AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Crime News: ಶ್ರದ್ಧಾಳಂತೆ ಮತ್ತೊಂದು ಬರ್ಬರ ಹತ್ಯೆ, ಮಗನ ಜತೆ ಸೇರಿ ಪತಿಯನ್ನು ತುಂಡು ತುಂಡಾಗಿ ಕತ್ತರಿಸಿ ಫ್ರಿಡ್ಜ್​ನಲ್ಲಿಟ್ಟ ಪತ್ನಿ

ಶ್ರದ್ಧಾ ವಾಕರ್ ಹತ್ಯೆ ಪ್ರಕಣದಂತೆ ದೆಹಲಿಯಲ್ಲಿ ಮತ್ತೊಂದು ಹತ್ಯೆ ಪ್ರಕರಣ ಬೆಳಿಕಿಗೆ ಬಂದಿದೆ. ಮಗ ಮತ್ತು ತಾಯಿ ಜತೆ ಸೇರಿ ತಂದೆಯನ್ನು ಕೊಂದು ಶವವನ್ನು ಕತ್ತರಿಸಿ ಫ್ರಿಡ್ಜ್​ನಲ್ಲಿಟ್ಟಿದ್ದಾರೆ. ಇಬ್ಬರೂ ಬೇರೆ ಬೇರೆ ದಿನಗಳಲ್ಲಿ ಬಂದು ಮಧ್ಯರಾತ್ರಿಯಲ್ಲಿ ಮೃತದೇಹದ ಭಾಗಗಳನ್ನು ಚಾಂದ್ ಚಿತ್ರಮಂದಿರದ ಮುಂಭಾಗದ ಮೈದಾನದಲ್ಲಿ ಎಸೆದಿದ್ದರು.

Crime News: ಶ್ರದ್ಧಾಳಂತೆ ಮತ್ತೊಂದು ಬರ್ಬರ ಹತ್ಯೆ, ಮಗನ ಜತೆ ಸೇರಿ ಪತಿಯನ್ನು ತುಂಡು ತುಂಡಾಗಿ ಕತ್ತರಿಸಿ ಫ್ರಿಡ್ಜ್​ನಲ್ಲಿಟ್ಟ ಪತ್ನಿ
Crime News
TV9 Web
| Edited By: |

Updated on:Nov 28, 2022 | 1:09 PM

Share

ದೆಹಲಿ: ಶ್ರದ್ಧಾ ವಾಕರ್ (Shraddha Walker) ಹತ್ಯೆ ಪ್ರಕರಣ ನಡುವೆ ದೆಹಲಿಯಲ್ಲಿ ಅತಂಹದೇ ಮತ್ತೊಂದು ಪ್ರಕರಣ ಬಹಿರಂಗವಾಗಿದೆ, ಇದೀಗ ಈ ಪ್ರಕರಣ ಮತ್ತೊಮ್ಮೆ ದೆಹಲಿಯನ್ನು ಬೆಚ್ಚಿಬೀಳಿಸಿದೆ, ಪೊಲೀಸರು ಶ್ರದ್ಧಾ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸುತ್ತಿದ್ದಾರೆ. ಇದೀಗ ಅವರು ಮತ್ತೊಂದು ಇಂತಹದೇ ಕೊಲೆ ಪ್ರಕರಣವನ್ನು ಪತ್ತೆ ಮಾಡಿದ್ದಾರೆ. ಪೂರ್ವ ದೆಹಲಿಯಲ್ಲಿ ಒಬ್ಬ ವ್ಯಕ್ತಿಯ ಕತ್ತರಿಸಿದ ದೇಹದ ಭಾಗಗಳನ್ನು ಅವರು ಪತ್ತೆ ಹಚ್ಚಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಕ್ರೈಂ ಬ್ರಾಂಚ್ ತನಿಖೆ ನಡೆಸಿ ಆರೋಪಿಗಳನ್ನು ಬಂಧಿಸಿದ್ದಾರೆ.

ದೆಹಲಿಯ ಪಾಂಡವನಗರದ ಮಹಿಳೆ ಮತ್ತು ಆಕೆಯ ಮಗನನ್ನು ಅಪರಾಧ ವಿಭಾಗ ಬಂಧಿಸಿದೆ. ತಾಯಿ ಮತ್ತು ಮಗ ಜತೆ ಸೇರಿ ಪತಿಯನ್ನು ಕೊಂದು ಶವವನ್ನು ಕತ್ತರಿಸಿ ಫ್ರಿಡ್ಜ್​ನಲ್ಲಿಟ್ಟಿದ್ದಾರೆ. ಇಬ್ಬರೂ ಬೇರೆ ಬೇರೆ ದಿನಗಳಲ್ಲಿ ಬಂದು ಮಧ್ಯರಾತ್ರಿಯಲ್ಲಿ ಮೃತದೇಹದ ಭಾಗಗಳನ್ನು ಚಾಂದ್ ಚಿತ್ರಮಂದಿರದ ಮುಂಭಾಗದ ಮೈದಾನದಲ್ಲಿ ಎಸೆದಿದ್ದರು.

ಇದನ್ನು ಓದಿ: ದೆಹಲಿಯನ್ನು ಬೆಚ್ಚಿ ಬೀಳಿಸಿದ ಶ್ರದ್ಧಾ ಕೊಲೆ ಪ್ರಕರಣ; ಆ ನಿಗೂಢ ರಾತ್ರಿ ನಡೆದಿದ್ದೇನು? 

ತಂದೆಗೆ ಬೇರೊಬ್ಬ ಮಹಿಳೆಯೊಂದಿಗೆ ಸಂಬಂಧವಿತ್ತು ಎಂದು ತನಿಖೆಯ ವರದಿ ತಿಳಿಸಿದೆ. ಅದಕ್ಕಾಗಿಯೇ ಮಗ ತಾಯಿಯೊಂದಿಗೆ ಸೇರಿ ಈ ಕೃತ್ಯವನ್ನು ಮಾಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಮಹಿಳೆಯ ಹೆಸರು ಪೂನಂ ಮತ್ತು ಮಗನ ಹೆಸರು ದೀಪಕ್ ಹಾಗೂ ಮೃತರ ಹೆಸರು ಅಂಜನ್ ದಾಸ್ ಎಂದು ಹೇಳಲಾಗಿದೆ. ತಾಯಿ ಮತ್ತು ಮಗ ಇಬ್ಬರೂ ಮೃತ ಅಂಜನ್ ದಾಸ್‌ಗೆ ಮೊದಲು ಅಮಲು ಮಾತ್ರೆಗಳನ್ನು ತಿನ್ನಿಸಿ, ನಂತರ ಕೊಂದಿದ್ದಾರೆ. ಕೊಂದ ನಂತರ ಮೃತದೇಹವನ್ನು ತುಂಡು ತುಂಡಾಗಿ ಕತ್ತರಿಸಿ ಮಾಡಿ ಫ್ರಿಡ್ಜ್ ನಲ್ಲಿಟ್ಟಿದ್ದರು. ಯಾರಿಗೂ ಅನುಮಾನ ಬರದಂತೆ ಬೇರೆ ಬೇರೆ ದಿನಗಳಲ್ಲಿ, ಮಧ್ಯರಾತ್ರಿಯಲ್ಲಿ, ಮೃತ ದೇಹಗಳ ತುಂಡುಗಳನ್ನು ಚಾಂದ್ ಚಿತ್ರಮಂದಿರದ ಮುಂಭಾಗದ ಮೈದಾನದಲ್ಲಿ ಎಸೆದಿದ್ದರು. ದೆಹಲಿ ಪೊಲೀಸರು ಸದ್ಯ ಆರೋಪಿಗಳಾದ ಪೂನಂ ಮತ್ತು ದೀಪಕ್ ಇಬ್ಬರನ್ನೂ ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ.

ಕ್ರೈ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 12:35 pm, Mon, 28 November 22

ಯಾರಡಾ ಬೀಚ್​​ನಲ್ಲಿ ದಡಕ್ಕೆ ಹೋದವರಿಗೆ ಕಾದಿತ್ತು ಶಾಕ್!
ಯಾರಡಾ ಬೀಚ್​​ನಲ್ಲಿ ದಡಕ್ಕೆ ಹೋದವರಿಗೆ ಕಾದಿತ್ತು ಶಾಕ್!
ಕೃಷ್ಣಭೈರೇಗೌಡ ವಿರುದ್ಧ ಭೂಕಬಳಿಕೆ ಆರೋಪ: ಆ ಭೂಮಿ ಎಲ್ಲಿ? ಹೇಗಿದೆ ನೋಡಿ
ಕೃಷ್ಣಭೈರೇಗೌಡ ವಿರುದ್ಧ ಭೂಕಬಳಿಕೆ ಆರೋಪ: ಆ ಭೂಮಿ ಎಲ್ಲಿ? ಹೇಗಿದೆ ನೋಡಿ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್