AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Crime News: ಇನ್‌ಸ್ಟಾಗ್ರಾಮ್​​ ರೀಲ್ಸ್​ ಮಾಡಿದ್ದಕ್ಕೆ ಸಹೋದರಿಯನ್ನು ಕೊಂದ ಯುವಕ

ವಿಡಿಯೋ ಮಾಡಿ ಇನ್‌ಸ್ಟಾಗ್ರಾಮ್​ ರೀಲ್ಸ್​​ಗೆ​ ಮತ್ತು ಯೂಟ್ಯೂಬ್ ಶಾರ್ಟ್ಸ್​​ನಲ್ಲಿ ಅಪ್ಲೋಡ್​​ ಮಾಡುತ್ತಿದ್ದ ಯುವತಿಯನ್ನು, ಆಕೆಯ ಸಹೋದರನೇ ಕೊಲೆ ಮಾಡಿರುವ ಘಟನೆ ಹೈದರಾಬಾದ್​​ನ ಭದ್ರಾದ್ರಿ ಕೊಥಗುಡೆಂ ಜಿಲ್ಲೆಯ ಯೆಲ್ಲಾಂಡು ಪಟ್ಟಣದಲ್ಲಿ ನಡೆದಿದೆ.

Crime News: ಇನ್‌ಸ್ಟಾಗ್ರಾಮ್​​ ರೀಲ್ಸ್​ ಮಾಡಿದ್ದಕ್ಕೆ ಸಹೋದರಿಯನ್ನು ಕೊಂದ ಯುವಕ
ಸಾಂದರ್ಭಿಕ ಚಿತ್ರ
ಅಕ್ಷಯ್​ ಪಲ್ಲಮಜಲು​​
|

Updated on:Jul 27, 2023 | 3:51 PM

Share

ಹೈದರಾಬಾದ್, ಜು.27: ವಿಡಿಯೋ ಮಾಡಿ ಇನ್‌ಸ್ಟಾಗ್ರಾಮ್​ ರೀಲ್ಸ್​​ಗೆ (Instagram)​ ಮತ್ತು ಯೂಟ್ಯೂಬ್ ಶಾರ್ಟ್ಸ್​​ನಲ್ಲಿ ಅಪ್ಲೋಡ್​​ ಮಾಡುತ್ತಿದ್ದ ಯುವತಿಯನ್ನು, ಆಕೆಯ ಸಹೋದರನೇ ಕೊಲೆ ಮಾಡಿರುವ ಘಟನೆ ಹೈದರಾಬಾದ್​​ನ ಭದ್ರಾದ್ರಿ ಕೊಥಗುಡೆಂ ಜಿಲ್ಲೆಯ ಯೆಲ್ಲಾಂಡು ಪಟ್ಟಣದಲ್ಲಿ ನಡೆದಿದೆ. 21 ವರ್ಷದ ಟ್ರೈನಿ ನರ್ಸ್​ನ್ನು ಸಹೋದರ ಕೊಂದಿದ್ದಾನೆ ಎಂದು ಪೊಲೀಸ್​​​ ತಿಳಿಸಿದ್ದಾರೆ. ಸಾವನ್ನಪ್ಪಿರುವ ಯುವತಿಯನ್ನು ಅಜ್ಮೀರಾ ಸಾಂಘ್ವಿ ಎಂದು ಗುರುತಿಸಲಾಗಿದೆ. ಮೃತ ಅಜ್ಮೀರಾ ಸಾಂಘ್ವಿ ಇತ್ತೀಚೆಗೆ ಆಕ್ಸಿಲಿಯರಿ ನರ್ಸ್ ಮಿಡ್‌ವೈಫ್ ಕೋರ್ಸ್ ಮುಗಿಸಿ ಸರ್ಕಾರಿ ಆಸ್ಪತ್ರೆಯಲ್ಲಿ ಕೆಲಸ ಮಾಡುತ್ತಿದ್ದರು ಎಂದು ಹೇಳಲಾಗಿದೆ. ಇನ್ನೂ ಈಕೆಯ ಸಹೋದರ ಹಲವು ಬಾರಿ ರೀಲ್ಸ್ ಮಾಡಿ ಸಾಮಾಜಿಕ ಜಾಲತಾಣಕ್ಕೆ ಹಾಕಬೇಡ ಎಂದು ಎಚ್ಚರಿಕೆ ನೀಡಿದ್ದ ಎಂದು ಹೇಳಲಾಗಿದೆ. ಆರೋಪಿಯನ್ನು ಅಜ್ಮೀರಾ ಹರಿಲಾಲ್ ಎಂದು ಗುರುತಿಸಲಾಗಿದೆ.

ಸಹೋದರ ಮಾತನ್ನು ನಿರ್ಲಕ್ಷಿಸಿ ಅಜ್ಮೀರಾ ಸಾಂಘ್ವಿ ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹಾಕುತ್ತಿದ್ದಳು ಎಂದು ವರದಿಯಲ್ಲಿ ತಿಳಿಸಲಾಗಿದೆ. ಜು.24ರಂದು ಆಕೆ ತನ್ನ ಸಹೋದರ ಮುಂದೆಯೇ ವಿಡಿಯೋ ಮಾಡಿದ್ದಾಳೆ, ಇದನ್ನು ನೋಡಿದ ಸಹೋದರ ಆಕೆಯ ಜತೆಗೆ ವಾಗ್ವಾದಕ್ಕಿಳಿದ್ದಾರೆ. ಈ ಸಮಯದಲ್ಲಿ ಸಹೋದರ ಅಜ್ಮೀರಾ ಹರಿಲಾಲ್ ಕುಟ್ಟಾಣಿ (pestle)ಯಿಂದ ಆಕೆಗೆ ಹೊಡೆದಿದ್ದಾನೆ. ನಂತರ ಆಕೆಯ ತಾಯಿ ಅಜ್ಮೀರಾ ಸಾಂಘ್ವಿನ್ನು ಖಮ್ಮಮ್‌ನ ಆಸ್ಪತ್ರೆಗೆ ಸಾಗಿಸಿದ್ದಾರೆ.

ಇದನ್ನೂ ಓದಿ: ಸಮಾಲೋಚನೆ ವೇಳೆ ವೈದ್ಯರ ಮೇಲೆ ಚಾಕುವಿನಿಂದ ಹಲ್ಲೆ ನಡೆಸಿದ ರೋಗಿ

ಅಜ್ಮೀರಾ ಹರಿಲಾಲ್ ಘಟನೆಯ ನಂತರ ಸ್ಥಳದಿಂದ ಪರಾರಿಯಾಗಿದ್ದಾನೆ. ಇನ್ನೂ ಆಕೆಯನ್ನು ಖಮ್ಮಮ್‌ನ ಆಸ್ಪತ್ರೆಯಿಂದ ಉತ್ತಮ ಚಿಕಿತ್ಸೆಗಾಗಿ ವಾರಂಗಲ್‌ನ ಮತ್ತೊಂದು ಆಸ್ಪತ್ರೆಗೆ ಸಾಗಿಸುವಾಗ ಆಂಬ್ಯುಲೆನ್ಸ್‌ನಲ್ಲಿ ಸಾವನ್ನಪ್ಪಿದ್ದಾಳೆ ಎಂದು ಆಕೆಯ ತಾಯಿ ಹೇಳಿದ್ದಾರೆ. ಇನ್ನೂ ಅಜ್ಮೀರಾ ಸಾಂಘ್ವಿ ಅವರ ತಾಯಿ ನೀಡಿದ ದೂರಿನ ಆಧಾರದ ಮೇಲೆ ಕೊಲೆ ಪ್ರಕರಣವನ್ನು ದಾಖಲಿಸಲಾಗಿದೆ.

ಕ್ರೈಂ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 3:44 pm, Thu, 27 July 23

Follow Us
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ