AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೈದರಾಬಾದ್​ ಎಕ್ಸ್​ಪ್ರೆಸ್​ವೇಯಲ್ಲಿ ಹೊತ್ತಿ ಉರಿದ ಕಾರು; ಪ್ರಾಣಾಪಾಯದಿಂದ ಪಾರಾದ ಚಾಲಕಿ

ಮಹಿಳೆ ತನ್ನ ಕಾರಿನಲ್ಲಿ ನೆಲ್ಲೂರಿನಿಂದ ಬುಚ್ಚಿರೆಡ್ಡಿ ಪಾಲೇಂ ಕಡೆಗೆ ಹೊರಟಿದ್ದಾಗ ಇದ್ದಕ್ಕಿದ್ದಂತೆ ಕಾರಿಗೆ ಬೆಂಕಿ ಹೊತ್ತಿಕೊಂಡಿದೆ. ಕಾರಿನ ಹಿಂಬದಿ ಸೀಟಿನಲ್ಲಿದ್ದವರು ಕೂಡ ತಕ್ಷಣ ಕೆಳಗೆ ಇಳಿದುಕೊಂಡಿದ್ದಾರೆ.

ಹೈದರಾಬಾದ್​ ಎಕ್ಸ್​ಪ್ರೆಸ್​ವೇಯಲ್ಲಿ ಹೊತ್ತಿ ಉರಿದ ಕಾರು; ಪ್ರಾಣಾಪಾಯದಿಂದ ಪಾರಾದ ಚಾಲಕಿ
ಹೈದರಾಬಾದ್​ ಎಕ್ಸ್​ಪ್ರೆಸ್​ವೇಯಲ್ಲಿ ಹೊತ್ತಿ ಉರಿದ ಕಾರು
TV9 Web
| Edited By: |

Updated on: Jul 12, 2021 | 7:21 PM

Share

ಹೈದರಾಬಾದ್: ಆಂಧ್ರಪ್ರದೇಶದ ನೆಲ್ಲೂರು ಜಿಲ್ಲೆಯ ಹೆದ್ದಾರಿಯಲ್ಲೇ ಕಾರಿಗೆ ಬೆಂಕಿ ತಗುಲಿ, ಹೊತ್ತಿ ಉರಿದಿದೆ. ನಗರದ ಮಧ್ಯೆ ಎಕ್ಸ್​ಪ್ರೆಸ್​ವೇಯಲ್ಲಿ ತೆರಳುತ್ತಿದ್ದಾಗಲೇ ಈ ಬೆಂಕಿ ಅವಘಡ ಸಂಭವಿಸಿದೆ. ಯಾರಿಗೂ ಪ್ರಾಣಾಪಾಯಗಳು ಸಂಭವಿಸಿಲ್ಲ.

ಕಾರು ಚಲಾಯಿಸುತ್ತಿದ್ದ ಮಹಿಳೆಗೆ ಕಾರಿನ ಇಂಜಿನ್​ನಲ್ಲಿ ಬೆಂಕಿ ಕಿಡಿಗಳು ಹೊರಬರುತ್ತಿರುವುದು ಕಾಣಿಸಿತು. ಹೀಗಾಗಿ, ತಕ್ಷಣ ಅವರು ನಡುರಸ್ತೆಯಲ್ಲೇ ಕಾರನ್ನು ನಿಲ್ಲಿಸಿ ಕೆಳಗೆ ಇಳಿಯಲು ಪ್ರಯತ್ನಿಸಿದರು. ಆಕೆಯ ಸಹಾಯಕ್ಕೆ ಬಂದ ಅಕ್ಕಪಕ್ಕದ ವಾಹನದವರು ಕಾರಿನಿಂದ ಆಚೆ ಬರಲು ಸಹಾಯ ಮಾಡಿದರು. ಅಷ್ಟರಲ್ಲಿ ಕಾರಿಗೆ ಸಂಪೂರ್ಣವಾಗಿ ಬೆಂಕಿ ಹೊತ್ತಿಕೊಂಡಿತ್ತು.

ಮಾರುತಿ ಸ್ವಿಫ್ಟ್​ ಕಾರು ಸಂಪೂರ್ಣವಾಗಿ ಬೆಂಕಿಗೆ ಆಹುತಿಯಾಗಿದೆ. ಅಗ್ನಿಶಾಮಕದಳದವರು ಸ್ಥಳಕ್ಕೆ ಆಗಮಿಸುವಷ್ಟರಲ್ಲಿ ಕಾರು ಬಹುಪಾಲು ಸುಟ್ಟುಹೋಗಿತ್ತು. ಮಹಿಳೆ ತನ್ನ ಕಾರಿನಲ್ಲಿ ನೆಲ್ಲೂರಿನಿಂದ ಬುಚ್ಚಿರೆಡ್ಡಿ ಪಾಲೇಂ ಕಡೆಗೆ ಹೊರಟಿದ್ದಾಗ ಇದ್ದಕ್ಕಿದ್ದಂತೆ ಕಾರಿಗೆ ಬೆಂಕಿ ಹೊತ್ತಿಕೊಂಡಿದೆ. ಕಾರಿನ ಹಿಂಬದಿ ಸೀಟಿನಲ್ಲಿದ್ದವರು ಕೂಡ ತಕ್ಷಣ ಕೆಳಗೆ ಇಳಿದುಕೊಂಡಿದ್ದಾರೆ. ಹೀಗಾಗಿ, ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.

ಶಾರ್ಟ್​ ಸರ್ಕ್ಯೂಟ್​ನಿಂದ ಈ ರೀತಿ ಅಚಾನಕ್ಕಾಗಿ ಬೆಂಕಿ ಹೊತ್ತಿಕೊಂಡಿರಬಹುದು ಎಂದು ಪೊಲೀಸರು ಅನುಮಾನ ವ್ಯಕ್ತಪಡಿಸಿದ್ದಾರೆ. ಈ ಘಟನೆಯ ಕುರಿತು ಪೊಲೀಸರು ವಿಚಾರಣೆ ನಡೆಸಿದ್ದಾರೆ.

ಇದನ್ನೂ ಓದಿ: Fire Accident in Dhaka: ಧಗಧಗನೆ ಹೊತ್ತಿ ಉರಿದ ಬಾಂಗ್ಲಾದೇಶದ ಫುಡ್ ಫ್ಯಾಕ್ಟರಿ, ಬೆಂಕಿ ದುರಂತದಲ್ಲಿ 52 ಜನ ಸಜೀವ ದಹನ

(Car Catches Fire on Hyderabad’s Expressway on Monday)

Follow Us
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್