AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Crime News: ಎಕ್ಸಾಂ ಬರೆದು ಬಂದ ಯುವತಿಯ ಕುತ್ತಿಗೆ ಸೀಳಿದ ಭಗ್ನ ಪ್ರೇಮಿ; ಕಾಲೇಜಿನಲ್ಲೇ ಕಗ್ಗೊಲೆ

Murder News : ಅಭಿಷೇಕ್ ಹಾಗೂ ನಿತಿನಾಮೋಲ್ ಕ್ಲಾಸ್​ಮೇಟ್​ಗಳಾಗಿದ್ದು, ಆಕೆಯನ್ನು ಪ್ರೀತಿಸುತ್ತಿದ್ದ. ಆದರೆ, ಆಕೆ ಆತನನ್ನು ಪ್ರೀತಿಸಲು ಸಾಧ್ಯವಿಲ್ಲ ಎಂದಿದ್ದಳು. ಇದರಿಂದ ಅವಮಾನಗೊಂಡಿದ್ದ ಅಭಿಷೇಕ್ ಇಂದು ಪರೀಕ್ಷೆ ಮುಗಿಸಿ ಬಂದ ಆಕೆಯ ಕುತ್ತಿಗೆಯನ್ನು ಸೀಳಿ ಕೊಲೆ ಮಾಡಿದ್ದಾನೆ.

Crime News: ಎಕ್ಸಾಂ ಬರೆದು ಬಂದ ಯುವತಿಯ ಕುತ್ತಿಗೆ ಸೀಳಿದ ಭಗ್ನ ಪ್ರೇಮಿ; ಕಾಲೇಜಿನಲ್ಲೇ ಕಗ್ಗೊಲೆ
ಕೊಲೆ ನಡೆದ ಕೇರಳದ ಕಾಲೇಜು ಆವರಣ
TV9 Web
| Edited By: |

Updated on: Oct 01, 2021 | 4:42 PM

Share

ಕೊಚ್ಚಿ: ತನ್ನ ಪ್ರೀತಿಯನ್ನು ಒಪ್ಪಿಕೊಳ್ಳಲಿಲ್ಲ ಎಂಬ ಕೋಪದಲ್ಲಿ ಯುವತಿಯ ಮೇಲೆ ದ್ವೇಷ ತೀರಿಸಿಕೊಳ್ಳಲು ಕಾಯುತ್ತಿದ್ದ ಯುವಕ ಆಕೆಯ ಕತ್ತು ಸೀಳಿ ಕೊಲೆ ಮಾಡಿದ್ದಾನೆ. ಕೇರಳದ ಕೊಟ್ಟಾಯಂನಲ್ಲಿ ಈ ಘಟನೆ ನಡೆದಿದ್ದು, ಪಾಲಾದಲ್ಲಿರುವ ಸೇಂಟ್ ಥಾಮಸ್ ಕಾಲೇಜಿನ ವಿದ್ಯಾರ್ಥಿನಿಯಾಗಿದ್ದ ನಿತಿನಾಮೋಲ್ ಇಂದು ಪರೀಕ್ಷೆ ಬರೆದು ಎಕ್ಸಾಂ ಹಾಲ್​ನಿಂದ ಹೊರಬರುವಾಗ ಎದುರು ಬಂದ ಅಭಿಷೇಕ್ ಎಂಬ ಯುವಕ ಚಾಕುವಿನಿಂದ ಆಕೆಯ ಕುತ್ತಿಗೆ ಕೊಯ್ದಿದ್ದಾನೆ. ಕಾಲೇಜು ಆವರಣದಲ್ಲಿಯೇ ಈ ಘಟನೆ ನಡೆದಿದ್ದು, ರಕ್ತದ ಮಡುವಿನಲ್ಲಿ ಬಿದ್ದಿದ್ದ ನಿತಿನಾಮೋಲ್​ಳನ್ನು ಆಕೆಯ ಸ್ನೇಹಿತರು ಆಸ್ಪತ್ರೆಗೆ ಸೇರಿಸಿದ್ದಾರೆ. ಆದರೆ, ವಿಪರೀತ ರಕ್ತ ಹೋಗಿದ್ದರಿಂದ ಆಕೆ ಸಾವನ್ನಪ್ಪಿದ್ದಾಳೆ.

ಅಭಿಷೇಕ್ ಹಾಗೂ ನಿತಿನಾಮೋಲ್ ಕ್ಲಾಸ್​ಮೇಟ್​ಗಳಾಗಿದ್ದು, ಆಕೆಯನ್ನು ಪ್ರೀತಿಸುತ್ತಿದ್ದ. ಆದರೆ, ಆಕೆ ಆತನನ್ನು ಪ್ರೀತಿಸಲು ಸಾಧ್ಯವಿಲ್ಲ ಎಂದಿದ್ದಳು. ಇದರಿಂದ ಅವಮಾನಗೊಂಡಿದ್ದ ಅಭಿಷೇಕ್ ಇಂದು ಪರೀಕ್ಷೆ ಮುಗಿಸಿ ಬಂದ ಆಕೆಯ ಕುತ್ತಿಗೆಯನ್ನು ಸೀಳಿ ಕೊಲೆ ಮಾಡಿದ್ದಾನೆ. ಕೆಳಗೆ ಬಿದ್ದ ಆಕೆಯನ್ನು ಅಲ್ಲೇ ಬಿಟ್ಟು ಪರಾರಿಯಾಗಿದ್ದಾನೆ.

ಕಾಲೇಜಿನ ಪರೀಕ್ಷೆಗಳು ನಡೆಯುತ್ತಿದ್ದು, ಘಟನೆ ನಡೆದಾಗ ಕೆಲವು ವಿದ್ಯಾರ್ಥಿಗಳು ಮಾತ್ರ ಹೊರಗೆ ಇದ್ದರು. ಉಳಿದವರು ಪರೀಕ್ಷೆ ಬರೆಯುತ್ತಿದ್ದರು ಎನ್ನಲಾಗಿದೆ. ಅಭಿಷೇಕ್ ಪರೀಕ್ಷೆ ಬರೆದು ಬೇಗನೆ ಹೊರಗೆ ಹೋಗಿದ್ದ. ನಿತಿನಾಮೋಲ್ ಹೊರಗೆ ಬರುತ್ತಿದ್ದಂತೆ ಆಕೆಯನ್ನು ಕೊಲೆ ಮಾಡಿದ್ದಾನೆ.

ಸೆಕ್ಯುರಿಟಿ ಸಿಬ್ಬಂದಿ ಕೆಳಗೆ ಬಿದ್ದಿದ್ದ ನಿತಿನಾಮೋಲ್​ಳನ್ನು ಮೊದಲು ನೋಡಿದ್ದು, ಜೋರಾಗಿ ಕಿರುಚಾಡಿದ್ದಾರೆ. ಆಗ ಆಕೆಯ ಸ್ನೇಹಿತರು ಹಾಗೂ ಶಿಕ್ಷಕರು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ, ಅಷ್ಟರಲ್ಲಿ ಆಕೆ ಸಾವನ್ನಪ್ಪಿದ್ದಳು. ಅಭಿಷೇಕ್​ನನ್ನು ಪೊಲೀಸರು ಹಿಡಿದಿದ್ದು, ವಿಚಾರಣೆ ನಡೆಸುತ್ತಿದ್ದಾರೆ.

ಇದನ್ನೂ ಓದಿ: Crime News: ಹಾಡಹಗಲೇ ಕಾಲೇಜು ಯುವತಿಯ ಕುತ್ತಿಗೆ ಸೀಳಿ ಕೊಲೆ; ಪ್ರೇಮ ವೈಫಲ್ಯದ ಶಂಕೆ

Murder: ಇದು ‘ಬಾ ನಲ್ಲೆ ಮಧುಚಂದ್ರಕೆ’ ಸಿನಿಮಾ ಕತೆ!; ಸೇಡಿಗಾಗಿ ಹನಿಮೂನ್​ನಲ್ಲೇ ಹೆಂಡತಿಯನ್ನು ಕೊಂದ ಗಂಡ

Follow Us
Web contact
Web contact

TV9 Kannada

Read More
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​