AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಂದೆ-ತಾಯಿಯ ಕೊಂದು ಪಿಂಡ ಬಿಟ್ಟು, ಪ್ರಾಣ ಬಿಡಲು ಹೊರಟವ ಖಾಕಿ ಬಲೆಗೆ!

ಬೆಂಗಳೂರು: ಕಾಮಾಕ್ಷಿಪಾಳ್ಯದಲ್ಲಿ ನಡೆದಿದ್ದ ವೃದ್ಧ ದಂಪತಿಯ ಹತ್ಯೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಪೊಲೀಸರು ದಂಪತಿಯನ್ನು ಕೊಲೆಗೈದು ಪರಾರಿಯಾಗಿದ್ದ ಪುತ್ರನನ್ನು ಅರೆಸ್ಟ್​ ಮಾಡಿದ್ದಾರೆ. ಕಾಮಾಕ್ಷಿಪಾಳ್ಯದ ನರಸಿಂಹ ರಾಜು ಮತ್ತು ಸರಸ್ವತಿ ದಂಪತಿಯನ್ನು ಕೊಂದು ಶ್ರೀರಂಗಪಟ್ಟಣಕ್ಕೆ ಪರಾರಿಯಾಗಿದ್ದ ಮಗ ಸಂತೋಷ್‌ನನ್ನು ಸೆರೆಹಿಡಿಯುವಲ್ಲಿ ಕಾಮಾಕ್ಷಿಪಾಳ್ಯದ ಪೊಲೀಸರು ಯಶಸ್ವಿಯಾಗಿದ್ದಾರೆ. ಹೆತ್ತ ತಂದೆ ತಾಯಿಯನ್ನೇ ಕೊಂದ ಮಗ ಈಗ ಅಂದರ್​ ಖಾಕಿ ಕೈಗೆ ಸಿಕ್ಕಿರುವ ಸಂತೋಷ್​ ಸದ್ಯ ತಾನೇ ಕೊಲೆ ಮಾಡಿರುವುದಾಗಿ ಪೊಲೀಸರ ಮುಂದೆ ತಪ್ಪೊಪ್ಪಿಕೊಂಡಿದ್ದಾನೆ. ವಿಚಾರಣೆ ವೇಳೆ ಪ್ರಕರಣದ ಬಗ್ಗೆ ಬಾಯಿಬಿಟ್ಟ ಸಂತೋಷ್​ ಜೂನ್​ […]

ತಂದೆ-ತಾಯಿಯ ಕೊಂದು ಪಿಂಡ ಬಿಟ್ಟು, ಪ್ರಾಣ ಬಿಡಲು ಹೊರಟವ ಖಾಕಿ ಬಲೆಗೆ!
ಆಯೇಷಾ ಬಾನು
ಆಯೇಷಾ ಬಾನು|

Updated on:Jun 11, 2020 | 4:13 PM

Share

ಬೆಂಗಳೂರು: ಕಾಮಾಕ್ಷಿಪಾಳ್ಯದಲ್ಲಿ ನಡೆದಿದ್ದ ವೃದ್ಧ ದಂಪತಿಯ ಹತ್ಯೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಪೊಲೀಸರು ದಂಪತಿಯನ್ನು ಕೊಲೆಗೈದು ಪರಾರಿಯಾಗಿದ್ದ ಪುತ್ರನನ್ನು ಅರೆಸ್ಟ್​ ಮಾಡಿದ್ದಾರೆ. ಕಾಮಾಕ್ಷಿಪಾಳ್ಯದ ನರಸಿಂಹ ರಾಜು ಮತ್ತು ಸರಸ್ವತಿ ದಂಪತಿಯನ್ನು ಕೊಂದು ಶ್ರೀರಂಗಪಟ್ಟಣಕ್ಕೆ ಪರಾರಿಯಾಗಿದ್ದ ಮಗ ಸಂತೋಷ್‌ನನ್ನು ಸೆರೆಹಿಡಿಯುವಲ್ಲಿ ಕಾಮಾಕ್ಷಿಪಾಳ್ಯದ ಪೊಲೀಸರು ಯಶಸ್ವಿಯಾಗಿದ್ದಾರೆ.

ಹೆತ್ತ ತಂದೆ ತಾಯಿಯನ್ನೇ ಕೊಂದ ಮಗ ಈಗ ಅಂದರ್​ ಖಾಕಿ ಕೈಗೆ ಸಿಕ್ಕಿರುವ ಸಂತೋಷ್​ ಸದ್ಯ ತಾನೇ ಕೊಲೆ ಮಾಡಿರುವುದಾಗಿ ಪೊಲೀಸರ ಮುಂದೆ ತಪ್ಪೊಪ್ಪಿಕೊಂಡಿದ್ದಾನೆ. ವಿಚಾರಣೆ ವೇಳೆ ಪ್ರಕರಣದ ಬಗ್ಗೆ ಬಾಯಿಬಿಟ್ಟ ಸಂತೋಷ್​ ಜೂನ್​ 10ನೇ ತಾರೀಖು ನಸುಕಿನ ಜಾವ 3 ಗಂಟೆ ಸಮಯದಲ್ಲಿ ಇಬ್ಬರನ್ನು ಕೊಲೆಗೈದು ನಂತರ ಶ್ರೀರಂಗಪಟ್ಟಣಕ್ಕೆ ಹೋಗಿದ್ದನಂತೆ.

ಅದೇಕೋ ಏನೋ ಕೊಲೆಮಾಡುವಾಗ ಇರದ ಕರುಣೆ ನಂತರ ಉಕ್ಕಿಬಂದು ತಂದೆ ತಾಯಿಗೆ ಶ್ರೀರಂಗಪಟ್ಟಣದ ಬಳಿಯ ಕಾವೇರಿಯಲ್ಲಿ ಪಿಂಡ ಪ್ರದಾನ ಬೇರೆ ಮಾಡಿದ್ದನಂತೆ. ಆನಂತರ ಪಾಪಪ್ರಜ್ಞೆ ಉಂಟಾಗಿಯೋ ಏನೋ ತಾನು ಅಲ್ಲೇ ಇದ್ದ ಬ್ರಿಡ್ಜ್​ನಿಂದ ಧುಮುಕಿ ಆತ್ಮಹತ್ಯೆ ಮಾಡಿಕೊಳ್ಳಲು ಮುಂದಾದ. ಆದರೆ ಕೆಳಗೆ ಬಿದ್ದವನು ಕೇವಲ ಕಾಲು ಮುರಿದುಕೊಂಡು ಆಸ್ಪತ್ರೆ ಪಾಲಾದ. ಇದೀಗ ಈ ಪಾಪಿ ಮಗ ಖಾಕಿ ವಶದಲ್ಲಿದ್ದಾನೆ. ಸದ್ಯ ಪೊಲೀಸರು ತನಿಖೆಯನ್ನು ಚುರುಕುಗೊಳಿಸಿ ಹೆತ್ತವರನ್ನೇ ಕೊಲೆಮಾಡಲು ಕಾರಣವೇನು ಎಂಬ ಮಾಹಿತಿಯನ್ನು ಕಲೆಹಾಕಲು ಮುಂದಾಗಿದ್ದಾರೆ.

Published On - 1:21 pm, Thu, 11 June 20

Follow Us
Ayesha Banu
Ayesha Banu

ಹುಟ್ಟಿದ್ದು ಕೋಟೆ ನಾಡು ಚಿತ್ರದುರ್ಗ. ಬಾಲ್ಯ ಕಳೆದದ್ದು ಖ್ಯಾತ ಕಾದಂಬರಿಕಾರ ತ.ರಾ.ಸು ಅವರ ತಳುಕು. ವಿದ್ಯಾಭ್ಯಾಸ ಬೆಂಗಳೂರಿನಲ್ಲಿ. ಓದಿದ್ದು ಬಿಬಿಎಂ ಆದ್ರೂ ಪತ್ರಕರ್ತೆ ಆಗಬೇಕು ಎಂಬ ಕನಸು ಹಲವು ವರ್ಷಗಳಿಂದ ಮಾಧ್ಯಮದಲ್ಲಿ ಮುನ್ನುಗ್ಗಲು ಸಹಾಯ ಮಾಡಿದೆ. ಪುಸ್ತಕ ಓದುವುದು, ಸಂಗೀತಾ, ಪ್ರವಾಸ ನನ್ನ ಹವ್ಯಾಸ.

CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!