ಮುಂಬೈ ರೈಲು ನಿಲ್ದಾಣದಲ್ಲಿ ವ್ಯಕ್ತಿಯನ್ನು ಥಳಿಸಿ, ಎದುರಿನಿಂದ ಬರುತ್ತಿದ್ದ ರೈಲಿನ ಕೆಳಗೆ ತಳ್ಳಿದ್ರು

ಮುಂಬೈ ರೈಲ್ವೆ ನಿಲ್ದಾಣದಲ್ಲಿ ವ್ಯಕ್ತಿಯೊಬ್ಬನನ್ನು ಥಳಿಸಿ, ಎದುರಿನಿಂದ ಬರುತ್ತಿದ್ದ ರೈಲಿನ ಕೆಳಗೆ ತಳ್ಳಿರುವ ಘಟನೆ ನಡೆದಿದೆ. ಮುಂಬೈನ ಸಿಯಾನ್ ರೈಲು ನಿಲ್ದಾಣದಲ್ಲಿ ಈ ಘಟನೆ ನಡೆದಿದೆ, ನಿಲ್ದಾಣದಲ್ಲಿ ಇಬ್ಬರು ಜಗಳವಾಡುತ್ತಿದ್ದರು, ಕೋಪದಲ್ಲಿ ವ್ಯಕ್ತಿಯೊಬ್ಬ ಇನ್ನೊಬ್ಬನನ್ನು ಸಬ್​ಅರ್ಬನ್ ರೈಲು ಬರುವ ವೇಳೆಗೆ ಸರಿಯಾಗಿ ಕೆಳಗೆ ತಳ್ಳಿದ್ದಾನೆ, ದಿನೇಶ್ ರಾಥೋಡ್ ಎಂಬಾತ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಮುಂಬೈ ರೈಲು ನಿಲ್ದಾಣದಲ್ಲಿ ವ್ಯಕ್ತಿಯನ್ನು ಥಳಿಸಿ, ಎದುರಿನಿಂದ ಬರುತ್ತಿದ್ದ ರೈಲಿನ ಕೆಳಗೆ ತಳ್ಳಿದ್ರು
ರೈಲುImage Credit source: Wikipedia
Follow us
|

Updated on: Aug 17, 2023 | 2:15 PM

ಮುಂಬೈ ರೈಲ್ವೆ ನಿಲ್ದಾಣದಲ್ಲಿ ವ್ಯಕ್ತಿಯೊಬ್ಬನನ್ನು ಥಳಿಸಿ, ಎದುರಿನಿಂದ ಬರುತ್ತಿದ್ದ ರೈಲಿನ ಕೆಳಗೆ ತಳ್ಳಿರುವ ಘಟನೆ ನಡೆದಿದೆ. ಮುಂಬೈನ ಸಿಯಾನ್ ರೈಲು ನಿಲ್ದಾಣದಲ್ಲಿ ಈ ಘಟನೆ ನಡೆದಿದೆ, ನಿಲ್ದಾಣದಲ್ಲಿ ಇಬ್ಬರು ಜಗಳವಾಡುತ್ತಿದ್ದರು, ಕೋಪದಲ್ಲಿ ವ್ಯಕ್ತಿಯೊಬ್ಬ ಇನ್ನೊಬ್ಬನನ್ನು ಸಬ್​ಅರ್ಬನ್ ರೈಲು ಬರುವ ವೇಳೆಗೆ ಸರಿಯಾಗಿ ಕೆಳಗೆ ತಳ್ಳಿದ್ದಾನೆ, ದಿನೇಶ್ ರಾಥೋಡ್ ಎಂಬಾತ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಭಾನುವಾರ ನಡೆದ ಘಟನೆಗೆ ಸಂಬಂಧಿಸಿದಂತೆ ಆರೋಪಿ ಅವಿನಾಶ್ ಮಾನೆ (31) ಮತ್ತು ಅವರ ಪತ್ನಿ ಶೀತಲ್ ಮಾನೆ (30) ಅವರನ್ನು ಬಂಧಿಸಲಾಗಿದೆ. ದಂಪತಿ ಸಿಯಾನ್ ನಿಲ್ದಾಣದಲ್ಲಿ ಉಪನಗರ ರೈಲಿನಿಂದ ಇಳಿದರು, ಅಲ್ಲಿ ಶೀತಲ್ ಮಾನೆ ಅವರು ಮಹಾರಾಷ್ಟ್ರ ರಾಜ್ಯ ರಸ್ತೆ ಸಾರಿಗೆ ನಿಗಮದ (MSRTC) ಉದ್ಯೋಗಿ ರಾಥೋಡ್ ಅವರೊಂದಿಗೆ ಜಗಳವಾಡಿದ್ದಾರೆ.

ಮಹಿಳೆಯ ಪತಿ ಅವಿನಾಶ್ ಮಾನೆ ರಾಥೋಡ್ ತನ್ನ ಹೆಂಡತಿಯನ್ನು ನಿಂದಿಸುತ್ತಿರುವುದನ್ನು ಕಂಡು ಏನಾಗುತ್ತಿದೆ ಎಂದು ತಿಳಿಯಲು ಬಂದರು ಎಂದು ಅಧಿಕಾರಿ ಹೇಳಿದರು.

ಮತ್ತಷ್ಟು ಓದಿ: India’s first underwater stretch: ಹೂಗ್ಲೀ ನದಿ ಜಲಮಾರ್ಗದಲ್ಲಿ ಪ್ರಾಯೋಗಿಕ ಸಂಚಾರ ಆರಂಭಿಸಿದ ಕೊಲ್ಕತ್ತಾ ಮೆಟ್ರೋ, ಮಾಧ್ಯಮದವರಿಗೊಂದು ಜಾಯ್ ರೈಡ್!

ಅವಿನಾಶ್ ಮಾನೆ ಮತ್ತು ರಾಥೋಡ್ ನಡುವೆ ತೀವ್ರ ವಾಗ್ವಾದ ನಡೆಯಿತು. ಮಾತಿನ ಚಕಮಕಿಯಲ್ಲಿ, ಅವಿನಾಶ್ ಮಾನೆ ಕೋಪದ ಭರದಲ್ಲಿ, ಬ್ಯಾಲೆನ್ಸ್ ಕಳೆದುಕೊಂಡ ರಾಥೋಡ್​ಗೆ ಹೊಡೆದಿದ್ದಾರೆ, ಹಳಿಗಳ ಮೇಲೆ ಬಿದ್ದು ಚಲಿಸುತ್ತಿದ್ದ ಉಪನಗರ ರೈಲಿನಡಿಯಲ್ಲಿ ಸಿಲುಕಿ ಮೃತಪಟ್ಟಿದ್ದಾರೆ. ಎಸ್‌ಟಿ ಸಿಬ್ಬಂದಿಯನ್ನು ಹತ್ತಿರದ ಆಸ್ಪತ್ರೆಗೆ ಕರೆದೊಯ್ಯಲಾಯಿತು, ಅಲ್ಲಿ ಅವರು ಮೃತಪಟ್ಟಿದ್ದಾರೆ ಎಂದು ಘೋಷಿಸಲಾಯಿತು.

ಠಾಣೆಯ ಆವರಣದ ಸಿಸಿಟಿವಿ ದೃಶ್ಯಾವಳಿಗಳನ್ನು ನೋಡಿದ ನಂತರ ಮತ್ತು ಪ್ರತ್ಯಕ್ಷದರ್ಶಿಗಳು ನೀಡಿದ ಮಾಹಿತಿಯ ಆಧಾರದ ಮೇಲೆ ಪೊಲೀಸರು ಅವಿನಾಶ್ ಮಾನೆಯನ್ನು ಬಂಧಿಸಿದ್ದಾರೆ ಮತ್ತು ನಂತರ ಅವರ ಪತ್ನಿಯನ್ನೂ ಬಂಧಿಸಿದ್ದಾರೆ ಎಂದು ಅವರು ಹೇಳಿದರು.

ಕ್ರೈಂ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ತಾಜಾ ಸುದ್ದಿ
ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್ ವೇ ದಾಟಿ ಕಾರಿಗೆ ಡಿಕ್ಕಿ ಹೊಡೆದ KSRTC ಬಸ
ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್ ವೇ ದಾಟಿ ಕಾರಿಗೆ ಡಿಕ್ಕಿ ಹೊಡೆದ KSRTC ಬಸ
ನಿನ್ನೆ ದೆಹಲಿಯಲ್ಲಿದ್ದ ಕೇಂದ್ರ ಸಚಿವ ಸೋಮಣ್ಣರಿಂದ ಇಂದು ಬೆಂಗಳೂರಲ್ಲಿ ಸಭೆ
ನಿನ್ನೆ ದೆಹಲಿಯಲ್ಲಿದ್ದ ಕೇಂದ್ರ ಸಚಿವ ಸೋಮಣ್ಣರಿಂದ ಇಂದು ಬೆಂಗಳೂರಲ್ಲಿ ಸಭೆ
ದೈವ ಕ್ಷೇತ್ರದಲ್ಲಿ ಪವಾಡ; ಆಫ್ ಮಾಡಿದ್ದರೂ ತನ್ನಂತಾನೆ ಚಲಿಸಿದ ಆಟೋ
ದೈವ ಕ್ಷೇತ್ರದಲ್ಲಿ ಪವಾಡ; ಆಫ್ ಮಾಡಿದ್ದರೂ ತನ್ನಂತಾನೆ ಚಲಿಸಿದ ಆಟೋ
ಸಿಎಂ/ಡಿಸಿಎಂ ಅಗಬೇಕೆನ್ನುವವರು ಮತ್ತೊಮ್ಮೆ ಚುನಾವಣೆ ಎದುರಿಸಲಿ:ಡಿಕೆ ಸುರೇಶ್
ಸಿಎಂ/ಡಿಸಿಎಂ ಅಗಬೇಕೆನ್ನುವವರು ಮತ್ತೊಮ್ಮೆ ಚುನಾವಣೆ ಎದುರಿಸಲಿ:ಡಿಕೆ ಸುರೇಶ್
ಶಿವಕುಮಾರ್ ಸಿಎಂ ಆಗಬೇಕು ಎಂದಷ್ಟೇ ಹೇಳಿದ್ದು: ಚಂದ್ರಶೇಖರನಾಥ ಸ್ವಾಮೀಜಿ
ಶಿವಕುಮಾರ್ ಸಿಎಂ ಆಗಬೇಕು ಎಂದಷ್ಟೇ ಹೇಳಿದ್ದು: ಚಂದ್ರಶೇಖರನಾಥ ಸ್ವಾಮೀಜಿ
ಸೋಲಿಗೆ ಮಾಧ್ಯಮಗಳ ಮೇಲೆ ಗೂಬೆ ಕೂರಿಸುವ ಪ್ರಯತ್ನ ಮಾಡಿದ ಡಿಕೆ ಸುರೇಶ್
ಸೋಲಿಗೆ ಮಾಧ್ಯಮಗಳ ಮೇಲೆ ಗೂಬೆ ಕೂರಿಸುವ ಪ್ರಯತ್ನ ಮಾಡಿದ ಡಿಕೆ ಸುರೇಶ್
ಹಣವನ್ನು ಗಾಳಿಯಲ್ಲಿ ತೂರಿ ಹುಟ್ಟುಹಬ್ಬ ಆಚರಿಸಿಕೊಂಡ ಹುಬ್ಬಳ್ಳಿಯ ಯುವಕ
ಹಣವನ್ನು ಗಾಳಿಯಲ್ಲಿ ತೂರಿ ಹುಟ್ಟುಹಬ್ಬ ಆಚರಿಸಿಕೊಂಡ ಹುಬ್ಬಳ್ಳಿಯ ಯುವಕ
ಯುವಕರ ನೆಚ್ಚಿನ ಸ್ಟೈಲಿಶ್ ಕ್ಯಾಸಿಯೋ G Shock ಸ್ಮಾರ್ಟ್​ವಾಚ್ ಬಿಡುಗಡೆ
ಯುವಕರ ನೆಚ್ಚಿನ ಸ್ಟೈಲಿಶ್ ಕ್ಯಾಸಿಯೋ G Shock ಸ್ಮಾರ್ಟ್​ವಾಚ್ ಬಿಡುಗಡೆ
‘ಎಲ್ಲರಿಗೂ ನೋವಿದೆ’; ದರ್ಶನ್ ಪ್ರಕರಣದಲ್ಲಿ ಸುಮಲತಾ, ರಾಕ್​ಲೈನ್ ಮೌನ ಏಕೆ?
‘ಎಲ್ಲರಿಗೂ ನೋವಿದೆ’; ದರ್ಶನ್ ಪ್ರಕರಣದಲ್ಲಿ ಸುಮಲತಾ, ರಾಕ್​ಲೈನ್ ಮೌನ ಏಕೆ?
ಮನೆಯಲ್ಲಿ ಚಪ್ಪಲಿ ಹಾಕಿಕೊಂಡು ಓಡಾಡಬಾರದು, ಈ ಬಗ್ಗೆ ಆಧ್ಯಾತ್ಮದಲ್ಲೇನಿದೆ?
ಮನೆಯಲ್ಲಿ ಚಪ್ಪಲಿ ಹಾಕಿಕೊಂಡು ಓಡಾಡಬಾರದು, ಈ ಬಗ್ಗೆ ಆಧ್ಯಾತ್ಮದಲ್ಲೇನಿದೆ?