Sign In

By signing in or creating an account, you agree with Associated Broadcasting Company's Terms & Conditions and Privacy Policy.

Crime News: ಆಭರಣಕ್ಕಾಗಿ 7 ತಿಂಗಳ ಗರ್ಭಿಣಿ ಸೊಸೆಗೆ ಬೆಂಕಿ ಹಚ್ಚಿದ ಅತ್ತೆ-ಮಾವ

ಖುಷ್ಬೂ 2022ರ ಏಪ್ರಿಲ್ ತಿಂಗಳಲ್ಲಿ ವಿವಾಹವಾಗಿದ್ದರು. ಮದುವೆ ಸಮಾರಂಭದಲ್ಲಿ ತಾವು ನೀಡಿದ್ದ ಆಭರಣಗಳನ್ನು ಹಿಂದಿರುಗಿಸಲು ಆಕೆಯ ಗಂಡನ ಮನೆಯವರು ಒತ್ತಾಯಿಸಿದ್ದರು. ಅದಕ್ಕೆ ಆಕೆ ಒಪ್ಪದಿದ್ದಾಗ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದರು ಎನ್ನಲಾಗಿದೆ.

Crime News: ಆಭರಣಕ್ಕಾಗಿ 7 ತಿಂಗಳ ಗರ್ಭಿಣಿ ಸೊಸೆಗೆ ಬೆಂಕಿ ಹಚ್ಚಿದ ಅತ್ತೆ-ಮಾವ
ಪ್ರಾತಿನಿಧಿಕ ಚಿತ್ರ
Follow us
TV9 Web
| Updated By: ಸುಷ್ಮಾ ಚಕ್ರೆ

Updated on: Jan 10, 2023 | 4:51 PM

ನವದೆಹಲಿ: ತನ್ನ ಬಳಿಯಿದ್ದ ಆಭರಣವನ್ನು ವಾಪಾಸ್ ನೀಡಲು ಒಪ್ಪದ 7 ತಿಂಗಳ ಗರ್ಭಿಣಿಯೊಬ್ಬರಿಗೆ (Pregnant Lady) ಆಕೆಯ ಅತ್ತೆ-ಮಾವ ಬೆಂಕಿ ಹಚ್ಚಿ ಕೊಲೆ ಮಾಡಲು ಯತ್ನಿಸಿರುವ ಆಘಾತಕಾರಿ ಘಟನೆ (Shocking News) ದೆಹಲಿಯಲ್ಲಿ ನಡೆದಿದೆ. ಆ ಗರ್ಭಿಣಿಗೆ ಸುಟ್ಟ ಗಾಯಗಳಾಗಿದ್ದು, ಕೂಡಲೇ ಆಕೆಯನ್ನು ದೆಹಲಿಯ ಬವಾನಾ ಪ್ರದೇಶದಲ್ಲಿರುವ ಆಸ್ಪತ್ರೆಗೆ ದಾಖಲಿಸಲಾಗಿದೆ. ಸದ್ಯ ಆಕೆಗೆ ಚಿಕಿತ್ಸೆ ನೀಡಲಾಗುತ್ತಿದ್ದು, ಆಕೆಯ ಸ್ಥಿತಿ ಸ್ಥಿರವಾಗಿದೆ ಎನ್ನಲಾಗಿದೆ.

ಈ ಘಟನೆಗೆ ಸಂಬಂಧಿಸಿದಂತೆ ಸಂತ್ರಸ್ತೆ ಮತ್ತು ಆಕೆಯ ಪತಿ ದೆಹಲಿ ಪೊಲೀಸರಿಗೆ ವ್ಯತಿರಿಕ್ತ ಹೇಳಿಕೆಗಳನ್ನು ನೀಡಿರುವುದು ಕುತೂಹಲ ಮೂಡಿಸಿದೆ. ದೆಹಲಿ ಮಹಿಳಾ ಆಯೋಗ ಈ ಪ್ರಕರಣದಲ್ಲಿ ಆ ಗರ್ಭಿಣಿಯ ಪತಿ ಮತ್ತು ಅವರ ಕುಟುಂಬದ ಶಾಮೀಲಿದೆ ಎಂದು ಆರೋಪಿಸಿದೆ.

ಇದನ್ನೂ ಓದಿ: Yadagiri: ಅರಣ್ಯದಲ್ಲಿ ಹತ್ತಿದ್ದ ಬೆಂಕಿ ನಂದಿಸಲು ಹೋಗಿ ಬೆಂಕಿಗಾಹುತಿಯಾದ ಅರಣ್ಯ ವೀಕ್ಷಕ

ದೆಹಲಿ ಮಹಿಳಾ ಆಯೋಗದ ಅಧ್ಯಕ್ಷೆ ಸ್ವಾತಿ ಮಲಿವಾಲ್ ಅವರು 7 ತಿಂಗಳ ಗರ್ಭಿಣಿಯನ್ನು ಬವಾನಾದಲ್ಲಿ ಪೆಟ್ರೋಲ್ ಸುರಿದು ಆಕೆಯ ಪತಿ ಮತ್ತು ಅತ್ತೆ-ಮಾವ ಬೆಂಕಿ ಹಚ್ಚಿದ್ದಾರೆ ಎಂದು ಆರೋಪಿಸಿದ್ದಾರೆ. ಆ ಮಹಿಳೆಗೆ ಗಂಭೀರವಾದ ಸುಟ್ಟ ಗಾಯಗಳಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ನಾವು ದೆಹಲಿ ಪೊಲೀಸರಿಗೆ ನೋಟಿಸ್ ನೀಡಿದ್ದೇವೆ. ಸಂತ್ರಸ್ತರಿಗೆ ಎಲ್ಲಾ ಸಹಾಯವನ್ನು ಒದಗಿಸಿದ್ದೇವೆ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: Mandya: ಮನೆಯಲ್ಲಿ ಮಲಗಿದ್ದ ಒಂಟಿ ಮಹಿಳೆಯ ಹತ್ಯೆ ಮಾಡಿ ಬೆಂಕಿ ಹಚ್ಚಿದ ಪಾಪಿಗಳು; ಬೆಚ್ಚಿಬಿದ್ದ ಗ್ರಾಮಸ್ಥರು

ಈ ಘಟನೆಯ ಕುರಿತು ಪೊಲೀಸರು ತನಿಖೆ ಆರಂಭಿಸಿದ್ದು, ಖುಷ್ಬೂ ಎಂಬ ಮಹಿಳೆ 7 ತಿಂಗಳ ಗರ್ಭಿಣಿಯಾಗಿದ್ದು, ಸಫ್ದರ್‌ಜಂಗ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಖಚಿತಪಡಿಸಿದ್ದಾರೆ. ಖುಷ್ಬೂ 2022ರ ಏಪ್ರಿಲ್ ತಿಂಗಳಲ್ಲಿ ವಿವಾಹವಾಗಿದ್ದರು. ಅವರು ಈಗ ಗರ್ಭಿಣಿಯಾಗಿದ್ದರು. ಮದುವೆ ಸಮಾರಂಭದಲ್ಲಿ ತಾವು ನೀಡಿದ್ದ ಆಭರಣಗಳನ್ನು ಹಿಂದಿರುಗಿಸಲು ಆಕೆಯ ಗಂಡನ ಮನೆಯವರು ಒತ್ತಾಯಿಸಿದ್ದರು. ಅದಕ್ಕೆ ಆಕೆ ಒಪ್ಪದಿದ್ದಾಗ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದರು ಎನ್ನಲಾಗಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಮಂತ್ರಿಗಳಿದ್ದಾರೆ, ಅವರಿಗೆ ಪ್ರಶ್ನೆ ಕೇಳಿ ಎಂದ ಡೆಪ್ಯುಟಿ ಸ್ಪೀಕರ್ ಲಮಾಣಿ
ಮಂತ್ರಿಗಳಿದ್ದಾರೆ, ಅವರಿಗೆ ಪ್ರಶ್ನೆ ಕೇಳಿ ಎಂದ ಡೆಪ್ಯುಟಿ ಸ್ಪೀಕರ್ ಲಮಾಣಿ
ಶಾಸಕ ಈಗ ಬಂದು ಗಮನ ಸೆಳೆಯುವ ಪ್ರಯತ್ನ ಮಾಡುತ್ತಿದ್ದಾರೆಂದ ಸ್ಪೀಕರ್
ಶಾಸಕ ಈಗ ಬಂದು ಗಮನ ಸೆಳೆಯುವ ಪ್ರಯತ್ನ ಮಾಡುತ್ತಿದ್ದಾರೆಂದ ಸ್ಪೀಕರ್
ಭಾಷಾಂತರಕ್ಕೆ ಭಾಷಾ ಮತ್ತು ವಿಷಯ ತಜ್ಞ ಜೊತೆಯಲ್ಲಿ ಕೂರಬೇಕು: ಈಶ್ವರ್
ಭಾಷಾಂತರಕ್ಕೆ ಭಾಷಾ ಮತ್ತು ವಿಷಯ ತಜ್ಞ ಜೊತೆಯಲ್ಲಿ ಕೂರಬೇಕು: ಈಶ್ವರ್
ಅಕ್ರಮವಾಗಿ ವಿದ್ಯುತ್ ಪಡೆಯುತ್ತಿದ್ದ ಸಂಗತಿ ಜಮೀರ್ ಗಮನಕ್ಕೆ ಬಂದಿದ್ದು ಈಗ
ಅಕ್ರಮವಾಗಿ ವಿದ್ಯುತ್ ಪಡೆಯುತ್ತಿದ್ದ ಸಂಗತಿ ಜಮೀರ್ ಗಮನಕ್ಕೆ ಬಂದಿದ್ದು ಈಗ
ಹನೂರಿನ ಮಹದೇಶ್ವರ ಬೆಟ್ಟ ದೇವಸ್ಥಾನದ ಹುಂಡಿಯಲ್ಲಿ ₹ 2.85 ಕೋಟಿ ಸಂಗ್ರಹ
ಹನೂರಿನ ಮಹದೇಶ್ವರ ಬೆಟ್ಟ ದೇವಸ್ಥಾನದ ಹುಂಡಿಯಲ್ಲಿ ₹ 2.85 ಕೋಟಿ ಸಂಗ್ರಹ
ಮಾರಿಷಸ್ ಜನರಿಂದ ಮೋದಿಗೆ ಸಖತ್ ಸ್ವಾಗತ
ಮಾರಿಷಸ್ ಜನರಿಂದ ಮೋದಿಗೆ ಸಖತ್ ಸ್ವಾಗತ
ಮಜಾ ಟಾಕೀಸ್​ನಲ್ಲಿ ಸ್ಯಾಂಡಲ್​ವುಡ್ ಬ್ಯೂಟಿಗಳು; ಕುರಿನ ಕಾಲೆಳೆದ ಮಾನ್ವಿತಾ
ಮಜಾ ಟಾಕೀಸ್​ನಲ್ಲಿ ಸ್ಯಾಂಡಲ್​ವುಡ್ ಬ್ಯೂಟಿಗಳು; ಕುರಿನ ಕಾಲೆಳೆದ ಮಾನ್ವಿತಾ
VIDEO: ಗುಜರಾತ್ ಟೈಟಾನ್ಸ್​ ತಂಡಕ್ಕೆ ಸ್ಕೂಟರ್​ನಲ್ಲಿ ಸಿರಾಜ್ ಎಂಟ್ರಿ
VIDEO: ಗುಜರಾತ್ ಟೈಟಾನ್ಸ್​ ತಂಡಕ್ಕೆ ಸ್ಕೂಟರ್​ನಲ್ಲಿ ಸಿರಾಜ್ ಎಂಟ್ರಿ
ಹುಲಿಗೆಮ್ಮ ದೇವಸ್ಥಾನ ಹುಂಡಿ ಎಣಿಕೆ: 40 ದಿನಗಳಲ್ಲಿ 99 ಲಕ್ಷ ರೂ. ಸಂಗ್ರಹ
ಹುಲಿಗೆಮ್ಮ ದೇವಸ್ಥಾನ ಹುಂಡಿ ಎಣಿಕೆ: 40 ದಿನಗಳಲ್ಲಿ 99 ಲಕ್ಷ ರೂ. ಸಂಗ್ರಹ
ಯಾವ ಮನೆಯಲ್ಲಿ ಲಕ್ಷ್ಮೀ ದೇವಿ ನೆಲೆಸುವುದಿಲ್ಲ ಅಂತ ನಿಮಗೆ ಗೊತ್ತಾ?
ಯಾವ ಮನೆಯಲ್ಲಿ ಲಕ್ಷ್ಮೀ ದೇವಿ ನೆಲೆಸುವುದಿಲ್ಲ ಅಂತ ನಿಮಗೆ ಗೊತ್ತಾ?