AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗಂಡ-ಹೆಂಡತಿ ಜಗಳದಲ್ಲಿ RDX ಸ್ಫೋಟಿಸುವುದಾಗಿ ಬೆದರಿಕೆ ಮೆಸೇಜ್ ರವಾನೆ ಮಾಡಿದ್ದು ಯಾರು ಗೊತ್ತಾ?

ಡಿಸೆಂಬರ್ 5ರಂದು RDX ಬಾಂಬ್ ಹಾಕುವುದಾಗಿ ಬೆದರಿಕೆ ಮೆಸೇಜ್ ಪೊಲೀಸರಿಗೆ ರವಾನೆಯಾಗಿದೆ. ಖುದ್ದು ಪತ್ನಿ ವಿದ್ಯಾರಾಣಿಯೇ ಪೊಲೀಸ್ ಮತ್ತು ಕೇಂದ್ರ ತನಿಖಾ ಸಂಸ್ಥೆಗೆ ಕಳುಹಿಸಿದ್ದಾರೆ. ಬಳಿಕ ಗಂಡನ ಮೊಬೈಲ್‌ನಿಂದ ಮೆಸೇಜ್ ಡಿಲೀಟ್ ಮಾಡಿ, ಜಾಣತನ ತೋರಿದ್ದಾರೆ.

ಗಂಡ-ಹೆಂಡತಿ ಜಗಳದಲ್ಲಿ RDX ಸ್ಫೋಟಿಸುವುದಾಗಿ ಬೆದರಿಕೆ ಮೆಸೇಜ್ ರವಾನೆ ಮಾಡಿದ್ದು ಯಾರು ಗೊತ್ತಾ?
ಗಂಡ-ಹೆಂಡತಿ ಜಗಳದಲ್ಲಿ RDX ಸ್ಫೋಟಗೊಳಿಸುವುದಾಗಿ ಬೆದರಿಕೆ ಮೆಸೇಜ್ ರವಾನೆ
ರಾಮು, ಆನೇಕಲ್​
| Edited By: |

Updated on: Dec 05, 2023 | 1:56 PM

Share

ಆನೇಕಲ್: ಗಂಡ ಮತ್ತು ಹೆಂಡತಿ (couple) ಮಧ್ಯೆ ನಡೆದ ಜಗಳವದು. ಅಷ್ಟಕ್ಕೇ RDX ಇಟ್ಟು ಸ್ಫೋಟಗೊಳಿಸುವುದಾಗಿ (hoax bomb blast) ಪೊಲೀಸ್ ಮತ್ತಿತರ ಕೇಂದ್ರ ತನಿಖಾ ಸಂಸ್ಥೆಗಳಿಗೆ ಹೇಳಿ ಬೆದರಿಕೆ ಮೆಸೇಜ್ ಕಳಿಸಲಾಗಿದೆ. ಈ ಸಂಬಂಧ ಆನೇಕಲ್ ಪೊಲೀಸ್ ಠಾಣೆಯಲ್ಲಿ (anekal police) ಪ್ರಕರಣ ದಾಖಲು ಮಾಡಿಕೊಳ್ಳಲಾಗಿದೆ.

ಆನೇಕಲ್‌ನ ಮಾರುತಿ ಬಡಾವಣೆಯಲ್ಲಿ ಉತ್ತರ ಕರ್ನಾಟಕ ಮೂಲದ ಕಿರಣ್ ಮತ್ತು ವಿದ್ಯಾರಾಣಿ ದಂಪತಿ ವಾಸವಿದ್ದರು. ಸೋಷಿಯಲ್ ಮೀಡಿಯಾ ಆ್ಯಪ್‌ ಮೂಲಕ ವಿದ್ಯಾರಾಣಿಗೆ ರಾಮ್‌ಪ್ರಸಾದ್ ಅನ್ನೋ ವ್ಯಕ್ತಿಯ ಪರಿಚಯವಾಗಿದೆ. ರಾಮ್‌ಪ್ರಸಾದ್ ಜೊತೆ ವಿದ್ಯಾರಾಣಿ ನಿರಂತರ ಚ್ಯಾಟಿಂಗ್ ಮಾಡ್ತಿದ್ದರು. ಇದು ಗಂಡ ಕಿರಣ್‌ಗೆ ಗೊತ್ತಾಗಿ ಮೊಬೈಲ್ ಒಡೆದು ಹಾಕಿದ್ದರು.

ಇನ್ನು ಈ ವಿಚಾರವನ್ನು ಬೇರೆ ನಂಬರ್ ಮೂಲಕ ರಾಮ್‌ಪ್ರಸಾದ್‌ಗೆ ವಿದ್ಯಾರಾಣಿ ತಿಳಿಸಿದ್ದಾರೆ. ಅಷ್ಟಕ್ಕೇ ವಿದ್ಯಾರಾಣಿ ಗಂಡನಿಗೆ ಬುದ್ಧಿ ಕಲಿಸಲು ಪ್ಲಾನ್ ಮಾಡಿದ್ದಾನೆ ರಾಮಪ್ರಸಾದ್. ಆದರೆ ಖದೀಮತನ ತೋರಿರುವ ರಾಮಪ್ರಸಾದ, ತಾನು ಕಳುಹಿಸುವ ಮೆಸೇಜ್‌ ಅನ್ನು ಗಂಡ ಕಿರಣ್ ಮೊಬೈಲ್​​​ ನಂಬರ್‌ನಿಂದ ಫಾರ್ವಡ್ ಮಾಡು ಅಂತ ಸೂಚನೆ ನೀಡಿದ್ದಾನೆ!

ಇದನ್ನೂ ಓದಿ: ಕೇರಳದ ಕಳಮಶ್ಶೇರಿ ಬಾಂಬ್ ಸ್ಫೋಟದ ಆರೋಪಿ ಅಸಾಧಾರಣ ಬುದ್ಧಿವಂತ – ಪೊಲೀಸ್

ಅದಾಗುತ್ತಿದ್ದಂತೆ ಡಿಸೆಂಬರ್ 5ರಂದು RDX ಬಾಂಬ್ ಹಾಕುವುದಾಗಿ ಬೆದರಿಕೆ ಮೆಸೇಜ್ ಪೊಲೀಸರಿಗೆ ರವಾನೆಯಾಗಿಬಿಟ್ಟಿದೆ. ಖುದ್ದು ಪತ್ನಿ ವಿದ್ಯಾರಾಣಿಯೇ ಪೊಲೀಸ್ ಮತ್ತು ಕೇಂದ್ರ ತನಿಖಾ ಸಂಸ್ಥೆಗೆ ಕಳುಹಿಸಿದ್ದಾರೆ. ಬಳಿಕ ಗಂಡನ ಮೊಬೈಲ್‌ನಿಂದ ಮೆಸೇಜ್ ಡಿಲೀಟ್ ಮಾಡಿ, ಜಾಣತನ ತೋರಿದ್ದಾರೆ. ಇತ್ತ ರಂಗಕ್ಕೆ ಇಳಿದ ಪೊಲೀಸರು ಮತ್ತು ತನಿಖಾ ಸಂಸ್ಥೆಗಳು ಮೆಸೇಜ್ ಬಂದಿದ್ದ ನಂಬರ್‌ನ ಮೂಲ ಹುಡುಕಿ ಹೊರಟಿದ್ದಾರೆ. ಸೀದಾ ಕಿರಣನ ಮನೆಗೆ ಬಂದು ಪೊಲೀಸರು ದಂಪತಿಯನ್ನು ವಿಚಾರಣೆಗೊಳಪಡಿಸಿದ್ದಾರೆ. ಆಗ ಸತ್ಯ ಬಯಲಿಗೆ ಬಂದಿದೆ. ಈ ಸಂಬಂಧ ಆನೇಕಲ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.

ಅಪರಾಧ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Follow Us
ಮಧ್ಯ ರಾತ್ರಿ 2 ಗಂಟೆ ಮೇಲೆ ರಕ್ಷಿತಾ ಪ್ರೇಮ್ ಕರೆ ಮಾಡಿದ್ರು: ಧ್ರುವ ಸರ್ಜಾ
ಮಧ್ಯ ರಾತ್ರಿ 2 ಗಂಟೆ ಮೇಲೆ ರಕ್ಷಿತಾ ಪ್ರೇಮ್ ಕರೆ ಮಾಡಿದ್ರು: ಧ್ರುವ ಸರ್ಜಾ
ಕೆರೂರು PSI ಲೋಕಾಯುಕ್ತ ಬಲೆಗೆ: ಪಟಾಕಿ ಸಿಡಿಸಿ ಸಂಭ್ರಮಿಸಿದ ಯುವಕರು
ಕೆರೂರು PSI ಲೋಕಾಯುಕ್ತ ಬಲೆಗೆ: ಪಟಾಕಿ ಸಿಡಿಸಿ ಸಂಭ್ರಮಿಸಿದ ಯುವಕರು
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ