AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Crime News: ಉತ್ತರ ಪ್ರದೇಶದ ರಸ್ತೆ ಬದಿ ನಿಂತಿದ್ದ ಬಸ್​ಗೆ ಟ್ರಕ್ ಡಿಕ್ಕಿ; 4 ಜನ ಸಾವು, ಹಲವರಿಗೆ ಗಾಯ

ಬಸ್ ನೇಪಾಳದಿಂದ ಗೋವಾಕ್ಕೆ ಪ್ರಯಾಣಿಸುತ್ತಿತ್ತು. ಈ ಘಟನೆ ನಡೆದಾಗ ಪಂಕ್ಚರ್ ಆದ ಟೈರ್ ಬದಲಾಯಿಸಲು ಬಸ್​ ಅನ್ನು ರಸ್ತೆ ಬದಿಯಲ್ಲಿ ನಿಲ್ಲಿಸಲಾಗಿತ್ತು. ಬಸ್​ಗೆ ಟ್ರಕ್ ಡಿಕ್ಕಿ ಹೊಡೆದಿದ್ದರಿಂದ ಇದುವರೆಗೆ ಸುಮಾರು 14 ಮಂದಿ ಗಾಯಗೊಂಡಿದ್ದಾರೆ.

Crime News: ಉತ್ತರ ಪ್ರದೇಶದ ರಸ್ತೆ ಬದಿ ನಿಂತಿದ್ದ ಬಸ್​ಗೆ ಟ್ರಕ್ ಡಿಕ್ಕಿ; 4 ಜನ ಸಾವು, ಹಲವರಿಗೆ ಗಾಯ
ಉತ್ತರ ಪ್ರದೇಶದಲ್ಲಿ ಟ್ರಕ್ ಅಪಘಾತ
TV9 Web
| Edited By: |

Updated on: Sep 03, 2022 | 10:55 AM

Share

ಬಾರಾಬಂಕಿ: ಉತ್ತರ ಪ್ರದೇಶದ ಬಾರಾಬಂಕಿ (Barabanki) ಜಿಲ್ಲೆಯಲ್ಲಿ ಇಂದು ಮುಂಜಾನೆ 3.30ರ ಸುಮಾರಿಗೆ ರಸ್ತೆ ಬದಿ ನಿಂತಿದ್ದ ಬಸ್​ಗೆ ಟ್ರಕ್ ಡಿಕ್ಕಿ ಹೊಡೆದ ಪರಿಣಾಮ ಭೀಕರ ಅಪಘಾತ (Accident) ಸಂಭವಿಸಿದೆ. ಈ ಅಪಘಾತದಲ್ಲಿ ನಾಲ್ವರು ಮೃತಪಟ್ಟಿದ್ದು, ಹಲವರಿಗೆ ಗಾಯಗಳಾಗಿವೆ. ಬಾರಾಬಂಕಿ ಜಿಲ್ಲೆಯ ರಾಮನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ವೇಗವಾಗಿ ಬಂದ ಟ್ರಕ್ ರಸ್ತೆಯಲ್ಲಿ ನಿಂತಿದ್ದ ಡಬಲ್ ಡೆಕ್ಕರ್ ಬಸ್‌ಗೆ ಹಿಂದಿನಿಂದ ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಸಾವನ್ನಪ್ಪಿರುವ ದಾರುಣ ಘಟನೆ ನಡೆದಿದೆ ಎಂದು ಸುದ್ದಿ ಸಂಸ್ಥೆ ಎಎನ್‌ಐ ವರದಿ ಮಾಡಿದೆ.

ಆ ಬಸ್ ನೇಪಾಳದಿಂದ ಗೋವಾಕ್ಕೆ ಪ್ರಯಾಣಿಸುತ್ತಿತ್ತು. ಈ ಘಟನೆ ನಡೆದಾಗ ಪಂಕ್ಚರ್ ಆದ ಟೈರ್ ಬದಲಾಯಿಸಲು ಬಸ್​ ಅನ್ನು ರಸ್ತೆ ಬದಿಯಲ್ಲಿ ನಿಲ್ಲಿಸಲಾಗಿತ್ತು. ಬಸ್​ಗೆ ಟ್ರಕ್ ಡಿಕ್ಕಿ ಹೊಡೆದಿದ್ದರಿಂದ ಇದುವರೆಗೆ ಸುಮಾರು 14 ಮಂದಿ ಗಾಯಗೊಂಡಿದ್ದಾರೆ.

ಇದನ್ನೂ ಓದಿ: ಮಾಜಿ ಡಿಸಿಎಂ ಲಕ್ಷ್ಮಣ್ ಸವದಿ ಕಾರು ಅಪಘಾತ: ಅದೃಷ್ಟವಶಾತ್ ಪ್ರಾಣಾಪಾಯದಿಂದ ಸವದಿ ಪಾರು

ಬಾರಾಬಂಕಿಯ ಹೆಚ್ಚುವರಿ ಎಸ್‌ಪಿ ಪ್ರಕಾರ, ಗಾಯಗೊಂಡ ಇಬ್ಬರನ್ನು ಟ್ರಾಮಾ ಸೆಂಟರ್‌ಗೆ ದಾಖಲಿಸಲಾಗಿದೆ. ಈ ವರದಿಯ ಪ್ರಕಾರ, ಬಸ್‌ನಲ್ಲಿ ಸುಮಾರು 60 ಪ್ರಯಾಣಿಕರು ಗೋವಾಗೆ ಪ್ರಯಾಣಿಸುತ್ತಿದ್ದರು. ಸದ್ಯಕ್ಕೆ ಪ್ರಯಾಣಿಕರನ್ನು ನೇಪಾಳಕ್ಕೆ ವಾಪಾಸ್ ಕಳುಹಿಸಲು ವ್ಯವಸ್ಥೆ ಮಾಡಲಾಗುತ್ತಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಚಿತ್ರದುರ್ಗ ಬಸ್ ದುರಂತದ ಬಳಿಕವೂ ಎಚ್ಚೆತ್ತುಕೊಳ್ಳದ RTO ಅಧಿಕಾರಿಗಳು
ಚಿತ್ರದುರ್ಗ ಬಸ್ ದುರಂತದ ಬಳಿಕವೂ ಎಚ್ಚೆತ್ತುಕೊಳ್ಳದ RTO ಅಧಿಕಾರಿಗಳು
ಹೊಸ ವರ್ಷದ ಕೊಡುಗೆ: ನೀವು ಬೆಳಗ್ಗೆ ಹಲ್ಲು ಉಜ್ಜೋ ಮುಂಚೆಯೇ ಬಾರ್ ಓಪನ್!
ಹೊಸ ವರ್ಷದ ಕೊಡುಗೆ: ನೀವು ಬೆಳಗ್ಗೆ ಹಲ್ಲು ಉಜ್ಜೋ ಮುಂಚೆಯೇ ಬಾರ್ ಓಪನ್!
ಚಿತ್ರರಂಗಕ್ಕೆ ಬಂದಿದ್ದು ಗಲಾಟೆ ಮಾಡೋಕಲ್ಲ, ನಟಿಸೋಕೆ; ಸುದೀಪ್
ಚಿತ್ರರಂಗಕ್ಕೆ ಬಂದಿದ್ದು ಗಲಾಟೆ ಮಾಡೋಕಲ್ಲ, ನಟಿಸೋಕೆ; ಸುದೀಪ್
ತಮಿಳು ನಟ ನವೀನ್ ಚಂದ್ರಗೆ ಅಷ್ಟು ಸ್ಪಷ್ಟ ಕನ್ನಡ ಹೇಗೆ ಬರುತ್ತೆ?
ತಮಿಳು ನಟ ನವೀನ್ ಚಂದ್ರಗೆ ಅಷ್ಟು ಸ್ಪಷ್ಟ ಕನ್ನಡ ಹೇಗೆ ಬರುತ್ತೆ?
ವಿಶ್ವ ಕ್ರಿಕೆಟ್​ನಲ್ಲಿ ಈ ಸಾಧನೆ ಮಾಡಿದ ಏಕೈಕ ಮಹಿಳಾ ಆಟಗಾರ್ತಿ ದೀಪ್ತಿ
ವಿಶ್ವ ಕ್ರಿಕೆಟ್​ನಲ್ಲಿ ಈ ಸಾಧನೆ ಮಾಡಿದ ಏಕೈಕ ಮಹಿಳಾ ಆಟಗಾರ್ತಿ ದೀಪ್ತಿ
ಕರ್ನಾಟಕದಲ್ಲಿ ಸಿಎಂ ಬದಲಾವಣೆ ಬಗ್ಗೆ ಕೋಡಿಶ್ರೀ ಸ್ಫೋಟಕ ಭವಿಷ್ಯ
ಕರ್ನಾಟಕದಲ್ಲಿ ಸಿಎಂ ಬದಲಾವಣೆ ಬಗ್ಗೆ ಕೋಡಿಶ್ರೀ ಸ್ಫೋಟಕ ಭವಿಷ್ಯ
ನಾನು ಸಿನಿಮಾ ಡೈಲಾಗ್ ಮೂಲಕ ಟಾಂಟ್ ಕೊಡಲ್ಲ ಎಂದ ಸುದೀಪ್
ನಾನು ಸಿನಿಮಾ ಡೈಲಾಗ್ ಮೂಲಕ ಟಾಂಟ್ ಕೊಡಲ್ಲ ಎಂದ ಸುದೀಪ್
ಅವರೇ ಮೇಳದಲ್ಲಿ ಡಿಕೆಶಿಗೆ ಮಹಿಳೆ ಕೇಳಿದ ಪ್ರಶ್ನೆಗೆ ಕಕ್ಕಾಬಿಕ್ಕಿಯಾದ ಜನ
ಅವರೇ ಮೇಳದಲ್ಲಿ ಡಿಕೆಶಿಗೆ ಮಹಿಳೆ ಕೇಳಿದ ಪ್ರಶ್ನೆಗೆ ಕಕ್ಕಾಬಿಕ್ಕಿಯಾದ ಜನ
ಮುಸ್ಲಿಂ ಕುಟುಂಬಗಳಿಗೆ ಬೇರೆ ಜಾಗ ನೀಡುತ್ತೇವೆ
ಮುಸ್ಲಿಂ ಕುಟುಂಬಗಳಿಗೆ ಬೇರೆ ಜಾಗ ನೀಡುತ್ತೇವೆ
‘ಮಾರ್ಕ್’ ಮೊದಲ ದಿನದ ಕಲೆಕ್ಷನ್ 15 ಕೋಟಿ ನಾ? ಸುದೀಪ್ ಕಡೆಯಿಂದ ಸ್ಪಷ್ಟನೆ
‘ಮಾರ್ಕ್’ ಮೊದಲ ದಿನದ ಕಲೆಕ್ಷನ್ 15 ಕೋಟಿ ನಾ? ಸುದೀಪ್ ಕಡೆಯಿಂದ ಸ್ಪಷ್ಟನೆ