AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Crime News: ಮನೆ ಮುಂದೆಯೇ ಯುವಕನಿಗೆ ಚಾಕುವಿನಿಂದ ಇರಿದು ಹತ್ಯೆ; ಸಿಸಿಟಿವಿಯಲ್ಲಿ ಸೆರೆಯಾಯ್ತು ಭೀಕರ ದೃಶ್ಯ

Murder: ಮೃತ ವ್ಯಕ್ತಿ ಶಾರುಖ್ ಮೇಲೆ ಹಲ್ಲೆ ಮಾಡಿದ ಆರೋಪಿಗಳಲ್ಲಿ ಒಬ್ಬನ ತಂಗಿಯ ಜೊತೆ ಸಂಬಂಧ ಹೊಂದಿದ್ದ ಎಂದು ಪೊಲೀಸರು ತಿಳಿಸಿದ್ದಾರೆ. ಅದೇ ಕಾರಣಕ್ಕೆ ಆತನಿಗೆ ಚಾಕುವಿನಿಂದ ಇರಿದು ಹತ್ಯೆ ಮಾಡಲಾಗಿದೆ.

Crime News: ಮನೆ ಮುಂದೆಯೇ ಯುವಕನಿಗೆ ಚಾಕುವಿನಿಂದ ಇರಿದು ಹತ್ಯೆ; ಸಿಸಿಟಿವಿಯಲ್ಲಿ ಸೆರೆಯಾಯ್ತು ಭೀಕರ ದೃಶ್ಯ
ಯುವಕನಿಗೆ ಥಳಿಸುತ್ತಿರುವ ಗೆಳೆಯರು
TV9 Web
| Edited By: |

Updated on: Dec 30, 2021 | 6:36 PM

Share

ನವದೆಹಲಿ: ದೆಹಲಿಯ ಶಾಹದಾರ ಜಿಲ್ಲೆಯಲ್ಲಿ 24 ವರ್ಷದ ವ್ಯಕ್ತಿಯೊಬ್ಬನನ್ನು ಆತನ ಮನೆಯ ಬಳಿಯೇ ಮೂವರು ವ್ಯಕ್ತಿಗಳು ಇರಿದು ಕೊಂದಿದ್ದಾರೆ. ವ್ಯಕ್ತಿಯನ್ನು ಥಳಿಸಿ, ಚಾಕುವಿನಿಂದ ಇರಿದು ಕೊಲೆ ಮಾಡಿರುವ ವಿಡಿಯೋ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಆ ದೃಶ್ಯಾವಳಿಯಲ್ಲಿ ಕಂಡುಬಂದ ಮೂವರಲ್ಲಿ ಇಬ್ಬರನ್ನು ಈಗಾಗಲೇ ಪೊಲೀಸರು ಬಂಧಿಸಿದ್ದಾರೆ. ಆ ದುಷ್ಕರ್ಮಿಗಳು ಕುರ್ಚಿಯಿಂದ ಯುವಕನ ತಲೆಗೆ ಹೊಡೆದಿರುವುದನ್ನು ವಿಡಿಯೋದಲ್ಲಿ ನೋಡಬಹುದು. ನಂತರ ಚಾಕುವಿನಿಂದ ಆತನ ಹೊಟ್ಟೆಗೆ ಇರಿದು, ಕೊಲೆ ಮಾಡಿದ್ದಾರೆ.

ಮೃತ ವ್ಯಕ್ತಿ ಶಾರುಖ್ ಮೇಲೆ ಹಲ್ಲೆ ಮಾಡಿದ ಆರೋಪಿಗಳಲ್ಲಿ ಒಬ್ಬನ ತಂಗಿಯ ಜೊತೆ ಸಂಬಂಧ ಹೊಂದಿದ್ದ ಎಂದು ಪೊಲೀಸರು ತಿಳಿಸಿದ್ದಾರೆ. ಆರೋಪಿ ತನ್ನ ತಂಗಿಯ ಜೊತೆಗೆ ಸಂಬಂಧ ಇಟ್ಟುಕೊಳ್ಳದಂತೆ ಶಾರುಖ್​ಗೆ ಎಚ್ಚರಿಕೆ ನೀಡಿದ್ದ. ಆದರೂ ಅವರಿಬ್ಬರ ಸಂಬಂಧ ಮುಂದುವರೆದಿತ್ತು. ಇದರಿಂದ ಕೋಪಗೊಂಡ ಆರೋಪಿ ತನ್ನ ಇಬ್ಬರು ಗೆಳೆಯರೊಂದಿಗೆ ಬುಧವಾರ ಸಂಜೆ ಶಾರುಖ್‌ನನ್ನು ರಸ್ತೆಯಲ್ಲಿ ಕೊಂದಿದ್ದ ಎನ್ನಲಾಗಿದೆ.

ರಸ್ತೆಯಲ್ಲಿ ರಕ್ತಸ್ರಾವವಾಗಿ ಬಿದ್ದಿದ್ದ ಶಾರುಖ್​ನನ್ನು ನೋಡಿದ ಸ್ಥಳೀಯರು ಪೊಲೀಸರಿಗೆ ಈ ಬಗ್ಗೆ ಮಾಹಿತಿ ನೀಡಿದ್ದರು. ಆದರೆ, ಪೊಲೀಸರು ಆ ಸ್ಥಳಕ್ಕೆ ಹೋಗುವಷ್ಟರಲ್ಲಿ ಶಾರುಖ್​ನನ್ನು ಆಸ್ಪತ್ರೆಗೆ ಸ್ಥಳಾಂತರಿಸಲಾಗಿತ್ತು. ನಂತರ ಆತನಿಗೆ ಚಿಕಿತ್ಸೆ ನೀಡಿದರೂ ಗುಣಮುಖರಾಗದೆ ಸಾವನ್ನಪ್ಪಿದ್ದ.

ತನಿಖೆಯ ಸಮಯದಲ್ಲಿ, ಮತ್ತು ಪ್ರದೇಶದಲ್ಲಿನ ಸಿಸಿಟಿವಿ ದೃಶ್ಯಗಳನ್ನು ವಿಶ್ಲೇಷಿಸಿದ ಪೊಲೀಸರು ಆರೋಪಿಗಳನ್ನು ಸೀಮಾಪುರಿ ನಿವಾಸಿಗಳಾದ ಜುಬೇರ್, ಜಾಫರ್ ಮತ್ತು ಆದಿತ್ಯ ಎಂದು ಗುರುತಿಸಿದ್ದಾರೆ. ಅವರನ್ನ ಪತ್ತೆಹಚ್ಚಲು ಪೊಲೀಸ್ ತಂಡಗಳನ್ನು ರಚಿಸಲಾಗಿತ್ತು. ಕೊನೆಗೂ ಇಬ್ಬರು ಆರೋಪಿಗಳಾದ ಆದಿತ್ಯ ಮತ್ತು ಜುಬೇರ್ ಅವರನ್ನು ಬಂಧಿಸಲಾಯಿತು. ಮೂರನೇ ಆರೋಪಿ ತಲೆಮರೆಸಿಕೊಂಡಿದ್ದು, ಆತನ ಪತ್ತೆಗೆ ಪ್ರಯತ್ನ ನಡೆಸಲಾಗುತ್ತಿದೆ.

ಇದನ್ನೂ ಓದಿ: Crime News: ಕೇವಲ 400 ರೂ.ಗಾಗಿ ಪ್ರೇಯಸಿಯ ಮೂಗನ್ನೇ ಕತ್ತರಿಸಿದ ಮಹರಾಯ!

Crime News: ಗಂಡ ಬ್ಲೌಸ್ ಹೊಲಿದಿದ್ದು ಸರಿಯಾಗಿಲ್ಲವೆಂದು ಹೆಂಡತಿ ಆತ್ಮಹತ್ಯೆ!

Follow Us
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ