Crime News: ಇಬ್ಬರು ಹೆಣ್ಣುಮಕ್ಕಳನ್ನು ಕೊಂದು ತಾವೂ ಆತ್ಮಹತ್ಯೆಗೆ ಶರಣಾದ ತಂದೆ-ತಾಯಿ

| Updated By: ಗಂಗಾಧರ​ ಬ. ಸಾಬೋಜಿ

Updated on: Aug 03, 2023 | 4:52 PM

Bengaluru News: ಇಬ್ಬರು ಹೆಣ್ಣುಮಕ್ಕಳನ್ನು ಕೊಂದು ದಂಪತಿ ಆತ್ಮಹತ್ಯೆ ಮಾಡಿಕೊಂಡಿರುವಂತಹ ದಾರುಣ ಘಟನೆ ನಿನ್ನೆ ರಾತ್ರಿ ನಗರದ ಶೀಗೆಹಳ್ಳಿಯ ಸಾಯಿ ಗಾರ್ಡನ್ ಅಪಾರ್ಟ್​ಮೆಂಟ್​ನಲ್ಲಿ ನಡೆದಿದೆ.

Crime News: ಇಬ್ಬರು ಹೆಣ್ಣುಮಕ್ಕಳನ್ನು ಕೊಂದು ತಾವೂ ಆತ್ಮಹತ್ಯೆಗೆ ಶರಣಾದ ತಂದೆ-ತಾಯಿ
ಮೃತ ದಂಪತಿ
Follow us on

ಬೆಂಗಳೂರು, ಆಗಸ್ಟ್​​ 03: ಇಬ್ಬರು ಮಕ್ಕಳನ್ನು ಕೊಂದು ದಂಪತಿ (Couple) ಆತ್ಮಹತ್ಯೆ ಮಾಡಿಕೊಂಡಿರುವಂತಹ ದಾರುಣ ಘಟನೆ ನಿನ್ನೆ ರಾತ್ರಿ ನಗರದ ಶೀಗೆಹಳ್ಳಿಯ ಸಾಯಿ ಗಾರ್ಡನ್ ಅಪಾರ್ಟ್​ಮೆಂಟ್​ನಲ್ಲಿ ನಡೆದಿದೆ. 1 ಹಾಗೂ 3 ವರ್ಷದ ಎರಡು ಹೆಣ್ಣುಮಕ್ಕಳನ್ನು ಹತ್ಯೆ ಮಾಡಿ, ಆಂಧ್ರ ಮೂಲದ ದಂಪತಿ ವಿಜಯ್(31), ಹೇಮಾವತಿ(29) ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಘಟನಾ ಸ್ಥಳಕ್ಕೆ ಎಫ್ಎಸ್ಎಲ್ ತಜ್ಞರ ತಂಡ ಭೇಟಿ ನೀಡಿ ಪರಿಶೀಲನೆ ಮಾಡಿದ್ದು, ಕಾಡುಗೋಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಖಾಸಗಿ ಕಂಪೆನಿಯಲ್ಲಿ ಟೆಕ್ಕಿಯಾಗಿದ್ದ ವೀರಾರ್ಜುನ ವಿಜಯ್​​, ಕಳೆದ 6 ವರ್ಷದಿಂದ ವೈಟ್ ಫೀಲ್ಡ್ ಸಮೀಪದ ಖಾಸಗಿ ಕಂಪೆನಿಯಲ್ಲಿ ಕೆಲಸ ಮಾಡುತ್ತಿದ್ದರು. ಮೊದಲು ಪತ್ನಿ ಹಾಗೂ ಮಕ್ಕಳನ್ನ ಕೊಲೆಗೈದು ಬಳಿಕ ವೀರಾರ್ಜುನ ವಿಜಯ್ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಸಾವಿಗೆ ನಿಖರ ಕಾರಣ ತಿಳಿದುಬಂದಿಲ್ಲ.

ಇದನ್ನೂ ಓದಿ: ಜಮೀನು ವಿಚಾರಕ್ಕಾಗಿ‌ ಎರಡು ಸಮುದಾಯಗಳ ನಡುವೆ ಮಾರಾಮಾರಿ: ದೂರು ದಾಖಲು

ಪೊಲೀಸರ ಮೇಲೆಯೇ ಮಚ್ಚಿನಿಂದ ಹಲ್ಲೆ: ಬಂಧನ 

ಪೊಲೀಸರ ಮೇಲೆಯೇ ಮಚ್ಚಿನಿಂದ ದುಷ್ಕರ್ಮಿಗಳು ಹಲ್ಲೆ ನಡೆಸಿರುವಂತಹ ಘಟನೆ ನಗರದಲ್ಲಿ ನಡೆದಿದೆ. ಇತ್ತೀಚೆಗೆ ಜೈಲಿನಿಂದ ಹೊರಬಂದಿದ್ದ ಅಫ್ರಿದ್ ಖಾನ್​ನಿಂದ ಚಾಮರಾಜಪೇಟೆ ಠಾಣೆ ಸಿಬ್ಬಂದಿ ವಿಜಯ್ ಕುಮಾರ್, ಶಿವಪ್ರಸಾದ್ ಮೇಲೆ ಹಲ್ಲೆ ಮಾಡಲಾಗಿದೆ.

ಇದನ್ನೂ ಓದಿ: ರಾಯಚೂರಿನಲ್ಲಿ ಗಾಂಜಾ ಚಾಕೊಲೇಟ್ ದಂಧೆ ಪ್ರಕರಣ: ಎಂಟು ಕಡೆ ದಾಳಿ, ಐವರ ಬಂಧನ

ರಾತ್ರಿ ಗಸ್ತಿನಲ್ಲಿದ್ದ ಪೊಲೀಸರು ಪರಿಶೀಲನೆ ನಡೆಸುತ್ತಿದ್ದ ವೇಳೆ ಮಚ್ಚಿನಿಂದ ಹಲ್ಲೆ ಮಾಡಿದ್ದು, ಸದ್ಯ  ಚಾಮರಾಜಪೇಟೆ ಠಾಣೆ ಪೊಲೀಸರಿಂದ ಆರೋಪಿ ಅಫ್ರಿದ್ ಖಾನ್ ಬಂಧಿಸಲಾಗಿದೆ. ಪೊಲೀಸರ ಮೇಲೆ ಹಲ್ಲೆ ಬಗ್ಗೆ ಚಾಮರಾಜಪೇಟೆ ಠಾಣೆಯಲ್ಲಿ ಕೇಸ್ ದಾಖಲು ಮಾಡಲಾಗಿದೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 4:42 pm, Thu, 3 August 23