AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Crime News: ಬಾಲಕನ ಕತ್ತು ಕೊಯ್ದು, ಕೈ-ಕಾಲು ಕತ್ತರಿಸಿ, ಕಾಡಿನಲ್ಲಿ ಬಿಸಾಡಿದ ಗೆಳೆಯರು

Murder: ಮೂವರು ಗೆಳೆಯರ ನಡುವೆ ನಡೆದ ಸಣ್ಣ ಜಗಳದಿಂದ 14 ವರ್ಷದ ಬಾಲಕನ ಪ್ರಾಣವೇ ಹೋಗಿದೆ. ತಮ್ಮ ಸ್ನೇಹಿತನನ್ನು ಕೊಂದ ಬಾಲಕರು ಆತನ ಕೈ, ಕಾಲುಗಳನ್ನು ಕತ್ತರಿಸಿ, ಹೆಣವನ್ನು ಗೋಣಿಚೀಲದಲ್ಲಿ ತುಂಬಿ ಕಾಡಿನಲ್ಲಿ ಬಿಸಾಡಿದ್ದಾರೆ.

Crime News: ಬಾಲಕನ ಕತ್ತು ಕೊಯ್ದು, ಕೈ-ಕಾಲು ಕತ್ತರಿಸಿ, ಕಾಡಿನಲ್ಲಿ ಬಿಸಾಡಿದ ಗೆಳೆಯರು
ಕೊಲೆ
TV9 Web
| Edited By: |

Updated on:Dec 23, 2021 | 7:03 PM

Share

ದಿಯೋಘರ್: ಗೆಳೆಯರೊಂದಿಗೆ ಜಗಳವಾಡಿಕೊಂಡ ಪರಿಣಾಮ 14 ವರ್ಷದ ಬಾಲಕನೊಬ್ಬನನ್ನು ಆತನ ಸ್ನೇಹಿತರು ಕತ್ತು ಕೊಯ್ದು, ಕೈಕಾಲುಗಳನ್ನು ಕತ್ತರಿಸಿ ಕೊಂದಿದ್ದಾರೆ. ನಂತರ ಆತನ ಶವವನ್ನು ಗೋಣಿಚೀಲಗಳಲ್ಲಿ ತುಂಬಿ ಕಾಡಿನಲ್ಲಿ ಎಸೆದಿದ್ದಾರೆ. ಜಾರ್ಖಂಡ್‌ನ ದಿಯೋಘರ್ ಜಿಲ್ಲೆಯಲ್ಲಿ ಈ ಆಘಾತಕಾರಿ ಘಟನೆ ನಡೆದಿದೆ. ಮೃತ ಬಾಲಕನ ಕುಟುಂಬದವರು ಬುಧವಾರ ಈ ಬಗ್ಗೆ ದೂರು ದಾಖಲಿಸಿದ್ದು, ತಮ್ಮ ಮಗ ಹಿಂದಿನ ರಾತ್ರಿ ನಿಗೂಢವಾಗಿ ನಾಪತ್ತೆಯಾಗಿದ್ದಾನೆ ದೂರು ನೀಡಿದ್ದರು.

ದೂರಿನ ಆಧಾರದಲ್ಲಿ ತನಿಖೆ ನಡೆಸಿದಾಗ 14 ವರ್ಷದ ಬಾಲಕನ ಸ್ನೇಹಿತನನ್ನು ಪೊಲೀಸರು ಬಂಧಿಸಿದ್ದಾರೆ. ಮಂಗಳವಾರ ರಾತ್ರಿ 8.30ರ ಸುಮಾರಿಗೆ ಜಸಿದಿಹ್ ಪೊಲೀಸ್ ಠಾಣೆ ವ್ಯಾಪ್ತಿಯ ರೋಹಿಣಿ ಗ್ರಾಮದ ತನ್ನ ಮನೆಯ ಹೊರಗೆ ಆತನ ಸ್ನೇಹಿತರು ಬಾಲಕನನ್ನು ಭೇಟಿಯಾಗಿದ್ದರು. ಅಲ್ಲಿಂದ ಆತನನ್ನು ಕರೆದುಕೊಂಡು ಕುಮ್ರಾಬಾದ್ ಸ್ಟೇಷನ್ ರಸ್ತೆಗೆ ಹೋದರು. ಅಲ್ಲಿ 19 ವರ್ಷದ ಇನ್ನೊಬ್ಬ ಸ್ನೇಹಿತ ಅವಿನಾಶ್​ನನ್ನೂ ಜೊತೆ ಸೇರಿಸಿಕೊಂಡರು.

ಆ ಮೂವರೂ ಪಳಂಗ ಪಹಾಡ್ ಜಂಗಲ್ ಕಡೆಗೆ ಹೋಗುತ್ತಿದ್ದಾಗ ಅವಿನಾಶ್ ಮತ್ತು ಆ ಬಾಲಕನ ನಡುವೆ ವಾಗ್ವಾದ ನಡೆದಿದೆ. ಇಬ್ಬರ ಜಗಳ ವಿಕೋಪಕ್ಕೆ ತಿರುಗಿದಾಗ ಕೋಪದಿಂದ ಅವಿನಾಶ್ ಚಾಕು ತೆಗೆದು ಆ 14 ವರ್ಷದ ಬಾಲಕನನ್ನು ಇರಿದು ಕತ್ತು ಕೊಯ್ದಿದ್ದಾನೆ ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.

ಆತನನ್ನು ಕೊಂದ ನಂತರ, ಅವಿನಾಶ್ ಆತನ ಕೈ ಮತ್ತು ಕಾಲುಗಳನ್ನು ಕತ್ತರಿಸಿ, ದೇಹದ ಭಾಗಗಳನ್ನು ಮೂರು ಗೋಣಿಚೀಲಗಳಲ್ಲಿ ತುಂಬಿ ಕಾಡಿನಲ್ಲಿ ಎಸೆದಿದ್ದಾನೆ. ಪೊಲೀಸರು ಶವವನ್ನು ವಶಪಡಿಸಿಕೊಂಡು ಅವಿನಾಶ್‌ನನ್ನು ಬಂಧಿಸಿದ್ದಾರೆ. ಅವಿನಾಶ್ ಕೂಡ ತಾನು ಮಾಡಿದ ಕೊಲೆಯನ್ನು ಒಪ್ಪಿಕೊಂಡಿದ್ದಾನೆ. ಪೊಲೀಸರು ಅವಿನಾಶ್​ನಿಂದ ರಕ್ತಸಿಕ್ತ ಚಾಕು ಮತ್ತು ಮೃತನ ಮೊಬೈಲ್ ಫೋನ್ ಅನ್ನು ವಶಪಡಿಸಿಕೊಂಡಿದ್ದಾರೆ.

ಇದನ್ನೂ ಓದಿ: ಎಸ್​ಡಿಪಿಐ ನಾಯಕನ ಕೊಲೆ ಬೆನ್ನಲ್ಲೇ ಕೇರಳದ ಬಿಜೆಪಿ ನಾಯಕನ ಕತ್ತು ಕೊಯ್ದು ಬರ್ಬರ ಹತ್ಯೆ

ನೆಲಮಂಗಲದಲ್ಲಿ ಚಾಕುವಿನಿಂದ ಕತ್ತು ಕೊಯ್ದುಕೊಂಡು ವ್ಯಕ್ತಿ ಆತ್ಮಹತ್ಯೆ

Published On - 7:03 pm, Thu, 23 December 21

Follow Us
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು