AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಲ್ಲಿ ಮತ್ತೆ ತಲೆ ಎತ್ತಿದ ನಕಲಿ ಛಾಪಾ ಕಾಗದ ದಂಧೆ: ಛೋಟಾ ತೆಲಗಿ ಗ್ಯಾಂಗ್​ ಅರೆಸ್ಟ್​

ಬೆಂಗಳೂರು: ಹಲವು ವರ್ಷಗಳ ಹಿಂದೆ ರಾಜ್ಯ ರಾಜಕೀಯವನ್ನೇ ತಲೆಕೆಳಗಾಗಿ ಮಾಡಿದ್ದ ಅತಿದೊಡ್ಡ ಹಗರಣವೆಂದರೆ ಅದು ನಕಲಿ ಛಾಪಾ ಕಾಗದ ಹಗರಣ. ಪ್ರಕರಣದಲ್ಲಿ ಹಲವು ಪ್ರಭಾವಿ ನಾಯಕರ ಹೆಸರು ತಳುಕು ಹಾಕಿದ್ದರೂ ಕೊನೆಗೆ ಹಗರಣದ ಕಿಂಗ್​ಪಿನ್​ ಅಬ್ದುಲ್​ ಕರೀಂ ಲಾಲಾ ತೆಲಗಿಗೆ ಶಿಕ್ಷೆ ಆಗಿತ್ತು. ಆ ನಂತರ, ತೆಲಗಿ ಜೈಲಿನಲ್ಲೇ ಕೊಳೆಯುತ್ತಾ ಕೆಲವು ವರ್ಷಗಳ ಹಿಂದೆ ಸಾವನ್ನಪ್ಪಿದ್ದ. ಇದೀಗ, ಸಿಲಿಕಾನ್ ಸಿಟಿಯಲ್ಲಿ ಮತ್ತೊಂದು ನಕಲಿ ಛಾಪಾ ಕಾಗದ ದಂಧೆ ಬಟಾಬಯಲಾಗಿದೆ. ಕೋರ್ಟ್​ಗಳಲ್ಲಿ ಸುಳ್ಳು ದಾಖಲೆ ಸೃಷ್ಟಿಸಲು ನಕಲಿ ಛಾಪಾ […]

ಬೆಂಗಳೂರಲ್ಲಿ ಮತ್ತೆ ತಲೆ ಎತ್ತಿದ ನಕಲಿ ಛಾಪಾ ಕಾಗದ ದಂಧೆ: ಛೋಟಾ ತೆಲಗಿ ಗ್ಯಾಂಗ್​ ಅರೆಸ್ಟ್​
KUSHAL V
|

Updated on:Oct 10, 2020 | 4:06 PM

Share

ಬೆಂಗಳೂರು: ಹಲವು ವರ್ಷಗಳ ಹಿಂದೆ ರಾಜ್ಯ ರಾಜಕೀಯವನ್ನೇ ತಲೆಕೆಳಗಾಗಿ ಮಾಡಿದ್ದ ಅತಿದೊಡ್ಡ ಹಗರಣವೆಂದರೆ ಅದು ನಕಲಿ ಛಾಪಾ ಕಾಗದ ಹಗರಣ. ಪ್ರಕರಣದಲ್ಲಿ ಹಲವು ಪ್ರಭಾವಿ ನಾಯಕರ ಹೆಸರು ತಳುಕು ಹಾಕಿದ್ದರೂ ಕೊನೆಗೆ ಹಗರಣದ ಕಿಂಗ್​ಪಿನ್​ ಅಬ್ದುಲ್​ ಕರೀಂ ಲಾಲಾ ತೆಲಗಿಗೆ ಶಿಕ್ಷೆ ಆಗಿತ್ತು. ಆ ನಂತರ, ತೆಲಗಿ ಜೈಲಿನಲ್ಲೇ ಕೊಳೆಯುತ್ತಾ ಕೆಲವು ವರ್ಷಗಳ ಹಿಂದೆ ಸಾವನ್ನಪ್ಪಿದ್ದ. ಇದೀಗ, ಸಿಲಿಕಾನ್ ಸಿಟಿಯಲ್ಲಿ ಮತ್ತೊಂದು ನಕಲಿ ಛಾಪಾ ಕಾಗದ ದಂಧೆ ಬಟಾಬಯಲಾಗಿದೆ. ಕೋರ್ಟ್​ಗಳಲ್ಲಿ ಸುಳ್ಳು ದಾಖಲೆ ಸೃಷ್ಟಿಸಲು ನಕಲಿ ಛಾಪಾ ಕಾಗದ ತಯಾರಿಸುತ್ತಿದ್ದ ಗ್ಯಾಂಗ್​ ಒಂದು ಪತ್ತೆಯಾಗಿದೆ. ನಗರದ ಸಿಟಿ ಸಿವಿಲ್ ಕೋರ್ಟ್ ಕಾಂಪ್ಲೆಕ್ಸ್ ಹಾಗೂ ಕಂದಾಯ ಭವನಕ್ಕೆ ಬರುವವರೇ ಇವರ ಟಾರ್ಗೆಟ್​. ಇವರ ಕೃತ್ಯಗಳು ರಾಜ್ಯ ಪೊಲೀಸ್ ಇಲಾಖೆಯನ್ನೇ ಬೆಚ್ಚಿಬೀಳಿಸಿದೆ. ಆದರೆ, ಇದು ಮತ್ತಷ್ಟು ಬೆಳೆದು ಪೆಡಂಭೂತವಾಗಿ ರಾಜ್ಯವನ್ನು ಕಾಡುವ ಮುನ್ನವೇ ಖಾಕಿ ಪಡೆ ಇದನ್ನು ಚಿವುಟು ಹಾಕಿದೆ.

ಸ್ವಾರಸ್ಯಕರ ಸಂಗತಿಯೆಂದರೆ ಈ ನಕಲಿ ಛಾಪಾ ಕಾಗದ ದಂಧೆಯ ಕಿಂಗ್​ಪಿನ್​ ಹೆಸರು ಛೋಟಾ ತೆಲಗಿ! ಹೌದು, ಇದೀಗ ಛೋಟಾ ತೆಲಗಿ ಸೇರಿದಂತೆ ನಾಲ್ವರು ಆರೋಪಿಗಳನ್ನ SJ ಪಾರ್ಕ್​ ಠಾಣೆ ಪೊಲೀಸರು ಬಂಧಿಸಿದ್ದಾರೆ. ಕೇಂದ್ರ ವಿಭಾಗದ ಡಿಸಿಪಿ ಅನುಚೇತ್ ಮಾರ್ಗದರ್ಶನದಲ್ಲಿ ಆರೋಪಿಗಳು ಸೆರೆಯಾಗಿದ್ದು ದಂಧೆಯ ಕಿಂಗ್​ಪಿನ್​ ಆಗಿದ್ದ ಹುಸೇನ್ ಮೋದಿ ಬಾಬು ಅಲಿಯಾಸ್ ಛೋಟಾ ತೆಲಗಿ ಸೇರಿದಂತೆ ಸಿಟಿ ಸಿವಿಲ್ ಕೋರ್ಟ್​ ಬಳಿ ಟೈಪ್​ರೈಟಿಂಗ್​ಮಾಡುತ್ತಿದ್ದ ಹರೀಶ್​, ಶವರ್ ಅಲಿಯಾಸ್ ಸೀಮಾ ಹಾಗೂ ಕಂದಾಯ ಭವನದಲ್ಲಿ ಟೈಪಿಸ್ಟ್​ ಆಗಿದ್ದ ನಜ್ಮಾ ಫಾತಿಮಾರನ್ನು ಖಾಕಿ ಪಡೆ ಅರೆಸ್ಟ್​ ಮಾಡಿದೆ. ಕೋರ್ಟ್​ಗಳಲ್ಲಿ ಕೇಸ್ ದಾಖಲಿಸಲು ಬರುತ್ತಿದ್ದ ಜನರು; ಜಿಪಿಎ, ವಿಲ್ ಮತ್ತು ಕರಾರು ಪತ್ರ ಮಾಡಿಸಿಕೊಳ್ಳಲು ಬರುವ ಸಾರ್ವಜನಿಕರಿಗೆ ಈ ಗ್ಯಾಂಗ್​ ನಕಲಿ ಛಾಪಾ ಕಾಗದ ತಯಾರಿಸಿಕೊಡುತ್ತಿತ್ತು. ಈ ಮುಖಾಂತರ ಸರ್ಕಾರಕ್ಕೆ ಸಾವಿರಾರು ರೂಪಾಯಿ ಆದಾಯದಿಂದ ವಂಚಿಸಿದ್ದರು. ಈ ಹಿಂದೆ ಹುಸೇನ್ ಮೋದಿ ಬಾಬುನನ್ನು ಹಲಸೂರು ಗೇಟ್​ ಪೊಲೀಸರು ಬಂಧಿಸಿದ್ದರು. ಆದರೆ, ಈತ ಜಾಮೀನಿನ ಮೇಲೆ ಹೊರಬಂದು ಮತ್ತೆ ದಂಧೆ ನಡೆಸುತ್ತಿದ್ದ ಎಂದು ತಿಳಿದುಬಂದಿದೆ. ಬಂಧಿತರಿಂದ ಪೊಲೀಸರು 443 ನಕಲಿ ಛಾಪಾ ಕಾಗದ ಜಪ್ತಿಮಾಡಿದ್ದಾರೆ.

Published On - 4:05 pm, Sat, 10 October 20

40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ
ಶಿಕ್ಷಕರ ನೇಮಕಾತಿ ಬಗ್ಗೆ ಬಿಗ್​​ ಅಪ್ಡೇಟ್​​ ಕೊಟ್ಟ ಸಿಎಂ ಸಿದ್ದರಾಮಯ್ಯ
ಶಿಕ್ಷಕರ ನೇಮಕಾತಿ ಬಗ್ಗೆ ಬಿಗ್​​ ಅಪ್ಡೇಟ್​​ ಕೊಟ್ಟ ಸಿಎಂ ಸಿದ್ದರಾಮಯ್ಯ