AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Crime News: ಎಕ್ಸಾಂ ಬರೆದು ಬಂದ ಯುವತಿಯ ಕುತ್ತಿಗೆ ಸೀಳಿದ ಭಗ್ನ ಪ್ರೇಮಿ; ಕಾಲೇಜಿನಲ್ಲೇ ಕಗ್ಗೊಲೆ

Murder News : ಅಭಿಷೇಕ್ ಹಾಗೂ ನಿತಿನಾಮೋಲ್ ಕ್ಲಾಸ್​ಮೇಟ್​ಗಳಾಗಿದ್ದು, ಆಕೆಯನ್ನು ಪ್ರೀತಿಸುತ್ತಿದ್ದ. ಆದರೆ, ಆಕೆ ಆತನನ್ನು ಪ್ರೀತಿಸಲು ಸಾಧ್ಯವಿಲ್ಲ ಎಂದಿದ್ದಳು. ಇದರಿಂದ ಅವಮಾನಗೊಂಡಿದ್ದ ಅಭಿಷೇಕ್ ಇಂದು ಪರೀಕ್ಷೆ ಮುಗಿಸಿ ಬಂದ ಆಕೆಯ ಕುತ್ತಿಗೆಯನ್ನು ಸೀಳಿ ಕೊಲೆ ಮಾಡಿದ್ದಾನೆ.

Crime News: ಎಕ್ಸಾಂ ಬರೆದು ಬಂದ ಯುವತಿಯ ಕುತ್ತಿಗೆ ಸೀಳಿದ ಭಗ್ನ ಪ್ರೇಮಿ; ಕಾಲೇಜಿನಲ್ಲೇ ಕಗ್ಗೊಲೆ
ಕೊಲೆ ನಡೆದ ಕೇರಳದ ಕಾಲೇಜು ಆವರಣ
TV9 Web
| Edited By: |

Updated on: Oct 01, 2021 | 4:42 PM

Share

ಕೊಚ್ಚಿ: ತನ್ನ ಪ್ರೀತಿಯನ್ನು ಒಪ್ಪಿಕೊಳ್ಳಲಿಲ್ಲ ಎಂಬ ಕೋಪದಲ್ಲಿ ಯುವತಿಯ ಮೇಲೆ ದ್ವೇಷ ತೀರಿಸಿಕೊಳ್ಳಲು ಕಾಯುತ್ತಿದ್ದ ಯುವಕ ಆಕೆಯ ಕತ್ತು ಸೀಳಿ ಕೊಲೆ ಮಾಡಿದ್ದಾನೆ. ಕೇರಳದ ಕೊಟ್ಟಾಯಂನಲ್ಲಿ ಈ ಘಟನೆ ನಡೆದಿದ್ದು, ಪಾಲಾದಲ್ಲಿರುವ ಸೇಂಟ್ ಥಾಮಸ್ ಕಾಲೇಜಿನ ವಿದ್ಯಾರ್ಥಿನಿಯಾಗಿದ್ದ ನಿತಿನಾಮೋಲ್ ಇಂದು ಪರೀಕ್ಷೆ ಬರೆದು ಎಕ್ಸಾಂ ಹಾಲ್​ನಿಂದ ಹೊರಬರುವಾಗ ಎದುರು ಬಂದ ಅಭಿಷೇಕ್ ಎಂಬ ಯುವಕ ಚಾಕುವಿನಿಂದ ಆಕೆಯ ಕುತ್ತಿಗೆ ಕೊಯ್ದಿದ್ದಾನೆ. ಕಾಲೇಜು ಆವರಣದಲ್ಲಿಯೇ ಈ ಘಟನೆ ನಡೆದಿದ್ದು, ರಕ್ತದ ಮಡುವಿನಲ್ಲಿ ಬಿದ್ದಿದ್ದ ನಿತಿನಾಮೋಲ್​ಳನ್ನು ಆಕೆಯ ಸ್ನೇಹಿತರು ಆಸ್ಪತ್ರೆಗೆ ಸೇರಿಸಿದ್ದಾರೆ. ಆದರೆ, ವಿಪರೀತ ರಕ್ತ ಹೋಗಿದ್ದರಿಂದ ಆಕೆ ಸಾವನ್ನಪ್ಪಿದ್ದಾಳೆ.

ಅಭಿಷೇಕ್ ಹಾಗೂ ನಿತಿನಾಮೋಲ್ ಕ್ಲಾಸ್​ಮೇಟ್​ಗಳಾಗಿದ್ದು, ಆಕೆಯನ್ನು ಪ್ರೀತಿಸುತ್ತಿದ್ದ. ಆದರೆ, ಆಕೆ ಆತನನ್ನು ಪ್ರೀತಿಸಲು ಸಾಧ್ಯವಿಲ್ಲ ಎಂದಿದ್ದಳು. ಇದರಿಂದ ಅವಮಾನಗೊಂಡಿದ್ದ ಅಭಿಷೇಕ್ ಇಂದು ಪರೀಕ್ಷೆ ಮುಗಿಸಿ ಬಂದ ಆಕೆಯ ಕುತ್ತಿಗೆಯನ್ನು ಸೀಳಿ ಕೊಲೆ ಮಾಡಿದ್ದಾನೆ. ಕೆಳಗೆ ಬಿದ್ದ ಆಕೆಯನ್ನು ಅಲ್ಲೇ ಬಿಟ್ಟು ಪರಾರಿಯಾಗಿದ್ದಾನೆ.

ಕಾಲೇಜಿನ ಪರೀಕ್ಷೆಗಳು ನಡೆಯುತ್ತಿದ್ದು, ಘಟನೆ ನಡೆದಾಗ ಕೆಲವು ವಿದ್ಯಾರ್ಥಿಗಳು ಮಾತ್ರ ಹೊರಗೆ ಇದ್ದರು. ಉಳಿದವರು ಪರೀಕ್ಷೆ ಬರೆಯುತ್ತಿದ್ದರು ಎನ್ನಲಾಗಿದೆ. ಅಭಿಷೇಕ್ ಪರೀಕ್ಷೆ ಬರೆದು ಬೇಗನೆ ಹೊರಗೆ ಹೋಗಿದ್ದ. ನಿತಿನಾಮೋಲ್ ಹೊರಗೆ ಬರುತ್ತಿದ್ದಂತೆ ಆಕೆಯನ್ನು ಕೊಲೆ ಮಾಡಿದ್ದಾನೆ.

ಸೆಕ್ಯುರಿಟಿ ಸಿಬ್ಬಂದಿ ಕೆಳಗೆ ಬಿದ್ದಿದ್ದ ನಿತಿನಾಮೋಲ್​ಳನ್ನು ಮೊದಲು ನೋಡಿದ್ದು, ಜೋರಾಗಿ ಕಿರುಚಾಡಿದ್ದಾರೆ. ಆಗ ಆಕೆಯ ಸ್ನೇಹಿತರು ಹಾಗೂ ಶಿಕ್ಷಕರು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ, ಅಷ್ಟರಲ್ಲಿ ಆಕೆ ಸಾವನ್ನಪ್ಪಿದ್ದಳು. ಅಭಿಷೇಕ್​ನನ್ನು ಪೊಲೀಸರು ಹಿಡಿದಿದ್ದು, ವಿಚಾರಣೆ ನಡೆಸುತ್ತಿದ್ದಾರೆ.

ಇದನ್ನೂ ಓದಿ: Crime News: ಹಾಡಹಗಲೇ ಕಾಲೇಜು ಯುವತಿಯ ಕುತ್ತಿಗೆ ಸೀಳಿ ಕೊಲೆ; ಪ್ರೇಮ ವೈಫಲ್ಯದ ಶಂಕೆ

Murder: ಇದು ‘ಬಾ ನಲ್ಲೆ ಮಧುಚಂದ್ರಕೆ’ ಸಿನಿಮಾ ಕತೆ!; ಸೇಡಿಗಾಗಿ ಹನಿಮೂನ್​ನಲ್ಲೇ ಹೆಂಡತಿಯನ್ನು ಕೊಂದ ಗಂಡ

‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ