Sign In

By signing in or creating an account, you agree with Associated Broadcasting Company's Terms & Conditions and Privacy Policy.

Crime News: ದೆಹಲಿಯ ಮೈದಾನದಲ್ಲಿ ಶವದ ತುಂಡುಗಳನ್ನು ತುಂಬಿಟ್ಟಿದ್ದ ಬ್ಯಾಗ್ ಪತ್ತೆ; ಕೊಲೆಯಾದವರ ಸುಳಿವೇ ಸಿಕ್ಕಿಲ್ಲ

ಭಾನುವಾರ ಪೊಲೀಸ್ ತಂಡ ಗಸ್ತು ತಿರುಗುತ್ತಿದ್ದಾಗ ರಾಮಲೀಲಾ ಮೈದಾನದ ಪೊದೆಗಳ ಬಳಿ ದುರ್ವಾಸನೆ ಬರುತ್ತಿತ್ತು. ಅಲ್ಲಿ ಪೊಲೀಸರಿಗೆ ಶವದ ಕತ್ತರಿಸಿದ ಭಾಗಗಳಿರುವ ಬ್ಯಾಗ್ ಕಂಡಿದೆ.

Crime News: ದೆಹಲಿಯ ಮೈದಾನದಲ್ಲಿ ಶವದ ತುಂಡುಗಳನ್ನು ತುಂಬಿಟ್ಟಿದ್ದ ಬ್ಯಾಗ್ ಪತ್ತೆ; ಕೊಲೆಯಾದವರ ಸುಳಿವೇ ಸಿಕ್ಕಿಲ್ಲ
ಸಾಂದರ್ಭಿಕ ಚಿತ್ರ
Follow us
TV9 Web
| Updated By: ಸುಷ್ಮಾ ಚಕ್ರೆ

Updated on:Jun 06, 2022 | 3:55 PM

ನವದೆಹಲಿ: ಕೊಲೆ ಮಾಡಿ, ಆ ಶವವನ್ನು ಸಣ್ಣ ತುಂಡುಗಳಾಗಿ ಕತ್ತರಿಸಿ, ಬ್ಯಾಗ್​ನಲ್ಲಿ ತುಂಬಿ ಮೈದಾನದಲ್ಲಿ ಇಟ್ಟುಹೋಗಿರುವ ಆಘಾತಕಾರಿ ಘಟನೆ ದೆಹಲಿಯಲ್ಲಿ ನಡೆದಿದೆ. ದೆಹಲಿಯ ರಾಮಲೀಲಾ ಮೈದಾನದಲ್ಲಿ (Ramlila Ground) ಬ್ಯಾಗ್‌ನೊಳಗೆ ಮನುಷ್ಯ ತುಂಡರಿಸಿದ ದೇಹದ ಭಾಗಗಳನ್ನು ಪತ್ತೆ ಹಚ್ಚಲಾಗಿದ್ದು, ಆ ಪ್ರದೇಶದಲ್ಲಿ ಆತಂಕ ಮೂಡಿಸಿದೆ. ಪಾಂಡವ ಪೊಲೀಸ್ ಠಾಣಾ ವ್ಯಾಪ್ತಿಯ ಕಲ್ಯಾಣಪುರಿ 20 ಬ್ಲಾಕ್ ಮುಂಭಾಗದ ರಾಮಲೀಲಾ ಮೈದಾನದಲ್ಲಿ ಬ್ಯಾಗ್ ಪತ್ತೆಯಾಗಿದೆ. ಕೊಲೆಯಾಗಿರುವ ವ್ಯಕ್ತಿಯ ಗುರುತನ್ನು ಪೊಲೀಸರು ಇನ್ನೂ ಪತ್ತೆಹಚ್ಚಿಲ್ಲ.

ಭಾನುವಾರ ಪೊಲೀಸ್ ತಂಡ ಗಸ್ತು ತಿರುಗುತ್ತಿದ್ದಾಗ ರಾಮಲೀಲಾ ಮೈದಾನದ ಪೊದೆಗಳ ಬಳಿ ದುರ್ವಾಸನೆ ಬರುತ್ತಿತ್ತು. ಈ ಬಗ್ಗೆ ತಕ್ಷಣ ಸ್ಥಳೀಯ ಪೊಲೀಸ್ ಠಾಣೆಗೆ ಮಾಹಿತಿ ರವಾನಿಸಲಾಗಿದ್ದು, ದುರ್ವಾಸನೆ ಬರುತ್ತಿದ್ದಂತೆ ಪಾಂಡವ ನಗರ ಠಾಣೆಯ ಪೊಲೀಸ್ ಸಿಬ್ಬಂದಿಗೆ ಮಾಹಿತಿ ನೀಡಿದ್ದಾರೆ. ಆಗ ಪೊಲೀಸರಿಗೆ ಶವದ ಕತ್ತರಿಸಿದ ಭಾಗಗಳನ್ನು ಹೊಂದಿರುವ ಬ್ಯಾಗ್ ಕಂಡಿದೆ.

ಇದನ್ನೂ ಓದಿ: Murder: ಬೈಕ್ ಡಿಕ್ಕಿ ಹೊಡೆದಿದ್ದಕ್ಕೆ ಕೆಳಗೆ ಬಿತ್ತು ಹೆಣ!; ಸಿನಿಮೀಯವಾಗಿ ಬಯಲಾಯ್ತು ಬೆಂಗಳೂರು ಯುವತಿಯ ಕೊಲೆ ರಹಸ್ಯ

ಈ ಕುರಿತು ಮಾಹಿತಿ ಪಡೆದ ಸ್ಟೇಷನ್ ಹೌಸ್ ಆಫೀಸರ್ ಮತ್ತು ಇತರ ಪೋಲೀಸ್ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ನೋಡಿದಾಗ ವ್ಯಕ್ತಿಯ ಕತ್ತರಿಸಿದ ದೇಹದ ಭಾಗಗಳನ್ನು ತುಂಬಿದ ಚೀಲವನ್ನು ನೋಡಿದರು. ಈ ನಡುವೆ ಪಾಂಡವನಗರ ಪೊಲೀಸ್ ಠಾಣೆಯಲ್ಲಿ ಕೊಲೆ ಪ್ರಕರಣ ದಾಖಲಾಗಿದ್ದು, ದೇಹದ ಎಲ್ಲಾ ಭಾಗಗಳನ್ನು ಎಲ್‌ಬಿಎಸ್ ಶವಾಗಾರದಲ್ಲಿ ಸಂರಕ್ಷಿಸಲಾಗಿದೆ. ಮೃತದೇಹ ಯಾರದ್ದು ಎಂಬುದರ ಗುರುತನ್ನು ಪತ್ತೆ ಹಚ್ಚುವ ಪ್ರಯತ್ನ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 3:53 pm, Mon, 6 June 22

VIDEO: ಧೋನಿ ಚಮತ್ಕಾರ... ಹೀಗೂ ರನೌಟ್ ಮಾಡಬಹುದು!
VIDEO: ಧೋನಿ ಚಮತ್ಕಾರ... ಹೀಗೂ ರನೌಟ್ ಮಾಡಬಹುದು!
ಆಸ್ಪತ್ರೆಯಲ್ಲಿ ಅಗ್ನಿ ಅವಘಡ, ಓರ್ವ ರೋಗಿ ಸಾವು, ಹಲವರಿಗೆ ಗಾಯ
ಆಸ್ಪತ್ರೆಯಲ್ಲಿ ಅಗ್ನಿ ಅವಘಡ, ಓರ್ವ ರೋಗಿ ಸಾವು, ಹಲವರಿಗೆ ಗಾಯ
ಹೊಸ ದಾಖಲೆ... ಕೇವಲ 26 ರನ್ ಬಾರಿಸಿ ಪಂದ್ಯ ಶ್ರೇಷ್ಠ ಪ್ರಶಸ್ತಿ ಪಡೆದ ಧೋನಿ
ಹೊಸ ದಾಖಲೆ... ಕೇವಲ 26 ರನ್ ಬಾರಿಸಿ ಪಂದ್ಯ ಶ್ರೇಷ್ಠ ಪ್ರಶಸ್ತಿ ಪಡೆದ ಧೋನಿ
ಉತ್ಸವಗಳ ಸಂದರ್ಭ ಪಾನಕ ಹಾಗೂ ಮಜ್ಜಿಗೆ ನೀಡುವುದರ ಹಿಂದಿನ ಅಧ್ಯಾತ್ಮಿಕ ರಹಸ್ಯ
ಉತ್ಸವಗಳ ಸಂದರ್ಭ ಪಾನಕ ಹಾಗೂ ಮಜ್ಜಿಗೆ ನೀಡುವುದರ ಹಿಂದಿನ ಅಧ್ಯಾತ್ಮಿಕ ರಹಸ್ಯ
ಚಂದ್ರ ವೃಶ್ಚಿಕ ರಾಶಿಯಲ್ಲಿ ಸಂಚರಿಸುವ ಈ ದಿನದ ಭವಿಷ್ಯ ಇಲ್ಲಿ ತಿಳಿಯಿರಿ
ಚಂದ್ರ ವೃಶ್ಚಿಕ ರಾಶಿಯಲ್ಲಿ ಸಂಚರಿಸುವ ಈ ದಿನದ ಭವಿಷ್ಯ ಇಲ್ಲಿ ತಿಳಿಯಿರಿ
ಬೆಂಗಳೂರು ಹೈವೇಯಲ್ಲಿ 3 ಬಾರಿ ಪಲ್ಟಿಯಾದ ನೀರಿನ ಟ್ಯಾಂಕರ್; ವಿಡಿಯೋ ವೈರಲ್
ಬೆಂಗಳೂರು ಹೈವೇಯಲ್ಲಿ 3 ಬಾರಿ ಪಲ್ಟಿಯಾದ ನೀರಿನ ಟ್ಯಾಂಕರ್; ವಿಡಿಯೋ ವೈರಲ್
ಬಂಗಾಳದಲ್ಲಿ ವಕ್ಫ್ ವಿರೋಧಿ ಪ್ರತಿಭಟನೆ; ಪೊಲೀಸ್ ವಾಹನಗಳಿಗೆ ಬೆಂಕಿ
ಬಂಗಾಳದಲ್ಲಿ ವಕ್ಫ್ ವಿರೋಧಿ ಪ್ರತಿಭಟನೆ; ಪೊಲೀಸ್ ವಾಹನಗಳಿಗೆ ಬೆಂಕಿ
ದೇವರ ಮೊರೆ ಹೋದ ಸಿಎಸ್​ಕೆ ತಂಡ; ಗೈರಾದ ಧೋನಿ
ದೇವರ ಮೊರೆ ಹೋದ ಸಿಎಸ್​ಕೆ ತಂಡ; ಗೈರಾದ ಧೋನಿ
ಸನ್‌ರೈಸರ್ಸ್ ಹೈದರಾಬಾದ್ ತಂಡ ಉಳಿದುಕೊಂಡಿರುವ ಹೋಟೆಲ್‌ನಲ್ಲಿ ಬೆಂಕಿ ದುರಂತ
ಸನ್‌ರೈಸರ್ಸ್ ಹೈದರಾಬಾದ್ ತಂಡ ಉಳಿದುಕೊಂಡಿರುವ ಹೋಟೆಲ್‌ನಲ್ಲಿ ಬೆಂಕಿ ದುರಂತ
ಶಾಸಕರು ಬಯಸಿದರೆ ಶಿವಕುಮಾರ್ ಸಿಎಂ ಆಗುವುದನ್ನು ಯಾರು ತಡೆದಾರು? ರಾಯರೆಡ್ಡಿ
ಶಾಸಕರು ಬಯಸಿದರೆ ಶಿವಕುಮಾರ್ ಸಿಎಂ ಆಗುವುದನ್ನು ಯಾರು ತಡೆದಾರು? ರಾಯರೆಡ್ಡಿ