AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಲಯನ್ಸ್​ ಅಯ್ಯಪ್ಪ ಹತ್ಯೆ: ಸ್ಕೆಚ್ ಹಾಕಿದ್ದ ಗಣೇಶ್ ಮೇಲೆ ಪೊಲೀಸ್ ಫೈರಿಂಗ್

ಬೆಂಗಳೂರು: ಅಲಯನ್ಸ್ ವಿವಿ ವಿಶ್ರಾಂತ ಕುಲಪತಿ ಅಯ್ಯಪ್ಪ ಹತ್ಯೆ ಪ್ರಕರಣದ ಕೊಲೆ ಆರೋಪಿ ಮೇಲೆ ಪೊಲೀಸರು ಫೈರಿಂಗ್  ಮಾಡಿದ್ದಾರೆ. ಬೆಂಗಳೂರಿನ ಸಂಜಯನಗರ ಠಾಣಾ ವ್ಯಾಪ್ತಿಯಲ್ಲಿ ಆರೋಪಿ ಗಣೇಶ್ ಕಾಲಿಗೆ ಪೊಲೀಸರು ಗುಂಡು ಹಾರಿಸಿದ್ದಾರೆ. ಪ್ರಕರಣ ಸಂಬಂಧ ಗಣೇಶ್ ಬಂಧಿಸಲು ತೆರಳಿದ್ದ ಪೊಲೀಸರು ಶರಣಾಗುವಂತೆ ಆರೋಪಿ ಗಣೇಶ್​ಗೆ ಸೂಚಿಸಿದ್ದರು ಆದರೆ ಆರೋಪಿ ಗಣೇಶ್ ಶರಣಾಗದೆ ಪೊಲೀಸರ ಮೇಲೆ ಹಲ್ಲೆಗೆ ಯತ್ನಿಸಿದ್ದ, ಈ ವೇಳೆ ಆತ್ಮರಕ್ಷಣೆಗಾಗಿ ಆರ್​.ಟಿ.ನಗರ ಠಾಣೆ ಇನ್ಸ್ ಪೆಕ್ಟರ್ ಮಿಥುನ್ ಶಿಲ್ಪಿ ಫೈರಿಂಗ್ ಮಾಡಿದ್ದಾರೆ. ಇನ್ನೂ ಆರೋಪಿ […]

ಅಲಯನ್ಸ್​ ಅಯ್ಯಪ್ಪ ಹತ್ಯೆ: ಸ್ಕೆಚ್ ಹಾಕಿದ್ದ ಗಣೇಶ್ ಮೇಲೆ ಪೊಲೀಸ್ ಫೈರಿಂಗ್
ಸಾಧು ಶ್ರೀನಾಥ್​
|

Updated on:Oct 24, 2019 | 6:00 PM

Share

ಬೆಂಗಳೂರು: ಅಲಯನ್ಸ್ ವಿವಿ ವಿಶ್ರಾಂತ ಕುಲಪತಿ ಅಯ್ಯಪ್ಪ ಹತ್ಯೆ ಪ್ರಕರಣದ ಕೊಲೆ ಆರೋಪಿ ಮೇಲೆ ಪೊಲೀಸರು ಫೈರಿಂಗ್  ಮಾಡಿದ್ದಾರೆ. ಬೆಂಗಳೂರಿನ ಸಂಜಯನಗರ ಠಾಣಾ ವ್ಯಾಪ್ತಿಯಲ್ಲಿ ಆರೋಪಿ ಗಣೇಶ್ ಕಾಲಿಗೆ ಪೊಲೀಸರು ಗುಂಡು ಹಾರಿಸಿದ್ದಾರೆ.

ಪ್ರಕರಣ ಸಂಬಂಧ ಗಣೇಶ್ ಬಂಧಿಸಲು ತೆರಳಿದ್ದ ಪೊಲೀಸರು ಶರಣಾಗುವಂತೆ ಆರೋಪಿ ಗಣೇಶ್​ಗೆ ಸೂಚಿಸಿದ್ದರು ಆದರೆ ಆರೋಪಿ ಗಣೇಶ್ ಶರಣಾಗದೆ ಪೊಲೀಸರ ಮೇಲೆ ಹಲ್ಲೆಗೆ ಯತ್ನಿಸಿದ್ದ, ಈ ವೇಳೆ ಆತ್ಮರಕ್ಷಣೆಗಾಗಿ ಆರ್​.ಟಿ.ನಗರ ಠಾಣೆ ಇನ್ಸ್ ಪೆಕ್ಟರ್ ಮಿಥುನ್ ಶಿಲ್ಪಿ ಫೈರಿಂಗ್ ಮಾಡಿದ್ದಾರೆ.

ಇನ್ನೂ ಆರೋಪಿ ಗಣೇಶ್ ಮುನಿರೆಡ್ಡಿ ಪಾಳ್ಯದಲ್ಲಿ ಪಂಕ್ಚರ್ ಅಂಗಡಿಇಟ್ಟುಕೊಂಡಿದ್ದ. ನಂತರ ಬ್ಯಾಟರಾಯನಪುರಕ್ಕೆ ಶಿಫ್ಟ್ ಆಗಿದ್ದ, ಬ್ಯಾಟರಾಯನಪುರಕ್ಕೆ ಶಿಫ್ಟ್ ಆದಾಗ ಅಯ್ಯಪ್ಪ ಹತ್ಯೆಗೆ ಸಹಾಯ ಕೋರಿ ಸೂರಜ್​ನಿಂದ ಕರೆ ಬರುತ್ತೆ. ನಂತರ ಅಯ್ಯಪ್ಪ ಹತ್ಯೆ ಗೆ ಪಂಕ್ಚರ್ ಅಂಗಡಿಯಲ್ಲಿ ಗಣೇಶ್​ನಿಂದಲೇ ಸ್ಕೆಚ್ ರೆಡಿಯಾಗಿತ್ತು.

ಅಯ್ಯಪ್ಪ ದೊರೆ ಹತ್ಯೆಗೆ ಗಣೇಶ್​ನಿಂದಲೇ ಮಾರಕಾಸ್ತ್ರಗಳು ಸಪ್ಲೈ ಆಗಿದ್ದವು. ಕೊಲೆ ಮಾಡುವಾಗ ಕೊನೆಯಲ್ಲಿ ಬಂದು ಇರಿದಿದ್ದ ಪಾಪಿಗೆ ಈಗ ಪೊಲೀಸರ ಗುಂಡು ಹಾರಿಸಿದ್ದು, ಆರೋಪಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ಸಂಜಯನಗರದ ಕಾರ್ಪೊರೇಷನ್ ಗೋಡೌನ್ ಬಳಿ ಆರೋಪಿ ಗಣೇಶ್ ಇರುವ ಮಾಹಿತಿ ಸಿಕ್ಕ ಹಿನ್ನೆಲೆ ಬಂಧನಕ್ಕೆ ತೆರಳಿದ್ದ ಪೊಲೀಸರಿಂದ ಹಲ್ಲೆಗೆ ಮುಂದಾದ ಗಣೇಶ್ ಮೇಲೆ ಫೈರಿಂಗ್ ಮಾಡಿಲಾಗಿದೆ.

Published On - 10:35 am, Sun, 20 October 19

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್