Crime News: 2.5 ಲಕ್ಷಕ್ಕೆ ಗಂಡು ಮಗುವನ್ನು ಮಾರಿದ ತಾಯಿ ಮರುಕ್ಷಣವೇ ಹಣ ಕಳೆದುಕೊಂಡ ಕತೆಯಿದು!

Chennai News: ನನ್ನ ಗಂಡ ನನ್ನನ್ನು ಬಿಟ್ಟು ಹೋಗಿದ್ದರಿಂದ ಆರ್ಥಿಕ ಮುಗ್ಗಟ್ಟಿನಿಂದ ಬಳಲುತ್ತಿದ್ದ ನಾನು ಎರಡನೇ ಮಗುವಿಗೆ ಗರ್ಭಪಾತ ಮಾಡಿಸಲು ಅಲ್ಲಿಗೆ ಹೋಗಿದ್ದೆ. ಆಗ ತನಗೆ ತಿಳಿದಿರುವ ವ್ಯಕ್ತಿಗೆ ಮಗುವನ್ನು ಮಾರಾಟ ಮಾಡಲು ಸಿದ್ಧರಿದ್ದರೆ ಉತ್ತಮ ಮೊತ್ತವನ್ನು ನೀಡುವುದಾಗಿ ಜಯಗೀತಾ ಹೇಳಿದ್ದಳು ಎಂದು ಸಂತ್ರಸ್ತೆ ಹೇಳಿದ್ದಾರೆ.

Crime News: 2.5 ಲಕ್ಷಕ್ಕೆ ಗಂಡು ಮಗುವನ್ನು ಮಾರಿದ ತಾಯಿ ಮರುಕ್ಷಣವೇ ಹಣ ಕಳೆದುಕೊಂಡ ಕತೆಯಿದು!
ಸಾಂಕೇತಿಕ ಚಿತ್ರ
Follow us
| Updated By: ಸುಷ್ಮಾ ಚಕ್ರೆ

Updated on: Nov 29, 2021 | 9:22 PM

ಮಹಿಳೆಯೊಬ್ಬರು ತನ್ನ ಒಂದು ವಾರದ ಮಗುವನ್ನು 2.5 ಲಕ್ಷಕ್ಕೆ ಮಾರಾಟ ಮಾಡಿ ಮನೆಗೆ ಹಿಂದಿರುಗುತ್ತಿದ್ದಾಗ ಪುರಸಾವಲ್ಕಮ್‌ನಲ್ಲಿ ಇಬ್ಬರು ವ್ಯಕ್ತಿಗಳು ಆಕೆಯ ಬಳಿಯಿದ್ದ ಹಣವನ್ನು ದರೋಡೆ ಮಾಡಿದ್ದಾರೆ. ಮಗು ಮತ್ತು ಹಣ ಎರಡನ್ನೂ ಕಳೆದುಕೊಂಡು ಆಕೆ ಕಂಗಾಲಾಗಿದ್ದಾಳೆ. ಈ ಬಗ್ಗೆ ಆ ಮಹಿಳೆ ಪೊಲೀಸರಿಗೆ ದೂರು ನೀಡಿದ್ದು, ಪೊಲೀಸರು ತನಿಖೆ ಆರಂಭಿಸಿದ್ದಾರೆ. ತಮಿಳುನಾಡಿನಲ್ಲಿ ಭಾನುವಾರ ಈ ಘಟನೆ ನಡೆದಿದೆ.

28 ವರ್ಷದ ಯಾಸ್ಮಿನ್ ವೆಪೇರಿ ಪೊಲೀಸರಿಗೆ ಈ ಬಗ್ಗೆ ದೂರು ನೀಡಿದ್ದು, ತಾನು ಯಾರಿಗೆ ಮಗುವನ್ನು ಮಾರಾಟ ಮಾಡಿದ್ದೇನೋ ಅದೇ ಮಹಿಳೆಯ ಕೈವಾಡ ಈ ದರೋಡೆಯ ಹಿಂದೆ ಇರಬಹುದು ಎಂದು ಆಕೆ ಅನುಮಾನ ವ್ಯಕ್ತಪಡಿಸಿದ್ದಾಳೆ. ಈ ಬಗ್ಗೆ ಟೈಮ್ಸ್​ ಆಫ್ ಇಂಡಿಯಾ ವರದಿ ಮಾಡಿದ್ದು, ನಾನು ಜಯಗೀತಾ ಎಂಬ ಮಹಿಳೆಗೆ ನನ್ನ 1 ವಾರದ ಮಗುವನ್ನು ಮಾರಾಟ ಮಾಡಿದ್ದೆ. ಆಕೆಯೇ ಈ ದರೋಡೆಗೆ ಕುಮ್ಮಕ್ಕು ಕೊಟ್ಟಿರುವ ಸಾಧ್ಯತೆಯಿದೆ ಎಂದು ಆರೋಪಿಸಿದ್ದಾರೆ.

ಯಾಸ್ಮಿನ್ ಅವರು ಕೆಲ್ಲಿಸ್‌ನಲ್ಲಿರುವ ಖಾಸಗಿ ಆಸ್ಪತ್ರೆಗೆ ಭೇಟಿ ನೀಡಿದ ಸಂದರ್ಭದಲ್ಲಿ ಎನ್ನೂರಿನ ನಿವಾಸಿ ಜಯಗೀತಾ ಅವರನ್ನು ಭೇಟಿಯಾಗಿದ್ದರು. ನನ್ನ ಗಂಡ ನನ್ನನ್ನು ಬಿಟ್ಟು ಹೋಗಿದ್ದರಿಂದ ಆರ್ಥಿಕ ಮುಗ್ಗಟ್ಟಿನಿಂದ ಬಳಲುತ್ತಿದ್ದ ನಾನು ಎರಡನೇ ಮಗುವಿಗೆ ಗರ್ಭಪಾತ ಮಾಡಿಸಲು ಅಲ್ಲಿಗೆ ಹೋಗಿದ್ದೆ. ಆಗ ತನಗೆ ತಿಳಿದಿರುವ ವ್ಯಕ್ತಿಗೆ ಮಗುವನ್ನು ಮಾರಾಟ ಮಾಡಲು ಸಿದ್ಧರಿದ್ದರೆ ಉತ್ತಮ ಮೊತ್ತವನ್ನು ನೀಡುವುದಾಗಿ ಜಯಗೀತಾ ಹೇಳಿದ್ದಳು ಎಂದು ಸಂತ್ರಸ್ತೆ ಹೇಳಿದ್ದಾರೆ.

ನವೆಂಬರ್ 21ರಂದು ಯಾಸ್ಮಿನ್ ಗಂಡು ಮಗುವಿಗೆ ಜನ್ಮ ನೀಡಿದ ನಂತರ, ಜಯಗೀತಾ ಮಗುವನ್ನು ಪುರಸಾವಲ್ಕಮ್ ಹೈ ರೋಡ್‌ಗೆ ಕರೆತರುವಂತೆ ಕೇಳಿದಳು. ಯಾಸ್ಮಿನ್ ನಿಗದಿತ ಸ್ಥಳಕ್ಕೆ ತಲುಪಿದಾಗ, ಜಯಗೀತಾ ಅವರಿಗೆ ಧನಮ್ ಎಂಬ ಮಹಿಳೆ ಮತ್ತು ಇಬ್ಬರು ಪುರುಷರನ್ನು ಪರಿಚಯಿಸಿದರು.

ವರದಿಗಳ ಪ್ರಕಾರ, ಯಾಸ್ಮಿನ್ ತನ್ನ ಗಂಡು ಮಗುವನ್ನು ಧನಮ್‌ಗೆ ಒಪ್ಪಿಸಿ 2.5 ಲಕ್ಷ ರೂ. ಪಡೆದುಕೊಂಡಳು. ಅವಳು ಒಪ್ಪಂದದ ಅಡಿಯಲ್ಲಿ ‘ಬಾಂಡ್’ ಎಂದು ಹೇಳಲಾದ ಖಾಲಿ ಪೇಪರ್‌ಗೆ ಸಹಿ ಹಾಕುವಂತೆ ಕೇಳಿಕೊಂಡಳು ಎಂದು ಪೊಲೀಸರಿಗೆ ತಿಳಿಸಿದ್ದಾಳೆ. ಕೆಲವು ನಿಮಿಷಗಳ ನಂತರ, ಅವಳು ತನ್ನ ಹಿರಿಯ ಮಗಳು ಶರ್ಮಿಳಾಳೊಂದಿಗೆ ಆಟೋ-ರಿಕ್ಷಾವನ್ನು ತೆಗೆದುಕೊಂಡಾಗ, ಇಬ್ಬರು ಪುರುಷರು ಅವಳನ್ನು ಬೈಕ್​ನಲ್ಲಿ ಹಿಂಬಾಲಿಸಲು ಪ್ರಾರಂಭಿಸಿದರು.

ಚಾಲಕನ ಬಳಿ ವಿಳಾಸ ಕೇಳುವ ನೆಪದಲ್ಲಿ ಇಬ್ಬರು ಪುಲಿಯನ್‌ತೋಪ್ ಬಳಿ ಆಟೋ ನಿಲ್ಲಿಸಿದ್ದರು ಎಂದು ಯಾಸ್ಮಿನ್ ಹೇಳಿದ್ದಾರೆ. ಆಕೆಯನ್ನು ಬೆದರಿಸಿ ನಗದು ದೋಚಿ ಪರಾರಿಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಜಯಗೀತಾ ಹಾಗೂ ಇಬ್ಬರ ಬಂಧನಕ್ಕೆ ವಿಶೇಷ ತಂಡ ರಚಿಸಿದ್ದಾರೆ.

ಇದನ್ನೂ ಓದಿ: Crime News: ಗನ್​ ಜೊತೆ ಸೆಲ್ಫೀ ಕ್ಲಿಕ್ಕಿಸುವಾಗ ಹಣೆಗೆ ಆಕಸ್ಮಿಕವಾಗಿ ಗುಂಡು ಹಾರಿ ಬಾಲಕ ಸಾವು!

Crime News: ಪ್ರೀತಿಸಲು ನಿರಾಕರಿಸಿದ ಯುವತಿಗೆ ಬೆಂಕಿ ಹಚ್ಚಿ, ತಾನೂ ಸಾಯಲು ಪ್ರಯತ್ನಿಸಿದ ಪ್ರೇಮಿ!

‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ