AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಟವಾಡಿಕೊಂಡಿದ್ದ 5 ವರ್ಷದ ಬಾಲಕಿ ಮೇಲೆ ಅತ್ಯಾಚಾರವೆಸಗಿ ಕೊಂದು, ಶವ ಬಚ್ಚಿಟ್ಟ ಕಾಮುಕರು

Rape and Murder: ಮಧ್ಯಪ್ರದೇಶದ ಹೋಶಂಗಾಬಾದ್ ಜಿಲ್ಲೆಯಲ್ಲಿ ಐದು ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ನಡೆಸಿ, ನಿರ್ದಯವಾಗಿ ಕತ್ತು ಹಿಸುಕಿ ಕೊಲೆ ಮಾಡಲಾಗಿದೆ. ಆ ಶವವನ್ನು ಮನೆಯ ಚಾವಣಿಯ ಮೇಲೆ ಅಡಗಿಸಿ ಇಡಲಾಗಿದೆ

ಆಟವಾಡಿಕೊಂಡಿದ್ದ 5 ವರ್ಷದ ಬಾಲಕಿ ಮೇಲೆ ಅತ್ಯಾಚಾರವೆಸಗಿ ಕೊಂದು, ಶವ ಬಚ್ಚಿಟ್ಟ ಕಾಮುಕರು
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on:Dec 28, 2021 | 8:40 PM

Share

ಭೂಪಾಲ್: ಕಾಮಕ್ಕೆ ಕಣ್ಣಿಲ್ಲ ಎಂಬುದು ಸಾರ್ವಕಾಲಿಕ ಸತ್ಯ. ಮನೆಯ ತುಂಬ ಆಟವಾಡಿಕೊಂಡು ಇರುತ್ತಿದ್ದ 5 ವರ್ಷದ ಬಾಲಕಿಯ ಮೇಲೆ ಆಕೆಯ ಮನೆಯಲ್ಲೇ ಅಮಾನುಷವಾಗಿ ಅತ್ಯಾಚಾರ ನಡೆಸಲಾಗಿದೆ. ಮಧ್ಯಪ್ರದೇಶದ ಹೋಶಂಗಾಬಾದ್ ಜಿಲ್ಲೆಯಲ್ಲಿ ಐದು ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ನಡೆಸಿ, ನಿರ್ದಯವಾಗಿ ಕತ್ತು ಹಿಸುಕಿ ಕೊಲೆ ಮಾಡಲಾಗಿದೆ. ಅಲ್ಲದೆ, ಆ ಬಾಲಕಿಯ ಶವವನ್ನು ಮನೆಯ ಚಾವಣಿಯ ಮೇಲೆ ಅಡಗಿಸಿ ಇಡಲಾಗಿದೆ.

ಹೋಶಂಗಾಬಾದ್​ ಜಿಲ್ಲಾ ಕೇಂದ್ರದಿಂದ ಸುಮಾರು 50 ಕಿ.ಮೀ ದೂರದಲ್ಲಿರುವ ಸೊಹಾಗ್‌ಪುರ ಪ್ರದೇಶದಲ್ಲಿರುವ ಬಾಲಕಿಯ ಮನೆಯ ಚಾವಣಿಯ ಮೇಲೆ ಬಟ್ಟೆಯಲ್ಲಿ ಸುತ್ತಿದ ಸ್ಥಿತಿಯಲ್ಲಿ ಬಾಲಕಿಯ ಶವ ಪತ್ತೆಯಾಗಿದೆ ಎಂದು ಸೊಹಾಗ್‌ಪುರ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ವಿಕ್ರಮ್ ರಜಾಕ್ ತಿಳಿಸಿದ್ದಾರೆ.

ಭಾನುವಾರ ರಾತ್ರಿ ಆ ಬಾಲಕಿಯ ಶವದ ಮರಣೋತ್ತರ ಪರೀಕ್ಷೆ ನಡೆಸಲಾಗಿದ್ದು, ಆಕೆಯ ಮೇಲೆ ಅತ್ಯಾಚಾರ ನಡೆಸಿರುವುದು ದೃಢಪಟ್ಟಿದೆ. ಅತ್ಯಾಚಾರ ನಡೆಸಿದ ನಂತರ ಆಕೆಯ ಕತ್ತು ಹಿಸುಕಿ ಸಾಯಿಸಲಾಗಿದೆ ಎಂದು ವರದಿಯಲ್ಲಿ ದೃಢಪಟ್ಟಿದೆ.

ಸಂತ್ರಸ್ತೆಯ ನೆರೆಹೊರೆಯಲ್ಲಿ ವಾಸಿಸುವ ವ್ಯಕ್ತಿಗಳನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಆದರೆ, ಈ ಅತ್ಯಾಚಾರ ನಡೆಸಿ, ಕೊಲೆ ಮಾಡಿದ ಕಾಮುಕರು ಯಾರೆಂಬ ಬಗ್ಗೆ ಇನ್ನೂ ಮಾಹಿತಿ ಲಭ್ಯವಾಗಿಲ್ಲ. 5 ವರ್ಷದ ಬಾಲಕಿಯ ಮೇಲೆ ನಡೆದ ಈ ಭೀಕರ ಕೃತ್ಯಕ್ಕೆ ಇಡೀ ಮಧ್ಯಪ್ರದೇಶವೇ ಆಘಾತಗೊಂಡಿದೆ.

ಶನಿವಾರ ಮಧ್ಯಾಹ್ನ 3 ಗಂಟೆ ಸುಮಾರಿಗೆ ಆ 5 ವರ್ಷದ ಬಾಲಕಿ ನಾಪತ್ತೆಯಾಗಿದ್ದಳು. ಆಕೆಯ ಕುಟುಂಬಸ್ಥರು ಆಕೆಗಾಗಿ ಹುಡುಕಾಟ ನಡೆಸಿದ್ದರೂ ಆಕೆಯ ಸುಳಿವು ಸಿಕ್ಕಿರಲಿಲ್ಲ. ಆಕೆಯು ತಮ್ಮ ಊರಿನಲ್ಲೆಲ್ಲೂ ಪತ್ತೆಯಾಗದ ಹಿನ್ನೆಲೆಯಲ್ಲಿ ಅವರು ಪೊಲೀಸರಿಗೆ ದೂರು ನೀಡಿದ್ದರು. ನಂತರ ಕುಟುಂಬದ ಸದಸ್ಯರು ಅವರ ಮನೆಯ ಮೇಲ್ಛಾವಣಿಯನ್ನು ಪರಿಶೀಲಿಸಿದಾಗ ಅಲ್ಲಿ ಬಟ್ಟೆಯಲ್ಲಿ ಸುತ್ತಿಟ್ಟಿದ್ದ ಆ ಬಾಲಕಿಯ ಮೃತದೇಹ ಪತ್ತೆಯಾಗಿದೆ ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ. ಪೊಲೀಸರು ಅತ್ಯಾಚಾರ ನಡೆಸಿ ಕೊಲೆ ಮಾಡಿದವರಿಗಾಗಿ ಹುಡುಕಾಟ ನಡೆಸಿದ್ದಾರೆ.

ಇದನ್ನೂ ಓದಿ: Crime News: ಎಲೆಕ್ಟ್ರಾನಿಕ್ ಸಿಟಿಯಲ್ಲಿ ಮಹಿಳೆ ಬರ್ಬರ ಹತ್ಯೆ; ಕೊಲೆಯ ದೃಶ್ಯ ಮೊಬೈಲ್​ನಲ್ಲಿ ಸೆರೆ

Crime News: ಮಗನ ಹುಟ್ಟುಹಬ್ಬ ಆಚರಿಸುವಾಗ ಆಕಸ್ಮಿಕವಾಗಿ ಗುಂಡು ಹಾರಿ ತಾಯಿ ಸಾವು

Published On - 8:39 pm, Tue, 28 December 21

Follow Us
‘ಆ ಸಿನಿಮಾ ಬಳಿಕ ಮಹಿಳಾ ಫ್ಯಾನ್ಸ್ ಹೆಚ್ಚಾಗಿದ್ದಾರೆ’; ವಿನೋದ್ ರಾಜ್
‘ಆ ಸಿನಿಮಾ ಬಳಿಕ ಮಹಿಳಾ ಫ್ಯಾನ್ಸ್ ಹೆಚ್ಚಾಗಿದ್ದಾರೆ’; ವಿನೋದ್ ರಾಜ್
ದಿನ ಭವಿಷ್ಯ: ಶನಿವಾರ ಈ ಮೂರು ದೇವರ ಆರಾಧನೆಯಿಂದ ಸಿಗಲಿದೆ ಸರ್ವ ಸಿದ್ಧಿ
ದಿನ ಭವಿಷ್ಯ: ಶನಿವಾರ ಈ ಮೂರು ದೇವರ ಆರಾಧನೆಯಿಂದ ಸಿಗಲಿದೆ ಸರ್ವ ಸಿದ್ಧಿ
ಅಡವಿಟ್ಟ ಚಿನ್ನ ಬಿಡಿಸಿಕೊಳ್ಳಲು ಅಧ್ಯಾತ್ಮದಲ್ಲಿದೆ ಐಡಿಯಾ!
ಅಡವಿಟ್ಟ ಚಿನ್ನ ಬಿಡಿಸಿಕೊಳ್ಳಲು ಅಧ್ಯಾತ್ಮದಲ್ಲಿದೆ ಐಡಿಯಾ!
ಒಮ್ಮೆಯೂ ಅಯೋಧ್ಯೆಗೆ ಹೋಗದವರು ರಾಮಭಕ್ತಿಯ ನಾಟಕವಾಡುತ್ತಿದ್ದಾರೆ; ಸಿಎಂ ಯೋಗಿ
ಒಮ್ಮೆಯೂ ಅಯೋಧ್ಯೆಗೆ ಹೋಗದವರು ರಾಮಭಕ್ತಿಯ ನಾಟಕವಾಡುತ್ತಿದ್ದಾರೆ; ಸಿಎಂ ಯೋಗಿ
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?