AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Crime News: ಸಂಕ್ರಾಂತಿ ಹಬ್ಬದಂದೇ ಕರ್ನಾಟಕದ ವಿವಿಧೆಡೆ ಸಾಲು ಸಾಲು ಅಪಘಾತಗಳು

ರಾಜ್ಯದೆಲ್ಲೆಡೆ ಸಂಕ್ರಾಂತಿ ಹಬ್ಬದ ಸಂಭ್ರಮ. ಆದರೆ ಈ ದಿನದಂದೇ ಕರ್ನಾಟಕದ ವಿವಿಧೆಡೆ ಸಾಲು ಸಾಲು ಅಪಘಾತಗಳು ಸಂಭವಿಸಿವೆ. ಚಿಕ್ಕಬಳ್ಳಾಫುರ ಜಿಲ್ಲೆಯ ಚಿಂತಾಮಣಿ ತಾಲೂಕಿನ ಪೆರಮಾಚನಹಳ್ಳಿ ಗ್ರಾಮದ ಬಳಿ ಕೆಎಸ್​ಆರ್​ಟಿಸಿ ಬಸ್ ಹಾಗೂ ಬೈಕ್​ ಮಧ್ಯೆ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಬೈಕ್​ನಲ್ಲಿದ್ದ ಇಬ್ಬರು ಸವಾರರು ಸ್ಥಳದಲ್ಲಿ ಸಾವನ್ನಪ್ಪಿರುವಂತಹ ಘಟನೆ ನಡೆದಿದೆ.

Crime News: ಸಂಕ್ರಾಂತಿ ಹಬ್ಬದಂದೇ ಕರ್ನಾಟಕದ ವಿವಿಧೆಡೆ ಸಾಲು ಸಾಲು ಅಪಘಾತಗಳು
ಸರ್ಕಾರಿ ಬಸ್​ಗೆ ಬೈಕ್​ ಡಿಕ್ಕಿ
ಭೀಮಪ್ಪ ಪಾಟೀಲ್​, ಚಿಕ್ಕಬಳ್ಳಾಪುರ
| Edited By: |

Updated on: Jan 15, 2024 | 4:33 PM

Share

ಚಿಕ್ಕಬಳ್ಳಾಫುರ, ಜನವರಿ 15: ರಾಜ್ಯದೆಲ್ಲೆಡೆ ಸಂಕ್ರಾಂತಿ ಹಬ್ಬದ ಸಂಭ್ರಮ. ಆದರೆ ಈ ದಿನದಂದೇ ಕರ್ನಾಟಕದ ವಿವಿಧೆಡೆ ಸಾಲು ಸಾಲು ಅಪಘಾತಗಳು (accidents) ಸಂಭವಿಸಿವೆ. ಕೆಎಸ್​ಆರ್​ಟಿಸಿ ಬಸ್ ಹಾಗೂ ಬೈಕ್​ ಮಧ್ಯೆ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಬೈಕ್​ನಲ್ಲಿದ್ದ ಇಬ್ಬರು ಸವಾರರು ಸ್ಥಳದಲ್ಲಿ ಸಾವನ್ನಪ್ಪಿರುವಂತಹ ಘಟನೆ ಜಿಲ್ಲೆಯ ಚಿಂತಾಮಣಿ ತಾಲೂಕಿನ ಪೆರಮಾಚನಹಳ್ಳಿ ಗ್ರಾಮದ ಬಳಿ ನಡೆದಿದೆ. ಶಂಕರ್ (28), ಶಂಕರಮ್ಮ ಮೃತರು. ಚಿಂತಾಮಣಿ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿ ಪ್ರಕರಣ ದಾಖಲಾಗಿದೆ.

ಜಿಲ್ಲೆಯ ಚಿಂತಾಮಣಿ ತಾಲೂಕಿನ ಮಾಡಿಕೆರೆ ಕ್ರಾಸ್​ ಬಳಿ ಕಾರು ಪಲ್ಟಿಯಾಗಿ ಸ್ಥಳದಲ್ಲೇ ಓರ್ವ ಸಾವನ್ನಪ್ಪಿದ್ದಾರೆ. ಕೋಲಾರ ಜಿಲ್ಲೆಯ ಶ್ರೀನಿವಾಸಪುರ ಮೂಲದ ಚಿರಾಗ್(26) ಮೃತ ವ್ಯಕ್ತಿ. ಕಾರು ಚಾಲಕ ಪ್ರವೀಣ್​ಗೆ ಗಂಭೀರ ಗಾಯ, ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಚಿಂತಾಮಣಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

ರಸ್ತೆ ದಾಟುವ ವೇಳೆ ಲಾರಿ ಹರಿದು ಬಾಲಕಿ ಸಾವು

ವಿಜಯನಗರ: ರಸ್ತೆ ದಾಟುವ ವೇಳೆ ಲಾರಿ ಹರಿದು ಬಾಲಕಿ ಸಾವನ್ನಪ್ಪಿರುವಂತಹ ಘಟನೆ ವಿಜಯನಗರದ ಕೂಡ್ಲಿಗಿ ತಾಲೂಕಿನ ಕೆ. ಅಯ್ಯನಹಳ್ಳಿ‌ ಗ್ರಾಮದಲ್ಲಿ ನಡೆದಿದೆ. ವರ್ಷಣಿ (04) ಮೃತ ಬಾಲಕಿ. ಲಾರಿ ಚಾಲಕನ ಅಜಾಗರೂಕತೆಯಿಂದ ಬಾಲಕಿ ಮೇಲೆ ಲಾರಿ ಹರಿದಿದೆ.

ಇದನ್ನೂ ಓದಿ: ಪ್ರತ್ಯೇಕ ಘಟನೆ: ಒಂದೇ ದಿನ ಎರಡು ರಸ್ತೆ ಅಪಘಾತದಲ್ಲಿ 7 ಸಾವು, 6 ಮಂದಿಗೆ ಗಾಯ

ತಾಯಿ ಜೊತೆಗೆ ರಸ್ತೆ ಬಳಿ ನಿಂತಿದ್ದಾಗ ಘಟನೆ ಸಂಭವಿಸಿದೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದು, ಕೊಟ್ಟೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಪತಿ ಅನೈತಿಕ ಸಂಬಂಧ, ಕಿರುಕುಳಕ್ಕೆ ಬೇಸತ್ತು ಪತ್ನಿ ಆತ್ಮಹತ್ಯೆ

ನೆಲಮಂಗಲ: ಪತಿ ಅನೈತಿಕ ಸಂಬಂಧ, ಕಿರುಕುಳಕ್ಕೆ ಬೇಸತ್ತು ಪತ್ನಿ ಆತ್ಮಹತ್ಯೆ ಮಾಡಿಕೊಂಡಿರುವಂತಹ ಘಟನೆ ಬೆಂಗಳೂರು ಉತ್ತರ ತಾಲೂಕಿನ ಚಿಕ್ಕಗೊಲ್ಲರಹಟ್ಟಿ ಗ್ರಾಮದಲ್ಲಿ ನಡೆದಿದೆ. ರಜಿಯಾ ಸುಲ್ತಾನ್ ಆತ್ಮಹತ್ಯೆ ಮಾಡಿಕೊಂಡ ಪತ್ನಿ. ಪತಿ ನವಾಜ್ ಹತ್ಯೆಗೈದಿದ್ದಾನೆಂದು ಪೋಷಕರು ಆರೋಪ ಮಾಡಿದ್ದಾರೆ. ಪತಿ ನವಾಜ್​ನನ್ನು ಮಾದನಾಯಕನಹಳ್ಳಿ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

ಐದು ವರ್ಷದ ಹಿಂದೆ ಮದುವೆ ಆಗಿದ್ದು, 4 ವರ್ಷದ ಗಂಡು ಮಗು, 3 ವರ್ಷದ ಹೆಣ್ಣು ಮಗು ಇದೆ. ತಂಗಿಯ ಮಿಸ್ ಕಾಲ್ಡ್ ಹಿನ್ನೆಲೆ, ಒಂದು ಗಂಟೆ ಬಳಿಕ ಅಕ್ಕ ನಾಜಿಯ ಪೋನ್ ಕರೆ ಮಾಡಿದ್ದರು. ಕರೆ ಸ್ವೀಕರಿಸಿದ ಪತಿ, ರಜಿಯಾ ಪ್ಯಾನ್​ಗೆ ನೇಣುಬಿಗಿದುಕೊಂಡು ಸಾವನ್ನಪ್ಪಿದರ ಬಗ್ಗೆ ಹೇಳಿದ್ದಾನೆ. ಪೋಷಕರು ಮನೆಗೆ ಬಂದು ನೋಡಿದಾಗ ಹಾಲ್​ನಲ್ಲಿ ಶವ ಮಲಗಿಸಿದ್ದ ಬಗ್ಗೆ ಅನುಮಾನ ವ್ಯಕ್ತಪಡಿಸಿದ್ದಾರೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. 

Video: ತಂದೆ ತಾಯಿ ಜಗಳದಲ್ಲಿ ಮಗಳು ಸತ್ತೇ ಹೋದಳು!
Video: ತಂದೆ ತಾಯಿ ಜಗಳದಲ್ಲಿ ಮಗಳು ಸತ್ತೇ ಹೋದಳು!
ಎಣ್ಣೆ ನಶೆಯಲ್ಲಿ ನಾಯಿ ಜೊತೆ ಯುವಕನ ಡ್ಯಾನ್ಸ್​​: ವಿಡಿಯೋ ವೈರಲ್​
ಎಣ್ಣೆ ನಶೆಯಲ್ಲಿ ನಾಯಿ ಜೊತೆ ಯುವಕನ ಡ್ಯಾನ್ಸ್​​: ವಿಡಿಯೋ ವೈರಲ್​
‘ನಗ್ತಾ ಇರಿ, ಖುಷಿಯಾಗಿರಿ’; ಮಾತಿನ ಮೂಲಕ ವಿಶ್ ಮಾಡಿದ ಸುದೀಪ್
‘ನಗ್ತಾ ಇರಿ, ಖುಷಿಯಾಗಿರಿ’; ಮಾತಿನ ಮೂಲಕ ವಿಶ್ ಮಾಡಿದ ಸುದೀಪ್
ನಮಗೊಂದು ಟ್ವೀಟ್ ಮಾಡಿಕೊಡಿ: ಕೇರಳ ಸಿಎಂಗೆ ದುಂಬಾಲು ಬಿದ್ದ ಬಿಜೆಪಿ!
ನಮಗೊಂದು ಟ್ವೀಟ್ ಮಾಡಿಕೊಡಿ: ಕೇರಳ ಸಿಎಂಗೆ ದುಂಬಾಲು ಬಿದ್ದ ಬಿಜೆಪಿ!
ಹೊಸ ವರ್ಷಾಚರಣೆ ವೇಳೆ ಸ್ವಿಟ್ಜರ್​ಲ್ಯಾಂಡ್​ನ ಬಾರ್‌ನಲ್ಲಿ ಬಾಂಬ್ ಸ್ಫೋಟ
ಹೊಸ ವರ್ಷಾಚರಣೆ ವೇಳೆ ಸ್ವಿಟ್ಜರ್​ಲ್ಯಾಂಡ್​ನ ಬಾರ್‌ನಲ್ಲಿ ಬಾಂಬ್ ಸ್ಫೋಟ
ಹೊಸ ವರ್ಷದ ದಿನ ನಮ್ಮ ಮೆಟ್ರೋಗೆ ಬಂಪರ್​ ಆದಾಯ: ಕಲೆಕ್ಷನ್​ ಎಷ್ಟು?
ಹೊಸ ವರ್ಷದ ದಿನ ನಮ್ಮ ಮೆಟ್ರೋಗೆ ಬಂಪರ್​ ಆದಾಯ: ಕಲೆಕ್ಷನ್​ ಎಷ್ಟು?
ಪರೋಕ್ಷವಾಗಿ ಸಿಎಂ ಆಗುವ ಆಸೆ ವ್ಯಕ್ತಪಡಿಸಿದ ಡಾ. ಜಿ. ಪರಮೇಶ್ವರ್
ಪರೋಕ್ಷವಾಗಿ ಸಿಎಂ ಆಗುವ ಆಸೆ ವ್ಯಕ್ತಪಡಿಸಿದ ಡಾ. ಜಿ. ಪರಮೇಶ್ವರ್
ಹೂ, ಎಲೆಗಳ ಸಿಂಗಾರ; ವಿಶೇಷ ಅಲಂಕಾರದಲ್ಲಿ ಕಂಗೊಳಿಸಿದ ನಾಡ ದೇವತೆ
ಹೂ, ಎಲೆಗಳ ಸಿಂಗಾರ; ವಿಶೇಷ ಅಲಂಕಾರದಲ್ಲಿ ಕಂಗೊಳಿಸಿದ ನಾಡ ದೇವತೆ
ಮಂತ್ರಾಲಯದಲ್ಲಿ ಹೊಸ ವರ್ಷದ ಸಂಭ್ರಮ: ಸಾಗರೋಪಾದಿಯಲ್ಲಿ ಹರಿದುಬಂದ ಭಕ್ತರು
ಮಂತ್ರಾಲಯದಲ್ಲಿ ಹೊಸ ವರ್ಷದ ಸಂಭ್ರಮ: ಸಾಗರೋಪಾದಿಯಲ್ಲಿ ಹರಿದುಬಂದ ಭಕ್ತರು
ಪಕ್ಕದಮನೆಯವರ ಬಗ್ಗೆ ಮಾತನಾಡಲ್ಲ; ವಿಜಯಲಕ್ಷ್ಮೀ ಬಗ್ಗೆ ಸುದೀಪ್ ಮಾತು
ಪಕ್ಕದಮನೆಯವರ ಬಗ್ಗೆ ಮಾತನಾಡಲ್ಲ; ವಿಜಯಲಕ್ಷ್ಮೀ ಬಗ್ಗೆ ಸುದೀಪ್ ಮಾತು