2 ಸರ್ಕಾರಿ ಬಸ್‌ಗಳ ಮಧ್ಯೆ ಡಿಕ್ಕಿ: ಇಬ್ಬರು ಸಾವು, 10ಕ್ಕೂ ಹೆಚ್ಚು ಜನರಿಗೆ ಗಂಭೀರ ಗಾಯ

ವಿಜಯಪುರ ತಾಲೂಕಿನ ಕವಲಗಿ ಬಳಿ ರಾಷ್ಟ್ರೀಯ ಹೆದ್ದಾರಿ 52ರಲ್ಲಿ 2 ಸರ್ಕಾರಿ ಬಸ್‌ಗಳು ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸಾವನ್ನಪ್ಪಿದ್ದು, 10ಕ್ಕೂ ಹೆಚ್ಚು ಜನರಿಗೆ ಗಂಭೀರ ಗಾಯವಾಗಿರುವಂತಹ ಘಟನೆ ನಡೆದಿದೆ. ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆಯಿದೆ ಎನ್ನಲಾಗುತ್ತಿದೆ.

2 ಸರ್ಕಾರಿ ಬಸ್‌ಗಳ ಮಧ್ಯೆ ಡಿಕ್ಕಿ: ಇಬ್ಬರು ಸಾವು, 10ಕ್ಕೂ ಹೆಚ್ಚು ಜನರಿಗೆ ಗಂಭೀರ ಗಾಯ
ಸರ್ಕಾರಿ ಬಸ್‌ಗಳ ಮುಖಾಮುಖಿ ಡಿಕ್ಕಿ
Edited By:

Updated on: Jan 06, 2024 | 5:33 PM

ವಿಜಯಪುರ, ಜನವರಿ 06: 2 ಸರ್ಕಾರಿ ಬಸ್‌ಗಳು ಮುಖಾಮುಖಿ ಡಿಕ್ಕಿ (collision) ಹೊಡೆದ ಪರಿಣಾಮ ಇಬ್ಬರು ಸಾವನ್ನಪ್ಪಿದ್ದು, 10ಕ್ಕೂ ಹೆಚ್ಚು ಜನರಿಗೆ ಗಂಭೀರ ಗಾಯವಾಗಿರುವಂತಹ ಘಟನೆ ವಿಜಯಪುರ ತಾಲೂಕಿನ ಕವಲಗಿ ಬಳಿ ಹೆದ್ದಾರಿಯಲ್ಲಿ ನಡೆದಿದೆ. ಸಾಜೀದಾ ಬೇಗಂ(36), ರೋಹಿಣಿ ಪಂಚಾಳ(31) ಮೃತರು. ಸಾಜೀದಾ ಬಸನವಬಾಗೇಬಾಡಿ ತಾಲೂಕಿನ ಡೋಣೂರು ನಿವಾಸಿ. ಮೃತ ರೋಹಿಣಿ ಪಂಚಾಳ ಕಲಬುರಗಿ ನಗರದ ನಿವಾಸಿ. ಸದ್ಯ ಗಾಯಾಳು ಪ್ರಯಾಣಿಕರಿಗೆ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

KA 28 F 2273 ಹಾಗೂ KA 32 F 2398 ಸಂಖ್ಯೆಯ ಬಸ್​ ಅಪಘಾತದಲ್ಲಿ ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆಯಿದೆ. ರಾಷ್ಟ್ರೀಯ ಹೆದ್ದಾರಿ 52ರಲ್ಲಿ ಅಪಘಾತ ಹಿನ್ನೆಲೆ ಸಂಚಾರ ಬಂದ್ ಮಾಡಲಾಗಿದೆ. 3 ಕಿಲೋಮೀಟರ್​ವರೆಗೂ ವಾಹನಗಳು ಸಾಲುಗಟ್ಟಿ ನಿಂತಿವೆ. ವಿಜಯಪುರ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ದಾಖಲಾಗಿದೆ.

ದಿನಸಿ ಅಂಗಡಿ ಮಾಲೀಕನ ಬರ್ಬರ ಹತ್ಯೆ

ಆನೇಕಲ್: ಹೊಸೂರಿನ ಸಿಪ್​​​ಕಾಟ್​​​ ಸಮೀಪದ ಬೇಗಿಪಲ್ಲಿಯಲ್ಲಿ ನಿನ್ನೆ ಸಂಜೆ ಬೈಕ್​​ನಲ್ಲಿ ಬಂದ ಮುಸುಕುಧಾರಿಗಳಿಂದ ದಿನಸಿ ಅಂಗಡಿ ಮಾಲಿಕನನ್ನು ಹತ್ಯೆ ಮಾಡಲಾಗಿದೆ.

ಇದನ್ನೂ ಓದಿ: ಆನೇಕಲ್: ವಯಸ್ಸಾದ ತಾಯಿಯನ್ನು ರಸ್ತೆ ಬದಿ ಬಿಟ್ಟು ಮಗಳು, ಅಳಿಯ ಪರಾರಿ; ಮಾನವೀಯತೆ ತೋರಿದ ಗ್ರಾಮಸ್ಥರು

ಹೊಸೂರು ಸಮೀಪದ ಬೇಗಿ ನಿವಾಸಿ ತಿಮ್ಮರಾಜು(40) ಮೃತ ವ್ಯಕ್ತಿ. 25 ಬಾರಿ ಚಾಕುವಿನಿಂದ ಇರಿದು ಕಬ್ಬಿಣದ ರಾಡ್​ನಿಂದ ಹಲ್ಲೆ ಮಾಡಿದ್ದು, ತೀವ್ರ ರಕ್ತಸ್ರಾವದಿಂದ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಸಿಪ್​​ ಕಾಟ್​​​ ಪೊಲೀಸ್​​ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ: ಮುಖ್ಯ ಶಿಕ್ಷಕ ಅಮಾನತು

ಮೈಸೂರು: ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ಆರೋಪ ಸಂಬಂಧ ನಂಜನಗೂಡು ತಾಲೂಕಿನ ದಾಸನೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕನನ್ನು ಅಮಾನತುನ ಮಾಡಲಾಗಿದೆ. ಲೈಂಗಿಕ ಕಿರುಕುಳದ ಬಗ್ಗೆ ಮುಖ್ಯ ಶಿಕ್ಷಕ ಪ್ರಕಾಶ್ ವಿರುದ್ಧ ವಿದ್ಯಾರ್ಥಿನಿಯರ ಪೋಷಕರು ದೂರು ನೀಡಿದ್ದರು.

ಇದನ್ನೂ ಓದಿ: ಕಲ್ಯಾಣ ಮಂಟಪದಲ್ಲಿ ಅದ್ದೂರಿ ಮದುವೆ ಮಧ್ಯೆ ಕಳ್ಳತನ! ಆರು ಗಂಟೆಯಲ್ಲೇ ಕಳ್ಳನನ್ನು ಹಿಡಿದ ಬೆಳಗಾವಿ ಪೊಲೀಸರು

ಮೈ ಕೈ ಮುಟ್ಟುವುದು, ಅಸಭ್ಯವಾಗಿ ವರ್ತಿಸುತ್ತಿರುವ ಬಗ್ಗೆ ಪೋಷಕರು ದೂರು ನೀಡಿದ್ದರು. ಪ್ರಕರಣ ಸಂಬಂಧ ಪೋಕ್ಸೋದಡಿ ಪ್ರಕರಣ ದಾಖಲು ವಜಾಕ್ಕೆ ಡಿಡಿಪಿಐಗೆ ಶಿಫಾರಸ್ಸು ಮಾಡಲಾಗಿದೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 4:55 pm, Sat, 6 January 24

Ashok Yadalli

ನನ್ನ ಹೆಸರು ಅಶೋಕ ಯಡಳ್ಳಿ, ಟಿವಿ9 ಕನ್ನಡ ಸುದ್ದಿ ವಾಹಿನಿಯಲ್ಲಿ ಕಳೆದ 2012 ರಿಂದ ವಿಜಯಪುರ ಜಿಲ್ಲಾ ಪ್ರತಿನಿಧಿಯಾಗಿ ಸೇವೆ ಸಲ್ಲಿಸುತ್ತಿದ್ದೇನೆ. ಟಿವಿ9 ಸಂಸ್ಥೆಗೂ ಮುನ್ನ ಹೈದರಾಬಾದಿನ ರಾಮೋಜಿ ರಾವ್ ಪೀಲ್ಮ್ ಸಿಟಿಯಲ್ಲಿದ್ದ ಈಟಿವಿ ಕನ್ನಡ ಮನರಂಜನೆ ಹಾಗೂ ಸುದ್ದಿ ವಾಹಿನಿಯಲ್ಲಿ ಸೇವೆ ಸಲ್ಲಿಸುತ್ತಿದ್ದೆ. ಇದು ನನ್ನ ಕೆಲಸದ ಬಗ್ಗೆ ಹೇಳಿರೋ ಮಾಹಿತಿಯಾಗಿದ್ದು ವೈಯುಕ್ತಿಕ ಮಾಹಿತಿ ಬಗ್ಗೆ ಹೇಳದಾದರೆ. ನಾನು ಮೂಲತಃ ಧಾರವಾಡ ಜಿಲ್ಲೆಯವ. ಧಾರವಾಡ ತಾಲೂಕಿನ ಅಮ್ಮಿನಬಾವಿ ಗ್ರಾಮ ನಮ್ಮೂರು. ತಂದೆ ತಾಯಿ ಸಹೋದರ ಸಹೋದರಿಯರ ತುಂಬು ಕುಟುಂಬ. ಮೂಲತಃ ಕೃಷಿ ಕುಟುಂಬವಾಗಿದ್ದು, ಹಿರಿಯರಿಂದ ಬಂದ ಜಮೀನುಗಳಿವೆ. ಪ್ರಾಥಮಿಕ ಶಿಕ್ಷಣ ನಮ್ಮೂರಲ್ಲೇ ಬಳಿಕ ಹೈಸ್ಕೂಲ್ ನಿಂದ ಹಿಡಿದು ಪಿಜಿವರೆಗೂ ಧಾರವಾಡ. ಕರ್ನಾಟಕ ವಿಶ್ವವಿದ್ಯಾಲಯದಿಂದ ಪತ್ರಿಕೋಧ್ಯಮ ಮತ್ತು ಸಮೂಹ ಸಂವಹನ ವಿಭಾಗದಿಂದ ಸ್ನಾತಕೋತ್ತರ ಪದವಿ ಪಡೆದಿದ್ದೇನೆ. ಟಿವಿ9 ನಲ್ಲಿ ಹಲವಾರು ಉತ್ತಮ ವರದಿಗಳನ್ನು ನೀಡಿದ ಹೆಮ್ಮೆ ತೃಪ್ತಿ ನನಗಿದೆ. ಆಲಮೇಲದ ವಿದ್ಯಾರ್ಥಿನಿಯರ ಮೇಲಿನ ಲೈಂಗಿಕ ದೌರ್ಜನ್ಯ ಬಹಿರಂಗ ಮಾಡಿದ್ದು, ವಿಜಯಪುರ ಬಾಗಲಕೋಟೆಯಲ್ಲಿ ಕೊಳವೆ ಬಾವಿಯಲ್ಲಿ ಬಿದ್ದಿದ್ದ ಮಕ್ಕಳ ಕುರಿತ ವರದಿ. ಹಾವಿನ ಸೇಡಿಗೆ ಒಳಗಾಗಿದ್ದ ಯುವಕನ ಸಮಸ್ಯೆ ಬಗೆ ಹರಿಸಿದ್ದು. ಉಷ್ಣ ವಿದ್ಯುತ್ ಸ್ಥಾವರದ ಗಲಾಟೆ ಹೀಗೆ ಹಲವಾರು ವಿಶೇಷ ಸುದ್ದಿಗಳು, ಚುನಾವಣೆ, ರಾಜಕೀಯ, ಕ್ರೀಡೆ, ಹೀಗೂ ಉಂಟೇ, ವಾರೆಂಟ್, ಮಾರುವೇಷ, ಸಾಧನೆ, ಕೃಷಿ ಹೀಗೆ ಅನೇಕ ವಿಚಾರಗಳ ಕುರಿತ ಸುದ್ದಿಗಳಿಗೆ ನ್ಯಾಯ ಒದಗಿಸಿದ್ದೇನೆಂದು ನಂಬಿದ್ದೇನೆ. ಭವಿಷ್ಯದಲ್ಲಿ ಇನ್ನೂ ಹೆಚ್ಚಿನ ಉತ್ತಮ ವರದಿಗಳನ್ನು ಮಾಡುವ ಹಂಬಲ - ಆಸಕ್ತಿಯಿದೆ. ಕ್ರೀಡೆ, ಸಾಮಾಜಿಕ, ಕೃಷಿಯಲ್ಲಿ ಹೆಚ್ಚಿನ ಆಸಕ್ತಿಯಿದೆ. ಧನ್ಯವಾದಗಳು.......

Read More
Follow Us