AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Crime News: ದೆಹಲಿಯ ಮೈದಾನದಲ್ಲಿ ಶವದ ತುಂಡುಗಳನ್ನು ತುಂಬಿಟ್ಟಿದ್ದ ಬ್ಯಾಗ್ ಪತ್ತೆ; ಕೊಲೆಯಾದವರ ಸುಳಿವೇ ಸಿಕ್ಕಿಲ್ಲ

ಭಾನುವಾರ ಪೊಲೀಸ್ ತಂಡ ಗಸ್ತು ತಿರುಗುತ್ತಿದ್ದಾಗ ರಾಮಲೀಲಾ ಮೈದಾನದ ಪೊದೆಗಳ ಬಳಿ ದುರ್ವಾಸನೆ ಬರುತ್ತಿತ್ತು. ಅಲ್ಲಿ ಪೊಲೀಸರಿಗೆ ಶವದ ಕತ್ತರಿಸಿದ ಭಾಗಗಳಿರುವ ಬ್ಯಾಗ್ ಕಂಡಿದೆ.

Crime News: ದೆಹಲಿಯ ಮೈದಾನದಲ್ಲಿ ಶವದ ತುಂಡುಗಳನ್ನು ತುಂಬಿಟ್ಟಿದ್ದ ಬ್ಯಾಗ್ ಪತ್ತೆ; ಕೊಲೆಯಾದವರ ಸುಳಿವೇ ಸಿಕ್ಕಿಲ್ಲ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on:Jun 06, 2022 | 3:55 PM

Share

ನವದೆಹಲಿ: ಕೊಲೆ ಮಾಡಿ, ಆ ಶವವನ್ನು ಸಣ್ಣ ತುಂಡುಗಳಾಗಿ ಕತ್ತರಿಸಿ, ಬ್ಯಾಗ್​ನಲ್ಲಿ ತುಂಬಿ ಮೈದಾನದಲ್ಲಿ ಇಟ್ಟುಹೋಗಿರುವ ಆಘಾತಕಾರಿ ಘಟನೆ ದೆಹಲಿಯಲ್ಲಿ ನಡೆದಿದೆ. ದೆಹಲಿಯ ರಾಮಲೀಲಾ ಮೈದಾನದಲ್ಲಿ (Ramlila Ground) ಬ್ಯಾಗ್‌ನೊಳಗೆ ಮನುಷ್ಯ ತುಂಡರಿಸಿದ ದೇಹದ ಭಾಗಗಳನ್ನು ಪತ್ತೆ ಹಚ್ಚಲಾಗಿದ್ದು, ಆ ಪ್ರದೇಶದಲ್ಲಿ ಆತಂಕ ಮೂಡಿಸಿದೆ. ಪಾಂಡವ ಪೊಲೀಸ್ ಠಾಣಾ ವ್ಯಾಪ್ತಿಯ ಕಲ್ಯಾಣಪುರಿ 20 ಬ್ಲಾಕ್ ಮುಂಭಾಗದ ರಾಮಲೀಲಾ ಮೈದಾನದಲ್ಲಿ ಬ್ಯಾಗ್ ಪತ್ತೆಯಾಗಿದೆ. ಕೊಲೆಯಾಗಿರುವ ವ್ಯಕ್ತಿಯ ಗುರುತನ್ನು ಪೊಲೀಸರು ಇನ್ನೂ ಪತ್ತೆಹಚ್ಚಿಲ್ಲ.

ಭಾನುವಾರ ಪೊಲೀಸ್ ತಂಡ ಗಸ್ತು ತಿರುಗುತ್ತಿದ್ದಾಗ ರಾಮಲೀಲಾ ಮೈದಾನದ ಪೊದೆಗಳ ಬಳಿ ದುರ್ವಾಸನೆ ಬರುತ್ತಿತ್ತು. ಈ ಬಗ್ಗೆ ತಕ್ಷಣ ಸ್ಥಳೀಯ ಪೊಲೀಸ್ ಠಾಣೆಗೆ ಮಾಹಿತಿ ರವಾನಿಸಲಾಗಿದ್ದು, ದುರ್ವಾಸನೆ ಬರುತ್ತಿದ್ದಂತೆ ಪಾಂಡವ ನಗರ ಠಾಣೆಯ ಪೊಲೀಸ್ ಸಿಬ್ಬಂದಿಗೆ ಮಾಹಿತಿ ನೀಡಿದ್ದಾರೆ. ಆಗ ಪೊಲೀಸರಿಗೆ ಶವದ ಕತ್ತರಿಸಿದ ಭಾಗಗಳನ್ನು ಹೊಂದಿರುವ ಬ್ಯಾಗ್ ಕಂಡಿದೆ.

ಇದನ್ನೂ ಓದಿ: Murder: ಬೈಕ್ ಡಿಕ್ಕಿ ಹೊಡೆದಿದ್ದಕ್ಕೆ ಕೆಳಗೆ ಬಿತ್ತು ಹೆಣ!; ಸಿನಿಮೀಯವಾಗಿ ಬಯಲಾಯ್ತು ಬೆಂಗಳೂರು ಯುವತಿಯ ಕೊಲೆ ರಹಸ್ಯ

ಈ ಕುರಿತು ಮಾಹಿತಿ ಪಡೆದ ಸ್ಟೇಷನ್ ಹೌಸ್ ಆಫೀಸರ್ ಮತ್ತು ಇತರ ಪೋಲೀಸ್ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ನೋಡಿದಾಗ ವ್ಯಕ್ತಿಯ ಕತ್ತರಿಸಿದ ದೇಹದ ಭಾಗಗಳನ್ನು ತುಂಬಿದ ಚೀಲವನ್ನು ನೋಡಿದರು. ಈ ನಡುವೆ ಪಾಂಡವನಗರ ಪೊಲೀಸ್ ಠಾಣೆಯಲ್ಲಿ ಕೊಲೆ ಪ್ರಕರಣ ದಾಖಲಾಗಿದ್ದು, ದೇಹದ ಎಲ್ಲಾ ಭಾಗಗಳನ್ನು ಎಲ್‌ಬಿಎಸ್ ಶವಾಗಾರದಲ್ಲಿ ಸಂರಕ್ಷಿಸಲಾಗಿದೆ. ಮೃತದೇಹ ಯಾರದ್ದು ಎಂಬುದರ ಗುರುತನ್ನು ಪತ್ತೆ ಹಚ್ಚುವ ಪ್ರಯತ್ನ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 3:53 pm, Mon, 6 June 22

ಬೆಂಗಳೂರು: ರಾಪಿಡೋ ಚಾಲಕನಿಂದ ಯುವತಿಗೆ ಲೈಂಗಿಕ ಕಿರುಕುಳ
ಬೆಂಗಳೂರು: ರಾಪಿಡೋ ಚಾಲಕನಿಂದ ಯುವತಿಗೆ ಲೈಂಗಿಕ ಕಿರುಕುಳ
ಕಡಲೆ ಕಳ್ಳನಿಗೆ ಕಂಬಕ್ಕೆ ಕಟ್ಟಿ ಹಾಕಿ ಹಿಗ್ಗಾಮುಗ್ಗಾ ಥಳಿತ!
ಕಡಲೆ ಕಳ್ಳನಿಗೆ ಕಂಬಕ್ಕೆ ಕಟ್ಟಿ ಹಾಕಿ ಹಿಗ್ಗಾಮುಗ್ಗಾ ಥಳಿತ!
ಅಸಹ್ಯ ದೃಶ್ಯ! ಟಾಕ್ಸಿಕ್ ವಿರುದ್ಧ ಕಂಪ್ಲೇಂಟ್ ನೀಡಿದ ವಕೀಲರು ಹೇಳಿದ್ದೇನು?
ಅಸಹ್ಯ ದೃಶ್ಯ! ಟಾಕ್ಸಿಕ್ ವಿರುದ್ಧ ಕಂಪ್ಲೇಂಟ್ ನೀಡಿದ ವಕೀಲರು ಹೇಳಿದ್ದೇನು?
ಪ್ಯಾರಾ-ಅಥ್ಲೀಟ್ ಪ್ರಸಾದ್​​​ಗೆ 5 ವರ್ಷಗಳ ನಂತರ ಸಿಕ್ತು ಸೂರು ಭಾಗ್ಯ!
ಪ್ಯಾರಾ-ಅಥ್ಲೀಟ್ ಪ್ರಸಾದ್​​​ಗೆ 5 ವರ್ಷಗಳ ನಂತರ ಸಿಕ್ತು ಸೂರು ಭಾಗ್ಯ!
ಯುವಕನ ಬಳಿ ನನ್ನ ಕರ್ಕೊಂಡೋಗಿ ಮದುವೆಯಾಗು ಎಂದಿದ್ದ ಅಪ್ರಾಪ್ತೆ ನಿಗೂಢ ಸಾವು
ಯುವಕನ ಬಳಿ ನನ್ನ ಕರ್ಕೊಂಡೋಗಿ ಮದುವೆಯಾಗು ಎಂದಿದ್ದ ಅಪ್ರಾಪ್ತೆ ನಿಗೂಢ ಸಾವು
ಕಾಂಪೌಂಡ್ ಒಳಗಿದ್ದ ನಾಯಿಯನ್ನು ಬೇಟೆಯಾಡಲು ಬಂದ ಚಿರತೆ!
ಕಾಂಪೌಂಡ್ ಒಳಗಿದ್ದ ನಾಯಿಯನ್ನು ಬೇಟೆಯಾಡಲು ಬಂದ ಚಿರತೆ!
ಸಂಬಂಧಗಳನ್ನು ಇಟ್ಟುಕೊಂಡು ಮನೆಯನ್ನು ನರಕ ಮಾಡ್ತಾ ಇದೀರಾ; ರಕ್ಷಿತಾಗೆ ಪಾಠ
ಸಂಬಂಧಗಳನ್ನು ಇಟ್ಟುಕೊಂಡು ಮನೆಯನ್ನು ನರಕ ಮಾಡ್ತಾ ಇದೀರಾ; ರಕ್ಷಿತಾಗೆ ಪಾಠ
WPL 2026: 6 ಎಸೆತಗಳಲ್ಲಿ 3 ತಪ್ಪು ಮಾಡಿ ಸೋತ ಮುಂಬೈ ಇಂಡಿಯನ್ಸ್
WPL 2026: 6 ಎಸೆತಗಳಲ್ಲಿ 3 ತಪ್ಪು ಮಾಡಿ ಸೋತ ಮುಂಬೈ ಇಂಡಿಯನ್ಸ್
ಬೆಂಗಳೂರಿಗರಿಗೆ ಮೆಟ್ರೋ ದಿಂದ ಮತ್ತೊಂದು ಗುಡ್ ನ್ಯೂಸ್!
ಬೆಂಗಳೂರಿಗರಿಗೆ ಮೆಟ್ರೋ ದಿಂದ ಮತ್ತೊಂದು ಗುಡ್ ನ್ಯೂಸ್!
ಅರಣ್ಯ ಇಲಾಖೆ ವಾಹನವ ಅಟ್ಟಾಡಿಸಿಕೊಂಡು ಬೆನ್ನಟ್ಟಿದ ಕಾಡಾನೆ, ವಿಡಿಯೋ ವೈರಲ್
ಅರಣ್ಯ ಇಲಾಖೆ ವಾಹನವ ಅಟ್ಟಾಡಿಸಿಕೊಂಡು ಬೆನ್ನಟ್ಟಿದ ಕಾಡಾನೆ, ವಿಡಿಯೋ ವೈರಲ್