AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Crime News: 17 ವರ್ಷದ ಬಾಲಕಿಯ ಕತ್ತು ಸೀಳಿ ಹತ್ಯೆ, ಪ್ರೇಮಿಯ ಬಂಧನ

ತಿರುವನಂತಪುರಂ ಸಮೀಪದ ವರ್ಕಲದ ವಡಸ್ಸೆರಿಕೋಣಂ ಎಂಬಲ್ಲಿ ಬುಧವಾರ ಮುಂಜಾನೆ 17 ವರ್ಷದ ಬಾಲಕಿಯೊಬ್ಬಳು ಮನೆಯ ಹೊರಗೆ ಕತ್ತು ಸೀಳಿ ರಕ್ತದ ಮಡುವಿನಲ್ಲಿ ಶವವಾಗಿ ಪತ್ತೆಯಾಗಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ.

Crime News: 17 ವರ್ಷದ ಬಾಲಕಿಯ ಕತ್ತು ಸೀಳಿ ಹತ್ಯೆ, ಪ್ರೇಮಿಯ ಬಂಧನ
Crime
TV9 Web
| Updated By: ಅಕ್ಷಯ್​ ಪಲ್ಲಮಜಲು​​|

Updated on:Dec 28, 2022 | 1:12 PM

Share

ವಡಸ್ಸೆರಿಕೋಣಂ: ತಿರುವನಂತಪುರಂ (Thiruvananthapuram) ಸಮೀಪದ ವರ್ಕಲದ ವಡಸ್ಸೆರಿಕೋಣಂ ಎಂಬಲ್ಲಿ ಬುಧವಾರ ಮುಂಜಾನೆ 17 ವರ್ಷದ ಬಾಲಕಿಯೊಬ್ಬಳು ಮನೆಯ ಹೊರಗೆ ಕತ್ತು ಸೀಳಿ ರಕ್ತದ ಮಡುವಿನಲ್ಲಿ ಶವವಾಗಿ ಪತ್ತೆಯಾಗಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ. ಘಟನೆ ನಡೆದ ಕೆಲವೇ ಗಂಟೆಗಳಲ್ಲಿ ಆರೋಪಿಯನ್ನು ಪತ್ತೆ ಮಾಡಲಾಲಗಿದೆ. ಮೃತ ಬಾಲಕಿ ಕೆಲ ದಿನಗಳಿಂದ ಪ್ರೀತಿಸುತ್ತಿದ್ದಳು ಎನ್ನಲಾದ ಆಕೆಯ ಸ್ನೇಹಿತ ಗೋಪು (20) ಎಂಬಾತನನ್ನು ವಶಕ್ಕೆ ಪಡೆಯಲಾಗಿದೆ.

ಪೊಲೀಸರ ಪ್ರಕಾರ, ಮೃತ ಬಾಲಕಿ ಸಂಗೀತಾ ಎಂದು ಗುರುತಿಸಲಾಗಿದೆ. ಈಕೆಯನ್ನು ಆರೋಪಿಗಳು ಮನೆಯಿಂದ ಹೊರಗೆ ಕರೆದೊಯ್ದು ಮಧ್ಯರಾತ್ರಿಯ ನಂತರ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ ಎಂದು ಹೇಳಲಾಗಿದೆ. ಕಿರುಚಾಟ ಕೇಳಿ ಸ್ಥಳಕ್ಕೆ ಧಾವಿಸಿದ ಆಕೆಯ ಮನೆಯವರು ಮತ್ತು ನೆರೆಹೊರೆಯವರು ಆಕೆ ಮನೆಯ ಹೊರಗಡೆ ರಕ್ತದ ಮಡುವಿನಲ್ಲಿ ಬಿದ್ದಿದ್ದನ್ನು ನೋಡಿದ್ದಾರೆ. ಮನೆಯವರು ಆಕೆಯನ್ನು ಆಸ್ಪತ್ರೆಗೆ ದಾಖಲಿಸಿದರೂ ವಿಪರೀತ ರಕ್ತ ಹೋಗಿರುವ ಕಾರಣ ಉಳಿಸಲು ಸಾಧ್ಯವಾಗಿಲ್ಲ ಎಂದು ವೈದ್ಯರು ತಿಳಿಸಿದ್ದಾರೆ. ಮೊಬೈಲ್ ಫೋನ್ ವಿವರಗಳು ಮತ್ತು ಇತರ ಸಾಂದರ್ಭಿಕ ಸಾಕ್ಷ್ಯಗಳ ಆಧಾರದ ಮೇಲೆ ಆಕೆಯನ್ನು ಪ್ರೀತಿಸುತ್ತಿದ್ದ ಗೋಪು ಎಂಬುವನನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಇದನ್ನು ಓದಿ:ಅಪರಾಧ ಸುದ್ದಿ ರೌಂಡಪ್: ರೈಲಿಗೆ ತಲೆ ಕೊಟ್ಟ ಪ್ರೇಮಿಗಳು, ಡ್ರಗ್ಸ್ ಪೆಡ್ಲರ್ ಅರೆಸ್ಟ್

ಈ ಪ್ರಕರಣದ ಬಗ್ಗೆ ಎಫ್‌ಐಆರ್ ದಾಖಲಿಸಲಾಗಿದೆ. ಇದರ ಹಿಂದೆ ಇರುವ ಆರೋಪಿಗಳ ಶೀಘ್ರದಲ್ಲೇ ಬಂಧಿಸಲಾಗುವುದು. ವಿವರವಾದ ವಿಚಾರಣೆಯ ನಂತರವೇ ನಿಖರವಾದ ಕಾರಣವನ್ನು ತಿಳಿಸಬಹುದು ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. ಇಬ್ಬರು ಪ್ರೀತಿಯಲ್ಲಿ ಬಿರುಕು ಬಂದಿರುವುದರಿಂದ ಈ ಅಪರಾಧಕ್ಕೆ ಕಾರಣವಾಗಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ ಮತ್ತು ಸದ್ಯಕ್ಕೆ ಹೆಚ್ಚಿನ ವಿವರಗಳನ್ನು ಬಹಿರಂಗಪಡಿಸಲಾಗುವುದಿಲ್ಲ ಎಂದು ಅವರು ಹೇಳಿದರು. ಆರೋಪಿ ಸಮೀಪದ ಪಳ್ಳಿಕ್ಕಲ್ ಮೂಲದವನಾಗಿದ್ದು, ಸಂಗೀತಾ ಇಲ್ಲಿನ ಸ್ಥಳೀಯ ಕಾಲೇಜಿನ ವಿದ್ಯಾರ್ಥಿನಿಯಾಗಿದ್ದಳು ಎಂದು ಹೇಳಲಾಗಿದೆ.

ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 1:12 pm, Wed, 28 December 22

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ