AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

545 PSI Recruitment Scam: ಡಿವೈಎಸ್​ಪಿ ಮಲ್ಲಿಕಾರ್ಜುನ ಸೇರಿದಂತೆ ಐವರ ಜಾಮೀನು ಅರ್ಜಿ ತಿರಸ್ಕೃತ

545 ಪಿಎಸ್ಐ ನೇಮಕಾತಿ ಪರೀಕ್ಷೆ ಅಕ್ರಮ ಪ್ರಕರಣದಲ್ಲಿ ಸಿಲುಕಿ ಅರೆಸ್ಟ್ ಆಗಿರುವ ಡಿವೈಎಸ್ಪಿ ಮಲ್ಲಿಕಾರ್ಜುನ ಸಾಲಿ ಸೇರಿದಂತೆ ಐವರು ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಕಲಬುರಗಿ ಮೂರನೇ ಜೆಎಂಎಫ್​ಸಿ ನ್ಯಾಯಾಲಯ ತಿರಸ್ಕರಿಸಿ ಆದೇಶಿಸಿದೆ.

545 PSI Recruitment Scam: ಡಿವೈಎಸ್​ಪಿ ಮಲ್ಲಿಕಾರ್ಜುನ ಸೇರಿದಂತೆ ಐವರ ಜಾಮೀನು ಅರ್ಜಿ ತಿರಸ್ಕೃತ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on: May 17, 2022 | 7:16 PM

Share

ಬೆಂಗಳೂರು: ರಾಜ್ಯದಲ್ಲಿ ನಡೆದ ಪೊಲೀಸ್ ಸಬ್ ಇನ್ಸ್ಪೆಕ್ಟರ್ (PSI) ಹುದ್ದೆ ಭರ್ತಿ ನೇಮಕಾತಿಯಲ್ಲಿ ನಡೆದ ಭಾರಿ ಅಕ್ರಮ(scam) ನಡೆದಿದ್ದು, ಈವರೆಗೆ ಬಂಧಿತರಾಗಿರುವ ಪ್ರಮುಖರು ಜಾಮೀನು ಕೋರಿ ಅರ್ಜಿ ಸಲ್ಲಿಸುತ್ತಿದ್ದಾರೆ. ಈ ಪೈಕಿ ಡಿವೈಎಸ್​ಪಿ ಮಲ್ಲಿಕಾರ್ಜುನ ಸೇರಿದಂತೆ ಐದು ಮಂದಿ ಸಲ್ಲಿಸಿದ ಜಾಮೀನು (bail) ಅರ್ಜಿ ಇಂದು ತಿರಸ್ಕೃತಗೊಂಡಿದೆ.

545 ಪಿಎಸ್ಐ ನೇಮಕಾತಿ ಪರೀಕ್ಷೆ ಅಕ್ರಮ ಪ್ರಕರಣದಲ್ಲಿ ಸಿಲುಕಿ ಅರೆಸ್ಟ್ ಆಗಿರುವ ಡಿವೈಎಸ್ಪಿ ಮಲ್ಲಿಕಾರ್ಜುನ ಸಾಲಿ, ಜೋತಿ ಪಾಟೀಲ್, ಅರ್ಚನಾ, ಸುನಿತಾ, ಶ್ರೀಧರ್ ಅವರು ಜಾಮೀನು ಕೋರಿ ಕಲಬುರಗಿ ಮೂರನೇ ಜೆಎಂಎಫ್​ಸಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ವಿಚಾರಣೆ ನಡೆಸಿದ ಕೋರ್ಟ್, ಮಲ್ಲಿಕಾರ್ಜುನ ಸೇರಿ ಐವರ ಅರ್ಜಿಯನ್ನು ತಿರಸ್ಕರಿಸಿ ಆದೇಶಿಸಿದೆ. ಜಾಮೀನು ತಿರಸ್ಕೃತಗೊಂಡ ಹಿನ್ನೆಲೆ ಅವರಿಗೆ ಇನ್ನೂ ಕೆಲವು ದಿನಗಳ ಕಾಲ ಕಲಬುರಗಿ ಜೈಲು ಊಟವೇ ಗತಿಯಾಗಿದೆ.

ಇದನ್ನೂ ಓದಿ: 545 ಪಿಎಸ್​ಐ ಅಕ್ರಮ

ರಾಜ್ಯದ 545 ಪಿಎಸ್​ಐ ನೇಮಕಾತಿ ಸಂಬಂಧ ಜ.19ರಂದು ಲಿಖಿತ ಪರೀಕ್ಷೆಯ ಅಯ್ಕೆ ಪಟ್ಟಿ ಬಿಡುಗಡೆಯಾಗಿತ್ತು. ತಮ್ಮ ಹೆಸರು ಇದರಲ್ಲಿ ಇರಬಹುದು ಎಂದು ಯೋಚಿಸುತ್ತಿದ್ದ ಪ್ರತಿಭಾವಂತ ಅಭ್ಯರ್ಥಿಗಳಿಗೆ ಆಯ್ಕೆ ಪಟ್ಟಿ ನೋಡಿ ನಿರಾಸೆಯಾಗಿದ್ದಲ್ಲದೆ, ಅಕ್ರಮದ ಆರೋಪವನ್ನು ಮಾಡಿದರು. ಅಲ್ಲದೆ, 40-80 ಲಕ್ಷದ ವರೆಗೆ ಡೀಲ್​ಗಳು ನಡೆದಿವೆ ಎಂಬ ಗಂಭೀರ ಆರೋಪಗಳು ಕೇಳಿಬಂದವು. ಈ ನಿಟ್ಟಿನಲ್ಲಿ ಸರ್ಕಾರ ಪ್ರಕರಣದ ತನಿಖೆಯನ್ನು ಸಿಐಡಿ ಹೆಗಲಿಗೆ ಒಪ್ಪಿಸಿತು. ತನಿಖೆ ಆರಂಭದ ನಂತರ ಆರೋಪಗಳಿಗೆ ಸಂಬಂಧಿಸಿದಂತೆ ಒಂದೊಂದೇ ಮಾಹಿತಿಗಳು ಹೊರಬಿದ್ದವು. ಅಲ್ಲದೆ, ಹಗರಣ ಸಂಬಂಧ ಈವರೆಗೆ 32 ಜನರನ್ನು ಸಿಐಡಿ ಅಧಿಕಾರಿಗಳು ಬಂಧಿಸಿದ್ದು, ಯಾರಿಗೂ ಜಾಮೀನು ಮಂಜೂರು ಆಗಿಲ್ಲ.

ಅಕ್ರಮ ಬೆಳಕಿಗೆ ಬಂದ ನಂತರ ರಾಜ್ಯ ಸರ್ಕಾರ, ಆಯ್ಕೆ ಪಟ್ಟಿಯನ್ನು ಸಂಪೂರ್ಣವಾಗಿ ರದ್ದುಗೊಳಿಸಿ ಮರುಪರೀಕ್ಷೆಗೆ ತೀರ್ಮಾನ ಕೈಗೊಂಡಿದ್ದು, ಇದರ ದಿನಾಂಕವನ್ನು ಶೀಘ್ರದಲ್ಲೇ ಪ್ರಕಟಿಸಲಾಗುವುದು ಎಂದು ತಿಳಿಸಿದೆ. ಸರ್ಕಾರದ ಈ ನಡೆಗೆ ಈಗಾಗಲೇ ಕಷ್ಟಪಟ್ಟು ಓದಿ ಆಯ್ಕೆಯಾಗಿರುವ ಅರ್ಹ ಅಭ್ಯರ್ಥಿಗಳು ಅಸಮಧಾನ ಹೊರಹಾಕುತ್ತಿದ್ದು, ತಮಗೆ ನ್ಯಾಯ ಒದಗಿಸುವಂತೆ ಆಗ್ರಹಿಸುತ್ತಿದ್ದಾರೆ. ಇನ್ನೊಂದೆಡೆ, ಆಯ್ಕೆ ಪಟ್ಟಿಗೆ ಸೇರಲು ಸಾಧ್ಯವಾಗದ ಅಭ್ಯರ್ಥಿಗಳು ಮರುಪರೀಕ್ಷೆ ಬರೆಯುವ ಸಂತಸದಲ್ಲಿ ಇದ್ದಾರೆ.

ಮತ್ತಷ್ಟು ಸುದ್ದಿಗಳಿಗಾಗಿ ಲಿಂಕ್ ಕ್ಲಿಕ್ ಮಾಡಿ

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ