AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಾಸ್ಕ್ ತಪಾಸಣೆ ವೇಳೆ ಸಿಕ್ಕಿಬಿದ್ದರು.. ಖೋಟಾ ನೋಟು ದಂಧೆಕೋರರು!

ಬೆಂಗಳೂರು: ಮಾಸ್ಕ್​ ಧರಿಸದ ಸಾರ್ವಜನಿಕರಿಗೆ ದಂಡ ವಿಧಿಸುವ ಬಿಬಿಎಂಪಿ ಮಾರ್ಷಲ್​ಗಳು ಮತ್ತು ಪೊಲೀಸರನ್ನು ಕಂಡರೆ ಕೆಲವರ ಕಣ್ಣು ಕೆಂಪಾಗುತ್ತದೆ. ಅಯ್ಯೋ, ಆ ಹಾಳಾದ ಮಾಸ್ಕ್​ನ ಎಲ್ಲಿಟ್ಟೆ. ಬೇಗ ಹಾಕೋ ಬೇಕು.. ಇಲ್ಲಾಂದ್ರೆ ಇವರು ಫೈನ್​ ಜಡೀತಾರೆ ಅಂತಾ ಸಿಟ್ಟುಮಾಡಿಕೊಳ್ಳೋರೆ ಹೆಚ್ಚು. ಆದರೆ, ಮಾಸ್ಕ್ ತಪಾಸಣೆ ವೇಳೆ ಅಂತರ್ ರಾಜ್ಯ ಖೋಟಾ ನೋಟು ದಂಧೆಕೋರರು ಮೈಕೋಲೇಔಟ್ ಪೊಲೀಸರ ಕೈಗೆ ಸಿಕ್ಕಿ ಬಿದ್ದಿರುವ ಸ್ವಾರಸ್ಯಕರ ಘಟನೆ ಬೆಳಕಿಗೆ ಬಂದಿದೆ. ತಮಿಳುನಾಡು ಮೂಲದ ಸುಮನ್(36), ದೇವರಾಜನ್ (31), ಹಾಗೂ ಮುನಿಶೇಖರ್ (29) […]

ಮಾಸ್ಕ್ ತಪಾಸಣೆ ವೇಳೆ ಸಿಕ್ಕಿಬಿದ್ದರು.. ಖೋಟಾ ನೋಟು ದಂಧೆಕೋರರು!
KUSHAL V
| Edited By: |

Updated on: Nov 14, 2020 | 2:01 PM

Share

ಬೆಂಗಳೂರು: ಮಾಸ್ಕ್​ ಧರಿಸದ ಸಾರ್ವಜನಿಕರಿಗೆ ದಂಡ ವಿಧಿಸುವ ಬಿಬಿಎಂಪಿ ಮಾರ್ಷಲ್​ಗಳು ಮತ್ತು ಪೊಲೀಸರನ್ನು ಕಂಡರೆ ಕೆಲವರ ಕಣ್ಣು ಕೆಂಪಾಗುತ್ತದೆ. ಅಯ್ಯೋ, ಆ ಹಾಳಾದ ಮಾಸ್ಕ್​ನ ಎಲ್ಲಿಟ್ಟೆ. ಬೇಗ ಹಾಕೋ ಬೇಕು.. ಇಲ್ಲಾಂದ್ರೆ ಇವರು ಫೈನ್​ ಜಡೀತಾರೆ ಅಂತಾ ಸಿಟ್ಟುಮಾಡಿಕೊಳ್ಳೋರೆ ಹೆಚ್ಚು. ಆದರೆ, ಮಾಸ್ಕ್ ತಪಾಸಣೆ ವೇಳೆ ಅಂತರ್ ರಾಜ್ಯ ಖೋಟಾ ನೋಟು ದಂಧೆಕೋರರು ಮೈಕೋಲೇಔಟ್ ಪೊಲೀಸರ ಕೈಗೆ ಸಿಕ್ಕಿ ಬಿದ್ದಿರುವ ಸ್ವಾರಸ್ಯಕರ ಘಟನೆ ಬೆಳಕಿಗೆ ಬಂದಿದೆ. ತಮಿಳುನಾಡು ಮೂಲದ ಸುಮನ್(36), ದೇವರಾಜನ್ (31), ಹಾಗೂ ಮುನಿಶೇಖರ್ (29) ಬಂಧಿತ ಆರೋಪಿಗಳು. ಪ್ರೊಬೇಷನರಿ PSI ರಾಜ್ ಕುಮಾರ್ ಹಾಗೂ ಹೆಡ್ ಕಾನ್​ಸ್ಟೇಬಲ್​ ಪ್ರಮೋದ್ ಸಮಯಪ್ರಜ್ಞೆಯಿಂದ ಈ ಬೃಹತ್​ ಖೋಟಾ ನೋಟು ಜಾಲ ಪತ್ತೆಯಾಗಿದೆ.

ಖದೀಮರು ಸಿಕ್ಕಿಬಿದ್ದಿದ್ದು ಹೇಗೆ ಗೊತ್ತಾ? ಆರೋಪಿಗಳು ತಮಿಳುನಾಡು ನೊಂದಣಿಯ ಕಾರಿನಲ್ಲಿ ಖೋಟಾ ನೋಟುಗಳನ್ನು ನಗರದಲ್ಲಿ ಸಾಗಿಸುತ್ತಿದ್ದರು ಎಂದು ಹೇಳಲಾಗಿದೆ. ಇದೇ ವೇಳೆ, ಆರೋಪಿಗಳು ಮಾಸ್ಕ್ ಧರಿಸದ ಕಾರಣ ಅವರ ಕಾರನ್ನ PSIರಾಜ್ ಕುಮಾರ್ ತಡೆದಿದ್ದಾರೆ.

ಪರಿಶೀಲನೆ ವೇಳೆ ಆರೋಪಿಗಳ ವರ್ತನೆ ಸಂಶಯಾಸ್ಪದವಾಗಿ ಕಂಡುಬಂದಾಗ ಪೊಲೀಸರು ವಾಹನದ ತಪಾಸಣೆಗೆ ಮುಂದಾದರು. ಈ ವೇಳೆ, ಕಾರ್​ನಲ್ಲಿ ಕಂತೆ ಕಂತೆ ಖೋಟಾ ನೋಟು ಪತ್ತೆಯಾಗಿದೆ. ಅಸಲಿ ನೋಟುಗಳನ್ನು ಖದೀಮರು ಕಲರ್ ಜೆರಾಕ್ಸ್ ಮಾಡಿ ಚಲಾಯಿಸಲು ನಗರಕ್ಕೆ ತರುತ್ತಿದ್ದರು ಎಂದು ಹೇಳಲಾಗಿದೆ. ಸದ್ಯ, ಬಂಧಿತರಿಂದ 2 ಸಾವಿರ ಹಾಗೂ 500 ರೂ. ಮುಖಬೆಲೆಯ 7 ಲಕ್ಷದ 78 ಸಾವಿರ ರೂ ನೋಟು ಹಾಗೂ 1 ಕಾರನ್ನು ಜಪ್ತಿ ಮಾಡಿದ್ದಾರೆ.

Follow Us
ಯುಗಾದಿ ವರ್ಷ ಭವಿಷ್ಯ; ಮೇಷ ರಾಶಿಯ ಶುಭ -ಅಶುಭ ಫಲಗಳ ಮಾಹಿತಿ ಇಲ್ಲಿದೆ
ಯುಗಾದಿ ವರ್ಷ ಭವಿಷ್ಯ; ಮೇಷ ರಾಶಿಯ ಶುಭ -ಅಶುಭ ಫಲಗಳ ಮಾಹಿತಿ ಇಲ್ಲಿದೆ
ಬಜೆಟ್ ಬೆನ್ನಲ್ಲೇ ಅಧಿಕಾರ ಹಂಚಿಕೆ ಬಗ್ಗೆ ಸಿಎಂ ಸಿದ್ದರಾಮಯ್ಯ ಶಾಕಿಂಗ್ ಮಾತು
ಬಜೆಟ್ ಬೆನ್ನಲ್ಲೇ ಅಧಿಕಾರ ಹಂಚಿಕೆ ಬಗ್ಗೆ ಸಿಎಂ ಸಿದ್ದರಾಮಯ್ಯ ಶಾಕಿಂಗ್ ಮಾತು
ಸಿನಿಮಾ ಜರ್ನಿಗೆ ಬೆಂಬಲವಾಗಿ ನಿಂತ ಶಿವಣ್ಣನಿಗೆ ಧನ್ಯವಾದ ಹೇಳಿದ ವಿಜಯ್
ಸಿನಿಮಾ ಜರ್ನಿಗೆ ಬೆಂಬಲವಾಗಿ ನಿಂತ ಶಿವಣ್ಣನಿಗೆ ಧನ್ಯವಾದ ಹೇಳಿದ ವಿಜಯ್
ಕೋಲಾರದ ರೈತನ ಮಗ ಯುಪಿಎಸ್​ಸಿ ಪಾಸ್​ ಮಾಡಿದ್ದು ಹೇಗೆ ಗೊತ್ತಾ?
ಕೋಲಾರದ ರೈತನ ಮಗ ಯುಪಿಎಸ್​ಸಿ ಪಾಸ್​ ಮಾಡಿದ್ದು ಹೇಗೆ ಗೊತ್ತಾ?
ಬೆಂಗಳೂರು ಹೋಟೆಲ್​ಗಳಲ್ಲಿ ಕಾಫಿ, ತಿಂಡಿ ದರ ಹೆಚ್ಚಳ ಸಾಧ್ಯತೆ
ಬೆಂಗಳೂರು ಹೋಟೆಲ್​ಗಳಲ್ಲಿ ಕಾಫಿ, ತಿಂಡಿ ದರ ಹೆಚ್ಚಳ ಸಾಧ್ಯತೆ
ಮಾರ್ಕೆಟ್​ನಲ್ಲಿ ಟೊಮ್ಯೊಟೋ ಬೆಲೆ ತೀವ್ರ ಕುಸಿತ! ರೈತರು ಕಂಗಾಲು
ಮಾರ್ಕೆಟ್​ನಲ್ಲಿ ಟೊಮ್ಯೊಟೋ ಬೆಲೆ ತೀವ್ರ ಕುಸಿತ! ರೈತರು ಕಂಗಾಲು
ಎಲ್​ಪಿಜಿ ಬೆಲೆ ಏರಿಕೆ, ಹೋಟೆಲ್​​ಗಳಲ್ಲಿ ತಿಂಡಿಗಳ ಬೆಲೆ ಏರಿಕೆ ಸಾಧ್ಯತೆ
ಎಲ್​ಪಿಜಿ ಬೆಲೆ ಏರಿಕೆ, ಹೋಟೆಲ್​​ಗಳಲ್ಲಿ ತಿಂಡಿಗಳ ಬೆಲೆ ಏರಿಕೆ ಸಾಧ್ಯತೆ
ಮಾರಿ ಹಬ್ಬದಲ್ಲಿ ನೂರಾರು ಕುರಿಗಳ ಬಲಿ, ರಕ್ತ ಹೀರಿದ ಅರ್ಚಕ: ವಿಡಿಯೋ ವೈರಲ್
ಮಾರಿ ಹಬ್ಬದಲ್ಲಿ ನೂರಾರು ಕುರಿಗಳ ಬಲಿ, ರಕ್ತ ಹೀರಿದ ಅರ್ಚಕ: ವಿಡಿಯೋ ವೈರಲ್
ಟಿವಿ9 ಎಕ್ಸ್​​ಪೋದಲ್ಲಿ ಹಯಗ್ರೀವ ಯಶಸ್ಸಿನ ಬಗ್ಗೆ ಧನ್ವೀರ್​-ಸಂಜನಾ ಮಾತು
ಟಿವಿ9 ಎಕ್ಸ್​​ಪೋದಲ್ಲಿ ಹಯಗ್ರೀವ ಯಶಸ್ಸಿನ ಬಗ್ಗೆ ಧನ್ವೀರ್​-ಸಂಜನಾ ಮಾತು
ಶ್ರೀಕೃಷ್ಣನಿಗೆ 16 ಸಾವಿರ ಪತ್ನಿಯರಿದ್ದಿದ್ದು ನಿಜವೇ? ಅಸಲಿಯತ್ತು ಇಲ್ಲಿದೆ
ಶ್ರೀಕೃಷ್ಣನಿಗೆ 16 ಸಾವಿರ ಪತ್ನಿಯರಿದ್ದಿದ್ದು ನಿಜವೇ? ಅಸಲಿಯತ್ತು ಇಲ್ಲಿದೆ