AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Crime News: ಜೈಲಿನಲ್ಲಿ ವಿಚಾರಣೆ ವೇಳೆ ಆರೋಪಿ ಸಾವು; ಐವರು ಪೊಲೀಸರ ಅಮಾನತು

ಮೃತಪಟ್ಟ ಬುಕ್ಕಿಯ ಕುಟುಂಬಸ್ಥರು ಪೊಲೀಸರ ಮೇಲೆ ಗಂಭೀರ ಆರೋಪ ಮಾಡಿದ್ದು, ಪೊಲೀಸ್ ಸ್ಟೇಷನ್​ನಲ್ಲಿ ಪೊಲೀಸರ ಕಿರುಕುಳದಿಂದಲೇ ಆತ ಸಾವನ್ನಪ್ಪಿದ್ದಾನೆ ಎಂದಿದ್ದಾರೆ.

Crime News: ಜೈಲಿನಲ್ಲಿ ವಿಚಾರಣೆ ವೇಳೆ ಆರೋಪಿ ಸಾವು; ಐವರು ಪೊಲೀಸರ ಅಮಾನತು
ಸಾಂದರ್ಭಿಕ ಚಿತ್ರ
TV9 Web
| Edited By: |

Updated on: Aug 18, 2021 | 12:40 PM

Share

ಗ್ವಾಲಿಯರ್: ಪೊಲೀಸ್ ವಶದಲ್ಲಿದ್ದಾಗಲೇ ಬುಕ್ಕಿ (ಬೆಟ್ಟಿಂಗ್ ದಂಧೆ ನಡೆಸುವಾತ) ಸಾವನ್ನಪ್ಪಿರುವುದರಿಂದ ಐವರು ಪೊಲೀಸರನ್ನು ಅಮಾನತು ಮಾಡಲಾಗಿದೆ. ಮಧ್ಯಪ್ರದೇಶದ ಗ್ವಾಲಿಯರ್​​ನಲ್ಲಿ ಸೋಮವಾರ ರಾತ್ರಿ ಈ ಘಟನೆ ನಡೆದಿದೆ. ಠಾಣೆಯ ಇನ್​ಸ್ಪೆಕ್ಟರ್ ಸೇರಿದಂತೆ ಐವರು ಪೊಲೀಸರನ್ನು ಅಮಾನತು ಮಾಡಲಾಗಿದೆ ಎಂದು ಎಸ್​ಪಿ ಅಮಿತ್ ಸಂಘಿ ಮಾಹಿತಿ ನೀಡಿದ್ದಾರೆ.

ಈ ಹಿನ್ನೆಲೆಯಲ್ಲಿ ಮೃತಪಟ್ಟ ಬುಕ್ಕಿಯ ಕುಟುಂಬಸ್ಥರು ಪೊಲೀಸರ ಮೇಲೆ ಗಂಭೀರ ಆರೋಪ ಮಾಡಿದ್ದು, ಪೊಲೀಸ್ ಸ್ಟೇಷನ್​ನಲ್ಲಿ ಪೊಲೀಸರ ಕಿರುಕುಳದಿಂದಲೇ ಆತ ಸಾವನ್ನಪ್ಪಿದ್ದಾನೆ ಎಂದಿದ್ದಾರೆ. ಈ ಘಟನೆ ತೀವ್ರ ವಿವಾದಕ್ಕೀಡಾಗಿ, ಆ ಪೊಲೀಸ್ ಠಾಣೆಯ ಮುಂಭಾಗದಲ್ಲಿ ಪ್ರತಿಭಟನೆಗಳು ಕೂಡ ನಡೆದಿದ್ದವು. ಈ ಹಿನ್ನೆಲೆಯಲ್ಲಿ ಐವರು ಪೊಲೀಸರನ್ನು ಅಮಾನತುಗೊಳಿಸಿ ಎಸ್​ಪಿ ಸಂಘಿ ಆದೇಶ ಹೊರಡಿಸಿದ್ದಾರೆ.

ಇಂದರ್​ಗಂಜ್ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಟೌನ್ ಇನ್​ಸ್ಪೆಕ್ಟರ್ ರಾಜೇಂದ್ರ ಪರಿಹಾರ್, ಅಡಿಷನಲ್ ಸಬ್ ಇನ್​ಸ್ಪೆಕ್ಟರ್ ಬ್ರಿಜ್​ಲಾಲ್, ಕಾನ್​ಸ್ಟೆಬಲ್​ಗಳಾದ ನರೇಶ್, ಮುಖೇಶ್, ಶ್ಯಾಮ ಕುಮಾರ್ ಅವರನ್ನು ಅಮಾನತು ಮಾಡಲಾಗಿದೆ. ಈ ಪ್ರಕರಣದ ಕುರಿತು ಮ್ಯಾಜಿಸ್ಟ್ರೇಟ್ ತನಿಖೆಗೆ ಆದೇಶ ನೀಡಲಾಗಿದೆ. ಸೋನು ಬನ್ಸಾಲ್ ಅವರಿಗೆ ಕಿರುಕುಳ ನೀಡಿ ಕೊಲ್ಲಲಾಗಿದೆ ಎಂಬುದು ಸತ್ಯಕ್ಕೆ ದೂರವಾದ ಮಾತು. ಆದರೆ, ಈ ಬಗ್ಗೆ ಸತ್ಯಾಂಶ ಹೊರಬರಲಿ ಎಂಬ ಕಾರಣಕ್ಕೆ ತನಿಖೆಗೆ ಆದೇಶಿಸಲಾಗಿದೆ ಎಂದು ಎಸ್​ಪಿ ಸಂಘಿ ಹೇಳಿದ್ದಾರೆ.

ಪೊಲೀಸ್ ಠಾಣೆಯಲ್ಲಿರುವ ಸಿಸಿಟಿವಿ ದೃಶ್ಯಾವಳಿಗಳನ್ನು ಕಲೆಹಾಕಿ ಆ ದಿನ ಏನು ನಡೆದಿದೆ ಎಂವ ಬಗ್ಗೆ ಮಾಹಿತಿ ಸಂಗ್ರಹಿಸಲಾಗುತ್ತಿದೆ. ಬುಕ್ಕಿ ಸೋನು ಬನ್ಸಾಲ್ ಅವರನ್ನು ಸೋಮವಾರ ರಾತ್ರಿ ಬಂಧಿಸಲಾಗಿತ್ತು. ವಿಚಾರಣೆ ವೇಳೆ ತೀವ್ರ ಸುಸ್ತಾಗಿದ್ದ ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಆಸ್ಪತ್ರೆಗೆ ಕರೆದುಕೊಂಡು ಹೋಗುವಷ್ಟರಲ್ಲಿ ಆತ ಸಾವನ್ನಪ್ಪಿರುವ ವಿಷಯವನ್ನು ವೈದ್ಯರು ಘೋಷಿಸಿದ್ದರು. ಇದು ಪೊಲೀಸರೇ ಹಿಂಸೆ ನೀಡಿ ಮಾಡಿರುವ ಕೊಲೆ ಎಂದು ಆತನ ಕುಟುಂಬಸ್ಥರು ಆರೋಪಿಸಿದ್ದರು.

ಸೋಮವಾರ ರಾತ್ರಿ 8 ಗಂಟೆಗೆ ನಮ್ಮ ಮನೆಗೆ ಬಂದ ಪೊಲೀಸರು ನನ್ನ ಗಂಡನನ್ನು ಪೊಲೀಸ್ ಠಾಣೆಗೆ ಬರುವಂತೆ ಹೇಳಿದರು. ಸ್ಟೇಷನ್​ಗೆ ಹೋಗಿ 10 ನಿಮಿಷದಲ್ಲಿ ವಾಪಾಸ್ ಬರುತ್ತೇನೆ ಎಂದು ಹೇಳಿಹೋದ ನನ್ನ ಗಂಡ ಬಂದಿದ್ದು ಹೆಣವಾಗಿ. ರಾತ್ರಿ 2 ಗಂಟೆಗೆ ಬಂದ ಪೊಲೀಸ್ ಕಾನ್​ಸ್ಟೆಬಲ್ ನನ್ನ ಗಂಡ ಸಾವನ್ನಪ್ಪಿರುವ ವಿಷಯ ತಿಳಿಸಿದರು. ನನ್ನ ಗಂಡನ ದೇಹದ ಮೇಲೆ ಹಲ್ಲೆ ಮಾಡಿರುವ ಗಾಯದ ಗುರುತುಗಳಿತ್ತು. ಪೊಲೀಸರೇ ಅವರನ್ನು ಕೊಂದಿದ್ದಾರೆ ಎಂದು ಸೋನು ಬನ್ಸಾಲ್ ಅವರ ಪತ್ನಿ ಆರೋಪಿಸಿದ್ದಾರೆ.

ಇದನ್ನೂ ಓದಿ: Crime News: ಆನ್​ಲೈನ್​ ಗೇಮ್​ನಲ್ಲಿ 40,000 ರೂ. ಕಳೆದುಕೊಂಡ 13 ವರ್ಷದ ಬಾಲಕ; ಅಮ್ಮ ಬೈದಿದ್ದಕ್ಕೆ ಬೇಸರಗೊಂಡು ಆತ್ಮಹತ್ಯೆ

Murder News: ಹೆಂಗಸನ್ನು ಕೊಂದು, ಕತ್ತರಿಸಿ ಸೂಟ್​ಕೇಸ್​ನಲ್ಲಿ ಸಾಗಿಸಿದ ಹಂತಕರು; ಫ್ರಿಜ್​ನಿಂದ ಬಯಲಾಯ್ತು ಕೊಲೆ ರಹಸ್ಯ!

(Crime News: Bookie died in police custody in Madhya Pradesh Gwalior five Police suspended)

Follow Us
Web contact
Web contact

TV9 Kannada

Read More
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ