AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Crime News: ಮೊಬೈಲ್​ನಲ್ಲಿ ಚಾಟ್ ಮಾಡಿದ್ದಕ್ಕೆ ಬೈದ ತಾಯಿ; ಮನನೊಂದು 16 ವರ್ಷದ ಬಾಲಕಿ ಆತ್ಮಹತ್ಯೆ

ಆ ಹುಡುಗಿ ತನ್ನ ಕೋಚಿಂಗ್ ಕ್ಲಾಸ್​ನಿಂದ ಮನೆಗೆ ಬಂದವಳು ಮೊಬೈಲ್ ಫೋನ್‌ನಲ್ಲಿ ಚಾಟ್ ಮಾಡಲು ಪ್ರಾರಂಭಿಸಿದಳು. ಅದರಿಂದ ಕೋಪಗೊಂಡ ಆಕೆಯ ತಾಯಿ ಅವಳನ್ನು ಗದರಿಸಿದಳು.

Crime News: ಮೊಬೈಲ್​ನಲ್ಲಿ ಚಾಟ್ ಮಾಡಿದ್ದಕ್ಕೆ ಬೈದ ತಾಯಿ; ಮನನೊಂದು 16 ವರ್ಷದ ಬಾಲಕಿ ಆತ್ಮಹತ್ಯೆ
ಸಾಂದರ್ಭಿಕ ಚಿತ್ರ
TV9 Web
| Updated By: ಸುಷ್ಮಾ ಚಕ್ರೆ|

Updated on:Oct 24, 2022 | 11:40 AM

Share

ಕಾನ್ಪುರ: ಸದಾ ಮೊಬೈಲ್​ನಲ್ಲಿ ಚಾಟ್ ಮಾಡುತ್ತಿದ್ದ 16 ವರ್ಷದ ಮಗಳಿಗೆ ಆಕೆಯ ತಾಯಿ ಬೈದಿದ್ದರಿಂದ ಬೇಸರಗೊಂಡ ಬಾಲಕಿ ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ಉತ್ತರ ಪ್ರದೇಶದಲ್ಲಿ (Uttar Pradesh) ನಡೆದಿದೆ. ದೀಕ್ಷಾ ಎಂಬ 9ನೇ ತರಗತಿಯ ಬಾಲಕಿ ಗಂಗಾಪುರ ಕಾಲೋನಿಯಲ್ಲಿರುವ ತಮ್ಮ ನಿವಾಸದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾಳೆ. ಆಕೆಯ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದ್ದು, ಮರಣೋತ್ತರ ಪರೀಕ್ಷೆಯ ವರದಿ ಆಧರಿಸಿ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.

ಮೃತ ಬಾಲಕಿಯ ಕುಟುಂಬದ ಸದಸ್ಯರ ಪ್ರಕಾರ, ಆ ಹುಡುಗಿ ತನ್ನ ಕೋಚಿಂಗ್ ಕ್ಲಾಸ್​ನಿಂದ ಮನೆಗೆ ಬಂದವಳು ಮೊಬೈಲ್ ಫೋನ್‌ನಲ್ಲಿ ಚಾಟ್ ಮಾಡಲು ಪ್ರಾರಂಭಿಸಿದಳು. ಅದರಿಂದ ಕೋಪಗೊಂಡ ಆಕೆಯ ತಾಯಿ ಅವಳನ್ನು ಗದರಿಸಿದಳು. ಇದರಿಂದ ಆಕೆ ರೂಮಿನಲ್ಲಿ ಬಾಗಿಲು ಹಾಕಿಕೊಂಡು ಕುಳಿತಿದ್ದಳು. ಆ ದಿನ ರಾತ್ರಿ ಊಟಕ್ಕೆ ಕರೆಯಲು ತಾಯಿ ತನ್ನ ಮಗಳ ರೂಮಿಗೆ ಹೋಗಿ ನೋಡಿದಾಗ ಅವಳು ಫ್ಯಾನ್​ಗೆ ನೇಣು ಹಾಕಿಕೊಂಡಿದ್ದಳು. ಆ ಬಾಲಕಿಯನ್ನು ಸಮೀಪದ ಆಸ್ಪತ್ರೆಗೆ ಸಾಗಿಸಲಾಯಿತಾದರೂ ಆಕೆ ಅಷ್ಟರಲ್ಲಾಗಲೇ ಸಾವನ್ನಪ್ಪಿದ್ದಳು.

ಇದನ್ನೂ ಓದಿ: ಗಂಡನ ಸಾವಿನ ಸುದ್ದಿ ಕೇಳಿ ಮಗಳೊಂದಿಗೆ ತಾಯಿ ಕೂಡ ಆತ್ಮಹತ್ಯೆಗೆ ಶರಣು!

ಇತ್ತೀಚೆಗೆ ಸಣ್ಣಪುಟ್ಟ ವಿಷಯಕ್ಕೂ ಮಕ್ಕಳಲ್ಲಿ ಆತ್ಮಹತ್ಯೆ ಪ್ರಕರಣಗಳು ಹೆಚ್ಚುತ್ತಿವೆ. ಕಳೆದ ತಿಂಗಳು ಕಾನ್ಪುರದ ಚಕೇರಿಯಲ್ಲಿ 10 ವರ್ಷದ ಬಾಲಕಿ ತನ್ನ ಅಕ್ಕನೊಂದಿಗೆ ಜಗಳವಾಡಿದ ನಂತರ ರೈಲಿನ ಮುಂದೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಳು. ತನ್ನ ಅಕ್ಕನೊಂದಿಗೆ ಜಗಳವಾಡಿದ ನಂತರ 10 ವರ್ಷದ ಬಾಲಕಿ ಮನೆಯಿಂದ ಹೊರಗೆ ಓಡಿಬಂದಿದ್ದಳು. ಈ ವೇಳೆ ಅವರ ಸಂಬಂಧಿಕರು ಬಾಲಕಿಯನ್ನು ಹಿಡಿಯಲು ಯತ್ನಿಸಿದ್ದು, ಆಕೆ ಮನೆಯ ಸಮೀಪದ ರೈಲು ಹಳಿ ಮೇಲೆ ರೈಲಿನ ಮುಂದೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಳು.

ಇನ್ನಷ್ಟು ಅಪರಾಧ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 11:40 am, Mon, 24 October 22

ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?