AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಕಲಚೇತನರಂತೆ ಪೋಸ್ ಕೊಟ್ಕೊಂಡು.. ಮನೆಗಳ್ಳತನ ಮಾಡುತ್ತಿದ್ದ ಕಿಲಾಡಿ ಲೇಡಿ ಕೊನೆಗೂ ಅಂದರ್​

ವಿಕಲಚೇತನರ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಮಹಿಳೆಯನ್ನು ತಲಘಟ್ಟಪುರ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ರಾಮಮೂರ್ತಿನಗರ ನಿವಾಸಿಯಾದ 45 ವರ್ಷದ ಮಂಜುಶ್ರೀ ಬಂಧಿತ ಆರೋಪಿ.

ವಿಕಲಚೇತನರಂತೆ ಪೋಸ್ ಕೊಟ್ಕೊಂಡು.. ಮನೆಗಳ್ಳತನ ಮಾಡುತ್ತಿದ್ದ ಕಿಲಾಡಿ ಲೇಡಿ ಕೊನೆಗೂ ಅಂದರ್​
shruti hegde
| Edited By: |

Updated on: Dec 06, 2020 | 6:13 PM

Share

ಬೆಂಗಳೂರು: ವಿಕಲಚೇತನರ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಮಹಿಳೆಯನ್ನು ತಲಘಟ್ಟಪುರ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ರಾಮಮೂರ್ತಿನಗರ ನಿವಾಸಿಯಾದ 45 ವರ್ಷದ ಮಂಜುಶ್ರೀ ಬಂಧಿತ ಆರೋಪಿ.

ಬಂಧಿತಳಿಂದ 27 ಲಕ್ಷಕ್ಕೂ  ಹೆಚ್ಚು ಬೆಲೆಬಾಳುವ ಚಿನ್ನಾಭರಣವನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.  ಮಂಜುಶ್ರೀ 18ಕ್ಕೂ ಹೆಚ್ಚು ಮನೆಗಳ್ಳತನ ಕೇಸ್​ನಲ್ಲಿ ಭಾಗಿಯಾಗಿದ್ದಳು ಎಂಬ ಮಾಹಿತಿ ಸಿಕ್ಕಿದೆ.

ಅಂದ ಹಾಗೆ, ಈ ಐನಾತಿ ಲೇಡಿ ಕನ್ನ ಹಾಕಲು ಖುದ್ದು ಕಾರು ಚಲಾಯಿಸಿಕೊಂಡು ಬರುತ್ತಿದ್ದಳಂತೆ. ಈ ವೇಳೆ ಬೀಗ ಹಾಕಿರುವ ಮನೆಗಳನ್ನು ಗಮನಿಸಿ ಅವುಗಳ ಲೂಟಿಗೆ ಸ್ಕೆಚ್ ಹಾಕುತ್ತದ್ದಳಂತೆ. ಬಳಿಕ, ರಾತ್ರಿ ವೇಳೆ ಏಕಾಂಗಿಯಾಗಿ ಬೀಗ ಹಾಕಿದ ಮನೆಗೆ ಬಂದು ಕಳ್ಳತನ ಮಾಡುತ್ತಿದ್ದಳು ಎಂದು ಹೇಳಲಾಗಿದೆ.

ವಿಕಲಚೇತನಳಂತೆ ಆ್ಯಕ್ಟ್​ ಮಾಡುತ್ತಾ, ಕುಂಟುತ್ತಾ ಬರುತ್ತಿದ್ದ ಮಂಜುಶ್ರೀ  ತನ್ನ ಬಳಿಯಿದ್ದ 100ಕ್ಕೂ ಹೆಚ್ಚು ಕೀಗಳನ್ನು ಬಳಸಿ ಬಾಗಿಲಿನ ಬೀಗ ತೆಗೆಯುತ್ತಿದ್ದಳಂತೆ. ಬಳಿಕ ಮನೆಯಲ್ಲಿದ್ದ ಚಿನ್ನಾಭರಣ ದೋಚಿ ಹಾಗೇ ಕುಂಟುತ್ತಾ ಎಸ್ಕೇಪ್​ ಆಗ್ತಿದ್ದಳು. ಸದ್ಯ, ಈ ಕಿಲಾಡಿ ಲೇಡಿಯನ್ನು ಬಂಧಿಸಿರುವ ಖಾಕಿ ಪಡೆ ತನಿಖೆ ಚುರುಕುಗೊಳಿಸಿದ್ದಾರೆ.

‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!