ 6 ಆರೋಪಿಗಳನ್ನ ಬಂಧಿಸಿದ್ದಾರೆ. ಇರ್ಫಾನ್, ಸದ್ದಾಂ, ನಯಾಜ್, ಕಲೀಂ ಮತ್ತು ರಾಮ್ ಪ್ರಶಾಂತ್ ಬಂಧಿತ ಆರೋಪಿಗಳು.

Published On - 4:59 pm, Wed, 29 July 20

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ