AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೂರು ದಾಖಲಾದ ಒಂದೂವರೆ ಗಂಟೆಯಲ್ಲೇ ಕಿಡ್ನ್ಯಾಪ್ ಆರೋಪಿ ಅಂದರ್

ಬೆಂಗಳೂರು: ಬಾಲಕನ ಅಪಹರಣ ಸಂಬಂಧ ದೂರು ಬಂದ ಕೂಡಲೇ ಆ್ಯಕ್ಟೀವ್ ಆದ ಪೊಲೀಸರು ಮೊಬೈಲ್ ಟವರ್ ಲೊಕೇಷನ್ ಆಧರಿಸಿ, ಕೇವಲ ಒಂದೂವರೆ ಗಂಟೆಯಲ್ಲಿ ಆರೋಪಿಯನ್ನು ಬಂಧಿಸಿದ್ದಾರೆ. ರಾಜಸ್ಥಾನ ಮೂಲದ ಚಿರಾಗ್ ಆರ್.ಮೆಹ್ತಾ(21) ಬಂಧಿತ ಆರೋಪಿ. ನಿನ್ನೆ ಮಧ್ಯಾಹ್ನ ಮೂರು ಗಂಟೆ ಸುಮಾರಿಗೆ ಕಾಟನ್ ಪೇಟೆ ಪೊಲೀಸ್​ ಠಾಣಾ ವ್ಯಾಪ್ತಿಯ ಶಾಲೆಯೊಂದರಿಂದ 10 ವರ್ಷದ ಬಾಲಕನನ್ನು ಆರೋಪಿ ಚಿರಾಗ್ ಅಪಹರಿಸಿದ್ದ. ಕಿಡ್ನ್ಯಾಪ್ ನಂತರ ಬಾಲಕನ ತಂದೆಗೆ ಕರೆ ಮಾಡಿ 5 ಲಕ್ಷ ಹಣಕ್ಕೆ ಬೇಡಿಕೆ ಇಟ್ಟಿದ್ದಾನೆ. ಲ್ಯಾವೆಲ್ಲಿ ರಸ್ತೆಯ […]

ದೂರು ದಾಖಲಾದ ಒಂದೂವರೆ ಗಂಟೆಯಲ್ಲೇ ಕಿಡ್ನ್ಯಾಪ್ ಆರೋಪಿ ಅಂದರ್
ಸಾಧು ಶ್ರೀನಾಥ್​
|

Updated on:Jan 29, 2020 | 3:02 PM

Share

ಬೆಂಗಳೂರು: ಬಾಲಕನ ಅಪಹರಣ ಸಂಬಂಧ ದೂರು ಬಂದ ಕೂಡಲೇ ಆ್ಯಕ್ಟೀವ್ ಆದ ಪೊಲೀಸರು ಮೊಬೈಲ್ ಟವರ್ ಲೊಕೇಷನ್ ಆಧರಿಸಿ, ಕೇವಲ ಒಂದೂವರೆ ಗಂಟೆಯಲ್ಲಿ ಆರೋಪಿಯನ್ನು ಬಂಧಿಸಿದ್ದಾರೆ. ರಾಜಸ್ಥಾನ ಮೂಲದ ಚಿರಾಗ್ ಆರ್.ಮೆಹ್ತಾ(21) ಬಂಧಿತ ಆರೋಪಿ.

ನಿನ್ನೆ ಮಧ್ಯಾಹ್ನ ಮೂರು ಗಂಟೆ ಸುಮಾರಿಗೆ ಕಾಟನ್ ಪೇಟೆ ಪೊಲೀಸ್​ ಠಾಣಾ ವ್ಯಾಪ್ತಿಯ ಶಾಲೆಯೊಂದರಿಂದ 10 ವರ್ಷದ ಬಾಲಕನನ್ನು ಆರೋಪಿ ಚಿರಾಗ್ ಅಪಹರಿಸಿದ್ದ. ಕಿಡ್ನ್ಯಾಪ್ ನಂತರ ಬಾಲಕನ ತಂದೆಗೆ ಕರೆ ಮಾಡಿ 5 ಲಕ್ಷ ಹಣಕ್ಕೆ ಬೇಡಿಕೆ ಇಟ್ಟಿದ್ದಾನೆ. ಲ್ಯಾವೆಲ್ಲಿ ರಸ್ತೆಯ ಏರ್​ಲೈನ್ಸ್ ಹೋಟೆಲ್​ ಬಳಿ ಬಂದಿದ್ದ ಆರೋಪಿ ಹೋಟೆಲ್​ನಲ್ಲಿ ಕೆಲಸ ಮಾಡುತ್ತಿದ್ದವನ ಮೊಬೈಲ್​ನಿಂದ ಕರೆ ಮಾಡಿದ್ದಾನೆ. ನಂತರ ಬಾಲಕನ ತಂದೆ ಕಾಟನ್​ಪೇಟೆ ಪೊಲೀಸರಿಗೆ ದೂರು ನೀಡಿದ್ದಾರೆ.

ದೂರು ಬಂದ ತಕ್ಷಣ ಕಾರ್ಯಪ್ರವೃತ್ತರಾದ ಪೊಲೀಸರು ಟವರ್ ಲೊಕೇಷನ್ ಆಧರಿಸಿ ಆರೋಪಿಯನ್ನ ಸೆರೆ ಹಿಡಿಯಲು ಮುಂದಾಗಿದ್ದಾರೆ. ಈ ವೇಳೆ ಏರ್​ಲೈನ್ಸ್ ಹೋಟೆಲ್​ ಬಳಿ ಲ್ಯಾವೆಲ್ಲಿ ರಸ್ತೆಯ ಪಾರ್ಕಿಂಗ್​ನಲ್ಲಿ ಬೌನ್ಸ್ ಬೈಕ್ ಮೇಲೆ ಮಗುವನ್ನು ಕೂರಿಸಿದ್ದ. ಲೊಕೇಷನ್ ಆಧರಿಸಿ ಬೆನ್ನತ್ತಿದ್ದ ಪೊಲೀಸರನ್ನು ಕಂಡು ಓಡುವ ವೇಳೆ ಕಾರು ಡಿಕ್ಕಿಯಾಗಿ ನೆಲಕ್ಕೆ ಬಿದ್ದಿದ್ದಾನೆ. ತಕ್ಷಣ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಮಗುವನ್ನು ಸುರಕ್ಷಿತವಾಗಿ ತಂದೆ ಕೈಗೆ ಒಪ್ಪಿಸಿದ್ದಾರೆ.

ಟಿವಿಗಳಲ್ಲಿ ಕ್ರೈಂ ಸೀರಿಯಲ್ ನೋಡಿ ಕಿಡ್ನ್ಯಾಪ್ ಪ್ಲ್ಯಾನ್: ಇನ್ನು ಕಿಡ್ನ್ಯಾಪ್ ಆರೋಪಿ ಚಿರಾಗ್ ಬಸವನಗುಡಿಯಲ್ಲಿ ವಾಸವಾಗಿದ್ದ. ಕೆಲಸ ಇಲ್ಲದೆ ಮನೆಯಲ್ಲಿ ಟಿವಿ ನೋಡುವುದೇ ಇವನ ನಿತ್ಯದ ಕಾಯಕವಾಗಿತ್ತು. ಟಿವಿಗಳಲ್ಲಿ ಕ್ರೈಂ ಸೀರಿಯಲ್ ನೋಡಿ ಕಿಡ್ನ್ಯಾಪ್​ಗೆ ಪ್ಲ್ಯಾನ್ ಮಾಡಿದ್ದಾನೆ. ಈ ಹಿಂದೆ ಒಮ್ಮೆ ತನ್ನ ಮನೆಯಲ್ಲೇ ಕದ್ದು ತಂದೆ ಕೈಗೆ ಸಿಕ್ಕಿಹಾಕಿಕೊಂಡಿದ್ದ. ಕೆಲ ದಿನಗಳ ಹಿಂದಷ್ಟೇ ಬಾಲಕನೊಬ್ಬನನ್ನು ಅಪಹರಿಸಿದ್ದ. ಆಗ ಗೆಳೆಯರು ಬುದ್ಧಿವಾದ ಹೇಳಿದ್ದಕ್ಕೆ ಬಾಲಕನನ್ನ ಬಿಟ್ಟಿದ್ದ. ಆದರೆ ಈ ಬಾರಿ ಹಣಕ್ಕಾಗಿ ಶಾಲೆ ಬಳಿ ಬಾಲಕನನ್ನು ಅಪಹರಿಸಿ ಪೊಲೀಸರ ಅತಿಥಿಯಾಗಿದ್ದಾನೆ.

Published On - 2:52 pm, Wed, 29 January 20

ಬಿಗ್ ಬಾಸ್ ಮನೆಯಲ್ಲಿ ಮೊಟ್ಟೆ ಕಳ್ಳತನ: ಗಿಲ್ಲಿಯನ್ನೇ ಯಾಮಾರಿಸಿದ ಕಳ್ಳ ಯಾರು
ಬಿಗ್ ಬಾಸ್ ಮನೆಯಲ್ಲಿ ಮೊಟ್ಟೆ ಕಳ್ಳತನ: ಗಿಲ್ಲಿಯನ್ನೇ ಯಾಮಾರಿಸಿದ ಕಳ್ಳ ಯಾರು
ಮೋದಿಯನ್ನು ಕಾರಲ್ಲಿ ಕೂರಿಸಿಕೊಂಡು ತಾವೇ ಡ್ರೈವ್ ಮಾಡಿದ ಜೋರ್ಡಾನ್ ಪ್ರಿನ್ಸ್
ಮೋದಿಯನ್ನು ಕಾರಲ್ಲಿ ಕೂರಿಸಿಕೊಂಡು ತಾವೇ ಡ್ರೈವ್ ಮಾಡಿದ ಜೋರ್ಡಾನ್ ಪ್ರಿನ್ಸ್
‘ಸುಳ್ಳಿ-ಯೋಗ್ಯತೆ ಇಲ್ಲದವಳು’: ಚೈತ್ರಾ-ರಜತ್ ಮಾರಾಮಾರಿ
‘ಸುಳ್ಳಿ-ಯೋಗ್ಯತೆ ಇಲ್ಲದವಳು’: ಚೈತ್ರಾ-ರಜತ್ ಮಾರಾಮಾರಿ
ಬೆಳಗಾವಿ ಅಧಿವೇಶನದಲ್ಲೂ ಸದ್ದು ಮಾಡಿದ ಮೊಟ್ಟೆ ಕ್ಯಾನ್ಸರ್ ಸುದ್ದಿ
ಬೆಳಗಾವಿ ಅಧಿವೇಶನದಲ್ಲೂ ಸದ್ದು ಮಾಡಿದ ಮೊಟ್ಟೆ ಕ್ಯಾನ್ಸರ್ ಸುದ್ದಿ
ಕ್ಯಾಮರೂನ್ ಗ್ರೀನ್‌ ವೇತನದಿಂದ 7.20 ಕೋಟಿ ರೂ. ಕಡಿತ
ಕ್ಯಾಮರೂನ್ ಗ್ರೀನ್‌ ವೇತನದಿಂದ 7.20 ಕೋಟಿ ರೂ. ಕಡಿತ
ಬಿಜೆಪಿಗೆ ಹೊಸ ಸಾರಥಿ ಬೆನ್ನಲ್ಲೇ ದಿಲ್ಲಿಗೆ ಹಾರಿದ ವಿಜಯೇಂದ್ರ
ಬಿಜೆಪಿಗೆ ಹೊಸ ಸಾರಥಿ ಬೆನ್ನಲ್ಲೇ ದಿಲ್ಲಿಗೆ ಹಾರಿದ ವಿಜಯೇಂದ್ರ
ಬನ್ನೇರುಘಟ್ಟ ಝೂಗೆ ದಕ್ಷಿಣ ಆಫ್ರಿಕಾದ ಕ್ಯಾಪುಚಿನ್ ಕೋತಿಗಳ ಎಂಟ್ರಿ
ಬನ್ನೇರುಘಟ್ಟ ಝೂಗೆ ದಕ್ಷಿಣ ಆಫ್ರಿಕಾದ ಕ್ಯಾಪುಚಿನ್ ಕೋತಿಗಳ ಎಂಟ್ರಿ
ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!
ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!
ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ