AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Crime News: ದೆಹಲಿಯ ಮೈದಾನದಲ್ಲಿ ಶವದ ತುಂಡುಗಳನ್ನು ತುಂಬಿಟ್ಟಿದ್ದ ಬ್ಯಾಗ್ ಪತ್ತೆ; ಕೊಲೆಯಾದವರ ಸುಳಿವೇ ಸಿಕ್ಕಿಲ್ಲ

ಭಾನುವಾರ ಪೊಲೀಸ್ ತಂಡ ಗಸ್ತು ತಿರುಗುತ್ತಿದ್ದಾಗ ರಾಮಲೀಲಾ ಮೈದಾನದ ಪೊದೆಗಳ ಬಳಿ ದುರ್ವಾಸನೆ ಬರುತ್ತಿತ್ತು. ಅಲ್ಲಿ ಪೊಲೀಸರಿಗೆ ಶವದ ಕತ್ತರಿಸಿದ ಭಾಗಗಳಿರುವ ಬ್ಯಾಗ್ ಕಂಡಿದೆ.

Crime News: ದೆಹಲಿಯ ಮೈದಾನದಲ್ಲಿ ಶವದ ತುಂಡುಗಳನ್ನು ತುಂಬಿಟ್ಟಿದ್ದ ಬ್ಯಾಗ್ ಪತ್ತೆ; ಕೊಲೆಯಾದವರ ಸುಳಿವೇ ಸಿಕ್ಕಿಲ್ಲ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on:Jun 06, 2022 | 3:55 PM

Share

ನವದೆಹಲಿ: ಕೊಲೆ ಮಾಡಿ, ಆ ಶವವನ್ನು ಸಣ್ಣ ತುಂಡುಗಳಾಗಿ ಕತ್ತರಿಸಿ, ಬ್ಯಾಗ್​ನಲ್ಲಿ ತುಂಬಿ ಮೈದಾನದಲ್ಲಿ ಇಟ್ಟುಹೋಗಿರುವ ಆಘಾತಕಾರಿ ಘಟನೆ ದೆಹಲಿಯಲ್ಲಿ ನಡೆದಿದೆ. ದೆಹಲಿಯ ರಾಮಲೀಲಾ ಮೈದಾನದಲ್ಲಿ (Ramlila Ground) ಬ್ಯಾಗ್‌ನೊಳಗೆ ಮನುಷ್ಯ ತುಂಡರಿಸಿದ ದೇಹದ ಭಾಗಗಳನ್ನು ಪತ್ತೆ ಹಚ್ಚಲಾಗಿದ್ದು, ಆ ಪ್ರದೇಶದಲ್ಲಿ ಆತಂಕ ಮೂಡಿಸಿದೆ. ಪಾಂಡವ ಪೊಲೀಸ್ ಠಾಣಾ ವ್ಯಾಪ್ತಿಯ ಕಲ್ಯಾಣಪುರಿ 20 ಬ್ಲಾಕ್ ಮುಂಭಾಗದ ರಾಮಲೀಲಾ ಮೈದಾನದಲ್ಲಿ ಬ್ಯಾಗ್ ಪತ್ತೆಯಾಗಿದೆ. ಕೊಲೆಯಾಗಿರುವ ವ್ಯಕ್ತಿಯ ಗುರುತನ್ನು ಪೊಲೀಸರು ಇನ್ನೂ ಪತ್ತೆಹಚ್ಚಿಲ್ಲ.

ಭಾನುವಾರ ಪೊಲೀಸ್ ತಂಡ ಗಸ್ತು ತಿರುಗುತ್ತಿದ್ದಾಗ ರಾಮಲೀಲಾ ಮೈದಾನದ ಪೊದೆಗಳ ಬಳಿ ದುರ್ವಾಸನೆ ಬರುತ್ತಿತ್ತು. ಈ ಬಗ್ಗೆ ತಕ್ಷಣ ಸ್ಥಳೀಯ ಪೊಲೀಸ್ ಠಾಣೆಗೆ ಮಾಹಿತಿ ರವಾನಿಸಲಾಗಿದ್ದು, ದುರ್ವಾಸನೆ ಬರುತ್ತಿದ್ದಂತೆ ಪಾಂಡವ ನಗರ ಠಾಣೆಯ ಪೊಲೀಸ್ ಸಿಬ್ಬಂದಿಗೆ ಮಾಹಿತಿ ನೀಡಿದ್ದಾರೆ. ಆಗ ಪೊಲೀಸರಿಗೆ ಶವದ ಕತ್ತರಿಸಿದ ಭಾಗಗಳನ್ನು ಹೊಂದಿರುವ ಬ್ಯಾಗ್ ಕಂಡಿದೆ.

ಇದನ್ನೂ ಓದಿ: Murder: ಬೈಕ್ ಡಿಕ್ಕಿ ಹೊಡೆದಿದ್ದಕ್ಕೆ ಕೆಳಗೆ ಬಿತ್ತು ಹೆಣ!; ಸಿನಿಮೀಯವಾಗಿ ಬಯಲಾಯ್ತು ಬೆಂಗಳೂರು ಯುವತಿಯ ಕೊಲೆ ರಹಸ್ಯ

ಈ ಕುರಿತು ಮಾಹಿತಿ ಪಡೆದ ಸ್ಟೇಷನ್ ಹೌಸ್ ಆಫೀಸರ್ ಮತ್ತು ಇತರ ಪೋಲೀಸ್ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ನೋಡಿದಾಗ ವ್ಯಕ್ತಿಯ ಕತ್ತರಿಸಿದ ದೇಹದ ಭಾಗಗಳನ್ನು ತುಂಬಿದ ಚೀಲವನ್ನು ನೋಡಿದರು. ಈ ನಡುವೆ ಪಾಂಡವನಗರ ಪೊಲೀಸ್ ಠಾಣೆಯಲ್ಲಿ ಕೊಲೆ ಪ್ರಕರಣ ದಾಖಲಾಗಿದ್ದು, ದೇಹದ ಎಲ್ಲಾ ಭಾಗಗಳನ್ನು ಎಲ್‌ಬಿಎಸ್ ಶವಾಗಾರದಲ್ಲಿ ಸಂರಕ್ಷಿಸಲಾಗಿದೆ. ಮೃತದೇಹ ಯಾರದ್ದು ಎಂಬುದರ ಗುರುತನ್ನು ಪತ್ತೆ ಹಚ್ಚುವ ಪ್ರಯತ್ನ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 3:53 pm, Mon, 6 June 22

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್