AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರೇಮಿಗಳು, ದಂಪತಿಗಳನ್ನ ಹಿಂಬಾಲಿಸಿ ಸುಲಿಗೆ ಮಾಡುತ್ತಿದ್ದ ಆರೋಪಿಯ ಬಂಧನ

ಪ್ರೇಮಿಗಳು, ದಂಪತಿಗಳನ್ನು ಟಾರ್ಗೆಟ್​​ ಮಾಡಿ, ಹಿಂಬಾಲಿಸಿ ಸುಲಿಗೆ ಮಾಡುತ್ತಿದ್ದ ಖತರ್ನಾಕ್​ ಆರೋಪಿಯನ್ನು ನಗರದ ಹೆಚ್​ಎಸ್​ಆರ್​​ ಲೇಔಟ್​​ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿ ಗಣೇಶ್​ರಿಂದ ಲಕ್ಷಾಂತರ ರೂಪಾಯಿ ಮೌಲ್ಯದ ಮೊಬೈಲ್​​ ಜಪ್ತಿ ಮಾಡಲಾಗಿದೆ. ಕಳೆದ ಡಿ.17ರಂದು HSR ಲೇಔಟ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಪ್ರೇಮಿಗಳು, ದಂಪತಿಗಳನ್ನ ಹಿಂಬಾಲಿಸಿ ಸುಲಿಗೆ ಮಾಡುತ್ತಿದ್ದ ಆರೋಪಿಯ ಬಂಧನ
ಬಂಧಿತ ಆರೋಪಿ ಗಣೇಶ್@ಗಣಿ
Shivaprasad B
| Edited By: |

Updated on: Dec 26, 2023 | 5:42 PM

Share

ಬೆಂಗಳೂರು, ಡಿಸೆಂಬರ್​​ 26: ಪ್ರೇಮಿಗಳು, ದಂಪತಿಗಳನ್ನು ಹಿಂಬಾಲಿಸಿ ಸುಲಿಗೆ ಮಾಡುತ್ತಿದ್ದ ಖತರ್ನಾಕ್​ ಆರೋಪಿಯನ್ನು ನಗರದ ಹೆಚ್​ಎಸ್​ಆರ್​​ ಲೇಔಟ್​​ ಪೊಲೀಸರು ಬಂಧಿಸಿದ್ದಾರೆ (Arrest). ಗಣೇಶ್​​ ಬಂಧಿತ ಆರೋಪಿ. ಪ್ರೇಮಿಗಳು ಮತ್ತು ದಂಪತಿಗಳನ್ನ ಹಿಂಬಾಲಿಸಿ ಮೊಬೈಲ್​​, ಹಣ, ಚಿನ್ನ ದೋಚುತ್ತಿದ್ದ. ಆರೋಪಿ ಬಂಧಿಸಿ ಲಕ್ಷಾಂತರ ರೂಪಾಯಿ ಮೌಲ್ಯದ ಮೊಬೈಲ್​​ ಜಪ್ತಿ ಮಾಡಲಾಗಿದೆ. ಕಳೆದ ಡಿ.17ರಂದು HSR ಲೇಔಟ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ನಾಲ್ಕೈದು ವರ್ಷದ ಹಿಂದೆ ಪೊಲೀಸರಿಗೆ ಪಂಚನಾಮೆಗೆ ಸಹಕರಿಸಿದ್ದ. ಪೊಲೀಸರು ದಾಳಿ ಮಾಡುವ ಸ್ಟೈಲ್​ನ್ನು ಗಣೇಶ್@ಗಣಿ ​​ಗಮನಿಸಿದ್ದ. ಹಲವು ಪ್ರಕರಣದಲ್ಲಿ ನಕಲಿ ಪೊಲೀಸ್​​ ಸೋಗಿನಲ್ಲಿ ಹೋಗುತ್ತಿದ್ದ. ಪ್ರೇಮಿಗಳು, ದಂಪತಿಯನ್ನೇ ಟಾರ್ಗೆಟ್​​ ಮಾಡುತ್ತಿದ್ದ.​ ಪಾರ್ಕ್​​ಗಳ ಬಳಿ ಜೋಡಿಗಳ ಹಿಂದೆ ಹೋಗಿ ಬೆದರಿಸುತ್ತಿದ್ದ. ಮಾರಕಾಸ್ತ್ರ ತೋರಿಸಿ ಅವರಿಂದ ಮೊಬೈಲ್​​, ಹಣ, ಚಿನ್ನ ಕದಿಯುತ್ತಿದ್ದ.

ಇದನ್ನೂ ಓದಿ: ಪತಿ ಜತೆ ಸಂಸಾರ ಮಾಡಲೊಪ್ಪದ ಮಗಳನ್ನೇ ಸುಟ್ಟುಹಾಕಿ ಕಾಣೆಯಾಗಿದ್ದಾಳೆಂದ ತಂದೆ

ಉತ್ತರ ಭಾರತ ಮೂಲದ ದಂಪತಿ ಸಂಜೀವ್​​ ಬೋರಾ, ಜನ್ನಿಫರ್​ ಬೆದರಿಸಿದ್ದ. ದಂಪತಿಯಿಂದ ಎರಡುವರೆ ಲಕ್ಷ ಸುಲಿಗೆ ಮಾಡಿದ್ದ.​​ 2007ರಿಂದ ಕ್ರೈಂ ಆ್ಯಕ್ಟಿವಿಟಿಯಲ್ಲಿ ಆರೋಪಿ ಗಣೇಶ್ ಭಾಗಿಯಾಗಿದ್ದ. ಬೆಂಗಳೂರಿನ ಹುಳಿಮಾವು, ಮಡಿವಾಳ, ಬೆಳ್ಳಂದೂರು, HSR ಲೇಔಟ್ ಸೇರಿ​​ ನಗರದ ಹಲವು ಪೊಲೀಸ್​​ ಠಾಣಾ ವ್ಯಾಪ್ತಿಗಳಲ್ಲಿ ಕೃತ್ಯವೆಸಗಿದ್ದ.

ಹೃದಯಾಘಾತದಿಂದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ಶಿಕ್ಷಕ ಸಾವು

ರಾಯಚೂರು: ಹೃದಯಾಘಾತದಿಂದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ಶಿಕ್ಷಕ ಸಾವನ್ನಪ್ಪಿರುವಂತಹ ಘಟನೆ ಜಿಲ್ಲೆಯ ಮಸ್ಕಿ ತಾಲೂಕಿನ ಗದ್ರಟಗಿ ಗ್ರಾಮದಲ್ಲಿ ನಡೆದಿದೆ. ಸೂರ್ಯ ಉಮಾಪತೆಪ್ಪ ಜಾಡರ್(57) ಮೃತ ಶಿಕ್ಷಕ.

ಇದನ್ನೂ ಓದಿ: ನೆಲಮಂಗಲ: ಚಲಿಸುತ್ತಿದ್ದ ಕಾರಿಗೆ ಆಕಸ್ಮಿಕ ಬೆಂಕಿ: ಓರ್ವ ವ್ಯಕ್ತಿ ಸಜೀವ ದಹನ

ಇಂದು ಶಾಲೆಗೆ ಎಂದಿನಂತೆ ಬಂದು ಕಾರ್ಯನಿರ್ವಹಿಸುತ್ತಿದ್ದರು. ಶಾಲೆಯಲ್ಲಿ ಹೃದಯಾಘಾತದಿಂದ ಕುಸಿದು ಬಿದಿದ್ದಾರೆ. ಶಿಕ್ಷಕನ ಸಾವಿಗೆ ಗದ್ರಟಗಿ ಸರ್ಕಾರಿ ಶಾಲೆಯ ವಿದ್ಯಾರ್ಥಿಗಳು ಕಣ್ಣೀರಿಟ್ಟಿದ್ದಾರೆ. ಮಸ್ಕಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ದಾಖಲಾಗಿದೆ.

ಹೈವೆ ಪಕ್ಕದಲ್ಲಿ ಯುವಕನ ಹತ್ಯೆ

ತುಮಕೂರು: ಹೈವೆ ಪಕ್ಕದಲ್ಲಿ ಯುವಕನ ಹತ್ಯೆ ಮಾಡಿರುವಂತಹ ಘಟನೆ ತುಮಕೂರು ತಾಲೂಕು ಬೆಳಧರ ಗ್ರಾಮದಲ್ಲಿ ನಡೆದಿದೆ. ನಿನ್ನೆ ಘಟನೆ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ. ಅಹೋಬಲ ಅಗ್ರಹಾರ ಗ್ರಾಮದ ಹನುಮಂತರಾಜು ಮೃತ ದುರ್ದೈವಿ. ಹತ್ಯೆಗೆ ಕಾರಣ ತಿಳಿದು ಬಂದಿಲ್ಲ. ಸ್ಥಳಕ್ಕೆ ತುಮಕೂರು ಗ್ರಾಮಾಂತರ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು
ಮನೆಯ ಅಂಗಳದಲ್ಲಿ ಮಲಗಿದ್ದ ವೃದ್ಧೆಗೆ ಕಡಿದೇ ಬಿಡ್ತು ಹಾವು!
ಮನೆಯ ಅಂಗಳದಲ್ಲಿ ಮಲಗಿದ್ದ ವೃದ್ಧೆಗೆ ಕಡಿದೇ ಬಿಡ್ತು ಹಾವು!
ಗ್ಯಾಸ್ ​ಇಲ್ಲದಿದ್ರೂ ಚಾಮುಂಡಿ ಬೆಟ್ಟಕ್ಕೆ ಬರುವ ಭಕ್ತರಿಗೆ ಪ್ರಸಾದ ಲಭ್ಯ!
ಗ್ಯಾಸ್ ​ಇಲ್ಲದಿದ್ರೂ ಚಾಮುಂಡಿ ಬೆಟ್ಟಕ್ಕೆ ಬರುವ ಭಕ್ತರಿಗೆ ಪ್ರಸಾದ ಲಭ್ಯ!
ನೀವು ಮಾಡುವ ಒಂದು ಸಣ್ಣ ತಪ್ಪಿನಿಂದ ದೊಡ್ಡ ಅಪಘಾತವೇ ಸಂಭವಿಸಬಹುದು ಎಚ್ಚರ
ನೀವು ಮಾಡುವ ಒಂದು ಸಣ್ಣ ತಪ್ಪಿನಿಂದ ದೊಡ್ಡ ಅಪಘಾತವೇ ಸಂಭವಿಸಬಹುದು ಎಚ್ಚರ
2 ನಿಮಿಷ ತಡವಾಗಿ ಬಂದ ಬಾಲಕನಿಗೆ 2 ಗಂಟೆ ಬಿಸಿಲಲ್ಲಿ ನಿಲ್ಲಿಸಿ ಶಿಕ್ಷೆ!
2 ನಿಮಿಷ ತಡವಾಗಿ ಬಂದ ಬಾಲಕನಿಗೆ 2 ಗಂಟೆ ಬಿಸಿಲಲ್ಲಿ ನಿಲ್ಲಿಸಿ ಶಿಕ್ಷೆ!