Sign In

By signing in or creating an account, you agree with Associated Broadcasting Company's Terms & Conditions and Privacy Policy.

Crime News: ಬಾಲಕನ ಕತ್ತು ಕೊಯ್ದು, ಕೈ-ಕಾಲು ಕತ್ತರಿಸಿ, ಕಾಡಿನಲ್ಲಿ ಬಿಸಾಡಿದ ಗೆಳೆಯರು

Murder: ಮೂವರು ಗೆಳೆಯರ ನಡುವೆ ನಡೆದ ಸಣ್ಣ ಜಗಳದಿಂದ 14 ವರ್ಷದ ಬಾಲಕನ ಪ್ರಾಣವೇ ಹೋಗಿದೆ. ತಮ್ಮ ಸ್ನೇಹಿತನನ್ನು ಕೊಂದ ಬಾಲಕರು ಆತನ ಕೈ, ಕಾಲುಗಳನ್ನು ಕತ್ತರಿಸಿ, ಹೆಣವನ್ನು ಗೋಣಿಚೀಲದಲ್ಲಿ ತುಂಬಿ ಕಾಡಿನಲ್ಲಿ ಬಿಸಾಡಿದ್ದಾರೆ.

Crime News: ಬಾಲಕನ ಕತ್ತು ಕೊಯ್ದು, ಕೈ-ಕಾಲು ಕತ್ತರಿಸಿ, ಕಾಡಿನಲ್ಲಿ ಬಿಸಾಡಿದ ಗೆಳೆಯರು
ಕೊಲೆ
Follow us
TV9 Web
| Updated By: ಸುಷ್ಮಾ ಚಕ್ರೆ

Updated on:Dec 23, 2021 | 7:03 PM

ದಿಯೋಘರ್: ಗೆಳೆಯರೊಂದಿಗೆ ಜಗಳವಾಡಿಕೊಂಡ ಪರಿಣಾಮ 14 ವರ್ಷದ ಬಾಲಕನೊಬ್ಬನನ್ನು ಆತನ ಸ್ನೇಹಿತರು ಕತ್ತು ಕೊಯ್ದು, ಕೈಕಾಲುಗಳನ್ನು ಕತ್ತರಿಸಿ ಕೊಂದಿದ್ದಾರೆ. ನಂತರ ಆತನ ಶವವನ್ನು ಗೋಣಿಚೀಲಗಳಲ್ಲಿ ತುಂಬಿ ಕಾಡಿನಲ್ಲಿ ಎಸೆದಿದ್ದಾರೆ. ಜಾರ್ಖಂಡ್‌ನ ದಿಯೋಘರ್ ಜಿಲ್ಲೆಯಲ್ಲಿ ಈ ಆಘಾತಕಾರಿ ಘಟನೆ ನಡೆದಿದೆ. ಮೃತ ಬಾಲಕನ ಕುಟುಂಬದವರು ಬುಧವಾರ ಈ ಬಗ್ಗೆ ದೂರು ದಾಖಲಿಸಿದ್ದು, ತಮ್ಮ ಮಗ ಹಿಂದಿನ ರಾತ್ರಿ ನಿಗೂಢವಾಗಿ ನಾಪತ್ತೆಯಾಗಿದ್ದಾನೆ ದೂರು ನೀಡಿದ್ದರು.

ದೂರಿನ ಆಧಾರದಲ್ಲಿ ತನಿಖೆ ನಡೆಸಿದಾಗ 14 ವರ್ಷದ ಬಾಲಕನ ಸ್ನೇಹಿತನನ್ನು ಪೊಲೀಸರು ಬಂಧಿಸಿದ್ದಾರೆ. ಮಂಗಳವಾರ ರಾತ್ರಿ 8.30ರ ಸುಮಾರಿಗೆ ಜಸಿದಿಹ್ ಪೊಲೀಸ್ ಠಾಣೆ ವ್ಯಾಪ್ತಿಯ ರೋಹಿಣಿ ಗ್ರಾಮದ ತನ್ನ ಮನೆಯ ಹೊರಗೆ ಆತನ ಸ್ನೇಹಿತರು ಬಾಲಕನನ್ನು ಭೇಟಿಯಾಗಿದ್ದರು. ಅಲ್ಲಿಂದ ಆತನನ್ನು ಕರೆದುಕೊಂಡು ಕುಮ್ರಾಬಾದ್ ಸ್ಟೇಷನ್ ರಸ್ತೆಗೆ ಹೋದರು. ಅಲ್ಲಿ 19 ವರ್ಷದ ಇನ್ನೊಬ್ಬ ಸ್ನೇಹಿತ ಅವಿನಾಶ್​ನನ್ನೂ ಜೊತೆ ಸೇರಿಸಿಕೊಂಡರು.

ಆ ಮೂವರೂ ಪಳಂಗ ಪಹಾಡ್ ಜಂಗಲ್ ಕಡೆಗೆ ಹೋಗುತ್ತಿದ್ದಾಗ ಅವಿನಾಶ್ ಮತ್ತು ಆ ಬಾಲಕನ ನಡುವೆ ವಾಗ್ವಾದ ನಡೆದಿದೆ. ಇಬ್ಬರ ಜಗಳ ವಿಕೋಪಕ್ಕೆ ತಿರುಗಿದಾಗ ಕೋಪದಿಂದ ಅವಿನಾಶ್ ಚಾಕು ತೆಗೆದು ಆ 14 ವರ್ಷದ ಬಾಲಕನನ್ನು ಇರಿದು ಕತ್ತು ಕೊಯ್ದಿದ್ದಾನೆ ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.

ಆತನನ್ನು ಕೊಂದ ನಂತರ, ಅವಿನಾಶ್ ಆತನ ಕೈ ಮತ್ತು ಕಾಲುಗಳನ್ನು ಕತ್ತರಿಸಿ, ದೇಹದ ಭಾಗಗಳನ್ನು ಮೂರು ಗೋಣಿಚೀಲಗಳಲ್ಲಿ ತುಂಬಿ ಕಾಡಿನಲ್ಲಿ ಎಸೆದಿದ್ದಾನೆ. ಪೊಲೀಸರು ಶವವನ್ನು ವಶಪಡಿಸಿಕೊಂಡು ಅವಿನಾಶ್‌ನನ್ನು ಬಂಧಿಸಿದ್ದಾರೆ. ಅವಿನಾಶ್ ಕೂಡ ತಾನು ಮಾಡಿದ ಕೊಲೆಯನ್ನು ಒಪ್ಪಿಕೊಂಡಿದ್ದಾನೆ. ಪೊಲೀಸರು ಅವಿನಾಶ್​ನಿಂದ ರಕ್ತಸಿಕ್ತ ಚಾಕು ಮತ್ತು ಮೃತನ ಮೊಬೈಲ್ ಫೋನ್ ಅನ್ನು ವಶಪಡಿಸಿಕೊಂಡಿದ್ದಾರೆ.

ಇದನ್ನೂ ಓದಿ: ಎಸ್​ಡಿಪಿಐ ನಾಯಕನ ಕೊಲೆ ಬೆನ್ನಲ್ಲೇ ಕೇರಳದ ಬಿಜೆಪಿ ನಾಯಕನ ಕತ್ತು ಕೊಯ್ದು ಬರ್ಬರ ಹತ್ಯೆ

ನೆಲಮಂಗಲದಲ್ಲಿ ಚಾಕುವಿನಿಂದ ಕತ್ತು ಕೊಯ್ದುಕೊಂಡು ವ್ಯಕ್ತಿ ಆತ್ಮಹತ್ಯೆ

Published On - 7:03 pm, Thu, 23 December 21

Devotional: ಮಹಿಳೆಯರಿಗೆ ಕೈ ಕೆರೆತವಾದ್ರೆ ಏನೆಲ್ಲಾ ಆಗುತ್ತೆ ಗೊತ್ತಾ?
Devotional: ಮಹಿಳೆಯರಿಗೆ ಕೈ ಕೆರೆತವಾದ್ರೆ ಏನೆಲ್ಲಾ ಆಗುತ್ತೆ ಗೊತ್ತಾ?
Daily Horoscope: ಹಣಕಾಸಿನ ವಿಷಯದಲ್ಲಿ ತಾಳ್ಮೆವಹಿಸುವುದು ಒಳ್ಳೆಯದು
Daily Horoscope: ಹಣಕಾಸಿನ ವಿಷಯದಲ್ಲಿ ತಾಳ್ಮೆವಹಿಸುವುದು ಒಳ್ಳೆಯದು
ಉಪೇಂದ್ರ ಊಟ ಮಾಡೋದು ಬಹಳ ವಿಚಿತ್ರ; ಅಚ್ಚರಿಯ ವಿಷಯ ಹೇಳಿದ ಶಿವಣ್ಣ
ಉಪೇಂದ್ರ ಊಟ ಮಾಡೋದು ಬಹಳ ವಿಚಿತ್ರ; ಅಚ್ಚರಿಯ ವಿಷಯ ಹೇಳಿದ ಶಿವಣ್ಣ
ಕ್ಯಾಪ್ಟನ್ ಕೂಲ್ ಧೋನಿಗೆ ಬಿಸಿಸಿಐನಿಂದ ವಿಶೇಷ ಗೌರವ
ಕ್ಯಾಪ್ಟನ್ ಕೂಲ್ ಧೋನಿಗೆ ಬಿಸಿಸಿಐನಿಂದ ವಿಶೇಷ ಗೌರವ
ಸಿಎಸ್​​ಕೆ ಬೌಲರ್​ಗಳ ಎದುರು ಅಬ್ಬರಿಸಿ ಬೊಬ್ಬಿರಿದ ನಿತೀಶ್ ರಾಣಾ
ಸಿಎಸ್​​ಕೆ ಬೌಲರ್​ಗಳ ಎದುರು ಅಬ್ಬರಿಸಿ ಬೊಬ್ಬಿರಿದ ನಿತೀಶ್ ರಾಣಾ
ಲಾಲು ಯಾದವ್ ಸರ್ಕಾರ ಜಂಗಲ್ ರಾಜ್ ಎಂದೇ ನೆನಪುಳಿಯುತ್ತದೆ; ಅಮಿತ್ ಶಾ
ಲಾಲು ಯಾದವ್ ಸರ್ಕಾರ ಜಂಗಲ್ ರಾಜ್ ಎಂದೇ ನೆನಪುಳಿಯುತ್ತದೆ; ಅಮಿತ್ ಶಾ
ಉಪ್ಪಿ, ಶಿವಣ್ಣ, ರಾಜ್ ಶೆಟ್ಟಿ ನಟನೆ ‘45’ ಸಿನಿಮಾ ಟೀಸರ್ ಲಾಂಚ್ ಲೈವ್ ನೋಡಿ
ಉಪ್ಪಿ, ಶಿವಣ್ಣ, ರಾಜ್ ಶೆಟ್ಟಿ ನಟನೆ ‘45’ ಸಿನಿಮಾ ಟೀಸರ್ ಲಾಂಚ್ ಲೈವ್ ನೋಡಿ
ಯುಗಾದಿ ಹಬ್ಬದಂದು ಗೃಹ ಲಕ್ಷ್ಮೀಯರಿಗೆ ಸಿಹಿ ಸುದ್ದಿ ನೀಡಿದ ಸಚಿವೆ
ಯುಗಾದಿ ಹಬ್ಬದಂದು ಗೃಹ ಲಕ್ಷ್ಮೀಯರಿಗೆ ಸಿಹಿ ಸುದ್ದಿ ನೀಡಿದ ಸಚಿವೆ
ಬುಡಕಟ್ಟು ನೃತ್ಯದ ಮೂಲಕ ಛತ್ತೀಸ್​ಗಢದಲ್ಲಿ ಮೋದಿಗೆ ಸಾಂಪ್ರದಾಯಿಕ ಸ್ವಾಗತ
ಬುಡಕಟ್ಟು ನೃತ್ಯದ ಮೂಲಕ ಛತ್ತೀಸ್​ಗಢದಲ್ಲಿ ಮೋದಿಗೆ ಸಾಂಪ್ರದಾಯಿಕ ಸ್ವಾಗತ
ಬೌಂಡರಿ ಬಳಿ ಅತ್ಯದ್ಭುತ ಕ್ಯಾಚ್ ಹಿಡಿದ ಜ್ಯಾಕ್ ಫ್ರೇಸರ್
ಬೌಂಡರಿ ಬಳಿ ಅತ್ಯದ್ಭುತ ಕ್ಯಾಚ್ ಹಿಡಿದ ಜ್ಯಾಕ್ ಫ್ರೇಸರ್